Breaking News

ರಾಜ್ಯ

ಚಾಕ್ಲೇಟ್ ಆಸೆ ತೋರಿಸಿ 2 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ

ರಾಮನಗರ: ಚಾಕ್ಲೇಟ್ ಕೊಡಿಸ್ತೀನೆಂದು ಕರೆದುಕೊಂಡು ಹೋಗಿ 2 ವರ್ಷದ ಪುಟ್ಟ ಕಂದಮ್ಮನ ಮೇಲೆ ಆಕೆಯ ದೊಡ್ಡಪ್ಪನೇ ಅತ್ಯಾಚಾರ ಎಸಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಆರೋಪಿಯನ್ನು ಸಾದಿರ್ ಪಾಷಾ (28) ಎಂದು ಗುರುತಿಸಲಾಗಿದೆ. ಆರೋಪಿ ಪಾಷಾ ಗುರುವಾರ ಮಧ್ಯಾಹ್ನ ಚಾಕ್ಲೇಟ್ ಕೊಡಿಸುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಇತ್ತ ತಡರಾತ್ರಿ ಆದರೂ ಮಗುವನ್ನು ಮನೆಗೆ ಕರೆದುಕೊಂಡು ಬಾರದ ಹಿನ್ನೆಲೆಯಲ್ಲಿ ಮಗುವಿನ ಪೋಷಕರು ಆತಂಕಗೊಂಡಿದ್ದಾರೆ. ಅಲ್ಲದೆ ಮಗುವನ್ನು ಈ ಕೂಡಲೇ ಮನೆಗೆ ಕರೆದುಕೊಂಡು …

Read More »

ಮುತ್ಯಾನಟ್ಟ್ತಿ ಇಂದ ಹುದಲಿ ರೋಡಿನ ಕಾಮಗಾರಿ ಪೂರ್ಣ ಸತೀಶ್ ಜಾರಕಿಹೊಳಿ ಅವರಿಗೆ ಧನ್ಯವಾದ ತಿಳಿಸಿದ ಗ್ರಾಮಸ್ಥರು

ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮುತ್ಯಾನಟ್ಟಿ ಯಿಂದ ಹುದಲಿಗೆ ಬರುವ ರಸ್ತೆ ಡಾಂಬರೀಕರಣ ಜೋತೆಗೆ 60 ಮೀಟರ್ ಹಿಲ್ ಕಟ್ಟಿಂಗ್ ಮಾಡಿ RDPR ಯೋಜನೆ ಅಡಿಯಲ್ಲಿ   3 ಕೋಟಿ 80ಲಕ್ಷ ಅನುದಾನದಲ್ಲಿ ನಮ್ಮ ನೆಚ್ಚಿನ ಶಾಸಕರಾದ ಸನ್ಮಾನ್ಯ ಶ್ರೀ #ಸತೀಶ್ಅಣ್ಣಾಜಾರಕೀಹೊಳಿ ಅವರ ಪ್ರಯತ್ನ ದಿಂದ ಕಾಮಗಾರಿ ಸಂಪೂರ್ಣ ಗೊಂಡಿದ್ಧು   ನಮ್ಮ ಶಾಸಕರಿಗೆ ಹಾಗೂ ಅವರ ಆಪ್ತ ಸಹಾಯಕರಾದ ಅರವಿಂದ್ ಕಾರ್ಚಿ ಅವರಿಗೆ ನಮ್ಮೆಲ್ಲ ಕಾರ್ಯಕರ್ತರು ಹಾಗೂ …

Read More »

ಧರ್ಮನಾಥ ಭವನದಲ್ಲಿ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಚುನಾವಣೆ ಅಂಗವಾಗಿ ನಡೆದ ಘಟನಾಯಕರ ಸಭೆ

ಇಂದು ಬೆಳಗಾವಿ ಧರ್ಮನಾಥ ಭವನದಲ್ಲಿ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಚುನಾವಣೆ ಅಂಗವಾಗಿ ನಡೆದ ಘಟನಾಯಕರ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣಕುಮಾರಜಿ , ಶ್ರೀ ಅಶ್ವಥ್ ಕುಮಾರ, ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ಶಾಸಕರಾದ ಶ್ರೀ ಅಭಯ ಪಾಟೀಲ,‌ ಸಂಸದೆ ಶ್ರೀಮತಿ ಮಂಗಲಾ ಅಂಗಡಿ, ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಕೇಶವ ಪ್ರಸಾದ್ ಹಾಗೂ ಎಲ್ಲ ಜಿಲ್ಲೆಯ …

Read More »

ರಾಜ್ಯಸಭಾ ಚುನಾವಣೆ; ಸಿದ್ದು-ಡಿಕೆಶಿ ತಿರುಮಂತ್ರ; ಜೆಡಿಎಸ್ ಗೆ ತೀವ್ರ ಹಿನ್ನಡೆ!

