Breaking News

ರಾಜ್ಯ

ಮೇಲ್ಮನೇಲಿ ಬಿಜೆಪಿಗೆ ಪೂರ್ಣ ಬಹುಮತ : ಬಸವರಾಜ ಹೊರಟ್ಟಿ ಮತ್ತೆ ಸಭಾಪತಿ?

ಬೆಂಗಳೂರು : ಜೆಡಿಎಸ್ ತೊರೆದು ಬಿಜೆಪಿಯಿಂದ ವಿಧಾನಪರಿಷತ್ ಗೆ ಪುನರಾಯ್ಕೆಯಾಗಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮತ್ತೆ ಸಭಾಪತಿ ಸ್ಥಾನ ನೀಡುವ ಸಾಧ್ಯತೆ ಇದೆ.   ಜೆಡಿಎಸ್ ಸದಸ್ಯರಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಮತ್ತು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು. ಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದು, ಇದಕ್ಕೆ ಬಿಜೆಪಿ ಕೂಡ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿರುವ …

Read More »

ಬೆಳಗ್ಗೆ 11ಕ್ಕೆ ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ

ಬೆಂಗಳೂರು : ಸೆಪ್ಟಂಬರ್‌ 12ರಂದು (ನಾಳೆ )ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ’ ಎಂದಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022: ಪರಿಶೀಲಿಸುವುದು ಹೇಗೆ? …

Read More »

ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ: ಜೈಲಾ ಅಥವಾ ಆಸ್ಪತ್ರೆ ಇಂದು ನಿರ್ಧಾರ!

ಚಿತ್ರದುರ್ಗ: ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗಳು ಜೈಲು ಸೇರಿದ್ದು, ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​​ನಲ್ಲಿ ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆ ಬಳಿಕ ಮುರುಘಾಶ್ರೀಗೆ ಬೇಲಾ, ಜೈಲಾ, ಆಸ್ಪತ್ರೆನಾ? ಇಂದು ನಿರ್ಧಾರವಾಗಲಿದೆ. ಸೆ.14ರವರೆಗೆ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕರೊನರಿ ಎಂಜೋಗ್ರಾಮ ಪರೀಕ್ಷೆ, ಚಿಕಿತ್ಸೆ ಬಗ್ಗೆಯೂ ವಿಚಾರಣೆ ನಡೆಯಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲು ಮುರುಘಾಶ್ರೀ ಪರ ವಕೀಲರು ಮನವಿ ಮಾಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು …

Read More »

ನಾರಾಯಣ ಗುರುಗಳಿಗೆ ಸಿಎಂ ಅಪಮಾನ: ಬೇಸರ ಹೊರ ಹಾಕುತ್ತಲೇ ಎಚ್ಚರಿಕೆ ಸಂದೇಶ ರವಾನಿಸಿದ ಪ್ರಣವಾನಂದ ಸ್ವಾಮೀಜಿ

ದಾವಣಗೆರೆ: ಶ್ರೀ ನಾರಾಯಣ ಗುರುಗಳ ಜಯಂತಿ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆ ವಿರುದ್ಧ ಡಾ. ಪ್ರಣವಾನಂದ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ವಿಶ್ವಕ್ಕೆ ಸಮಾನತೆ ಸಾರಿರುವ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ದಿನದಂದು ನಾರಾಯಣ ಗುರುಗಳ ಭಾವಚಿತ್ರಕ್ಕೆ ಮುಖ್ಯಮಂತ್ರಿಗಳು ಪೂಜೆ ಸಲ್ಲಿಸಲಿಲ್ಲ. ವಿಧಾನಸಭೆಯಲ್ಲಿ ಎಲ್ಲ ಶರಣರ ಭಾವಚಿತ್ರಕ್ಕೆ ಅವರ ಜಯಂತಿ ದಿನದಂದು ಪುಷ್ಪ ನಮನ ಸಲ್ಲಿಸಿ ಪೂಜೆ ಸಲ್ಲಿಸುವ ಪದ್ಧತಿ ನಡೆದು ಬಂದಿದೆ. ಆದರೆ, ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ …

Read More »

ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.12ರಂದು ಜೋರು ಮಳೆ ?ಇಲ್ಲಿದೆ ಅಲರ್ಟ್ ವಿವರ..

