ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದ ಎಲ್ಲ 27 ವಾರ್ಡ್ಗಳಲ್ಲಿಯೂ ರಸ್ತೆಗಳು ಸಂಪೂರ್ಣ ಹಾಳಾಗಿವೆ. ತಕ್ಷಣ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ರಸ್ತೆ ತಡೆ ನಡೆಸಿದರು. ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು, ಸ್ಥಳೀಯ ಶಾಸಕ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳೀಯ ಪುರಸಭೆ ಅಧಿಕಾರಿಗಳು ಹಾಗೂ ಸದಸ್ಯರ ವಿರುದ್ಧವೂ ಕಿಡಿ ಕಾರಿದರು. ಜೆಡಿಎಸ್ ಜಿಲ್ಲಾ …
Read More »ಮಳೆರಾಯನ ಅಬ್ಬರ.. ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳು ಜಲಾವೃತ.
ಬೆಳಗಾವಿ : ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಸತತ ಮಳೆಗೆ ಬೆಳಗಾವಿ ಜನರ ಸ್ಥಿತಿ ಅಯೋ ಮಯವಾಗಿದೆ. ಚರಂಡಿ ವ್ಯವಸ್ಥೆ ಇಲ್ಲದೇ ಹಲವು ರಸ್ತೆಗಳು ಜಲಾವೃತವಾಗಿದೆ. ಉಜ್ವಲ ನಗರ, ಓಂಕಾರ ನಗರ, ಮಹಾಂತೇಶ ನಗರ ಬ್ರಿಡ್ಜ್ , ಬೆಳಗಾವಿ ನಗರ ಸೇರಿ ಹಲವು ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ಜಲಾವೃತಗೊಂಡ ರಸ್ತೆಯಲ್ಲಿ ಭಯದಲ್ಲೇ ಬೈಕ್ ಸವಾರರ ಸಂಚಾರ ಮಾಡುತ್ತಿದ್ದಾರೆ. ಚರಂಡಿ ವ್ಯವಸ್ಥೆ ಕಲ್ಪಿಸದ ಬೆಳಗಾವಿ ಪಾಲಿಕೆ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
Read More »ನ.11ರಿಂದ ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಹೇಶ ಜೋಶಿ
ಕಲಬುರಗಿ:ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಈ ಬಾರಿ ನ.11ರಿಂದ 13ರವರೆಗೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಶೀಘ್ರವೇ ಸರ್ಕಾರದಿಂದ ಅಧಿಕೃತ ಘೋಷಣೆ ಆಗಲಿದೆ ಎಂದು ಕಸಾಪ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ಸೆ.21, 22 ಮತ್ತು 23ರಂದು ನಡೆಸಲು ತೀರ್ಮಾನಿಸಲಾಗಿತ್ತು ಎಂದರು. ಹಾವೇರಿಯಲ್ಲಿ ಪ್ರಮುಖವಾಗಿ ಸಿರಿಗೆರೆ ಜಾತ್ರೆ ನಡೆಯುತ್ತದೆ. ದೊಡ್ಡ ಜಾತ್ರೆಯಾದ್ದರಿಂದ ಖುದ್ದು ಸಿರಿಗೆರೆ ಶ್ರೀಗಳೇ ಮಾತನಾಡಿ ದಿನಾಂಕ …
Read More »ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ಅಬ್ದುಲ್ ಕಲಾಂ ಫೋಟೋ.
ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಥುರಾದಲ್ಲಿ ವ್ಯಕ್ತಿಯೊಬ್ಬ ತಳ್ಳಿಕೊಂಡು ಹೋಗುತ್ತಿರುವ ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳು ಕಂಡುಬಂದಿವೆ. ಈ ದೃಶ್ಯವನ್ನು ಅಲ್ಲಿನ ಜನರು ವಿಡಿಯೋ ಮಾಡಿದ್ದು, ವ್ಯಕ್ತಿಯ ಮೇಲೆ ಆಕ್ರೋಶಗೊಂಡಿರುವ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಎಸೆದ ವಸ್ತುಗಳ ಕಸದ ರಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎಪಿಜೆ ಅಬ್ದುಲ್ …
Read More »ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ
ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಜು.18ರಂದು ಮತದಾನ ನಡೆಯಲಿದ್ದು, ಅದರಂತೆ ರಾಜ್ಯದಲ್ಲೂ ಮತದಾನಕ್ಕೆ ವಿಧಾನಸೌಧದ 106ನೇ ಸಂಖ್ಯೆಯ ಕೊಠಡಿ ಸಜ್ಜುಗೊಂಡಿದೆ. ರಾಷ್ಟ್ರಪತಿ ಚುನಾವಣೆಗೆ ಮತದಾರರಾಗಿರುವ 224 ಶಾಸಕರ ಜತೆಗೆ ವಿಶೇಷ ಅನುಮತಿ ಪಡೆದಿರುವ ಇಬ್ಬರು ಸಂಸದರು ವಿಧಾನಸೌಧದಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಮತದಾನ ಮಾಡಲಿದ್ದಾರೆ. ಕೇಂದ್ರ ಚುನಾವಣ ಆಯೋಗದ ವಿಶೇಷ ವೀಕ್ಷಕ ಅಮಿತ್ ಕುಮಾರ್ ಘೋಷ್ ಮಾರ್ಗದರ್ಶನದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ …
Read More »ಇಂದಿನಿಂದ ಹೊಸ ‘GST ದರ’ ಜಾರಿ; ಯಾವುದು ಅಗ್ಗ? ಯಾವುದು ದುಬಾರಿ?.
ನಿಮಗೆ ಪ್ರತಿದಿನ ಮೊಸರು ಖರೀದಿಸುವ ಅಭ್ಯಾಸವಿದೆಯೇ? ಹಾಗಾದ್ರೆ, ಇನ್ಮುಂದೆ ನಿಮ್ಮ ಜೇಬಿನ ಭಾರ ಹೆಚ್ಚಿಸಿಕೊಳ್ಳಲೇಕಾಗುತ್ತೆ. ಯಾಕಂದ್ರೆ, ಇಂದಿನಿಂದ ಪ್ಯಾಕ್ ಮಾಡಿದ ಮತ್ತು ಲೇಬಲ್ ಮಾಡಿದ ಮೊಸರಿನ ಬೆಲೆ ಹೆಚ್ಚಾಗಲಿದೆ. ಕೇವಲ ಇದೊಂದೇ ಅಲ್ಲ, ಪ್ಯಾಕ್ ಮಾಡಿದ ಮತ್ತು ಲೇಬಲ್ ಮಾಡಿದ ಮಜ್ಜಿಗೆ, ಪನ್ನೀರ್ ಮತ್ತು ಲಸ್ಸಿಯಂತಹ ಹಾಲಿನ ಉತ್ಪನ್ನಗಳು ಜಿಎಸ್ಟಿಯಿಂದಾಗಿ ಬೆಲೆಗಳಲ್ಲಿ ಹೆಚ್ಚಳವನ್ನ ಕಾಣುವ ಸಾಧ್ಯತೆಯಿದೆ. ಇನ್ನು ಹವಾಮಾನವು ತಂಪಾಗಿದೆ ಅಂತಾ ನೀವು ಯಾವುದೇ ಟೂರ್ ಹೊಡೆಯಲು ಯೋಜಿಸಿದ್ದೀರಾ? ಆದಾಗ್ಯೂ, …
Read More »ಆರ್ಟಿಐ ಕಾರ್ಯಕರ್ತರೊಬ್ಬರು ಪಡೆದ ಮಾಹಿತಿಯಲ್ಲಿ ಮಾಜಿಗಳಿಗೆ ಸರ್ಕಾರ ಪಿಂಚಣಿ, ವೈದ್ಯಕೀಯ ಭತ್ಯೆ ರೂಪದಲ್ಲಿ ಕೋಟಿ ಕೋಟಿ ಹಣ ವ್ಯಯಿಸುತ್ತಿರುವ ಸತ್ಯಾಂಶ ಬೆಳಕಿಗೆ