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಕಣದಿಂದ ಎರಡನೇ ಅಭ್ಯರ್ಥಿಯನ್ನು ವಾಪಾಸ್ ಪಡೆಯುವುದು ಬೇಡ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ಹೈಕಮಾಂಡ್ ಗೆ ಸ್ಪಷ್ಟಪಡಿಸಿದ್ದು, ಜೆಡಿಎಸ್ ಗೆ ತೀವ್ರ ಹಿನ್ನಡೆಯಾಗಿದೆ. ದೇವನಹಳ್ಳಿ ಸಮೀಪ ನವ ಸಂಕಲ್ಪ ಸಭೆಯ ವೇಳೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಈ ಸಂಬಂಧ ಇಪ್ಪತ್ತು ನಿಮಿಷಗಳ ಕಾಲ ಚರ್ಚೆ ನಡೆಸಿ ನಿರ್ಧಾರಕ್ಕೆ ಬಂದಿದ್ದಾರೆ. ಅನಂತರ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ ಕಣದಲ್ಲಿ …

Read More »

ಕಲಬುರಗಿ: ಕಮಲಾಪುರ ಬಳಿ ಭೀಕರ ಬಸ್ ದುರಂತ; ನಾಲ್ವರ ಸಜೀವ ದಹನ

ಕಲಬುರಗಿ: ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್​ ದುರಂತ ಸಂಭವಿಸಿದ್ದು, ಸುಮಾರು ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ತೆಲಂಗಾಣದ ಹೈದರಬಾದ್‌ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಮರಳುವಾಗ ಅಪಘಾತ ಸಂಭವಿಸಿದೆ. ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವು ವರದಿಗಳ ಪ್ರಕಾರ ಬಸ್​ನಲ್ಲಿ 20ಕ್ಕೂ ಹೆಚ್ಚು ಜನ ಪ್ರಯಾಣಿಕರು …

Read More »

ಒಂದು ಟೊಯೊಟಾ ಫಾರ್ಚೂನರ್‌ ಮಾರಾಟವಾದರೆ ಸರ್ಕಾರಕ್ಕೆ 18 ಲಕ್ಷ ರೂ., ಕಂಪನಿಗೆ 40,000 ರೂ. ಮಾತ್ರ..!

ಸರ್ಕಾರ ಹಾಕುವ ತೆರಿಗೆ ಬಗ್ಗೆ ಇತ್ತೀಚೆಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ತೆರಿಗೆ ಪ್ರಮಾಣದ ಬಗ್ಗೆ ಆಕ್ಷೇಪಗಳಿವೆ. ಈ ನಡುವೆ ಗ್ರಾಹಕರು ಒಂದು ಟೊಯೊಟಾ ಫಾರ್ಚೂನರ್‌ ಖರೀದಿ ಮಾಡಿದರೆ ಸರ್ಕಾರದ ಬೊಕ್ಕಸಕ್ಕೆ ಆಗುವ ಆದಾಯವೆಷ್ಟು ಎಂಬ ಮಾಹಿತಿ ಅಚ್ಚರಿ ಹುಟ್ಟಿಸುವಂತಿದೆ.   ಪ್ರೀಮಿಯಂ ವಾಹನಕ್ಕೆ ಖರೀದಿದಾರರು 20 ಲಕ್ಷ ರೂಪಾಯಿಗಿಂತ ಕಡಿಮೆಯಿಲ್ಲದಂತೆ ಪಾವತಿಸುವುದರಿಂದ ಎಸ್‌ಯುವಿ ಖರೀದಿ ಭಾರೀ ವ್ಯವಹಾರವಾಗಿದೆ. ಉದಾಹರಣೆಗೆ, ಟೊಯೊಟಾ ಫಾರ್ಚುನರ್ ಹೆಚ್ಚು ಜನಪ್ರಿಯ ಉತ್ಪನ್ನವಾಗಿದ್ದು, ಮಾರುಕಟ್ಟೆಯಲ್ಲಿ 31 ಲಕ್ಷ …

Read More »

ದಕ್ಷಿಣ ಕನ್ನಡದಲ್ಲಿ ಕಟ್ಟಡವೊಂದರ ಮೇಲಿಂದ ಸುರಿಯಿತು ಹಣದ ಮಳೆ!