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ತಗ್ಗಿದೆ. ಭಾನುವಾರ ಕೆಲವೆಡೆ ಮಾತ್ರ ಮಳೆಯಾಗಿದ್ದು, ಚಿಕ್ಕಮಗಳೂರಿನ ಕೊಟ್ಟಿಗೆಹಾರ 11, ಕೊಡಗಿನ ಭಾಗಮಂಡಲದಲ್ಲಿ 7 ಸೆಂ.ಮೀ. ಮಳೆ ಬಿದ್ದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.12ರಂದು ಜೋರು ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಸೆ.13ರಿಂದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಇಳಿಕೆಯಾಗಲಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ನಾಲ್ಕೈದು ದಿನಗಳಿಂದ …

Read More »

ಭ್ರಷ್ಟರ ಶಿಕಾರಿಗೆ ಲೋಕಾ ತಯಾರಿ: ಎಸಿಬಿ ಸಿಬ್ಬಂದಿ, ಕಡತಗಳ ಹಸ್ತಾಂತರ ಇಂದು ಪೂರ್ಣ

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸ್ಥಾಪನೆಯಿಂದ ಖದರ್ ಕಳೆದುಕೊಂಡು ಮಂಕಾಗಿದ್ದ ಲೋಕಾಯುಕ್ತಕ್ಕೀಗ ಹಳೇ ಖದರ್ ಮರಳಿದೆ. ಸೋಮವಾರದಿಂದ ಭ್ರಷ್ಟರ ಶಿಕಾರಿ ಮತ್ತೆ ಶುರುವಾಗಲಿದೆ. ಎಸಿಬಿಯಲ್ಲಿದ್ದ 141ಕ್ಕೂ ಹೆಚ್ಚು ಕಾನ್​ಸ್ಟೆಬಲ್ ಹಾಗೂ ಹೆಡ್ ಕಾನ್​ಸ್ಟೆಬಲ್​ಗಳು ಈಗಾಗಲೇ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದಾರೆ. ಸೋಮವಾರ ಸಂಜೆ ವೇಳೆಗೆ ಎಲ್ಲ ಪ್ರಕರಣಗಳ ಕಡತಗಳೂ ಲೋಕಾಯುಕ್ತ ಸುಪರ್ದಿಗೆ ಸೇರಿ ಎಸಿಬಿ ಸಂಪೂರ್ಣ ಇತಿಹಾಸ ಸೇರಲಿದೆ. ಏತನ್ಮಧ್ಯೆ ಎಸಿಬಿ ದಾಳಿಗೊಳಗಾದರೂ ನಿರಾಳರಾಗಿದ್ದ ಸರ್ಕಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಲೋಕಾಯುಕ್ತ ಭೀತಿ …

Read More »

ಇ.ಡಿ.ದಾಳಿ ಪ್ರಮಾಣ ಶೇ.27ರಷ್ಟು ಹೆಚ್ಚಳ; 2014ರಿಂದ 2022ರ ವರೆಗೆ 3,010 ದಾಳಿ

ನವದೆಹಲಿ: ದೇಶದಲ್ಲಿ ಆರ್ಥಿಕ ಅಪರಾಧಗಳ ಬಗ್ಗೆ ವಿಶೇಷವಾಗಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸುತ್ತಿರುವ ದಾಳಿಗಳ ಪ್ರಮಾಣ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಜತೆಗೆ ಈ ದಾಳಿಗಳ ವೇಳೆ 1 ಲಕ್ಷ ಕೋಟಿ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದೆ. 2004ರಿಂದ 2014ರ ವರೆಗೆ ಇ.ಡಿ. ಕೇವಲ 112 ದಾಳಿಗಳನ್ನು ನಡೆಸಿದ್ದರೆ, 2014ರಿಂದ 2022ರವರೆಗೆ 3,010 ದಾಳಿಗಳನ್ನು ನಡೆಸಲಾಗಿದೆ. ಶೇಕಡಾವಾರು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 27ರಷ್ಟು ಹೆಚ್ಚಾಗಿದೆ. ಕೋಲ್ಕತಾದ ಮೊಬೈಲ್‌ ಗೇಮಿಂಗ್‌ ಆಯಪ್‌ ವ್ಯಾಪಾರಿಯ ನಿವಾಸ …

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …

Read More »

2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಕುಣಿಗಲ್ : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ ಆಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.   ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯ ಕ್ರಾಸ್​ನಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮುಂದಿನ ವಿಧಾನಸಭೆ ಚುನಾವಣೆಯು ಜೆಡಿಎಸ್ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ. ಇಲ್ಲಿಂದ ಹೊಸ ಅಧ್ಯಾಯ ಆರಂಭವಾಗಬೇಕಿದೆ. ಮುಂದಿನ 25 ವರ್ಷಗಳ …

Read More »

ಹಾಸನಾಂಬೆಯ ದರ್ಶನಕ್ಕೆ ಮೂಹೂರ್ತ ಫಿಕ್ಸ್, ಅಕ್ಟೋಬರ್ 13ರಿಂದ ದೇವಾಲಯ ಓಪನ್

ಹಾಸನ, ಸೆಪ್ಟೆಂಬರ್‌, 11: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಆದ್ದರಿಂದ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಹಾಮಾರಿ ಕೊರೊನಾ ನಂತರ ಇದೀಗ ಅದ್ಧೂರಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಸೇರಿದಂತೆ ರಾಜ್ಯದ …

Read More »