ಯಲ್ಲಾಪುರ, ಉತ್ತರ ಕನ್ನಡ: ಯಲ್ಲಾಪುರ (Yellapur) ತಾಲೂಕಿನ ಬ್ಯಾಂಕ್ ಆಫ್ ಬರೋಡಾದಲ್ಲಿ (Bank of Baroda) ಭಾರೀ ಗೋಲ್ಮಾಲ್ (Golmall) ನಡೆದಿದೆ. ಇಲ್ಲಿನ ಶಾಖೆಯಲ್ಲಿ (Branch) 2.69 ಕೋಟಿ ರೂ. ಬ್ಯಾಂಕ್ ಅಧಿಕಾರಿಯೇ (bank Officers) ಲಪಟಾಯಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಇದ್ರಿಂದ ಗ್ರಾಹಕರು (Customer) ಬ್ಯಾಂಕ್ ಮೇಲಿನ ವಿಶ್ವಾಸ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಈ ಘಟನೆ ಸಂಬಂಧಿಸಿದಂತೆ ಪೊಲೀಸ್ ತನಿಖೆ (police enquiry) ಚುರುಕುಗೊಂಡಿದೆ. ಈ ನಡುವೆ ಹಣ …
Read More »ಕರ್ನಾಟಕ 2nd PUC ಪೂರಕ ಫಲಿತಾಂಶ ಪ್ರಕಟ: ಶೇ 37.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
ಬೆಂಗಳೂರು, ಸೆಪ್ಟಂಬರ್ 12: ದ್ವಿತೀಯ ಪರೀಕ್ಷೆಯ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗದೆ. ಶೇ 37.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಕರ್ನಾಟಕ 2 ನೇ ಪಿಯುಸಿ ಪೂರಕ ಪರೀಕ್ಷೆಯು ಕಳೆದ ತಿಂಗಳು ಆಗಸ್ಟ್ 12 ರಿಂದ 25ರವರೆಗೆ ನಡೆದಿತ್ತು.185415. ವಿದ್ಯಾರ್ಥಿಗಳು ನೋಂದಣಿ ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿಗಳು 175,905 ವಿದ್ಯಾರ್ಥಿಗಳು. ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 65,233, ಪರೀಕ್ಷೆಯಲ್ಲಿ ಗೈರಾದ ವಿದ್ಯಾರ್ಥಿಗಳ ಸಂಖ್ಯೆ …
Read More »30 ಐಟಿ, ಬಿಟಿಗೂ ಬಂತು ಕಂಟಕ- ಮುಲಾಜೇ ಇಲ್ಲ. ದೊಡ್ಡವರನ್ನೂ ಬಿಡಲ್ಲ ಎಂದ ಸಿಎಂ
ಬೆಂಗಳೂರು: ಈ ಬಾರಿ ವರುಣದ ರೌದ್ರಾವತಾರಕ್ಕೆ ದೇಶ-ವಿದೇಶಗಳ ಹಲವು ಪ್ರದೇಶಗಳು ನಲುಗಿ ಹೋಗಿವೆ. ಕರ್ನಾಟಕದಲ್ಲಿಯೂ ಈ ಬಾರಿ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಅದರಲ್ಲಿಯೂ ಬೆಂಗಳೂರು ಕೂಡ ಈ ಹಿಂದೆ ಕಾಣದಷ್ಟು ಭೀಕರ ಪರಿಣಾಮವನ್ನು ಈ ಬಾರಿ ಕಂಡಿದೆ. ಇದಕ್ಕೆ ಮೂಲ ಕಾರಣ ಬೆನ್ನತ್ತಿ ಹೋದಾಗ ಸಿಕ್ಕಿದ್ದು, ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಹಲವು ಬಹುಮಹಡಿ ಕಟ್ಟಡ ನಿರ್ಮಾಣವಾದದ್ದು. ಈ ಹಿಂದೆ ಕೂಡ ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿದಂತೆ ಭಾರಿ ಗಲಾಟೆ ನಡೆದಿದ್ದರೂ, ಒತ್ತುವರಿ …
Read More »ಖಾಲಿ ಕುರ್ಚಿಗಳಿಗೆ ಬಿಜೆಪಿ ನಾಯಕರು ಅಡ್ರೆಸ್ ಮಾಡಿದ್ದಾರೆ: ಬಿಜೆಪಿ ಜನಸ್ಪಂದನೆ ಸಮಾವೇಶಕ್ಕೆ ಎಂಬಿಪಿ ಲೇವಡಿ..!
ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಲಕ್ಷಾಂತರ ಜನ ಎಂದು ಖಾಲಿ ಕುರ್ಚಿಗಳಿಗೆ ಕೇಂದ್ರ ಸಚಿವೆ ಸ್ಮøತಿ ಇರಾನಿ, ಮಾಜಿ ಸಿಎಂ ಬಿಎಸ್ವೈ, ಸಿಎಂ ಬೊಮ್ಮಾಯಿ ಅಡ್ರೆಸ್ ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಖಾಲಿ ಕುರ್ಚಿ ಇರುವ ವಿಡಿಯೋ ನನ್ನ ಬಳಿ ಇವೆ. ನಿಮ್ಮ ಕಡೆಗೆ ವಿಡಿಯೋ ಇಲ್ಲಾ ಅಂದ್ರೆ ಹೇಳಿ ನಾನು …
Read More »ರೈಲ್ವೆ ಪದೋನ್ನತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಗಂಭೀರ ಆರೋಪ…!
ನೇಮಕಾತಿ ಅಕ್ರಮದ ವಾಸನೆ ಎಲ್ಲೆಡೆಯೂ ಹರಡುತ್ತಿದೆ. ರಾಜ್ಯ ಸರ್ಕಾರದ ಬಹುತೇಕ ಹುದ್ದೆಗಳಲ್ಲಿ ಅಕ್ರಮ ನಡೆದಿದ್ದು, ತನಿಖೆ ಕೂಡ ನಡೆಯುತ್ತಿರುವ ಬೆನ್ನಲ್ಲೇ ಈಗ ರೈಲ್ವೆ ಇಲಾಖೆಯಲ್ಲೊಂದು ಗಂಭೀರ ಆರೋಪ ಕೇಳಿ ಬಂದಿದೆ. ಹೀಗೆ ರೈಲ್ವೆ ಪರೀಕ್ಷೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈಲ್ವೆ ಸಿಬ್ಬಂದಿ. ಮರು ಪರೀಕ್ಷೆಗೆ ಒತ್ತಾಯಿಸುತ್ತಿರುವ ಅಭ್ಯರ್ಥಿಗಳು. ದೊಡ್ಡಮಟ್ಟದ ಅಕ್ರಮ ನಡೆದಿದೆ ಎಂದು ಅಸಮಾಧಾನಗೊಂಡ ಸಿಬ್ಬಂದಿ. ಇದೆಲ್ಲದಕ್ಕೂ ಸಾಕ್ಷಿಯಾಗಿದ್ದು ಹುಬ್ಬಳ್ಳಿ ರೈಲ್ವೆ ವ್ಯವಸ್ಥಾಪಕ ನಿರ್ದೇಶಕರ ಕಚೇರಿ. ಹೌದು.. ರೈಲ್ವೆಯ ಗೂಡ್ಸ್ …
Read More »ಮಹಿಳೆಯರ ಕೊರಳಲ್ಲಿನ ಆಭರಣ,, ಎಮ್ಮೆ, ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳರನ್ನ ಹಾರೂಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ
ಕೆಲವೊಮ್ಮೆ ಮಹಿಳೆಯರ ಕೊರಳಲ್ಲಿನ ಆಭರಣ, ಮತ್ತೆ ಕೆಲವೊಮ್ಮೆ ಎಮ್ಮೆ ಹೀಗೆ ವಿಭಿನ್ನ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳರನ್ನು ಬಂಧಿಸುವಲ್ಲಿ ಹಾರೂಗೇರಿ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾಗೂಗೇರಿ ಪೊಲೀಸರು ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಒಟ್ಟಾರೆ 4 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಹಾರೂಗೇರಿಯ ವಡಕಿ ತೋಟದಲ್ಲಿ ಬೈಕ್ ಮೇಲೆ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಹಾರೂಗೇರಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ …
Read More »ಖ್ಯಾತ ಚಿತ್ರ ನಟ ರಮೇಶ ಬುಧವಾರ ಬೆಳಗಾವಿಯ ಸುವರ್ಣಸೌಧಕ್ಕೆ ಬರ್ತಾರೆ…..!!
