Breaking News

ರಾಜ್ಯ

ರಾಜ್ಯಸಭೆ ಚುನಾವಣೆ: ಪಕ್ಷೇತರ ಶಾಸಕರಿಗೆ ಭಾರೀ ಡಿಮ್ಯಾಂಡ್..!

ಬೆಂಗಳೂರು,ಜೂ.4- ರಾಜ್ಯಸಭೆ ಚುನಾವಣೆಯಲ್ಲಿ ಒಂದೊಂದು ಮತವು ಮೂರು ರಾಜಕೀಯ ಪಕ್ಷಗಳಿಗೆ ನಿರ್ಣಾಯಕವಾಗಿರುವುದರಿಂದ ಮೂವರು ಪಕ್ಷೇತರ ಶಾಸಕರಿಗೆ ಭಾರೀ ಡಿಮ್ಯಾಂಡ್ ಬಂದಿದೆ. ವಿಧಾನಸಭೆಯ ಒಟ್ಟು 224 ಸದಸ್ಯರಲ್ಲಿ ಮೂವರು ಪಕ್ಷೇತರ ಶಾಸಕರಿದ್ದಾರೆ. ಎಚ್.ನಾಗೇಶ್(ಮುಳಬಾಗಿಲು), ಶರತ್ ಬಚ್ಚೇಗೌಡ(ಹೊಸಕೋಟೆ) ಹಾಗೂ ಎನ್.ಮಹೇಶ್(ಕೊಳ್ಳೆಗಾಲ) ಅವರಿಗೆ ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ತಮ್ಮ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಗಾಳ ಬೀಸಿದ್ದಾರೆ. ಈಗಾಗಲೇ ಎನ್.ಮಹೇಶ್ ಅವರು ಬಿಜೆಪಿ ಜೊತೆ ಗುರುತಿಸಿಕೊಂಡು 2023ರ ವಿಧಾನಸಭೆ ಚುನಾವಣೆಯಲ್ಲಿ ಕೊಳ್ಳೆಗಾಲದಿಂದ …

Read More »

ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಆದರೆ ರದ್ದು ಮಾಡಿಲ್ಲ:ಬೊಮ್ಮಾಯಿ

ಚಿತ್ರದುರ್ಗ, ಜೂ.4: ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಆದರೆ ರದ್ದು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ದೇವರ ಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ. ನಮ್ಮದು ಬಸವ ಪಥದ ಸರ್ಕಾರ ಎಂದು ಮೊದಲೇ ಹೇಳಿದ್ದೇನೆ ಎಂದು ತಿಳಿಸಿದರು. ಇನ್ನು ಬಸವಣ್ಣನವರು ರಚಿಸಿದ ಹಲವಾರು ಅತ್ಯುತ್ತಮ ವಚನಗಳಿವೆ. ಬಸವಣ್ಣನವರ ಪಠ್ಯದಲ್ಲಿ …

Read More »

ರಾಜ್ಯಾದ್ಯಂತ ‘ಚಡ್ಡಿ ಸುಡುವ ಅಭಿಯಾನ’ ಆರಂಭಿಸುತ್ತೇವೆ; ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ. ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಆರ್‌ ಎಸ್.ಎಸ್‌ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್‌ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ ಎಂದು ಹೇಳಿದ್ದಾರೆ. …

Read More »

ಪಿಎಸ್‍ಐ ನೇಮಕಾತಿ ಅಕ್ರಮ- ಮತ್ತೋರ್ವನ ಬಂಧನ, ಬಂಧಿತ ಆರೋಪಿಗಳ ಸಂಖ್ಯೆ 39ಕ್ಕೆ ಏರಿಕೆ

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧನ ಮಾಡಿದ್ದಾರೆ. ಜಿಲ್ಲೆಯ ಜೇವರ್ಗಿ ತಾಲೂಕಿನ ವಸಂತರಾಯ್ ನರಿಬೋಳ ಬಂಧನವಾದ ಇನ್ನೋರ್ವ ಆರೋಪಿಯಾಗಿದ್ದು, ಇಲ್ಲಿಯವರೆಗೆ ಅಕ್ರಮದಲ್ಲಿ ಭಾಗಿಯಾಗಿ ಬಂಧನವಾದ ಆರೋಪಿಗಳ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ವಸಂತರಾಯ್, ಅಭ್ಯರ್ಥಿ ಎನ್.ವಿ.ಸುನೀಲ್ ಕುಮಾರ್ ತಂದೆಯಾಗಿದ್ದು, ಸುನೀಲ್ ನನ್ನ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಕ್ಕೆ ಆರ್.ಡಿ.ಪಾಟೀಲ್ ಮೊರೆ ಹೋಗಿದ್ದರು. ಇತ್ತೀಚೆಗಷ್ಟೇ ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಯಾಗಿದ್ದ ಶಾಂತಿಬಾಯಿ ಹಾಗೂ …

Read More »

