Breaking News

ರಾಜ್ಯ

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ …

Read More »

ಗಾಲಿ ಜನಾರ್ದನ ರೆಡ್ಡಿ ರೀ ಎಂಟ್ರಿ! ಮತ್ತೆ ಗಣಿಗಾರಿಕೆ ಗ್ಯಾರಂಟಿ!

ಅನಂತಪುರ, ಆಗಸ್ಟ್ 11: ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ಎದುರಿಸಿರುವ ಕರ್ನಾಟಕದ ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮತ್ತೆ ಸಕ್ರಿಯ ಉದ್ಯಮಕ್ಕೆ ಎಂಟ್ರಿ ಕೊಡಲು ಮುಂದಾಗಿದ್ದಾರೆ. ಕಬ್ಬಿಣ ಅದಿರು ಸಾಗಣೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿರುವ ರೆಡ್ಡಿಗೆ ಆಂಧ್ರಪ್ರದೇಶ ಸರ್ಕಾರ ಮುಕ್ತ ಆಹ್ವಾನ ನೀಡಿರುವ ಸುದ್ದಿ ಬಂದಿದೆ.   ಕರ್ನಾಟಕ – ಆಂಧ್ರಪ್ರದೇಶದ ಗಡಿಯಲ್ಲಿರುವ ಓಬಳಾಪುರಂ ಗಣಿಯಲ್ಲಿ ಎಂದಿನಂತೆ ಚಟುವಟಿಕೆ ನಡೆಸಲು ಇದ್ದ …

Read More »

ಕೊಪ್ಪಳದಲ್ಲಿ ಕೋಮುಘರ್ಷಣೆ: 2 ಸಾವು, 6 ಮಂದಿಗೆ ಗಾಯ, ನಿಷೇದಾಜ್ಞೆ ಜಾರಿ

ಘರ್ಷಣೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಮೃತಪಟ್ಟಿದ್ದು, ೬ ಮಂದಿ ಗಾಯಗೊಂಡಿದ್ದಾರೆ . ಧರ್ಮಣ್ಣ ಹರಿಜನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ . ಗ್ರಾಮದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ . ಡಿವೈಎಸ್ ​ ಪಿ ರುದ್ರೇಶ್ ಉಜ್ಜನಕೊಪ್ಪ , ತಹಶೀಲ್ದಾರ್ ಧನಂಜಯ ಮಾಲಗತ್ತಿ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು , 100 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ . …

Read More »

ಮೋದಿ ವಿರುದ್ಧ ಯೋಗಿ ಬಂಡಾಯ: ಆಮ್‌ ಆದ್ಮಿ ಪಕ್ಷದ ನಾಯಕರು ನೀಡಿದ ಕಾರಣವೇನು?

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷವು, ‘ಬಿಜೆಪಿಯ ಉನ್ನತ ನಾಯಕತ್ವದ ವಿರುದ್ಧ ಯೋಗಿ ಆದಿತ್ಯನಾಥ್‌ ದಂಗೆ ಎದ್ದಂತಿದೆ’ ಎಂದು ಹೇಳಿದೆ. ‌ ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ‘ಉಚಿತ ಕೊಡುಗೆಗಳನ್ನು ನೀಡುವ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅಪಾಯಕಾರಿ’ ಎಂದು ಹೇಳಿದ್ದರು. …

Read More »

ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ( Mask ) ಕಡ್ಡಾಯಗೊಳಿಸಿ ಆದೇಶ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ( Mask ) ಕಡ್ಡಾಯಗೊಳಿಸಿ ಆದೇಶಿಸಿದೆ.   ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಮಾತನಾಡಿ, ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಎಲ್ಲರೂ …

Read More »

ಮಳೆಯಿಂದಾದ ಹಾನಿ ಸಮೀಕ್ಷೆಗೆ ವಾರದ ಗಡುವು,ನೀಡಿದ ಸಚಿವ ಉಮೇಶ ಕತ್ತಿ

ನೈಸರ್ಗಿಕ ವಿಕೋಪ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಅವರು ಇಂದು ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಮಾತನಾಡಿದ ಸಚಿವರು, ತೀವ್ರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೆಳೆ ಹಾನಿ, ವಸತಿ ಹಾನಿ, ಶಾಲಾ ಕಟ್ಟಡ ಹಾನಿ ಸೇರಿದಂತೆ ಆಗಿರುವ ಇನ್ನೀತರ ಹಾನಿಯ ಬಗ್ಗೆ ಕಂದಾಯ, ಕೃಷಿ, ತೋಟಗಾರಿಕೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು …

Read More »

ಆತಂಕ ಬೇಡ; ನಿಮ್ಮ ಜತೆಗಿದ್ದೇವೆ; ಸಿಎಂ ಬೊಮ್ಮಾಯಿಗೆ ವರಿಷ್ಠರ ಅಭಯ

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾದ ಯಾವುದೇ ವದಂತಿಗೆ ತಲೆಕೆಡಿಸಿಕೊಳ್ಳದೆ ನಿಮ್ಮ ಕೆಲಸ ಮುಂದುವರಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರು ಅಭಯ ನೀಡಿದ್ದಾರೆಂದು ಮೂಲಗಳು ಹೇಳಿವೆ. ಜತೆಗೆ ಇಂಥ ಸುಳ್ಳುಸುದ್ದಿ ಹಬ್ಬಿಸುವವರ ಪತ್ತೆಗೆ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸು ವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.   ಬುಧವಾರವೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಹಿತ ಪ್ರಮುಖ ನಾಯಕರು ಮತ್ತು ಸಚಿವರು ಸಿಎಂ ಬೊಮ್ಮಾಯಿ ಪರ ನಿಂತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ …

Read More »

ಪೋಸ್ಟ್‌ ಇಂಡಿಯಾ ಧ್ವಜಕ್ಕೆ ಜಿಎಸ್ಟಿ, ವಿತರಣಾ ಶುಲ್ಕವಿಲ್ಲ

ಹೊಸದಿಲ್ಲಿ: ಭಾರತದ ಸ್ವಾತ್ರಂತ್ಯೋತ್ಸವದ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಹರ್‌ ಘರ್‌ ತಿರಂಗಾ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಪೋಸ್ಟ್‌ (ಭಾರತೀಯ ಅಂಚೆ ಇಲಾಖೆ) ಹೊಸ ಆಫ‌ರ್‌ ನೀಡಿದೆ. ಇಂಡಿಯಾ ಪೋಸ್ಟ್‌ ಮೂಲಕ ತ್ರಿವರ್ಣ ಧ್ವಜವನ್ನು ಮಾರಾಟ ಮಾಡಲು ಇಲಾಖೆ ಮುಂದಾಗಿದೆ. ಜಿಎಸ್‌ಟಿ ಶುಲ್ಕವಿಲ್ಲದೆ ಈ ಧ್ವಜವನ್ನು ಖರೀದಿಸಬಹುದಾಗಿದೆ. ಅಲ್ಲದೆ, ತಮ್ಮ ವೆಬ್‌ಸೈಟ್‌ನಲ್ಲಿ ಖರೀದಿಸಲಾಗುವ ಈ ಧ್ವಜವನ್ನು ಯಾವುದೇ ವಿತರಣಾ ಶುಲ್ಕ ಇಲ್ಲದೇ (ಡಿಲಿವರಿ ಚಾರ್ಜಸ್‌) ಗ್ರಾಹಕರ ವಿಳಾಸಕ್ಕೆ ತಲುಪಿಸಲಾಗುವುದು …

Read More »

ಗ್ರಾಮ ಪಂಚಾಯಿತಿ ಸಾರಾಪುರ ಇವರ ವತಿಯಿಂದ ಸರಪುರ್ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಾರಾಪುರ ಗ್ರಾಮದಲ್ಲಿ ನವ ಕರ್ನಾಟಕ ಮಾನವ ಹಕ್ಕುಗಳ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಮಿತಿ ತಾಲೂಕಾ ಘಟಕ ಹುಕ್ಕೇರಿ ಮತ್ತು ಗ್ರಾಮ ಪಂಚಾಯಿತಿ ಸಾರಾಪುರ ಇವರ ವತಿಯಿಂದ ಸರಪುರ್ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು ಘಟಪ್ರಭಾದ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಲ್ರಾದ ಡಾಕ್ಟರ್ ಜೆಕೆ ಶರ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಆಯುರ್ವೇದವು ಪ್ರಾಚೀನ ಕಾಲದಿಂದ ಬಂದಿರುವಂತ ಸಂಗತಿ ಈಗಲೂ ಕೂಡ ಅತ್ಯಂತ ಪ್ರಭಾವ ಶಕ್ತಿಯಾಗಿ ಈ …

Read More »

ಕಾಮಗಾರಿ ಪೂರ್ಣಗೊಂಡ್ರೆ ಹೂವಿನ ಮಾಲೆ ಹಾಕುವೆ, ಇಲ್ಲದಿದ್ದರೆ ಬೂಟ್ ನಲ್ಲಿ ಹೊಡೆಯುವೆ: ಉಮೇಶ್ ಕತ್ತಿ

ವಿಜಯಪುರ: ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಚಿವ ಉಮೇಶ್ ಕತ್ತಿ ಅವರು ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ವೀಕ್ಷಿಸಿದ್ದಾರೆ. ಕಾಮಗಾರಿ ವೀಕ್ಷಣೆಯ ವೇಳೆ ಅವರು ಉಡಾಫೆ ಮಾತುಗಳನ್ನಾಡಿದ್ದಾರೆ. ಹಾಸ್ಯ ಮಾಡುವ ಭರದಲ್ಲಿ ಎಡವಟ್ಟಿನ ಮಾತನಾಡಿ ಅಧಿಕಾರಿಗೆ ಬೂಟಿನಲ್ಲಿ ಹೊಡೆಯುತ್ತೇನೆ ಎಂದು ಹೇಳಿದ್ದಾರೆ.   ಕಾಮಗಾರಿ ವೀಕ್ಷಿಸಿದ ಸಚಿವರು, ವಿಮಾನ ನಿಲ್ದಾಣ ಕಾಮಗಾರಿ ಯಾವಾಗ ಮುಗಿಯುತ್ತದೆ ಎಂದು ಲೋಕೋಪಯೋಗಿ ಇಲಾಖೆ ಎಇಇಗೆ ಪ್ರಶ್ನಿಸಿದ್ದಾರೆ. ಡಿಸೆಂಬರ್ ಒಳಗೆ ಕಾಮಗಾರಿ ಮುಗಿಯಲಿದೆ ಎಂದು ಎಇಇ ಹೇಳಿದ್ದಾರೆ. …

Read More »