ಬಂಟ್ವಾಳ(ದಕ್ಷಿಣ ಕನ್ನಡ): ಬಿ.ಸಿ.ರೋಡ್​ನ ಹೃದಯಭಾಗದಲ್ಲಿರುವ ಕಟ್ಟಡವೊಂದರ ಕೊಠಡಿಯಿಂದ ಗುರುವಾರ ಹಣದ ಮಳೆ ಸುರಿದಿದೆ! ಕಟ್ಟಡದ ಮೇಲಿಂದ ಹಣ ಬೀಳುವುದನ್ನು ಕಂಡ ಜನ ಹಣ ಹೆಕ್ಕಲು ಮುಗಿಬಿದ್ದಿದ್ದರಿಂದ ಕೆಲಕಾಲ ಸರ್ವೀಸ್​ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.   ಬಿ.ಸಿ.ರೋಡ್​ನ ಕಟ್ಟಡದಲ್ಲಿ ನಡೆಯುತ್ತಿದ್ದ ರಿಕ್ರಿಯೇಶನ್​ ಕ್ಲಬ್​ನಲ್ಲಿ ಅಕ್ರಮ ಜೂಜಾಟ ನಡೆಯುತ್ತಿರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆ ಸಹಾಯಕ ಪೊಲೀಸ್​ ಅಧೀಕ್ಷಕರ ಅನುಮತಿ ಪಡೆದು ಪೊಲೀಸ್​ ನಿರೀಕ್ಷಕ ವಿವೇಕಾನಂದ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. …

Read More »

ಇನ್ಮುಂದೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಸಬ್ಸಿಡಿ ಸಿಗಲ್ಲ

ನವದೆಹಲಿ: ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ. ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ …

Read More »

ಹೆಲಿಕಾಪ್ಟರ್‌ನಲ್ಲಿ ಸುತ್ತಿದ ರೈತರು, ಕುರಿಗಾಹಿಗಳು

ಚಿತ್ರದುರ್ಗ: ಸುಮಾರು 200ಕ್ಕೂ ಹೆಚ್ಚು ರೈತರು, ಕುರಿಗಾಹಿಗಳು ವಿವಿಸಾಗರ ಹಿನ್ನೀರು ಪ್ರದೇಶದ ಸೊಬಗನ್ನು ಹೆಲಿಕಾಪ್ಟರ್‌ನಲ್ಲಿ ವೀಕ್ಷಿಸಿ ಸಂಭ್ರಮಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ವಿವಿಸಾಗರ ಹಿನ್ನೀರು ಪ್ರದೇಶದಲ್ಲಿ ಹೆಲಿಟೂರಿಸಂ ಅಭಿವೃದ್ಧಿ ಹಿನ್ನಲೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಗ್ರಾಮಾಂತರ ಪ್ರದೇಶದ ಜನರನ್ನು ಹೆಲಿಕಾಪ್ಟರ್‌ನಲ್ಲಿ ಸುತ್ತಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುತ್ತಿದ 200ಕ್ಕೂ ಅಧಿಕ ಜನರು ಮಲೆನಾಡನ್ನೇ ನಾಚಿಸುವಂತಹ ಸೊಬಗನ್ನು ಕಂಡು ಬೆರಗಾಗಿದ್ದಾರೆ. ಈ ಹಿಂದೆ ಹಂಪಿಯಲ್ಲಿ ಹೆಲಿಟೂರಿಸಂ ಆರಂಭಿಸಲಾಗಿತ್ತು. ಆಗ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ …

Read More »

ಬೆಳಗಾವಿ ನಗರದ ಸಂಕಮ್ ಹೋಟೆಲ್‌ನಲ್ಲಿ ನಡೆದ ಪದಾಧಿಕಾರಿಗಳ ಸಭೆ

ವಾಯವ್ಯ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣಾ ಹಿನ್ನಲೆಯಲ್ಲಿ ಇಂದು ಬೆಳಗಾವಿ ನಗರದ ಸಂಕಮ್ ಹೋಟೆಲ್‌ನಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಎನ್.ರವಿಕುಮಾರ್, ರಾಜ್ಯ ಸಭಾ ಸದಸ್ಯರಾದ ಶ್ರೀ ಈರಣ್ಣಾ ಕಡಾಡಿ, ಶಾಸಕರಾದ ಶ್ರೀ ಅನೀಲ ಬೆನಕೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕಮಟಗಿಮಠ, ನಮ್ಮ ಪಕ್ಷದ ಅಭ್ಯಥಿ೯ …

Read More »