ಶ್ರೀಶೈಲದಲ್ಲಿ ಮಲಗಿದ್ದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ಆಂಧ್ರ ಪ್ರದೇಶದ ಪ್ರಸಿದ್ಧ ಯಾತ್ರಾ ಕ್ಷೇತ್ರ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಮತ್ತೆ ಹಲ್ಲೆ ನಡೆದಿದೆ. ಕೆಎಸ್‍ಆರ್‌ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಮೇಲೆ  10-12 ಜನರ ಗುಂಪೊಂದು ಹಲ್ಲೆ ಮಾಡಿದೆ.  ಗಾಜು ಪುಡಿ-ಪುಡಿ ಮಾಡಿದ ಕಿಡಿಗೇಡಿಗಳು, ಕಟ್ಟೆಯ ಮೇಲೆ ಮಲಗಿದ್ದ ಬಿರಾದಾರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.ಅಶ್ಲೀಲವಾಗಿ ನಿಂದಿಸಿ, ಕರ್ನಾಟಕದವನು ಇಲ್ಲೇಕೆ ಇದ್ದೀಯಾ? ಅಂತಲೇ ಬಸ್ ಮೇಲೆ ಕಲ್ಲು ತೂರಿದ್ದಾರೆ. ಪ್ರಶ್ನಿಸಿದ್ದಕ್ಕೆ ನನ್ನ ಮುಖ, ಕಾಲಿಗೆ ಕಲ್ಲಿನಿಂದ ಹೊಡೆದ್ದಾರೆ ಎಂದು …

Read More »

ಕಿರಿಕ್ ಪಾರ್ಟಿ’ 2 ಮಾಡೋಕೆ ರೆಡಿಯಾದ ಸಿಂಪಲ್ ಸ್ಟಾರ್

ಕಾಲೇಜ್ ಕಥೆಯನ್ನ ತೆರೆಯ ಮೇಲೆ ಎಳೆ ಎಳೆಯಾಗಿ ತೋರಿಸಿಕೊಟ್ಟ ಸ್ಯಾಂಡಲ್‌ವುಡ್‌ನ ಬ್ಲಾಕ್ ಬಸ್ಟರ್ ಸಿನಿಮಾ `ಕಿರಿಕ್ ಪಾರ್ಟಿ’ ಟೀಮ್‌ನಿಂದ ಈಗ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಕಿರಿಕ್ ಪಾರ್ಟಿ ಸೀಕ್ವೆಲ್ ಮಾಡೋಕೆ ರಕ್ಷಿತ್ ಶೆಟ್ಟಿ ಆ್ಯಂಡ್ ಟೀಮ್ ಯೋಜನೆ ಹಾಕಿಕೊಂಡಿದೆ. ರಕ್ಷಿತ್ ಶೆಟ್ಟಿ ಕೆರಿಯರ್‌ನ ದಿಕ್ಕನ್ನೇ ಬದಲಿಸಿದ ಸಿನಿಮಾ `ಕಿರಿಕ್ ಪಾರ್ಟಿ’ ಕಥೆಯನ್ನ ಎಲ್ಲರೂ ನೋಡಿ ಮೆಚ್ಚಿಕೊಂಡಿದ್ದರು. ಕರ್ಣ ಮತ್ತು ಸಾನ್ವಿ ಲವ್‌ಸ್ಟೋರಿಯಿಂದ ಹಿಡಿದು ಹಾಡುಗಳು ಸೂಪರ್ ಡೂಪರ್ ಹಿಟ್ …

Read More »

ಸಿದ್ದರಾಮಯ್ಯ ಅವರ ಸುತ್ತಲೂ ಇರುವವರು ಭಯೊತ್ಪಾದಕರು:

ಮೈಸೂರು: ಸಿದ್ದರಾಮಯ್ಯ ಅವರ ಸುತ್ತಲೂ ಇರುವವರು ಭಯೊತ್ಪಾದಕರು ಆದರೂ ಅವರಿಗೆ ಕಾಣುತ್ತಿಲ್ಲ. ಹಾಗಾಗಿ ಅವರಿಗೆ ದೃಷ್ಟಿ ದೋಷವಿರಬಹುದು ಅದನ್ನು ಸರಿಪಡಿಸಿಕೊಳ್ಳಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.   ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್​ಎಸ್​ಎಸ್​ ನೂರಾರು ವಿದ್ಯಾಸಂಸ್ಥೆಗಳನ್ನು ಕಟ್ಟಿದೆ, ಶುಲ್ಕವಿಲ್ಲದೇ ಕೆಲವು ಕಡೆ ಶಿಕ್ಷಣವನ್ನೂ ನೀಡುತ್ತಿದೆ. ಇವೆಲ್ಲಾ ಅವರಿಗೆ ಕಾಣುವುದಿಲ್ಲ. ನಿಮ್ಮದೇ ಶಾಸಕರ ಮನೆಗೆ ಬೆಂಕಿ ಬಿತ್ತು, ಅವರಿಗೆ ನಿಮ್ಮ ಬೆಂಬಲಿಗರೇ ಜಾಮೀನು ಕೊಡಿಸಿದ್ದಾರೆ. ಹೀಗಾದರೂ ಕಾಣುತ್ತಿಲ್ಲವೆಂದರೆ ನಿಮಗೆ …