ಬೆಂಗಳೂರು: ಸರ್ಕಾರ ಪ್ರತಿ ವರ್ಷ ಮಾಜಿ ಶಾಸಕರ ಪಿಂಚಣಿ, ವೈದ್ಯಕೀಯ ಭತ್ಯೆಗಳಿಗಾಗಿ ಕೋಟ್ಯಂತರ ರೂಪಾಯಿ ಹಣ ವ್ಯಯಿಸುತ್ತಿದೆ. ಈ ಸಂಬಂಧ ಆರ್ಟಿಐ ಕಾರ್ಯಕರ್ತರೊಬ್ಬರು ಮಾಹಿತಿ ಹಕ್ಕು ಮೂಲಕ ಪಡೆದ ಮಾಹಿತಿಯಲ್ಲಿ ಮಾಜಿಗಳಿಂದ ಸರ್ಕಾರದ ಬೊಕ್ಕಸದ ಮೇಲಾಗುತ್ತಿರುವ ಹೊರೆ ಬಯಲಾಗಿದೆ. ಒಂದು ಸಾರಿ ಶಾಸಕನಾದರೆ ಸಾಕು ಆ ವ್ಯಕ್ತಿಗೆ ಜೀವನ ಪೂರ್ತಿ ಭತ್ಯೆಗಳು, ಪಿಂಚಣಿಯನ್ನು ಸರ್ಕಾರ ಪಾವತಿಸಬೇಕಾಗುತ್ತದೆ. ಮಾಜಿ ಶಾಸಕರ ಹೊರೆ ಏನು?: 2013 ರಿಂದ 2021ರವರೆಗೆ ಪಿಂಚಣಿ ಹಾಗೂ ವೈದ್ಯಕೀಯ ಭತ್ಯೆ ರೂಪದಲ್ಲಿ …
Read More »ರಾಜ್ಯದಲ್ಲಿ ಮತ್ತೊಂದು ಬಹುಕೋಟಿ ರೂಪಾಯಿ ವಂಚನೆ ಪ್ರಕರಣ ಬೆಳಕಿಗೆ: 2 ಸಾವಿರ ಜನರಿಗೆ ಧೋಖಾ
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಬಹುಕೋಟಿ ರೂಪಾಯಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಸಿರಿವೈಭವ ಪತ್ತಿನ ಸಹಕಾರ ಸಂಘದಿಂದ ಹೂಡಿಕೆದಾರರಿಗೆ ಕೋಟ್ಯಾಂತರ ರೂಗಳನ್ನು ವಂಚನೆ ಮಾಡಿದೆ ಆಂತ ತಿಳಿದು ಬಂದಿದೆ. ಸಿರಿವೈಭವ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗವಲ್ಲಿ, ಪತಿ ರಾಜೇಶ್, ಅಪ್ಪಾಲಾಲ್ ಚಕೋಲಿ, ಹಿರೇಮಠ್ ಮತ್ತು ನಿರ್ದೇಶಕರ ವಿರುದ್ಧ ಹಣ ಹೂಡಿಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂದ ಹಾಗೇ ಉತ್ತರಹಳ್ಳಿ, ಆರ್.ಆರ್. ನಗರ, ಬಿಳೇಕಳ್ಳಿ, …
Read More »ನಾಳೆಯಿಂದಲೇ ಮೊಸರು, ಮಜ್ಜಿಗೆ, ಲಸ್ಸಿ ದುಬಾರಿ
ಬೆಂಗಳೂರು: ಸೋಮವಾರದಿಂದ ಆಹಾರ ಪದಾರ್ಥಗಳಿಗೂ ಶೇ.5ರಷ್ಟು ಜಿಎಸ್ಟಿ ತೆರಿಗೆ ಅನ್ವಯವಾಗಲಿದ್ದು, ನಂದಿನಿ ಮೊಸರು, ಮಜ್ಜಿಗೆ, ಲಸ್ಸಿ ದರ ಏರಿಕೆಯಾಗಲಿದೆ. ಜಿಎಸ್ಟಿ ಎಫೆಕ್ಟ್ ಹಿನ್ನೆಲೆ ಈಗಾಗಲೇ ಬೆಲೆ ಏರಿಕೆಗಳಿಂದ ಸುಸ್ತಾಗಿರುವ ಗ್ರಾಹಕರ ಜೇಬಿಗೆ ನಾಳೆಯಿಂದ ಇನ್ನಷ್ಟು ಕತ್ತರಿ ಬೀಳಲಿದೆ. ಈ ಸಂಬಂಧ ಕೆಎಂಎಫ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮೇಲಿನ ಪರಿಷ್ಕೃತ ದರವನ್ನು ಪ್ರಕಟಿಸಿದೆ. ಮೊಸರು ಮತ್ತು ಮಜ್ಜಿಗೆ ಪೊಟ್ಟಣಗಳ ಮೇಲೆ ಈಗಾಗಲೇ ಹಳೇ ದರ …
Read More »ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್
ಬೆಂಗಳೂರು: ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾದ ಹಿನ್ನಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿದೆ. ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ. ಜುಲೈ.5ರಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 87.54 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿತ್ತು. ದಾಳಿಯ …
Read More »
Laxmi News 24×7