Breaking News

ರಾಜ್ಯ

ಚುನಾವಣೆ ಮುಂದೂಡಲು”ಸುಗ್ರೀವಾಜ್ಞೆ’ ನೆಪ? : ಹೆಚ್ಚಾಗಲಿದೆ ತಾ.ಪಂ,ಜಿ.ಪಂ. ಕ್ಷೇತ್ರಗಳ ಸಂಖ್ಯೆ

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಹಾದಿ ಸುಗಮವಾಗುವ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ. ಏಕೆಂದರೆ, ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ “ಸುಗ್ರೀವಾಜ್ಞೆ’ ತರಲು ಸರ್ಕಾರ ನಿರ್ಧರಿಸಿದೆ.   ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳ ಜನಸಂಖ್ಯೆ ಬಗ್ಗೆ “ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ತಿದ್ದುಪಡಿ) ವಿಧೇಯಕ-2022ನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್‌ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್‌ 121 ಮತ್ತು ಸೆಕ್ಷನ್‌ 160ರ …

Read More »

2022ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟಿಸಲಾಗಿದ್ದು, 30 ಮಂದಿ ಜಾನಪದ ಕಲಾವಿದರು ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಇಬ್ಬರು ಜಾನಪದ ತಜ್ಞರು ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಬಿ. ಮಂಜಮ್ಮ ಜೋಗತಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆಗೊಳಿಸಿದರು. 2022ನೇ ಸಾಲಿನಲ್ಲಿ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದ ತಜ್ಞರಿಗೆ ಡಾ. ಜೀ.ಶಂ.ಪ …

Read More »

ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಮಗನಿಂದಲೇ ತಂದೆಯ ಬರ್ಬರ ಹತ್ಯೆ ನಡೆದಿರುವ ಘಟನೆ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಹುಲಕೊಟಿ ಗ್ರಾಮದ 58 ವರ್ಷದ ಗಣೇಶ ಅಡಿವೆಪ್ಪ ಚಿಕ್ಕನಟ್ಟಿ ಕೊಲೆಯಾದವರು. ವಿಜಯ ಗಣೇಶ ಚಿಕ್ಕನಟ್ಟಿ ಕೊಲೆ ಮಾಡಿದ ಮಗ. ಕಳೆದ ಕೆಲ ವರ್ಷಗಳಿಂದ ಗಣೇಶ ಚಿಕ್ಕನಟ್ಟಿ, ಹೆಂಡತಿ ಹಾಗೂ ಮಗನಿಗೆ ನಿತ್ಯ ಕಿರುಕುಳ ನೀಡಿ, ಮನೆಯಲ್ಲಿ ಜಗಳವಾಡುತ್ತಿದ್ದ ಎಂದು ತಿಳಿದು ಬಂದಿದೆ. ಎಂದಿನಂತೆ ತಂದೆ ಗಣೇಶ ಮನೆಯಲ್ಲಿ ತಾಯಿಗೆ ಕಿರುಕುಳ …

Read More »

ಬಾ ನಲ್ಲೆ ಮಧುಚಂದ್ರಕ್ಕೆ ಸಿನಿಮಾ ಮಾದರಿ ಪತ್ನಿ ಕೊಂದ!

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಪತ್ನಿಯನ್ನು ಕೊಲೆಗೈದಿರುವ ಪತಿಯನ್ನು ಬಂಧಿಸಿರುವ ಘಟನೆ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಜ್ಯೋತಿ ಕುಮಾರಿ (38) ಕೊಲೆಯಾದ ಮಹಿಳೆ. ಪತಿ ಪೃಥ್ವಿರಾಜ್‌(30) ಬಂಧಿತ ಆರೋಪಿ. ಕೃತ್ಯಕ್ಕೆ ಸಹಕರಿಸಿದ ಸಮೀರ್‌ ಕುಮಾರ್‌ ತಲೆಮರೆಸಿಕೊಂಡಿದ್ದಾನೆ. 12 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಪೃಥ್ವಿರಾಜ್‌, ಎಲೆಕ್ಟ್ರಾನಿಕ್ಸ್‌ ವಸ್ತುಗಳ ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ಬಿಹಾರ ಮೂಲದ ಜ್ಯೋತಿ ಕುಮಾರಿಯನ್ನು 2021ರ ನವೆಂಬರ್‌ನಲ್ಲಿ ಮದುವೆಯಾಗಿದ್ದನು. ಆದರೆ, ಇಬ್ಬರ ನಡುವೆ …

Read More »

ನಾವು ಹೋರಾಟ ಮಾಡಿದ್ರೆ ಬಿಜೆಪಿಯವರು ಓಡಾಡಲು ಆಗಲ್ಲ : ಸಿದ್ದರಾಮಯ್ಯ

ಮಡಿಕೇರಿ: ಕಾರಿನ ಮೇಲೆ ಮೊಟ್ಟೆ ಎಸೆದು ಬಿಜೆಪಿ ಕಾರ್ಯಕರ್ತರ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮಗೂ ಮೊಟ್ಟೆ ಎಸೆಯಲು ಬರುತ್ತೆ. ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಡಲು ಆರಂಭಿಸಿದರೆ ಸಿಎಂ ಓಡಾದಲು ಆಗಲ್ಲ ಎಂದು ಎಚ್ಚರಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಅರ್ಥವಿಲ್ಲ. ದುಡ್ಡುಕೊಟ್ಟು ಜನರನ್ನು ಕರೆತಂದು ಬಿಜೆಪಿ ಕಾರ್ಯಕರ್ತರು ಎಂದು ಪ್ರತಿಭಟನೆ ಮಾಡಿಸಿದ್ದಾರೆ. ಇದು ಹೇಡಿಗಳು ಮಾಡುವ ಕೆಲಸ ಎಂದು ಕಿಡಿಕಾರಿದರು. …

