Breaking News

ರಾಜ್ಯ

ಕರ್ನಾಟಕ, ದಲ್ಲಿ ಜೂನ್ 11 ರವರೆಗೆ ಭಾರೀ ಮಳೆ

ಬೆಂಗಳೂರು : ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ (Heavy Rainfall alert) ಸಾಧ್ಯತೆಯಿದೆ. ಅದ್ರಲ್ಲೂ ಜೂನ್ 11 ರವರೆಗೆ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.   ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ …

Read More »

ಪ್ರತಿಯೊಬ್ಬ ‍ಪ್ರಜೆಯ ತಲೆ ಮೇಲೆ ₹ 1.75 ಲಕ್ಷ ಸಾಲ ಹೇರಿದ್ದಾರೆ ಮೋದಿ

ಬೆಳಗಾವಿ: ‘ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ₹ 155 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಲೆಕ್ಕ ಹಾಕಿ ನೋಡಿದರೆ ಪ್ರತಿಯೊಬ್ಬ ‍ಪ್ರಜೆಯ ತಲೆ ಮೇಲೆ ₹ 1.75 ಲಕ್ಷ ಸಾಲ ಹೇರಿದ್ದಾರೆ. ಇಂಥವರಿಂದ ದೇಶ ಉಳಿಯುತ್ತದೆಯೇ’ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.   ನಗರದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಬಂದಾಗಿನಿಂದ 2014ರವರೆಗೆ ದೇಶದ ಸಾಲ ₹ 53.11 …

Read More »

ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ

ಮಂಗಳೂರು: ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯ ಪ್ರಧಾನ ಭಾಷಣದಲ್ಲಿ ಈ ರೀತಿ ಹೇಳಿದ್ದಾರೆ. ಇಸ್ಲಾಂ ಎನ್ನುವಂತದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿಯಲ್ಲ, ಸಭ್ಯತೆಯಲ್ಲ, ಸಂಸ್ಕಾರವಲ್ಲ, ಮಾನವೀಯತೆಯೂ ಅಲ್ಲ. ಅದೊಂದು ಕ್ರೌರ್ಯ, ಅಮಾನುಷತೆ, ಅತ್ಯಾಚಾರ, ಲೂಟಿಕೋರರ ತಂಡ. ಅದೊಂದು …

Read More »

ಆಮ್ ಆದ್ಮಿ ಪಕ್ಷಕ್ಕೆ ಶಾಶ್ವತ ಮುಖ್ಯಮಂತ್ರಿ ಸಿಕ್ಕರು

ನಟ, ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಇಂದು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡಿದ್ದಾರೆ. ನಿನ್ನೆಯಷ್ಟೇ ಅವರು ಆಮ್ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಅಧಿಕೃತವಾಗಿ ಪಾರ್ಟಿಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಅಲ್ಲದೇ, ಕೆಲವು ದಿನಗಳ ಹಿಂದೆಯಷ್ಟೇ ಚಂದ್ರು ಕೂಡ ಈ ಕುರಿತು ಮಾತನಾಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಕರ್ನಾಟಕ ರಾಜ್ಯ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರು ನಗರ …

Read More »

ಕುಡಿದು ಮೈಮರೆತ್ರಾ ಚಹಾಲ್-ನೆಹ್ರಾ..?: ಮತ್ತೆ ಮ್ಯಾಚ್ ಫಿಕ್ಸಿಂಗ್ ಅನುಮಾನ

ರಾಜಸ್ಥಾನ್ ರಾಯಲ್ಸ್ ಫೈನಲ್‌ನಲ್ಲಿ ಸೋತಿರಬಹುದು. ಆದರೆ ಟೂರ್ನಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಯುಜ್ವೇಂದ್ರ ಚಹಾಲ್ ಪರ್ಪಲ್ ಕ್ಯಾಪ್ ವಿನ್ನರ್ ಆಗಿ ಹೊರಹೊಮ್ಮಿದ್ದರು.ಕಳೆದ ತಿಂಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಗುಜರಾತ್ ಟೈಟಾನ್ಸ್ ತನ್ನ ಚೊಚ್ಚಲ ಸೀಸನ್​ನಲ್ಲೇ ಐಪಿಎಲ್​ ಚಾಂಪಿಯನ್ ಆಗಿತ್ತು. ಈ ಗೆಲುವಿನ ನಂತರ ಭರ್ಜರಿ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಗುಜರಾತ್ ಟೈಟಾನ್ಸ್​ ತಂಡದ ಆಟಗಾರರೊಂದಿಗೆ ರಾಜಸ್ಥಾನ್ ರಾಯಲ್ಸ್ …

