Breaking News

ರಾಜ್ಯ

ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

ರಾಯಚೂರು: ಜಿಲ್ಲೆಯಲ್ಲಿ ಕಾಲೇಜಿಗೆ ತೆರಳಿದ್ದಂತ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಪೋಷಕರು ಮಕ್ಕಳು ನಾಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.   ರಾಯಚೂರು ಜಿಲ್ಲೆಯ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದಂತ ನಾಲ್ವರು ವಿದ್ಯಾರ್ಥಿನಿಯರು, ಕಾಲೇಜಿಗೆ ಹೋಗಿ ಬರೋದಾಗಿ ತೆರಳಿದ್ದರು. ಹೀಗೆ ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಆಗಿಲ್ಲ ಎಂಬುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.   ವಿದ್ಯಾರ್ಥಿನಿಯರ ಪೋಷಕರು ನೀಡಿದಂತ ದೂರನಿಂದಾಗಿ ಸದರಬಜಾರ್ ಠಾಣೆಯ ಪೊಲೀಸರು …

Read More »

ಬುರ್ಖಾ ಧರಿಸಿ ಆಲಮಟ್ಟಿ ಜಲಾಶಯಕ್ಕೆ ನುಗ್ಗಲು ಯತ್ನ: ಹಾಸನ ಮೂಲದ ಯುವಕ ಪೊಲೀಸ್ ವಶಕ್ಕೆ

ಆಲಮಟ್ಟಿ (ವಿಜಯಪುರ): ಸೋಮವಾರ ಬೆಳ್ಳಂಬೆಳಿಗ್ಗೆ ಮಹಿಳೆಯರ ವೇಷದಲ್ಲಿದ್ದ ಶಂಕಿತ ಯುವಕ ಆಲಮಟ್ಟಿ ಬಳಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನುಗ್ಗಲು ಯತ್ನಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ಜರುಗಿದೆ. ನಸುಕಿನಲ್ಲಿ ಆಲಮಟ್ಟಿ ಪರಿಸರದಲ್ಲಿ ಕಾಣಿಸಿಕೊಂಡ ಯುವಕ ಬುರ್ಖಾ ಧರಿಸಿ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯ ಪ್ರವೇಶಕ್ಕೆ ಮುಂದಾಗಿದ್ದಾನೆ. ಈ ವೇಳೆ ಜಲಾಶಯದ ಪ್ರವೇಶ ದ್ವಾರದಲ್ಲಿ ಭದ್ರತೆಗೆ ಇದ್ದ ಪೊಲೀಸರು ಇಷ್ಟು ಬೇಗ ಜಲಾಶಯ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಈ ವೇಳೆ ನಡೆದ …

Read More »

ಸುಷ್ಮಿತಾ ಸೇನ್ ಕನ್ನಡಕ ‌ʼಝೂಮ್ʼ ಮಾಡಿದಾಗ ಕಂಡಿದ್ದೇನು

ಉದ್ಯಮಿ‌ ಲಲಿತ್ ಮೋದಿ ಜೊತೆಗಿನ ಒಡನಾಟದಿಂದ ಮಾಜಿ ಭುವನ ಸುಂದರಿ ಸುಷ್ಮಿತಾ ಸೇನ್ ಈಗ ಹೆಚ್ಚು ಪ್ರಚಲಿತದಲ್ಲಿದ್ದಾರೆ.ಲಲಿತ್ ಮೋದಿ ಜೊತೆಗೆ ಡೇಟಿಂಗ್ ಇಳಿದಿದ್ದಕ್ಕೆ ಆಕೆಯನ್ನು ‘ಗೋಲ್ಡ್ ಡಿಗ್ಗರ್’ ಎಂದು ಕರೆಯುವುದರಿಂದ ಹಿಡಿದು ಮೀಮ್‌ಗಳನ್ನು ರಚಿಸುವವರೆಗೆ ಸಾಮಾಜಿಕ ಜಾಲತಾಣದಲ್ಲಿ ಗೋಳಾಡಿಸಿದ್ದಾರೆ. ಈಗ ಹೊಸ ವಿಷಯದ ಮೂಲಕ‌ ಪುನಃ ಆಕೆಯನ್ನು ಎಳೆದುತಂದಿದ್ದಾರೆ. ಆಕೆ ಇತ್ತೀಚೆಗೆ ತನ್ನ ಸಾಮಾಜಿಕ ಜಾಲತಾಣದ ಪ್ರೊಫೈಲ್‌ನಲ್ಲಿ ಫೋಟೊ ಒಂದನ್ನು ಪೋಸ್ಟ್ ಮಾಡಿದ್ದು, ಆ ಫೋಟೋ ಸಾಮಾನ್ಯ ಸೆಲ್ಫಿಯಂತೆ ಕಂಡುಬಂದಿದೆ. …

Read More »

ನಿಮ್ಮ ಅಪ್ಪನ ಆಣೆ ನೀವಿಬ್ಬರೂ ಸಿಎಂ ಆಗುವ ಪ್ರಶ್ನೆಯೇ ಇಲ್ಲ: B.S.Y.

