Breaking News

ರಾಜ್ಯ

ಬಾವಿಗೆ ಬೀಳುತ್ತಿದ್ದ ಸಾರಿಗೆ ಬಸ್ ಜಸ್ಟ್ ಮಿಸ್

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಇನ್ನೇನು ಆಳ ಬಾವಿಗೆ ಬೀಳಬೇಕು ಅನ್ನುಷ್ಟರಲ್ಲಿ ಆಪದ್ಬಾಂಧವನಾಗಿ ಬಂದ ಬೇವಿನ ಮರ, 70 ಜನರ ಪ್ರಾಣ ಉಳಿಸಿದೆ. ಇಂಡಿಯಿಂದ ವಿಜಯಪುರಕ್ಕೆ ಗುರುವಾರ ಇಂಡಿ ಡಿಪೋದ ಸಾರಿಗೆ ಬಸ್ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ನಾಗಠಾಣ ಮತ್ತು ಅಲಿಯಾಬಾದ್ ನಡುವಿನ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಬದಿಯ ತಗ್ಗು ಪದೇಶಕ್ಕೆ ನುಗ್ಗಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಮರದ ಮುಂದೆಯೇ ಆಳ ಬಾವಿ ಇದೆ. ಬೇವಿನ ಮರ …

Read More »

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆನುಗ್ಗಿದ ನೀರು

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದ್ದು ದೇವಿಯ ದರ್ಶನವನ್ನು ಪಡೆಯಲು ಭಕ್ತರು ಪರದಾಡುವ ಪ್ರಸಂಗ ನಿರ್ಮಾಣವಾಗಿತ್ತು. ಹೌದು ಇಂದು ಗುರುವಾರ ಮಧ್ಯಾಹ್ನದ ವೇಳೆಗೆ ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳಿಯಿಂದಾಗಿ ಸವದತ್ತಿ ಅಧಿದೇವತೆ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದೆ. ಪರಿಣಾಮವಾಗಿ ದೇವಿಯ ದರ್ಶನಕ್ಕೆ ಬಂದಿದ್ದ ಭಕ್ತರು ದೇವಿಯ ದರ್ಶನವನ್ನು ಪಡೆಯಲು ಪರದಾಡಬೇಕಾಯಿತು. ಏಕಾಏಕಿಯಾಗಿ ಮಳೆ ರಭಸವಾಗಿ ಬೀಳಲಾರಂಭಿಸಿದ್ದರಿಂದ ಭಕ್ತರು ಓಡಿ …

Read More »

ರಾಹುಲ್​ ಪರ ಟ್ವೀಟ್​ ಮಾಡಿ ಸಂಕಷ್ಟಕ್ಕೆ ಸಿಲುಕಿದ ನಟಿ ರಮ್ಯಾ:

ಬೆಂಗಳೂರು: ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಸಹಸ್ರಾರು ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತ ಸಂಸದ ರಾಹುಲ್​ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆಯೇ, ನಟಿ, ಮಾಜಿ ಸಂಸದೆ ರಮ್ಯಾ ಮತ್ತೆ ರಾಹುಲ್​ ಗಾಂಧಿ ಪರ ಬ್ಯಾಟಿಂಗ್​ ಬೀಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ರಾಹುಲ್​ ಗಾಂಧಿಯವರ ವಿರುದ್ಧ ವಿನಾಕಾರಣ ಸುಳ್ಳು ಆಪಾದನೆ ಹೊರಿಸಲಾಗಿದೆ …

Read More »

ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು : ನ್ಯಾಷನಲ್‌ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಕೇಂದ್ರದ‌ ಬಿಜೆಪಿ ಸರ್ಕಾರವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.   ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಮೆರವಣಿಗೆಯಲ್ಲಿ ಹೊರಟಿದ್ದ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ವೃತ್ತದಲ್ಲಿ ಪೊಲೀಸರು ತಡೆದರು. ವಿಧಾನಸಭೆ …

Read More »

ಕಸ ತೆಗೆಯುವ ವೇಳೆ ಟ್ರಾಕ್ಟರ್ ಗೆ ಸಿಲುಕಿ ರೈತನ ಸಾವು

ತನ್ನ ಹೊಲದಲ್ಲಿ ಟ್ರ್ಯಾಕ್ಟರ್ ಮೂಲಕ ಕುಂಟೆ ಹೊಡೆಸಿ ಹೊಲವನ್ನು ಬಿತ್ತುಣಿಕೆಗೆ ಹದಗೊಳಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಇಂಜೀನ ಹಿಂಬದಿ ಅಳವಡಿಸಿದ್ದ ಕಬ್ಬಿಣದ ಕುಂಟೆ ಬಡಿದು ರೈತ ಮಲ್ಲಣ್ಣ ಎರೆಡ್ಡಿ (48) ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಗುರುವಾರ ಮದ್ಯಾಹ್ನ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಟ್ರ್ಯಾಕ್ಟರ್ ಕಸ ತೆಗೆಯುವ ವೇಳೆ ಮಲ್ಲಣ್ಣ ಹೊಲದ ಒಡ್ಡಿನ ಬಳಿ ನಿಂತಿದ್ದ. ಚಾಲಕ ಟ್ರ್ಯಾಕ್ಟರನ್ನು …