ಬೆಳಗಾವಿ- ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವ ನಾಡಿದ್ದು ಬುಧವಾರ ನಡೆಯಲಿದ್ದು ಡಾಕ್ಟರೇಟ್ ಪದವಿ ಸ್ವೀಕರಿಸಲು ಖ್ಯಾತ ಕನ್ನಡ ಚಿತ್ರನಟ ರಮೇಶ್ ಅರವಿಂದ ಬುಧವಾರ ಬೆಳಗಾವಿಗೆ ಬರ್ತಾರೆ.. ಸೆ.14ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ 10ನೇ ಘಟಿಕೋತ್ಸವ ನಡೆಲಿದೆ.ಬೆಳಗಾವಿಯಲ್ಲಿ ಆರ್.ಸಿ.ಯು ಕುಲಪತಿ ಪ್ರೋ.ಎಂ ರಾಮಚಂದ್ರ ಗೌಡ ಮಾಧ್ಯಮದಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು.ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಘಟಿಕೋತ್ಸವ ನಡೆಯಲಿದೆ.ಇದೇ ತಿಂಗಳು 14ರಂದು ಮಧ್ಯಾಹ್ನ 12.30ಕ್ಕೆ ಘಟಿಕೋತ್ಸವ ಸಮಾರಂಭ ನಡೆಯಲಿದೆ. ರಾಜಪಾಲ …
Read More »ಚಿನ್ನ,ಎಮ್ಮೆ, ಕದ್ದವರು,ಪೋಲೀಸರ ಬಲೆಗೆ
ಬೆಳಗಾವಿ-ಮಹಿಳೆಯರ ಚಿನ್ನಾಭರಣ,ಮನೆ ಮುಂದೆ ಕಟ್ಟಿದ ಎಮ್ಮೆಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಹಾರುಗೇರಿ ಠಾಣೆಯ ಪೋಲೀಸರ ಬಲೆಗೆ ಬಿದ್ದಿದೆ. ಹಾರೂಗೇರಿ ಮುಗುಳಖೋಡ,ತೇರದಾಳ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಹಿಳೆಯರ ಕೊರಳಲ್ಲಿದ್ದ ಚಿನ್ನಾಭರಣ ಎಮ್ಮೆ ಕಳುವು ಮಾಡಿ ಮಾರಾಟ ಮಾಡುತ್ತಿದ್ದ ಹಲವಾರು ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು ಐದು ಜನ ಆರೋಪಿಗಳನ್ನು ಹಾರೂಗೇರಿ ಪೋಲೀಸರು ಬಂಧಿಸಿದ್ದಾರೆ. ಕಳವು ಮಾಡಲಾಗಿದ್ದ,49 ಗ್ರಾಂ ಚಿನ್ನಾಭರಣ,ಎರಡು ಎಮ್ಮೆ,ಒಂದು ಗೂಡ್ಸ್ ವಾಹನ ಸೇರಿದಂತೆ ಆರು ಲಕ್ಷಕ್ಕೂ …
Read More »ಭೀಕರ ಬಸ್ ಅಪಘಾತ;7 ಜನ ಸ್ಥಳದಲ್ಲೇ ದುರ್ಮರಣ
ಛತ್ತೀಸ್ ಗಢ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಛತ್ತೀಸ್ ಗಢದ ಮದಾಯಿ ಘಾಟ್ ನಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಸ್ ಕೊರ್ಬಾ ದಿಂದ ರಾಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಕೊರ್ಬಾ ಪೊಲೀಸ್ ಅಧೀಕ್ಷಕ ಸಂತೋಷ್ ತಿಳಿಸಿದ್ದಾರೆ. ಎದುರಿನಿಂದ …
Read More »ಐಎಎಸ್ ಅಧಿಕಾರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಜೆಡಿಎಸ್ ಶಾಸಕ
ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ಜಟಾಪಟಿ ಮುಂದುವರೆದಿದ್ದು, ಇದೀಗ ಶಾಸಕರು ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಶಾಸಕ ಸಾ.ರಾ.ಮಹೇಶ್ ಭೂ ಅಕ್ರಮ ಮಾಡಿದ್ದಾರೆ. ಎಂಬ ರೋಹಿಣಿ ಸಿಂಧೂರಿ ಅವರ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕರು, ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ. ಆದರೂ ರೋಹಿಣಿ ಸಿಂಧೂರಿ ನನ್ನ ವಿರುದ್ಧ ಆರೋಪ ಮಾಡಿದ್ದಲ್ಲದೇ …
Read More »
Laxmi News 24×7