Breaking News

ರಾಜ್ಯ

ಆ ಗಂಡಿಗೆ ಉತ್ತರ ಕೊಡುತ್ತೇನೆ’ : ಮತ್ತೆ ರಾಮನಗರದಲ್ಲಿ “ಗಂಡಿನ ಗದ್ದಲ”

ಬೆಂಗಳೂರು: ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ ನಾರಾಯಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧ್ಯೆ ಮತ್ತೆ ವಾಗ್ವಾದ ತಾರಕಕ್ಕೆ ಏರಿದ್ದು “ಆ ಗಂಡಿಗೆ ಉತ್ತರ ಕೊಡುತ್ತೇನೆ” ಎಂದು ಶಿವಕುಮಾರ್ ತಿರುಗೇಟು ನೀಡಿದ್ದಾರೆ.   ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ವ್ಯಂಗ್ಯವಾಡಿದ್ದ ಅಶ್ವತ್ಥನಾರಾಯಣ, ಡಿ.ಕೆ‌.ಶಿವಕುಮಾರ್ ಗೆ ಇಡಿ, ಐಟಿ ಅನುಭವ ಚೆನ್ನಾಗಿದೆ. ಅವರು ತಿಹಾರ್ ಕಡೆ ಪ್ರಯಾಣ ಬೆಳೆಸಬೇಕು ಎಂದು ವ್ಯಂಗ್ಯವಾಡಿದ್ದರು. ಇದರಿಂದ ಕೆರಳಿರುವ ಶಿವಕುಮಾರ್, ‘ಆ ಗಂಡಿಗೆ ಉತ್ತರ ನೀಡುತ್ತೇನೆ’ …

Read More »

ನಕಲಿ ಎಸಿಬಿ ಅಧಿಕಾರಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸರಕಾರಿ ಅಧಿಕಾರಿಗಳಿಗೆ ಫೋನ್ ಮಾಡಿ ಅಕೌಂಟ್‍ಗೆ ಹಣ ಹಾಕುವಂತೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಎಸಿಬಿ ಅಧಿಕಾರಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಾವು ಎಸಿಬಿ ಅಧಿಕಾರಿಗಳೆಂದು ನಂಬಿಸಿ ಸರಕಾರಿ ಅಧಿಕಾರಿಗಳಿಂದ ಸುಲಿಗೆ ಮಾಡುತ್ತಿದ್ದ ಮೂವರು ಖದೀಮರನ್ನು ಬೆಳಗಾವಿಯ ಸಿಎಎನ್ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರ್‍ಪಡಿಸಿದ್ದಾರೆ. ಬಂಧಿತರನ್ನು ಚಿಕ್ಕೋಡಿಯ ಸದಲಗಾ ಮೂಲದ 56ವರ್ಷದ ಮುರಗೆಪ್ಪ ನಿಂಗಪ್ಪ ಪೂಜಾರ್, …

Read More »

ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವ ಮೈಕ್ರೋಸಾಫ್ಟ್‌

ಸಾಫ್ಟ್‌ವೇರ್‌ ದಿಗ್ಗಜ ಮೈಕ್ರೋಸಾಫ್ಟ್‌ ಕಂಪನಿಯು ತನ್ನ ಪ್ರಸಿದ್ಧ ವೆಬ್‌ ಬ್ರೌಸರ್‌ ಇಂಟರ್ನೆಟ್ ಎಕ್ಸ್‌ಪ್ಲೋರರ್ (IE) ಗೆ ನಿವೃತ್ತಿ ಘೋಷಿಸಿದೆ. ಈ ಹಿಂದೆ ಕಳೆದ ವರ್ಷವೇ ಈ ಕುರಿತು ಸುದ್ದಿಗಳು ಹರಿದಾಡಿದ್ದವು. ಪ್ರಸ್ತುತ ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವುದಾಗಿ ಹೇಳಿದೆ. ಇದರ ಬದಲಾಗಿ ಕ್ರೋಮಿಯಂ-ಆಧಾರಿತ ಎಡ್ಜ್ ಅನ್ನು ವಿಂಡೋಸ್ ಪಿಸಿಗಳಿಗೆ ಪ್ರಾಥಮಿಕ ಬ್ರೌಸರ್‌ ಆಗಿ ಮಾರ್ಪಡಿಸಲಾಗುತ್ತದೆ. ಪ್ರಸ್ತುತ ಜನರೇಷನ್ನಿನ ವಿಂಡೋಸ್‌ ಎಡ್ಜ್‌ ಬ್ರೌಸರ್‌ “ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ಗಿಂತ ವೇಗವಾದ, …

Read More »

ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ ಅನುಶ್ರೀ

ಸ್ಯಾಂಡಲ್‌ವುಡ್‌ನ ಖ್ಯಾತ ನಿರೂಪಕಿ ಅನುಶ್ರೀಗೆ ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ. ಮದುವೆಯಾಗಲೂ ಇದೀಗ ಮನಸ್ಸು ಮಾಡಿದ್ದಾರೆ. ಹಾಗಂತ ಸ್ವತಃ ಅನುಶ್ರೀ ಅವರೇ ಹೇಳಿಕೊಂಡಿದ್ದಾರೆ. ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿರುವ ಅನುಶ್ರೀ, ತಮ್ಮ ವಿಭಿನ್ನ ನಿರೂಪಣೆಯ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮನೆಮಾತಾಗಿದ್ದಾರೆ. ಚಿತ್ರರಂಗದ ಕಾರ್ಯಕ್ರಮಗಳ ಜೊತೆಗೆ ಟಿವಿ ಶೋ ಮುಖಾಂತರ ಅನುಶ್ರೀ, ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಇದೀಗ ಮತ್ತೆ ನಟಿ ಕಮ್ ನಿರೂಪಕಿ ಅನುಶ್ರೀ ಸುದ್ದಿಯಲ್ಲಿದ್ದಾರೆ. ಈ ಬಾರಿ ಮದುವೆಯ ವಿಚಾರದ ಮೂಲಕ ಗಾಂಧಿನಗರದಲ್ಲಿ …

Read More »

ಬೆಡ್‌ಶೀಟ್‌ನಲ್ಲಿ ಆನೆ ದಂತ ಸಾಗಾಟ, ಮೂವರು ಅರೆಸ್ಟ್‌, ಓರ್ವ ಪರಾರಿ

ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಂಚಾರಿ ಅರಣ್ಯ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ಪ್ರೀತಮ್(31), ಜಗದೀಶ್(21), ಪುನೀತ್(28) ಬಂಧನಕ್ಕೆ ಒಳಗಾದರೆ ಹೇಮಂತ್ ಪರಾರಿಯಾಗಿದ್ದಾನೆ.  ಬೆಡ್ ಶಿಟ್‌ನಲ್ಲಿ ಆನೆ ದಂತ ಸುತ್ತಿಕೊಂಡು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಕಾರನ್ನು ಅಡ್ಡ ಹಾಕಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಆನೆ ದಂತ, ಕಾರು, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. …

Read More »

ಅಪ್ಪಿತಪ್ಪಿ ʼ ಮಕ್ಕಳ ಕೈಗೆ ಬೈಕ್‌ ಕೊಡದಿರಿ ʼ ಇನ್ಮುಂದೆ 25 ಸಾವಿರ ರೂ.ವರೆಗೂ ದಂಡ ಸಾಧ್ಯತೆ

ಬೆಂಗಳೂರು: ನಗರದಲ್ಲಿ ಬೈಕ್‌ಸ್ಟಂಟ್‌ ಮಾಡಿ ಕೇಸ್‌ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ.1 ರಿಂದ ಮೇ 31ರ ನಡುವೆ ಬೈಕ್‌ ಸ್ಟಂಟ್‌ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದವರ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ. 2020ರಲ್ಲಿ ಶೇ.9ರಷ್ಟು , 2021ರಲ್ಲಿ ಶೇ.13ರಷ್ಟು ಅಪ್ರಾಪ್ತರು ಬೈಕ್‌ಸ್ಟಂಟ್‌ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಪೈಕಿ ಕೆಲವರಿಗೆ ಪಾಲಕರೇ ಬೈಕ್‌ ಕೊಡಿಸಿದ್ದರೆ, ಇನ್ನು ಕೆಲವರು ಸಂಬಂಧಿಕರಿಂದ ಹಾಗೂ …

Read More »

ಬೆಳಗಾವಿಯ ಕಣಬರ್ಗಿಯಲ್ಲಿರುವ ಮಹೇಶ ಫೌಂಢೇಶನ್‍ನಲ್ಲಿ ವಿದ್ಯಾರ್ಥಿನಿಯರ ವಿನೂತನ ಮೂರು ಅಂತಸ್ತಿನ ಪ್ರತ್ಯೇಕ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭ

ಕುಂದಾನಗರಿ ಬೆಳಗಾವಿಯ ಕಣಬರ್ಗಿಯಲ್ಲಿರುವ ಮಹೇಶ ಫೌಂಢೇಶನ್‍ನಲ್ಲಿ ವಿದ್ಯಾರ್ಥಿನಿಯರ ವಿನೂತನ ಮೂರು ಅಂತಸ್ತಿನ ಪ್ರತ್ಯೇಕ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಹೌದು, ಇಂದು ರವಿವಾರ ಬೆಳಗಾವಿಯ ಕಣಬರಗಿಯಲ್ಲಿ ಮೆಡಿಕಲ್ಲಿ ಚಾಂಲೇಂಜ್ಡ್ ಹಾಗೂ ಎಚ್‍ಐವಿ ಪೀಡಿತ ಮಕ್ಕಳ ಶಿಕ್ಷಣ, ಸಮತೋಲನ ಆಹಾರ ಹಾಗೂ ಉತ್ತಮ ಆರೋಗ್ಯ ಸೌಲಭ್ಯವನ್ನು ನೀಡುತ್ತಿರುವ ರಾಜ್ಯದ ಹೆಮ್ಮೆಯ ಸಾಮಾಜಿಕ ಸೇವಾ ಸಂಸ್ಥೆ ಮಹೇಶ ಫೌಂಢೇಶನ್ ನಲ್ಲಿ ವಿದ್ಯಾರ್ಥಿನಿಯರ ವಸತಿನಿಲಯದ ಮೂರು ಮಹಡಿಯ ಪ್ರತ್ಯೇಕ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. …

Read More »

ಮಾಜಿ ಶಾಸಕ, ಕರಾವಳಿಯ ಭೀಷ್ಮ ಎ.ಜಿ. ಕೊಡ್ಗಿ ಇನ್ನಿಲ್ಲ

ಕುಂದಾಪುರ : ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಅವರು ಅಸೌಖ್ಯದಿಂದ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ, ರಾಜಕೀಯ ಚಾಣಾಕ್ಷನಾಗಿ ಸುದೀರ್ಘ‌ 56 ವರ್ಷಗಳ ಕಾಲ ತೊಡಗಿಸಿಕೊಂಡು, ತಾನು ಗುರುತಿಸಿಕೊಂಡ ಪಕ್ಷದಲ್ಲಿ ನಿಷ್ಠೆ ಹಾಗೂ ಬದ್ಧತೆಯನ್ನು ತೋರಿಸಿ, ಪಕ್ಷಕ್ಕೆ ತನ್ನ ಆವಶ್ಯಕತೆಯಿಲ್ಲ ಎಂದೆನಿಸಿದಾಗ ರಾಜಕೀಯದ ಪಡಸಾಲೆಯಿಂದ ನಿರ್ಗಮಿಸಿದವರು ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು. ಕುಂದಾಪುರ …

Read More »

ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಎಸ್ಕೇಪ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸ್ ಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ಯೂಥ್ ಕಾಂಗ್ರೆಸ್ ಅಧ್ಯಕ್ಷರು ಓಡಿ ಹೋಗಿ ತಪ್ಪಿಸಿಕೊಂಡ ಘಟನೆ ನಡೆದಿದೆ.   ಇಡಿ ಕಚೇರಿ ಬಳಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು …

Read More »

ಮದ್ಯದಂಗಡಿಗೆ ಮಂಥ್ಲಿ ಫಿಕ್ಸ್: ಅಬಕಾರಿ ಇಲಾಖೆಯಲ್ಲಿ ಲಂಚಾವತಾರ; ಎಲ್ಲರಿಗೂ ಪಾಲು..

ಬೆಂಗಳೂರು :ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ 40 ಪರ್ಸೆಂಟ್ ಕಮೀಷನ್ ಆರೋಪಗಳ ಬೆನ್ನಲ್ಲೇ, ಸರ್ಕಾರದ ಖಜಾನೆಯ ಪ್ರಮುಖ ಸಂಪನ್ಮೂಲವಾಗಿರುವ ಅಬಕಾರಿ ಇಲಾಖೆಯಲ್ಲಿ ‘ಮಂಥ್ಲಿ ಮನಿ’ ಅಲಿಖಿತ ನಿಯಮವಾಗಿ ಮಾರ್ಪಟ್ಟಿದೆಯೆಂಬ ಮಾತು ಜೋರಾಗಿ ಕೇಳಿಬರುತ್ತಿದೆ. ರಾಜ್ಯದಲ್ಲಿರುವ ಪ್ರತಿಯೊಂದು ಮದ್ಯದಂಗಡಿಗೂ ‘ತಿಂಗಳ ವಂತಿಕೆ’ ಕಡ್ಡಾಯವಾಗಿದೆ. ಇದು ಇಲಾಖೆಯ ಇತರ ಲಂಚ-ರುಷುವತ್ತುಗಳಿಗೆ ಹೊರತಾದ ಮೊತ್ತ..! ಕೆಳಹಂತದ ಸಿಬ್ಬಂದಿಯಿಂದ ಹಿಡಿದು ಮೇಲಿನ ಅಧಿಕಾರಿಗಳವರೆಗೂ ಇದರಲ್ಲಿ ಪಾಲಿದೆ. ಒಂದೊಂದು ಜಿಲ್ಲೆಗೆ ಒಂದೊಂದು ರೀತಿ ಮಂಥ್ಲಿ ಮನಿ ಫಿಕ್ಸ್ ಮಾಡಲಾಗಿದೆ. …

Read More »