Read More »

‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ.: ಕಟೀಲ್

ಬೆಳಗಾವಿ: ‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್ಸಿಗರೇ ಮುಜುಗರಕ್ಕೆ ಒಳಗಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.   ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಒಳಜಗಳದಿಂದ ಕಾಂಗ್ರೆಸ್ಸಿಗರ ಆತ್ಮವಿಶ್ವಾಸ ಕುಗ್ಗಿದೆ. ಹೀಗಾಗಿ ಪಕ್ಷ ಬಿಟ್ಟು ಹೋಗುವವರ ಸಂಖ್ಯೆ ಹೆಚ್ಚುತ್ತಿದೆ’ ಎಂದರು. ‘ಕಾಂಗ್ರೆಸ್ ಚಿಂತನಾ ಶಿಬಿರ ಮುಗಿದ ಮೇಲೆ 60ಕ್ಕೂ ಹೆಚ್ಚು …

Read More »

ಬೆಳಗಾವಿಯ ಕೆಲವು ಬಿಜೆಪಿ ಶಾಸಕರು, ಸಚಿವರು ನಮ್ಮ ಜಿಲ್ಲೆ ಬಿಟ್ಟು ನೆರೆಯ ಜಿಲ್ಲೆಯಲ್ಲಿ ಆಸ್ಪತ್ರೆ ಆಗಬೇಕೆಂದು ಸಿಎಂಗೆ ಪತ್ರ ಬರೆಯುತ್ತಾರೆ

ಬೆಳಗಾವಿಯ ಕೆಲವು ಬಿಜೆಪಿ ಶಾಸಕರು, ಸಚಿವರು ನಮ್ಮ ಜಿಲ್ಲೆ ಬಿಟ್ಟು ನೆರೆಯ ಜಿಲ್ಲೆಯಲ್ಲಿ ಆಸ್ಪತ್ರೆ ಆಗಬೇಕೆಂದು ಸಿಎಂಗೆ ಪತ್ರ ಬರೆಯುತ್ತಾರೆ. ಆದರೆ ಬೆಳಗಾವಿ ಸುಲುವಾಗಿ ಇವರು ಬೇಡಿಕೆ ಇಡುವುದಿಲ್ಲ. ಬೆಳಗಾವಿ ‌ನೆರೆ ಜಿಲ್ಲೆಯಲ್ಲಿ 21 ಲಕ್ಷ ಜನಸಂಖ್ಯೆ ಇರುವಲ್ಲಿ ಮೂರುವರೆ ಸಾವಿರ ಬೆಡ್ ಇರುವ ಆಸ್ಪತ್ರೆಗಳಿವೆ. ಬೆಳಗಾವಿ ಅತೀ ದೊಡ್ಡ ಜಿಲ್ಲೆ 51 ಲಕ್ಷ ಜನಸಂಖ್ಯೆಗೆ 700 ಬೆಡ್ ಇರುವ ಜಿಲ್ಲಾಸ್ಪತ್ರೆ ಮಾತ್ರ ಇದೆ. ಬೆಳಗಾವಿ ಸಚಿವ, ಶಾಸಕರು ಭ್ರಷ್ಟಾಚಾರದಲ್ಲಿ …

Read More »

ಕಾಂಗ್ರೆಸ್‌ ಪಕ್ಷದವರಿಗೆ ಚಡ್ಡಿ ಸುಡುವುದರಿಂದ ಅಷ್ಟು ಖುಷಿಯಾಗುವುದಾದರೆ ನನ್ನ ಚಡ್ಡಿಗಳನ್ನೂ ಕಳುಹಿಸಿಕೊಡುತ್ತೇನೆ.: ಸಂಜಯ ಪಾಟೀಲ

