Breaking News

ರಾಜ್ಯ

ಪಿಎಸ್‍ಐ ನೇಮಕಾತಿ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ.

ಬೆಂಗಳೂರು: ಪಿಎಸ್‍ಐ ನೇಮಕಾತಿ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ. ಪಿಎಸ್‍ಐ ನೇಮಕಾತಿ ಪ್ರಕರಣದ ವಿಚಾರಣೆ ವೇಳೆ ಸಚಿವ ಅಶ್ವಥ್ ನಾರಾಯಣ್ ಹಾಗೂ ಅವರ ಸಹೋದರ ಸತೀಶ್ ಹೆಸರು ಹೇಳಿದ್ದ ದರ್ಶನ್‍ಗೌಡನನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಐಡಿ ಪೊಲೀಸರು ಇಂದು ಬಂಧಿಸಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಜೊತೆಗೆ ಕೋರಮಂಗಲದಲ್ಲಿ ನೆಲಮಂಗಲ ಕಾನ್ಸ್‌ಸ್ಟೇಬಲ್‌ ಮೋಹನ್ ಕುಮಾರ್ ಹಾಗೂ ರಾಮಮೂರ್ತಿನಗರ ಪೊಲೀಸರು ಹರೀಶ್‍ನನ್ನು ಬಂಧಿಸಿದ್ದಾರೆ. ಪ್ರತ್ಯೇಕವಾಗಿ ಮೂರು ಕೇಸ್ ದಾಖಲಿಸಿ …

Read More »

ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ: ಸಿದ್ದರಾಮಯ್ಯ

ಮೈಸೂರು: ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಬಿಎಸ್‍ವೈ ಸಿದ್ದು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ. ಅವನು ಜೆಡಿಎಸ್‍ನಲ್ಲಿ ಕ್ಯಾಪ್ಟೀವ್ ಪ್ರೆಸಿಡೆಂಟ್ ಇದ್ದಂತೆ. ಕುಳಿತುಕೋ ಎಂದರೆ ಕುಳಿತುಕೊಳ್ಳಬೇಕು. ನಿಂತುಕೋ ಅಂದರೆ ನಿಂತುಕೊಳ್ಳಬೇಕು. ಎಂಎಲ್‍ಸಿ ಮಾಡುತ್ತೇವೆ ಅಂತ ಹೇಳಿ ಕರೆದುಕೊಂಡು …

Read More »

ಪತ್ರಕರ್ತ ರಾಘವೇಂದ್ರ ಐಹೊಳೆ ಇವರ ಕುಟುಂಬದ ಹಲ್ಲೆ ಖಂಡಿಸಿ ರಾಯಬಾಗ ಸಿಪಿಐ ಮೂಲಕ ಗೃಹ ಮಂತ್ರಿ ಅವರಿಗೆ ಮನವಿ

ಪತ್ರಕರ್ತ ರಾಘವೇಂದ್ರ ಐಹೊಳೆ ಇವರ ಕುಟುಂಬದ ಹಲ್ಲೆ ಖಂಡಿಸಿ ರಾಯಬಾಗ ಸಿಪಿಐ ಮೂಲಕ ಗೃಹ ಮಂತ್ರಿ ಅವರಿಗೆ ಮನವಿ ಹಾಗು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಜಿಲ್ಲಾ ಪಂಚಾಯತ ಬೆಳಗಾವಿ ಇವರಿಗೆ ಪಂಚಾಯತ ಸದಸ್ಯನ ಸದಸ್ಯತ್ವ ರದ್ದುಗೋಳಿಸ ಬೇಕೆಂದು ಮನವಿ ದಲಿತ ಪರ ಸಂಘಟನೆ ಇಂದ ದಲಿತರ ಮೇಲೆ ನಿರಂತರ ಹಲ್ಲೆ ಹಾಗು ಜಾತಿ ನಿಂದನೆ ಖಂಡಿಸಿ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮ ಪಂಚಾಯತ …

Read More »

ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್‌ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು:H.D.K.

ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್‌ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು ಎಂದು ಎಚ್‌. ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಖರ್ಗೆ ಹಿರಿಯ ನಾಯಕರು. ಆ ಪಕ್ಷಕ್ಕೆ ನಿಷ್ಠೆ ಯಿಂದ ಕೆಲಸ ಮಾಡಿದ್ದಾರೆ. ಹಲವು ಬಾರಿ ಅವರಿಗೆ ಅನ್ಯಾಯ ಆಗಿದ್ದರೂ ನಿಷ್ಠೆಯಿಂದ ನಡೆದುಕೊಂಡಿದ್ದಾರೆ ಎಂದರು. ಪ್ರವಾಹದಲ್ಲಿ ಮನೆ ಬಿದ್ದವರಿಗೆ ಇನ್ನೂ ಮನೆ ನಿರ್ಮಿಸಿ ಕೊಟ್ಟಿಲ್ಲ. ಕೊಡಗು, ಚಿಕ್ಕಮಗಳೂರಿನಲ್ಲಿ ಮನೆ ಕಟ್ಟಲಿಲ್ಲ. ಪ್ರಚಾರ …

Read More »

ಮಹಿಳೆಯರು ಆರ್ಥಿಕ ಸದೃಢತೆ ಹೊಂದಿದರೆ ಸ್ವಾವಲಂಬನೆಗೆ ದಾರಿಯಾಗುತ್ತದೆ.: ಪ್ರಿಯಂಕಾ ಜಾರಕಿಹೊಳಿ

ಮಹಿಳೆಯರು ಆರ್ಥಿಕ ಸದೃಢತೆ ಹೊಂದಿದರೆ ಸ್ವಾವಲಂಬನೆಗೆ ದಾರಿಯಾಗುತ್ತದೆ. ಅದಕ್ಕೆ ಮೂಲ ಮಾರ್ಗ ನಾನಾ ತರಬೇತಿಗಳನ್ನು ಪಡೆದು ಆ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಕರೆ ನೀಡಿದರು. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭೈರವನಾಥ ಸ್ವ-ಸಹಾಯ ಸಂಘ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು, ಉದ್ಯೋಗ, ಸಹಕಾರ, ರಾಜಕೀಯ, ಸಾಹಿತ್ಯ, ಸಾಂಸ್ಕೃತಿಕ, ಔದ್ಯೋಗಿಕರಣ, ಸಾಮಾಜಿಕ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ …

Read More »

ಎನ್‍ಟಿಆರ್ ಸಾಂಗ್‍ಗೆ ಸಖತ್ ಸ್ಟೆಪ್ ಹಾಕಿದ ರಮೇಶ್ ಕುಮಾರ್

ಕೋಲಾರ: ಟಾಲಿವುಡ್ ನಟ ಎನ್‍ಟಿಆರ್ ಹಾಡಿಗೆ ರಮೇಶ್ ಕುಮಾರ್ ನೃತ್ಯ ಮಾಡಿರಂಜಿಸಿದ್ದಾರೆ. ಎನ್‍ಟಿಆರ್‌ನ ರೆಂಡು ವೇಲ ರೆಂಡುವರಕು ಚೂಡಲೇದು ಹಾಡಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದ ರಸ ಮಂಜರಿ ಕಾರ್ಯಕ್ರಮದಲ್ಲಿ ಬಿಂದಾಸ್ ಸ್ಟೆಪ್ ಹಾಕಿದ್ದಾರೆ. ಶ್ರೀನಿವಾಸಪುರ ಹಬ್ಬ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ ಮಂಜರಿ ಕಾರ್ಯಕ್ರಮದ ವೇಳೆ ಅವರು ಇತ್ತೀಚಿನ ಯುವಕರನ್ನು ನಾಚಿಸುವಂತೆ ವಿವಿಧ ಸ್ಟೆಪ್ ಹಾಕಿ ಗಮನ ಸೆಳೆದಿದ್ದಾರೆ. ಕಳೆದ ರಾತ್ರಿ ನಡೆದ ಶ್ರೀನಿವಾಸಪುರ ಹಬ್ಬದ …

Read More »