ಶಿಕಾರಿಪುರ :ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಯಾಗುತ್ತೇವೆ ಎಂದು ಓಡಾಡುತ್ತಿದ್ದಾರೆ. ಅವರಿಗೆ ಕಿವಿಮಾತು ಹೇಳಲು ಇಚ್ಚಿಸುತ್ತೇನೆ. ನಿಮ್ಮ ಅಪ್ಪನ ಆಣೆ ನೀವು ಮುಖ್ಯಮಂತ್ರಿಯಾಗುವ ಪ್ರಶ್ನೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರೋಕ್ಷ ವಾಗ್ದಾಳಿ ನಡೆಸಿದರು. ತಾಲ್ಲೂಕಿನ ಆಂಜನಾಪುರ ಗ್ರಾಮ ಸಮೀಪ ಶುಕ್ರವಾರ ನಡೆದ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪಕ್ಷ ಸಂಘಟನೆಗೆ …

Read More »

ಸಿಎಂ ಆಗಲು ಬ್ಯಾಕ್ ಗ್ರೌಂಡ್ ಚೆನ್ನಾಗಿರಬೇಕು: ಡಿಕೆಶಿಗೆ HDK ಟಾಂಗ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ವಿರುದ್ಧ ಮಾಜಿ‌ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಮನಗರದಲ್ಲಿ  ವಾಗ್ದಾಳಿ ನಡೆಸಿದರು. ‌ಸಿಎಂ ವಿಚಾರವಾಗಿ ಕಿತ್ತಾಟ ಹಿನ್ನೆಲೆ ವಾಗ್ದಾಳಿ ನಡೆಸಿ ರಾಮನಗರದಲ್ಲಿ ಯಾರೇ ಬಂದರೂ ನಮ್ಮನ್ನ ಏನು‌ ಮಾಡಲು ಸಾಧ್ಯವಿಲ್ಲ. ಕಳೆದ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇರಲಿಲ್ಲ ಅಷ್ಟೇ.‌ ಉಳಿದ ಎಲ್ಲಾ ಚುನಾವಣೆಯಲ್ಲಿರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ (ಇದ್ದರು. ಜನತೆಯ ಆರ್ಶೀವಾದ ಇರುವವರೆಗೆ ಏನು ಆಗಲ್ಲ. ರಾಮನಗರದಲ್ಲಿ (ಶಿವಕುಮಾರ್ ಅವಕಾಶ ಕೇಳಿರುವುದು ತಪ್ಪಿಲ್ಲ. ಆದರೆ ಜನರ ಕಷ್ಟಸುಖಕ್ಕೆ ಕೆಲಸ ಮಾಡಿದ್ದೇನೆ …

Read More »

ಔತಣ ಕೂಟದ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಅವಮಾನಿಸಿದರಾ ಪ್ರಧಾನಿ ಮೋದಿ ?

ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆ ನಡೆದಿದ್ದು, ಎನ್.ಡಿ.ಎ. ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು, ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಪರಾಭವಗೊಳಿಸಿದ್ದಾರೆ. ದ್ರೌಪದಿ ಮುರ್ಮ ರಾಷ್ಟ್ರದ ನೂತನ ರಾಷ್ಟ್ರಪತಿಯಾಗಿ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಔತಣಕೂಟ ಏರ್ಪಡಿಸಲಾಗಿದ್ದು, ಈ ವೇಳೆ ರಾಮನಾಥ್ ಕೋವಿಂದ್ ಅವರು ನಮಸ್ಕರಿಸಿದರೂ ಸಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ …

Read More »

ಅರ್ಜುನ್ ಜನ್ಯ ಆಯ್ತು.. ಈಗ ಶಿವಣ್ಣನನ್ನೂ ಹಿಂದಿಕ್ಕಿದ ಅಭಿಮಾನಿ ಕಾಫಿನಾಡು ಚಂದು!

ಕಳೆದ ಕೆಲವು ದಿನಗಳಿಂದ ಎಲ್ಲಿ ನೋಡಿದರೂ ಒಂದೇ ಹೆಸರು ಕೇಳೋಕೆ ಸಿಗುತ್ತಿದೆ. ಅದು ಮತ್ಯಾರೂ ಅಲ್ಲ ಚಿಕ್ಕಮಗಳೂರಿನ ಸೋಶಿಯಲ್ ಮೀಡಿಯಾ ಸ್ಟಾರ್ ಕಾಫಿನಾಡು ಚಂದು. ಕರ್ನಾಟಕ ಮೂಲೆ ಮೂಲೆಯಲ್ಲೂ ಚಂದು ಬಗ್ಗೆನೇ ಮಾತು. ಅವರ ಹಾಡುಗಳದ್ದೇ ಟಾಕ್. ಸೋಶಿಯಲ್ ಮೀಡಿಯಾ ಸಾಮಾನ್ಯ ಜನರನ್ನೂ ಸೂಪರ್‌ಸ್ಟಾರ್ ಮಾಡುತ್ತಿದೆ. ತಮ್ಮ ವಿಶಿಷ್ಟ ಟ್ಯಾಲೆಂಟ್‌ನಿಂದ ಅದೆಷ್ಟೋ ಪ್ರತಿಭೆಗಳು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಹೆಚ್ಚು ಚರ್ಚೆಯಾಗುತ್ತಿರೋದು ವ್ಯಕ್ತಿ ಇದೇ ಕಾಫಿನಾಡು …

