ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊಸೂರ್ ವೃತ್ತದ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಹಳೆ ಹುಬ್ಬಳ್ಳಿಯ ಬೀರಬಂದ್ ಗಲ್ಲಿ ನಿವಾಸಿ ಪೈಜಾಲ್ ಧಾರವಾಡ ಎಂದು ಗುರುತಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಗಂಭೀರ ಗಾಯಗಳಾಗಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Read More »ಬಿಜೆಪಿ ಯುವ ಮುಖಂಡನಿಗೆ ಮಾರಣಾಂತಿಕ ಹಲ್ಲೆ.. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವು
ಸುಳ್ಯ: ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್(32) ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಯುವ ನಾಯಕ ಆಗಿರುವ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲೀಕರಾಗಿದ್ದು, ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನಂತರ ಪ್ರವೀಣ್ ಗಂಭೀರ ಗಾಯಗೊಂಡಿದ್ದರಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ. …
Read More »ಸಾರ್ವಜನಿಕರ ಟೀಕೆ, ಮಹಾನಗರ ಪಾಲಿಕೆ ಅಧಿಕಾರಿಗಳು ಆರ್ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.
ಸಾರ್ವಜನಿಕರ ಟೀಕೆ, ಆಗ್ರಹದಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿಯ ಮಹಾನಗರ ಪಾಲಿಕೆ ಅಧಿಕಾರಿಗಳು ಆರ್ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ. ಹೌದು ಕಳೆದ 15 ದಿನಗಳ ಹಿಂದೆ ಆರ್ಪಿಡಿ ಕ್ರಾಸ್ ಬಳಿಯ ಡ್ರೈನೇಜ್ ಪೈಪ್ ಲೀಕ್ ಆಗಿ ರಸ್ತೆಯ ಮೇಲೆ ಕಲುಷಿತ ನೀರು ಹರಿಯುತ್ತಿತ್ತು. ಈ ಸಂದರ್ಭದಲ್ಲಿ ಮೊದಲೇ ದೊಡ್ಡ ಪ್ರಮಾಣದಲ್ಲಿ ಮಳೆಯಾಗುತ್ತಿತ್ತು. ಇದರಿಂದ ಮಳೆ ನೀರಿನ ಜೊತೆಗೆ ಡ್ರೈನೇಜ್ ನೀರು ಕೂಡ ರಸ್ತೆಯ ಮೇಲೆ ಹರಿಯುತ್ತಿತ್ತು. …
Read More »ಬೆಳಗಾವಿಯ ಯುವಕ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪಾದಯಾತ್ರೆ
ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಪಾದಯಾತ್ರೆ ಹೊರಟಿದ್ದಾರೆ. ಪಾದಯಾತ್ರೆಯ ಮೂರನೇ ದಿನವಾದ ಇಂದು ಬೆಳಗಾವಿಗೆ ಬಂದು ತಲುಪಿದ್ದಾರೆ. ಬೆಳಗಾವಿಯ ಸಿದ್ದರಾಮಯ್ಯ ಅಭಿಮಾನಿಗಳು ಅವರನ್ನು ನಗರದ ಕನಕದಾಸ ಸರ್ಕಲ್ನಲ್ಲಿ ಸ್ವಾಗತ ಮಾಡಿದರು. ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದ ವ್ಯಕ್ತಿಯೋರ್ವ ಪಾದಯಾತ್ರೆಯನ್ನು ಕೈಗೊಂಡಿದ್ದಾನೆ. ಮೂರನೇ ದಿನವಾದ ಇಂದು ಆತ ಬೆಳಗಾವಿಗೆ ಬಂದು ತಲುಪಿದ್ದು …
Read More »ಬಿಜೆಪಿಯಲ್ಲಿ ಗೆಲ್ಲುವಂತವರಿದ್ದರೆ 80 ವರ್ಷದ ಮುದುಕನಿಗೂ, ಸೋನಿಯಾ ಗಾಂಧಿಗೂ ಟಿಕೆಟ್ ಕೊಡ್ತಾರೆ
ಬಾಗಲಕೋಟೆ: ಶ್ರೀರಾಮ ಸೇನೆ ಮತ್ತು ಬಿಜೆಪಿಗೆ ಏನು ಸಂಬಂಧ ಇಲ್ಲ ಎಂದು ಕಟೀಲ್ ಹೇಳಿದ್ದಾರೆ. ನಾನೂ ಕೂಡ ಹೇಳಿದ್ದೇನೆ. ನಾನೇನು ಬಿಜೆಪಿ ಸದಸ್ಯನಲ್ಲ. ಯಾವ ಪಕ್ಷದ ಸಂಬಂಧವೂ ನಮ್ಮ ಸಂಘಟನೆಗೆ ಇಲ್ಲ. ಅವರೇನು ನಿರ್ಧಾರ ತೆಗೆದುಕೊಳ್ಳುತ್ತಾರೋ ತೆಗೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂಪ್ಪ ಅವರು ತಮ್ಮ ಪುತ್ರನಿಗೆ ಕ್ಷೇತ್ರ ತ್ಯಾಗ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೇನು …
Read More »ಕೂಡ್ಲಿಗಿಯಲ್ಲಿ ಯುವತಿಯ ರುಂಡ ಕಡಿದು ಠಾಣೆಗೆ ತಂದಿದ್ದ ಆರೋಪಿ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್!
