Kalaburagi: ಅಜಾನ್ ವಿರುದ್ಧ ಕೆಲವು ಹಿಂದೂ ಸಂಘಟನೆಗಳ ಪ್ರತಿಭಟನೆ ಸೋಮವಾರದಿಂದ ಹೆಚ್ಚಾಗಿದೆ. ರಾಜ್ಯದ ಹಲವಾರು ಭಾಗಗಳ ಹಿಂದೂ ದೇವಸ್ಥಾನಗಳಲ್ಲಿ (Hindu temples) ಸುಪ್ರಭಾತ ಮತ್ತು ಹನಮಾನ್ ಚಾಲಿಸಾ (Hanuman Chalisa) ಧ್ವನಿವರ್ಧಕಗಳ ಮೂಲಕ ಪಠಿಸಲಾಗುತ್ತಿದೆ. ಹಾಗಾಗಿ, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಬಯಾನ್ ಬಾಜಿ ಶುರುವಾಗಿದೆ. ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಬಿಕೆ ಹರಿಪ್ರಸಾದ್ (BK Hari Prasad) ಅವರು ಅಜಾನ್ ವಿರುದ್ಧ ಅಭಿಯಾನ ನಡೆಸುತ್ತಿರುವವರು …
Read More »ಗಾಳಿ ಸಹಿತ ಮಳೆಗೆ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನ ಗ್ಯಾಲರಿ ಕುಸಿತ; ಇದು ಕಳಪೆ ಕಾಮಗಾರಿಗೆ ಸಾಕ್ಷಿ ಎಂದ ಆಪ್ ಪಕ್ಷ
ಬೆಂಗಳೂರು: ನಿನ್ನೆ(ಏಪ್ರಿಲ್ 08) ಸುರಿದ ಗಾಳಿ ಸಹಿತ ಮಳೆಗೆ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿ ಕುಸಿದುಬಿದ್ದಿದೆ. ಬೊಮ್ಮನಹಳ್ಳಿ ವಾರ್ಡ್ ವ್ಯಾಪ್ತಿಯ ಎಚ್ಎಸ್ಆರ್ ಲೇಔಟ್ನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನ ಗ್ಯಾಲರಿಯ ಮೇಲ್ಛಾವಣಿ ಕುಸಿದುಬಿದ್ದಿದೆ. ಹೀಗಾಗಿ ಆಪ್ ಕಾರ್ಯಕರ್ತರು ಸ್ಟೇಡಿಯಂ ಪರಿಸ್ಥಿತಿ ನೋಡಲು ಸ್ಥಳಕ್ಕೆ ಬಂದಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ಕಟ್ಟುವಾಗ ಕಳಪೆ ಕಾಮಗಾರಿ ಆಗಿದೆ ಎಂದು ಆರೋಪ ಮಾಡಿದ್ದಾರೆ. ಸ್ಟೇಡಿಯಂ ಕಟ್ಟಿ ಮೂರು ತಿಂಗಳು ಕಳೆದಿಲ್ಲ ಆಗಲೇ …
Read More »‘ಮೋದಿ ಕ್ಯಾಂಟಿನ್’ ತೆರೆದ ಮಾಜಿ ಐಎಎಸ್ ಶಿವರಾಮ್
K. Shivram: 2013ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದ ಕೆ ಶಿವರಾಮ್, ಆರು ತಿಂಗಳಿಗೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ಬೈ ಹೇಳಿ, ಜೆಡಿಎಸ್ ಸೇರ್ಪಡೆಯಾದರು. 2014ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ಪರಾಭವಗೊಂಡಿದ್ದರು. ಮುಂದೆ 2016ರಲ್ಲಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಐಎಎಸ್ ಅಧಿಕಾರಿ, ಸಿನಿ ನಟ ಮತ್ತು ಹಾಲಿ ರಾಜಕಾರಣಿ ಶಿವರಾಮು ಕೆ (ಶಿವರಾಮು ಕೆಂಪಯ್ಯ- ಕೆ ಶಿವರಾಮ್) ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದಾರೆ. ಮೂಲತಃ ರಾಮನಗರ …
Read More »ಪ್ರಾದೇಶಿಕ ಪಕ್ಷವನ್ನ ಅಧಿಕಾರಕ್ಕೆ ತಂದು ಕೊನೆ ಉಸಿರು ಬೀಡಬೇಕೆಂಬುದೇ ನನ್ನ ಹಠ: ಹೆಚ್ಡಿ ದೇವೇಗೌಡ
ಚಿಕ್ಕಮಗಳೂರು: ಜೆಡಿಎಸ್ ಅಧಿಕಾರಕ್ಕೆ ತಂದು ಕೊನೆ ಉಸಿರು ಬಿಡಬೇಕೆಂಬುದೇ ನನ್ನ ಹಠ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ದೇವೇಗೌಡರಿಗೆ 90 ವರ್ಷ ವಯಸ್ಸಾಗಿದೆ ಎಂದು ಯಾರೋ ಹೇಳಿದ್ರು. ಆದ್ರೆ ನನಗೆ ಇನ್ನೂ 90 ಮುಟ್ಟೇ ಇಲ್ಲ. ನನ್ನ ಜೀವನದ ಕೊನೆ ಆಸೆ ಏನು ಗೊತ್ತಾ? ಒಂದು ಪ್ರಾದೇಶಿಕ ಪಕ್ಷವನ್ನ ಉಳಿಸಿ, ಅಧಿಕಾರಕ್ಕೆ ತರಬೇಕು. ಅಧಿಕಾರಕ್ಕೆ ತಂದು ಕೊನೆ ಉಸಿರು ಬೀಡಬೇಕೆಂಬುದೇ ನನ್ನ ಹಠ ಎಂದು ಹೆಚ್.ಡಿ. …