Read More »

ಸಿದ್ದರಾಮಯ್ಯಗೆ ಸಾವರ್ಕರ್ ಭಾವಚಿತ್ರ ನೀಡಿ, ಕಪ್ಪು ಬಾವುಟದ ಸ್ವಾಗತ

ಮಡಿಕೇರಿ: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಫುಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.   ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ …

Read More »

ಯಡಿಯೂರಪ್ಪ ಅವರನ್ನು ಸಿಎಂ ಎಂದು ಘೋಷಿಸಲಿ: ಎಂ.ಬಿ ಪಾಟೀಲ್

ಬೆಂಗಳೂರು: ಯಡಿಯೂರಪ್ಪ ಅವರ ಬಗ್ಗೆ ಗೌರವ ಇದ್ದಿದ್ದರೆ ಸಿಎಂ ಸ್ಥಾನದಿಂದ ಯಾಕೆ ಕೆಳಗೆ ಇಳಿಸಿದರು? ಪ್ರೀತಿ ಇದ್ದರೆ ಅವರನ್ನ ಸಿಎಂ ಎಂದು ಘೋಷಿಸಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಣ ಎಂ.ಬಿ ಪಾಟೀಲ್ ಬಿಜೆಪಿಗೆ ಸವಾಲು ಹಾಕಿದ್ದಾರೆ.   ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪನವರು ಹಿರಿಯರು,ಅವರಿಗೆ ಒಳ್ಳೆಯದಾಗಲಿ ಅಂತಾ ಆಶಿಸುತ್ತೇನೆ.75 ವರ್ಷವಾದ ಕಾರಣ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದ್ದರು.ಈಗ ಸಂಸದೀಯ ಮಂಡಳಿಯಲ್ಲಿ ಸ್ಥಾನಮಾನ‌ ಕೊಟ್ಟಿದ್ದಾರೆ. ಅವರು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ, ಸಿಎಂ …

Read More »

ಭಾರತದ 7 ಹಾಗೂ ಪಾಕಿಸ್ತಾನದ 1 ಯೂಟ್ಯೂಬ್ ಚಾನಲ್ ಬ್ಯಾನ್

ನವದೆಹಲಿ: ತಪ್ಪು ಮಾಹಿತಿ ಪ್ರಸಾರ ಮಾಡುತ್ತಿದ್ದ ಐಟಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ 8 ಯೂಟ್ಯೂಬ್ ಚಾನಲ್ ಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ. ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು, ಸಾರ್ವಜನಿಕ ಸುವ್ಯಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿ ಹರಡುತ್ತಿದ್ದ ಕಾರಣಕ್ಕೆ 7 ಭಾರತೀಯ ಹಾಗೂ 1 ಪಾಕಿಸ್ತಾನ ಮೂಲದ ಯೂಟ್ಯೂಬ್ ಸುದ್ದಿ ಚಾನಲ್ ಗಳನ್ನು ನಿರ್ಬಂಧ ಮಾಡಿದೆ. ನಿರ್ಬಂಧಿಸಲಾದ ಯೂಟ್ಯೂಬ್ ಚಾನಲ್ ಗಳು 114 ಕೋಟಿಗೂ ಅಧಿಕ ವೀಕ್ಷಣೆ ಹೊಂದಿದ್ದು, 85 ಲಕ್ಷದ …

Read More »

ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ತೋಟದ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅನುಮತಿ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳನ್ನು ಇತ್ತೀಚೆಗೆ ಕೋರಿದ್ದರು ಎಂಬುದು ಉಲ್ಲೇಖಾರ್ಹ.   *ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ :* ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರ ಆದೇಶಿಸಿದ್ದು, ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ಬಿದ್ದಿರುವ ಗುಂಡಿಗಳನ್ನು ಮುಚ್ಚಬೇಕು. ನೇತಾಡುತ್ತಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು:. ಅಭಯ್ ಪಾಟೀಲ

ಕೇಲವೇ ದಿನಗಳಲ್ಲಿ ಬೆಳಗಾವಿಯಲ್ಲಿ ಗಣೇಶೋತ್ಸವ ನಡೆಯಲಿದೆ ಈ ಹಿನ್ನೆಲೆ ಇಂದು ದಕ್ಷಿಣ ಶಾಸಕ ಅಭಯ ಪಾಟೀಲ ಅವರು ದಕ್ಷಿಣ ಕ್ಷೇತ್ರದ ಪಾರಂಪರೀಕ ಮಾರ್ಗದಲ್ಲಿ ಸಂಚರಿಸಿ, ಗಣೇಶೋತ್ಸವದ ಮೆರವಣಿಗೆಗೆ ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ಇದೇ ತಿಂಗಳು 31 ರಂದು ಗಣೇಶೋತ್ಸವ ನಡೆಯಲಿದ್ದು, ಕೊರೋನಾ ನಂತರ 2 ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವವನ್ನು ಆಚರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಇಂದು ದಕ್ಷಿಣ ಶಾಸಕ ಅಭಯ ಪಾಟೀಲ ಅವರು ನಗರ …

Read More »