ಶಿವಮೊಗ್ಗ: ಸರ್ಕಾರಿ (KSRTC) ಮತ್ತು ಖಾಸಗಿ ಬಸ್ ( Privet Bus ) ನಡುವೆ ಅಪಘಾತ ( Accident ) ಸಂಭವಿಸಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ( Injured ) ಘಟನೆ ಶಿವಮೊಗ್ಗ ( Shivamogga ) ತಾಲೂಕಿನ ತೋಟದಕೆರೆ ಬಳಿ ನಡೆದಿದೆ. ಗಾಯಾಳುಗಳನ್ನು ಮೆಗ್ಗಾನ್ (Meggan Hospital) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಬಸ್ ಚಾಲಕ ಶ್ರೀಧರ್ ಸ್ಥಿತಿ ಗಂಭೀರವಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ. ಖಾಸಗಿ ಬಸ್ ಕೆಕೆಬಿ ಶಿವಮೊಗ್ಗದಿಂದ ಶೃಂಗೇರಿ ಹೊರಟಿತ್ತು. …
Read More »ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ :
ಬೆಂಗಳೂರು: ಮುಂಗಾರು ಮಳೆ ಆರಂಭಟ ರಾಜ್ಯಾಧ್ಯಂತ ಜೋರಾಗಿದೆ. ಕರಾವಳಿ ಭಾಗದ ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ಜನ ಜೀವನವೇ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ರಾಜ್ಯಾಧ್ಯಂತ ಜುಲೈ.5ರವರೆಗೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಜುಲೈ 5 ರವರೆಗೆ …
Read More »ಬೆಳಗಾವಿ | ಮುನ್ನೆಚ್ಚರಿಕೆ ಇಲ್ಲದೆ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ, ಜು.1: ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಜೂ.29ರಂದು ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ ನಡೆದಿದ್ದು, ಇದರ ವಿಡಿಯೋಗಳು ಜು.1ರಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಈ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚಮಕೇರಿ ಗ್ರಾಮದ ರಸ್ತೆಯಲ್ಲಿ ಬೀರಲಿಂಗೇಶ್ವರ ಜಾತ್ರೆ ಪ್ರಯುಕ್ತ ಬುಧವಾರ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಪಾಯವನ್ನೂ ಲೆಕ್ಕಿಸದೆ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಪೆÇಲೀಸರು ಗ್ರಾಮಕ್ಕೆ …
Read More »ಡಿಸೆಂಬರ್ನಲ್ಲೇ ವಿಧಾನಸಭೆ ಚುನಾವಣೆ ಸಾಧ್ಯತೆ: ಸಜ್ಜಾಗಿ ಎಂದ H.DK
ಬೆಂಗಳೂರು: ವಿಧಾನಸಭೆ ಚುನಾವಣೆ ಡಿಸೆಂಬರ್ನಲ್ಲೇ ಎದುರಾಗುವ ಸಾಧ್ಯತೆಗಳಿವೆ. ಜೆಡಿಎಸ್ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ‘ಜನತಾಮಿತ್ರ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕನಿಷ್ಠ ಹದಿನೈದು ಕ್ಷೇತ್ರಗಳನ್ನುಗೆಲ್ಲುವ ವಾತಾವರಣ ಜೆಡಿಎಸ್ಗೆ ಇದೆ. ವಿಧಾನಸಭೆ ಮತ್ತು ಬಿಬಿಎಂಪಿ ಚುನಾವಣೆಗೆ ಕಾರ್ಯಕರ್ತರು ಸಂಘಟಿತರಾಗಬೇಕು. ಬೆಂಗಳೂರು ಹಂತ-ಹಂತವಾಗಿ ಬೆಳೆಯುತ್ತಿದೆ. ಬೆಂಗಳೂರಿನಲ್ಲಿ ನಮ್ಮ ಪಕ್ಷ ಶಕ್ತಿಯುತವಾಗಿಲ್ಲ ಎಂಬ ಭಾವನೆ ತೆಗೆದುಹಾಕಬೇಕು ಎಂದು …
Read More »2022ರ ವಿಧಾನಸಭೆ ಚುನಾವಣೆ ಮಾಜಿ ಸಿಎಂ ಸಿದ್ದರಾಮಯ್ಯ ಸವದತ್ತಿ ಯಿಂದ ಸ್ಪರ್ಧೆ ?
ಬೆಳಗಾವಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೆಚ್ಚಿರುವ ವಿಧಾನಸಭೆ ಕ್ಷೇತ್ರಗಳ ಮೇಲೆ ಕಾಂಗ್ರೆಸ್ನ ಕೆಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ತಾವು ಈಗ ಶಾಸಕರಾಗಿರುವ ಕ್ಷೇತ್ರವನ್ನು ಮುಂದಿನ ಚುನಾವಣೆಯಲ್ಲಿ ಉಳಿಸಿಕೊಳ್ಳಲು ಸಮರ್ಥರಿದ್ದರೂ ಕೂಡ ಕ್ಷೇತ್ರ ಬದಲಾಯಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಆನಂದ್ ಮಾಮ್ನಿ ಗೆದ್ದಿರುವ ಪಕ್ಷದ ಮತಗಳ …
Read More »ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ.. ಹೈದರಾಬಾದ್ಗೆ ಸಿಎಂ
ಬೆಂಗಳೂರು: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದಿನಿಂದ ಹೈದರಾಬಾದ್ನಲ್ಲಿ ಆರಂಭವಾಗಲಿದ್ದು, ಚುನಾವಣೆ, ಪಕ್ಷ ವಿಸ್ತರಣೆ ಮತ್ತು ಮೋದಿ ಆಡಳಿತವನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವ ಪ್ರಮುಖ ವಿಷಯಗಳು ಚರ್ಚೆಯಾಗಲಿವೆ. ಹೈದರಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.ಎರಡು ದಿನ ಕಾರ್ಯಕಾರಣಿ ಸಭೆಯಲ್ಲಿ …
Read More »ಪಕ್ಷ ಸಂಘಟನೆಗೆ ಸಾಮಾಜಿಕ ಜಾಲತಾಣ ಸದ್ಬಳಕೆ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಘಟಫ್ರಭ: ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿಸಲು ಆದ್ಯತೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ತರಬೇತಿ ಕೇಂದ್ರದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ದೇಶ-ವಿದೇಶಗಳಲ್ಲಿನ ಬೆಳೆವಣಿಗೆಗಳನ್ನು ಸೆಂಕೆಂಡ್ಗಳಲ್ಲಿ ಜನಸಾಮಾನ್ಯರಿಗೆ ತಲುಪಿಸಿ ಅವರ ನಡುವೆ ಸಂವಹನ ಸಾಮರ್ಥ್ಯವನ್ನು …
Read More »ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್ಗೆ ಶೋಕಾಸ್ ನೋಟಿಸ್
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದ್ದು, ಏಳು ದಿನಗಳೊಳಗೆ ಉತ್ತರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ನಾಯಕತ್ವ ವಹಿಸಿಕೊಳ್ಳಲು ನಾಲಾಯಕ್ ನಾಯಕರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಲಕ್ಷ್ಮಿ ನಾರಾಯಣ್ ಲಘುವಾಗಿ …
Read More »ಮನೆ ಕೆಲಸದವನಿಂದ ಜೋಡಿ ಕೊಲೆ: ಒಟ್ಟಿಗೆ ಊಟ ಮಾಡಿ ಮಲಗಿದ್ದ ಮಾಲೀಕರನ್ನು ಹೊಡೆದು ಹತ್ಯೆ
ಗದಗ: ಮನೆಗೆಲಸದ ವ್ಯಕ್ತಿಯೊಬ್ಬ ಮಾಲೀಕರನ್ನು ಹತ್ಯೆಗೈದ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಗ್ರಾಮದ ಫಕೀರೇಶ ಮಾಚೇನಹಳ್ಳಿ (17) ಮಹಾಂತೇಶ್ ಮಾಚೇನಹಳ್ಳಿ (28) ಕೊಲೆಗೀಡಾದ ದುರ್ದೈವಿಗಳು. ಅಲಗಿಲವಾಡ ಗ್ರಾಮದ ನಿವಾಸಿ ಮಂಜುನಾಥ್ (40) ಕೊಲೆ ಮಾಡಿದ ಆರೋಪಿ. ಗುರುವಾರ ರಾತ್ರಿ ಮಾಲೀಕರ ಜೊತೆ ಬಾಡೂಟ ಸವಿದ ಮಂಜುನಾಥ ಮನೆಯ ಮಹಡಿಯಲ್ಲಿ ಮಾಲೀಕರ ಪಕ್ಕದಲ್ಲಿಯೇ ಮಲಗಿದ್ದರು. ಬೆಳಗಿನ ಜಾವ ಕೋಲಿನಿಂದ ಮುಖ ಹಾಗೂ ತಲೆಗೆ …
Read More »ಶರದ್ ಪವಾರ್ ಗೆ ಬಂತು ಲವ್ ಲೆಟರ್…!
ಮುಂಬೈ: ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ ದಿನದಂದು, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು 2004, 2009, 2014 2020 ರ ಚುನಾವಣೆ ಅವಧಿಯಲ್ಲಿ ಸಲ್ಲಿಸಿದ ಅಫಿಡವಿಟ್ಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆಯಿಂದ ನೋಟಿಸ್ ಸ್ವೀಕರಿಸಿರುವುದಾಗಿ ಹೇಳಿದ್ದಾರೆ. ಈ ನೋಟಿಸ್ ಗಳನ್ನು ಅವರು ಪ್ರೇಮ ಪತ್ರಗಳು ಎಂದು ವ್ಯಂಗವಾಡಿದ್ದಾರೆ. ಈ ಕುರಿತಾಗಿ ಮರಾಠಿಯಲ್ಲಿ ಟ್ವೀಟ್ ಮಾಡಿರುವ ಅವರು “ಇಂದಿನ ದಿನಗಳಲ್ಲಿ …
Read More »
Laxmi News 24×7