ವಿಜಯನಗರ: ಕೂಡ್ಲಿಗಿ ತಾಲೂಕಿನ ಕನ್ನಬೋರಯ್ಯಹಟ್ಟಿಯಲ್ಲಿ ನಡೆದ ಯುವತಿಯ ಭೀಕರ ಕೊಲೆ ಪ್ರಕರಣದ ಆರೋಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಆರೋಪಿ ಭೋಜರಾಜ್ 15 ವರ್ಷದ ಅಪ್ರಾಪ್ತೆಯನ್ನು ಮದುವೆ ಆಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ವಿರುದ್ಧ ಬಾಲ್ಯ ವಿವಾಹ ಕಾಯ್ದೆ ಹಾಗೂ ಪೊಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ತಂದೆ-ತಾಯಿ ಹಾಗೂ ಹುಡುಗಿಯ ತಂದೆ-ತಾಯಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಖಾನಾಹೊಸಹಳ್ಳಿ ಠಾಣೆಯಲ್ಲಿ ಕೇಸು ದಾಖಳಾಗಿದೆ. ಅಪ್ರಾಪ್ತೆಯ ಹೇಳಿಕೆ ಆಧಾರದ ಮೇಲೆ ತನಿಖೆ …
Read More »ಹೈ ಪ್ರೊಫೈಲ್ ಸೆಕ್ಸ್ ರಾಕೆಟ್: ಬೆಂಗಳೂರಿನ ಯುವತಿಯರು ಸಹಿತ 11 ಮಂದಿ ಅರೆಸ್ಟ್
ಛತ್ತೀಸಗಢದ ರಾಯ್ಪುರದ ಸ್ಟಾರ್ ಹೋಟೆಲ್ ಮೇಲೆ ದಾಳಿ ನಡೆಸಿದ್ದು, ಅಪರಾಧ ನಿಗ್ರಹ ಮತ್ತು ಸೈಬರ್ ಘಟಕದ ಸಿಬ್ಬಂದಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಬಯಲಿಗೆ ಎಳೆದಿದ್ದಾರೆ. ಈ ಘಟನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಯುವತಿ ಸೇರಿದಂತೆ 11 ಮಂದಿ ಯುವತಿಯರು ಹಾಗೂ ಒಬ್ಬ ಕಿಂಗ್ಪಿನ್ನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಯುವತಿ ಹೊರತುಪಡಿಸಿ ನೇಪಾಳ, ಮುಂಬೈ, ದೆಹಲಿ, ಗುಜರಾತ್ ಮೂಲದವರು ಎಂದು ತಿಳಿದುಬಂದಿದೆ. ಇನ್ನು ಇವರ ಸ್ಮಾರ್ಟ್ಫೋನ್ಗಳನ್ನು ತನಿಖೆಗೆ ಒಳಪಡಿಸಿದಾಗ …
Read More »ಪಂಪಸೆಟ್ ಕೇಬಲ್ ಕಳ್ಳರನ್ನು ಹಿಡಿದ ರೈತರು
ಜಮೀನಿನ ಪಂಪ್ ಸೆಟ್ಗಳ ಕೇಬಲ್ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ರೈತರು ಧರ್ಮದೇಟು ನೀಡಿರುವ ಘಟನೆ ಗೋಕಾಕ್ನ ಭಗೀರಥ ಕಾಲೋನಿಯಲ್ಲಿ ನಡೆದಿದೆ. ಜಮೀನಿನ ಪಂಪ್ ಸೆಟ್ನಲ್ಲಿ ಇರೋ ಕೇಬಲ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದರು. ತಾಮ್ರದ ತಂತಿಯನ್ನು ಹೆಚ್ಚಿನ ಹಣಕ್ಕೆ ಈ ಖದೀಮರು ಮಾರಾಟ ಮಾಡುತ್ತಿದ್ದರು. ಕಳೆದ ಅನೇಕ ದಿನಗಳಿಂದ ಈ ರೀತಿ ಕೇಬಲ್ ಕಳ್ಳತನ ನಡೆದಿತ್ತು. ಇದರಿಂದ ಕಂಗೆಟ್ಟಿದ್ದ ರೈತರು ಇಂದು ಇಬ್ಬರು ಕಳ್ಳರನ್ನು …
Read More »ಹಿರೇಬಾಗೇವಾಡಿ ಆರೋಗ್ಯ ಇಲಾಖೆ ವಸತಿ ಗೃಹಗಳು, ಆತಂಕದ ನಡುವೆ ವಾಸ
ಹಿರೇಬಾಗೇವಾಡಿ: ಜನರ ಆರೋಗ್ಯ ರಕ್ಷಣೆಗೆ ದಿನರಾತ್ರಿ ಶ್ರಮಿಸುವ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹಗಳು ಸಂಪೂರ್ಣ ಶಿಥಿಲಗೊಂಡಿದ್ದು, ಅವುಗಳನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಗೆ 45 ಗ್ರಾಮಗಳು ಇದ್ದು, ಈ ಭಾಗದ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸುಮಾರು 12 ವರ್ಷಗಳ ಹಿಂದೆ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. …
Read More »20 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಪಟ್ಟಿ
ಬೆಂಗಳೂರು, ಜುಲೈ 25;ಬಸವರಾಜ ಬೊಮ್ಮಾಯಿನೇತೃತ್ವದ ಕರ್ನಾಟಕ ಸರ್ಕಾರ 20 ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ. ಕೆಲವು ದಿನಗಳ ಹಿಂದೆ ಎಲ್ಲಾ 22 ನಿಮಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಸೋಮವಾರ ಕರ್ನಾಟಕ ಸರ್ಕಾರ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರ್ಣಗೊಳಿಸುವಾಗ ಹಲವಾರು ನೇಮಕಾತಿಗಳನ್ನು ಮಾಡಲಾಗಿದೆ. ಪ್ರಕಟವಾದ ಆದೇಶದ ಪ್ರಕಾರ ಯಾರಿಗೆ ಯಾವ ನಿಗಮದ …
Read More »
Laxmi News 24×7