Read More »

A.A.P.ಉಪಾಧ್ಯಕ್ಷ ಭಾಸ್ಕರ್‌ರಾವ್ ಜೂ.17 ಹಾಗೂ 18ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ

ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್‌ರಾವ್ ಜೂ.17 ಹಾಗೂ 18ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಹೌದು ಜೂ.17ರಂದು ಅಥಣಿಯಲ್ಲಿ ಆಮ್ ಆದ್ಮಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿರುವ ಭಾಸ್ಕರ್‌ರಾವ್ ರಾಯಬಾಗ, ಕುಡಚಿ ಹಾಗೂ ಗೋಕಾಕ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಜೂ.18ರಂದು ಬೆಳಗಾವಿಯ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಮತಕ್ಷೇತ್ರದ ಆಪ್ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.ನಂತರ ಖಾನಾಪುರ, ಕಿತ್ತೂರು, ಬೈಲಹೊಂಗಲನಲ್ಲಿ ಸಭೆ ನಡೆಸಲಿದ್ದಾರೆ ಎಂದು …

Read More »

ಲಕ್ಷ್ಮೀ ಅಕ್ಕಾ ಮನೆಯಲ್ಲಿ ಮೀಸೆ ಮಾವ..!

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಬೆಳಗಾವಿ ಕಾಂಗ್ರೆಸ್‍ನ ಮತ್ತೊಂದು ಪವರ್ ಸೆಂಟರ್ ಆಗಿ ಹೊರ ಹೊಮ್ಮಿದ್ದಾರೆ. ಹೌದು ಯಾವಾಗ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಅಧ್ಯಕ್ಷರನ್ನಾಗಿ ಮಾಡಿದ್ರೋ ಅವತ್ತಿನಿಂದ ಈವರೆಗೂ ಒಂದಿಲ್ಲೊಂದು ಸಂದರ್ಭಗಲ್ಲಿ ಮೇಲುಗೈ ಸಾಧಿಸುತ್ತಲೇ ಬಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸಧ್ಯ ಎರಡು ಗೆಲುವುಗಳಿಂದ ತಮ್ಮ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿದ್ದಾರೆ. ಅದು …

Read More »

ರಾಹುಲ್ ಗಾಂಧಿ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ- ನಲಪಾಡ್

ಬೆಂಗಳೂರು: ರಾಹುಲ್ ಗಾಂಧಿ ಅತ್ಯಾಚಾರ ಮಾಡ್ತಿದ್ದಾರೆ ಎಂದು ಕರ್ನಾಟಕ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​​ ಗಂಭೀರ ಆರೋಪ ಮಾಡಿದ್ದಾರೆ. ಇ.ಡಿ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿ ಕಾಂಗ್ರೆಸ್ ನಾಯಕರು ಬೃಹತ್ ಜಾಥಾವನ್ನು ನಗರದಲ್ಲಿ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಆಕ್ರೋಶ ಹೊರಹಾಕಿದ ನಲಪಾಡ್​​, ರಾಹುಲ್​​ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ. ಅತ್ಯಾಚಾರ ಎಂದರೇ ರೇಪ್​​ ಅಲ್ಲ ದೌರ್ಜನ್ಯ. ನಮ್ಮ ಮಾಜಿ ಅಧ್ಯಕ್ಷರ ಮೇಲೆ ದೌರ್ಜನ್ಯ …

Read More »

ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೌದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜೆಡಿಎಸ್ ಸದಸ್ಯ ಟಿ.ಎ ಶರವಣ, ಬಿಜೆಪಿ ಸದಸ್ಯರಾದ ಲಕ್ಷಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ, ಕಾಂಗ್ರೆಸ್‍ನ ಸದಸ್ಯರಾದ ನಾಗರಾಜ್, ಅಬ್ದುಲ್ ಜಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‍ನ ಹಂಗಾಮಿ ಸಭಾಪತಿ ರಘುನಾಥ್‍ರಾವ್ ಮಲ್ಕಾಪುರೆ, ವಿಧಾನಸಭೆ ಉಪಾಧ್ಯಕ್ಷ ಆನಂದ್ ಮಾಮನಿ, ಸಚಿವರಾದ …

Read More »

ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ

ಹೈದರಾಬಾದ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿ, ಹೈದರಾಬಾದ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ.   ಇಂದು ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ …

Read More »