Read More »

ರೈತರ ಸಹಾಯಧನಕ್ಕೆ ಕನ್ನ: ಕಿಸಾನ್ ಸಮ್ಮಾನ್ ಹಗರಣ;

ಬೆಂಗಳೂರು :ಸಣ್ಣ ಮತ್ತು ಅತಿಸಣ್ಣ ರೈತರ ಅನುಕೂಲಕ್ಕಾಗಿ ಜಾರಿಯಾಗಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೂರಾರು ಕೋಟಿ ರೂ. ಅನರ್ಹರ ಪಾಲಾಗಿರುವುದು ಬೆಳಕಿಗೆ ಬಂದಿದೆ. ಅಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಗುತ್ತಿಗೆ ನೌಕರರು ಶಾಮೀಲಾಗಿದ್ದು, ಅಂಥವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್​ಐಆರ್​ಗಳು ದಾಖಲಾಗಿವೆ.   ಕರ್ನಾಟಕದಲ್ಲಿ 2.40 ಲಕ್ಷ ಅಪಾತ್ರರ ಖಾತೆಗಳಿಗೆ ಸಹಾಯಧನ ವರ್ಗಾ ವಣೆಯಾಗಿದೆ. ಈಗಾಗಲೇ ಖಾತೆದಾರರಿಗೆ ಕೃಷಿ ಇಲಾಖೆ ನೋಟಿಸ್ ಜಾರಿಗೊಳಿಸಿದ್ದು, ಅಕ್ರಮವಾಗಿ ಸ್ವೀಕರಿಸಿರುವ ಸಹಾಯಧನ …

Read More »

BJPಯಲ್ಲಿಯೂ ಆರಂಭವಾದ ದಲಿತ ಸಿಎಂ ವಿಚಾರ; ಕಾರಜೋಳ ಅವರನ್ನು C.M.ಮಾಡ್ತೀವಿ: ಚೆಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಆರಂಭವಾಗಿದ್ದ ದಲಿತ ಮುಖ್ಯಮಂತ್ರಿ ವಿಚಾರ ಇದೀಗ ಬಿಜೆಪಿ ಪಾಳಯದಲ್ಲಿಯೂ ಆರಂಭವಾಗಿದ್ದು, ರಾಜ್ಯದಲ್ಲಿ ದಲಿತ ಸಿಎಂ ಆಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಪರಿಷತ್ ಸದಸ್ಯ ಚೆಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.   ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಒಗ್ಗಟ್ಟಿಲ್ಲ, ಸ್ಥಾನಮಾನಕ್ಕಾಗಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ದಲಿತ ಸಿಎಂ ಎಂಬುದು ಆ ಪಕ್ಷದಲ್ಲಿ ಕೇವಲ ಹೇಳಿಕೆಗಷ್ಟೇ ಸೀಮಿತ ಎಂದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗುವುದು …

Read More »

ಟ್ರೋಲಿಗರಿಗೆ ಆಹಾರವಾದ ವಿಜಯಾನಂದ ಕಾಶಪ್ಪನವರ 2ನೇ ಮದುವೆ: ಜನರಿಗೆ ಇಳಕಲ್ ಕ್ರಿಕೆಟ್ ಪಂದ್ಯಾವಳಿ ನೆನಪು

ಬಾಗಲಕೋಟೆ: ಜಿಲ್ಲೆಯ ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ  2ರಡನೇ ಮದುವೆ ಪ್ರಕರಣವು ಇದೀಗ ಟ್ರೋಲಿಗರಿಗೆ ಆಹಾರವಾಗಿದೆ. ಈ ಹಿಂದೆ ಕ್ಷೇತ್ರದಲ್ಲಿ ಪೂಜಾಶ್ರೀ ಹೆಸರು ಯಾವಾಗೆಲ್ಲಾ ಪ್ರಸ್ತಾಪವಾಗಿತ್ತು ಎಂದು ಕ್ಷೇತ್ರದ ಜನರು ನೆನಪಿಸಿಕೊಳ್ಳುತ್ತಿದ್ದಾರೆ. ಕಳೆದ ಜುಲೈ 1ರಂದು ಇಳಕಲ್​ ಪಟ್ಟಣದಲ್ಲಿ ನಡೆದಿದ್ದ ಐಪಿಎಲ್ ಪ್ರಿಮಿಯರ್ ಲೀಗ್ ಉದ್ಘಾಟನೆ ವೇಳೆ ನಟಿ ಪೂಜಾಶ್ರೀ ಅವರ ಹೆಸರು ಮೈಕ್​ನಲ್ಲಿ ಪ್ರಕಟವಾಗಿತ್ತು ಎಂದು ಹೇಳಲಾಗಿದೆ. ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆಂದು ಇಳಕಲ್​ಗೆ ಹಲವು ಕಿರುತೆರೆ …

Read More »