Read More »

ಸುಪ್ರೀಂ ಆದೇಶ ಪಾಲಿಸದಿದ್ರೆ ಗುಂಡು ಹಾರಿಸ್ತೀವಿ.:ಮುತಾಲಿಕ್ ಕಿಡಿ

ಹುಬ್ಬಳ್ಳಿ: ಲೌಡ್​ಸ್ಪೀಕರ್​ ಅಳವಡಿಕೆ ಸಂಬಂಧ ಸುಪ್ರೀಂ ಕೋರ್ಟ್​ ನೀಡಿದ ಆದೇಶವನ್ನು ಪಾಲಿಸದವರ ಮೇಲೆ ಗುಂಡು ಹಾರಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್​ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್​, ಒಂದು ವರ್ಷದಿಂದ ಲೌಡ್​ಸ್ಪೀಕರ್​ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇಲ್ಲಿಯವರೆಗೆ ಸುಪ್ರೀಂಕೋರ್ಟ್​ ಆದೇಶ ಪಾಲನೆಯಾಗಿಲ್ಲ. ಹಿಂದುಗಳ ಬೆಂಬಲದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವೂ ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತು ನೀಡಿಲ್ಲ. ಜೂ. 8ರಂದು ಬಿಜೆಪಿಯ ಶಾಸಕರು, ಮಂತ್ರಿಗಳ …

Read More »

ನಾನು ಏನು ಹೇಳುತ್ತೇನೋ ಅದನ್ನು ಮಾತ್ರ ಮಾಡುತ್ತೇನೆ. ಶುರುವಾಯ್ತು ಉಪ್ಪಿ ‘UI’

ಬೆಂಗಳೂರು: ‘ಉಪ್ಪಿ 2’ ಬಿಡುಗಡೆಯಾಗಿ ಸುಮಾರು ಏಳು ವರ್ಷಗಳ ನಂತರ ಉಪೇಂದ್ರ ಕೊನೆಗೂ ನಿರ್ದೇಶನಕ್ಕಿಳಿದಿದ್ದಾರೆ. ಅವರ ಹೊಸ ಚಿತ್ರ ‘ಯು/ಐ’ ಶುಕ್ರವಾರ ಅಧಿಕೃತವಾಗಿ ಪ್ರಾರಂಭವಾಗಿದೆ. ಲಹರಿ ಸಂಸ್ಥೆ ಮತ್ತು ಕೆ.ಪಿ. ಶ್ರೀಕಾಂತ್ ಜಂಟಿಯಾಗಿ ನಿಮಿರ್ಸುತ್ತಿರುವ ಈ ಚಿತ್ರದ ಮುಹೂರ್ತ ಬಂಡೆ ಮಾಂಕಾಳಮ್ಮ ದೇವಸ್ಥಾನದಲ್ಲಿ ನಡೆದಿದೆ. ಈ ಮುಹೂರ್ತಕ್ಕೆ ಸುದೀಪ್​ ಮುಖ್ಯ ಅತಿಥಿಯಾಗಿ ಬಂದು ಮೊದಲ ದೃಶ್ಯಕ್ಕೆ ಕ್ಲಾಪ್​ ಮಾಡಿದರು. ಶಿವರಾಜಕುಮಾರ್​, ಧನಂಜಯ್​, ವಸಿಷ್ಠ ಸಿಂಹ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ …

Read More »

ಬದಲಾಗಲಿದೆಯೇ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ?: ಸಚಿವರ ಪ್ರತಿಕ್ರಿಯೆ ಇಲ್ಲಿದೆ..

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹೆಸರು ಬದಲಿಸುವ ವಿಷಯಕ್ಕೆ ಸಂಬಂಧಿಸಿದಂತೆ ಈ ಭಾಗದ ಅಭಿಪ್ರಾಯಕ್ಕೆ ಅನುಗುಣವಾಗಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಅಭಿಪ್ರಾಯಕ್ಕೆ ವಿರೋಧವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದರು.   ಜಿಲ್ಲೆಗೊಂದು ನೂತನ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಆರು ವಿವಿ ಸ್ಥಾಪಿಸಲಾಗಿದೆ. ಇನ್ನೊಂದು ವಿವಿ ಸ್ಥಾಪಿಸಬೇಕೆಂಬ ಚರ್ಚೆಯೂ ಇದೆ. ಶಿಕ್ಷಣದಲ್ಲಿ ಗುಣಮಟ್ಟ ಇರಬೇಕು. ಆ ನಿಟ್ಟಿನಲ್ಲಿ …

Read More »