ಬೆಳಗಾವಿ: ‘ಕಾಂಗ್ರೆಸ್‌ ಪಕ್ಷದವರಿಗೆ ಚಡ್ಡಿ ಸುಡುವುದರಿಂದ ಅಷ್ಟು ಖುಷಿಯಾಗುವುದಾದರೆ ನನ್ನ ಚಡ್ಡಿಗಳನ್ನೂ ಕಳುಹಿಸಿಕೊಡುತ್ತೇನೆ. ಅವುಗಳನ್ನೂ ಸುಟ್ಟು ಸಮಾಧಾನ ಮಾಡಿಕೊಳ್ಳಲಿ’ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.   ‘ಹಿಂದೆ ದೇಶ ಆಳಿ, ಅಧಿಕಾರ ಅನುಭವಿಸಿದ ಕಾಂಗ್ರೆಸ್ಸಿಗರಿಗೆ ಈಗ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಯೋಗ್ಯತೆಯೂ ಇಲ್ಲ. ಈ ಮಾನಸಿಕ ಒತ್ತಡದಿಂದ ಹೊರಬರಲು ಚಡ್ಡಿ ಸುಡುವಂಥ ಕೆಲಸ ಮಾಡುತ್ತಿದ್ದಾರೆ. ಸುಟ್ಟರೆ ಸುಡಲಿ ಬಿಡಿ’ ಎಂದು ಅವರು ನಗರದಲ್ಲಿ …

Read More »

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಮಾನತ್ತು ಮಾಡಿ:: ದಲಿತ ಸಂಘರ್ಷ ಸಮಿತಿ ಆಗ್ರಹ

ರಾಜ್ಯದಲ್ಲಿ ಪಠ್ಯ ಮರು ಪರಿಷ್ಕರಣೆ ಮಾಡಿ ಹೊಸದಾಗಿ ಪಠ್ಯವನ್ನು ಮುದ್ರಣ ಮಾಡಬೇಕು. ಅದೇ ರೀತಿ ಪಠ್ಯದಲ್ಲಿ ಕೇಸರೀಕರಣ ಮಾಡಲು ಮುಂದಾಗಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಶಾಲಾ ಶಿಕ್ಷಣ ಸಂಪೂರ್ಣ ಅವೈಜ್ಞಾನಿಕ, ಅಸಂವಿಧಾನಾತ್ಮಕ ಹಾಗೂ ಅನೈತಿಕಗೊಳಿಸಲು ಹೊರಟಿರುವ ಪಠ್ಯಪುಸ್ತಕ ಮರು ಪರಿಶೀಲನೆಗಾಗಿ ಪಠ್ಯವನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ …

Read More »

ಹಿರೋ ಆದವನು ಜಿರೋ ಆಗುತ್ತಾನೆ. ಜಿರೋ ಇದ್ದವನು ಹಿರೋ ಆಗುತ್ತಾನೆ. ಯಾವಾಗಲೂ ಹಿರೋ ಆಗಿ ಉಳಿಯುವವರು ಜನಸಾಮಾನ್ಯರು: ಲಕ್ಷ್ಮೀ ಹೆಬ್ಬಾಳ್ಕರ್

ಮುಂಚೆಯಿಂದಲೂ ಕೇಂದ್ರ ಮತ್ತು ರಾಜ್ಯದಲ್ಲಿ ಚುನಾವಣೆಗಳು ಬಂದಂತಹ ಸಂದರ್ಭದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿ, ಬಿಜೆಪಿ ಪರವಾಗಿ ವಾತಾವರಣ ಸೃಷ್ಟಿ ಮಾಡಿ, ಜನರ ಭಾವನೆಗಳ ಜೊತೆಗೆ ಚೆಲ್ಲಾಟ ಆಡುವುದು ಬಿಜೆಪಿಯವರಿಗೆ ರೂಢಿಯಾಗಿ ಬಿಟ್ಟಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಪಕ್ಷ ಜನರಿಗೆ ಬದುಕನ್ನು ಕಟ್ಟಿ ಕೊಟ್ಟರೆ ಬಿಜೆಪಿಯವರು ಭಾವನೆಗಳನ್ನು ಕಟ್ಟಿ ಕೊಡುತ್ತದೆ. ನಾವು ಬದುಕು, ಜೀವನ …

Read More »