ಬಾಗಲಕೋಟೆ ಮೂಲದ ಬಿಎಸ್‍ಎಫ್ ಯೋಧ ಅಸ್ಸಾಂನಲ್ಲಿ ರಾತ್ರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ಮೂಲದ ಬಿಎಸ್‍ಎಫ್ ಯೋಧ ಅಸ್ಸಾಂನಲ್ಲಿ ರಾತ್ರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಅಶೋಕ್ ಮುಂಡಾಸ್(41) ಮೃತ ಬಿಎಸ್‍ಎಫ್ ಯೋಧ. ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಅಶೋಕ್ ಅವರು ಬಿಎಸ್‍ಎಫ್ 31 ಬಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಸ್ಸಾಂನ ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಶನಿವಾರ ರಾತ್ರಿ ಸಿಡಿಲು ಬಡಿದ ರಭಸಕ್ಕೆ ಅಶೋಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಅಶೋಕ್ ಅವರು ಬಿಎಸ್‍ಎಫ್‍ನಲ್ಲಿ 16 ವರ್ಷದಿಂದ ಸೇವೆಯಲ್ಲಿದ್ದು, ಈಗ ಪತ್ನಿ, ಇಬ್ಬರು …

Read More »

ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ

ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು. ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು. ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್‌ ಆನ್‌ ಮಾಡಿ ಸಂಚರಿಸಿದರು.

Read More »

ಮುತಾಲಿಕ್‌ಗೆ ಬೀದರ್ ಪ್ರವೇಶ ನಿರಾಕರಣೆ ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ವಾದ

ಕಲಬುರಗಿ: ಬೀದರ್ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಮಂಠಾಳ ಗ್ರಾಮದ ಬಳಿಯಲ್ಲಿ ಶನಿವಾರ ಮಧ್ಯಾಹ್ನ ಬೀದರ ಜಿಲ್ಲೆಗೆ ಹೊರಟಿದ್ದ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಮತ್ತು ರಾಜ್ಯಾಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಪೊಲೀಸರು ತಡೆದು ವಾಪಸ್ಸು ಕಳಿಸಿರುವ ಘಟನೆ ನಡೆದಿದೆ. ‌ ಬೀದರನಲ್ಲಿ ಜೂ.4ರಿಂದ 12ರ ವರೆಗೆ ಮೂಲ ಅನುಭವ ಮಂಟಪ ರಕ್ಷಣೆಗಾಗಿ ನಡೆಯುತ್ತಿರುವ “ಮಠಾಧೀಶರ ನಡೆ ಬಸವಕಲ್ಯಾಣದ ಕಡೆ’ ಕಾರ್ಯಕ್ರಮದಲ್ಲಿ …

Read More »

ವಯಸ್ಸಾದರೂ ಯಂಗ್ ಆಗಿ ಕಾಣಲು ಭಾಗ್ಯಶ್ರೀ ತಿಳಿಸಿದ ಈ ಆಹಾರ ಸೇವಿಸಿ.!

ನಮಗೆ ವಯಸ್ಸಾದಂತೆ ನಮ್ಮ ಚರ್ಮ ಕಡಿಮೆ ಕಾಲಜನ್ ಅನ್ನು ಉತ್ಪಾದನೆ ಮಾಡುತ್ತದೆ. ಇದರಿಂದ ವಯಸ್ಸಾದಂತೆ ಚರ್ಮ ತೆಳ್ಳಗಾಗುತ್ತದೆ ಮತ್ತು ಸುಕ್ಕುಗಟ್ಟಿದಂತೆ ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ. ಹಾಗಾಗಿ ಬಾಲಿವುಡ್ ನಟಿ ಭಾಗ್ಯಶ್ರೀ ಅವರು ಕಾಲಜನ್ ಸಮೃದ್ಧವಾಗಿರುವ ಆಹಾರದ ಬಗ್ಗೆ ತಿಳಿಸಿದ್ದಾರೆ. ಇದನ್ನು ಸೇವಿಸಿದರೆ ಅವರಂತೆ ವಯಸ್ಸಾದ ಮೇಲೂ ಯಂಗ್ ಆಗಿ ಕಾಣಬಹುದಂತೆ. ದೇಹದಲ್ಲಿ ಕಾಲಜನ್ ಉತ್ಪಾದನೆಯಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಸಾಕಷ್ಟು ವಿಟಮಿನ್ ಸಿ ಪಡೆಯುವುದು ಬಹಳ ಮುಖ್ಯ. …

Read More »