Read More »ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ
ಬೆಂಗಳೂರು/ ಕಲಬುರ್ಗಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ (PSI Recruitment scam) ಅಕ್ರಮ ಪ್ರಕರಣದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿರುವ ಬಂಧಿತ 11 ಅಭ್ಯರ್ಥಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಲಾಗಿದೆ. ಪ್ರಕರಣದ ಇಬ್ಬರು ಆರೋಪಿಗಳಿಗೆ 4 ದಿನ ಸಿಐಡಿ ಕಸ್ಟಡಿ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ ಮಾಡಿದೆ. ಈ ಮಧ್ಯೆ, ಬೆಂಗಳೂರಿನ ಈ ಆರೋಪಿಗಳು ಜಡ್ಜ್ ಮುಂದೆ ತನಿಖಾಧಿಕಾರಿಗಳ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಸಿಐಡಿ ಕಸ್ಟಡಿ …
Read More »ಯಡಿಯೂರಪ್ಪನವರನ್ನು 45 ನಿಮಿಷಗಳ ಕಾಲ &ಬೊಮ್ಮಾಯಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದಾಗಿ: ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತಾಡಿದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಅವರು ತಮ್ಮ ಕುರಿತಾದ ಒಂದು ಮೂಲಭೂತ ಪ್ರಶ್ನೆಗೆ ಸಮಾಧಾನ ನೀಡಿದರು. ಯತ್ನಾಳ್ ಅವರು ತಮ್ಮ ಪಕ್ಷದ ನಾಯಕರ ವಿರುದ್ಧ ಮಾಧ್ಯಮಗಳ ಎದುರೇ ಯಾಕೆ ರೇಗಾಡುತ್ತಾರೆ, ಪಕ್ಷದ ವೇದಿಕೆಯಲ್ಲಿ ಅಥವಾ ಹೈಕಮಾಂಡ್ (high command) ಮುಂದೆ ಆ ವಿಷಯಗಳನ್ನು ಯಾಕೆ ಚರ್ಚಿಸುವುದಿಲ್ಲ ಅಂತ ಮಾಧ್ಯಮದವರು ಕೇಳಿದಾಗ ಶಾಸಕರು; ಪಕ್ಷದ ವೇದಿಕೆಯಲ್ಲಿ ತನಗೆ ಮಾತಾಡುವ …
Read More »ಕರ್ನಾಟಕದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ದೃಷ್ಟಿಯಿಂದ ಶೀಘ್ರ ಪ್ರತ್ಯೇಕ ಸರ್ಕಾರಿ ಆದೇಶ
ಬೆಂಗಳೂರು, ಮೈಸೂರು, ಗದಗ ಸೇರಿದಂತೆ ಹಲವು ನಗರಗಳ ದೇಗುಲಗಳಲ್ಲಿ ಮೈಕ್ ಮೂಲಕ ಸುಪ್ರಭಾತ ಹಾಕಲಾಯಿತು. ಕೆಲವೆಡೆ ಭಕ್ತರು ಭಜನೆ ಮಾಡಿದರು. ಆದರೆ ಚಿತ್ರದುರ್ಗ, ಬಾಗಲಕೋಟೆ, ಕಲಬುರ್ಗಿ, ಕೋಲಾರ ವಿಜಯಪುರ ಸೇರಿದಂತೆ ಹಲವು ನಗರಗಳಲ್ಲಿ ದೇಗುಲಗಳ ಕಡೆಗೆ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಬರಲಿಲ್ಲ. ಹೀಗಾಗಿ ಅಭಿಯಾನವೂ ಸದ್ದು ಮಾಡಲಿಲ್ಲ. ವಿವಾದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರ್ಮಿಕ ಸ್ಥಳಗಳ ಮೈಕ್ಗಳಿಂದ ಹೊಮ್ಮುವ ಧ್ವನಿಯು ಎಷ್ಟು ಡೆಸಿಬಲ್ ಇರಬೇಕು ಎನ್ನುವ …
Read More »ಸ್ವಲ್ಪ ಹೊತ್ತು ನೋಡಿಕೊಳ್ಳಿ ಎಂದು ಯುವಕನಿಗೆ 9 ತಿಂಗಳ ಮಗು ಕೊಟ್ಟು ಮಹಿಳೆ ಪರಾರಿ!.. ಮುಂದೇನಾಯ್ತು?
ಮೈಸೂರು: ಮಹಿಳೆಯೊಬ್ಬರು 9 ತಿಂಗಳ ಮಗುವನ್ನು ಯುವಕನ ಕೈಗೆ ಕೊಟ್ಟು ನಾಪತ್ತೆಯಾಗಿದ್ದು, ಬಳಿಕ ಯುವಕ ಕಂದಮ್ಮನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾನೆ. ಮೈಸೂರಿನ ಯುವಕ ರಘು ವೈಯಕ್ತಿಕ ಕೆಲಸಕ್ಕಾಗಿ ರಾಯಚೂರಿಗೆ ತೆರಳಿದ್ದ. ಕೆಲಸ ಮುಗಿಸಿ ಮೈಸೂರಿಗೆ ಹಿಂದಿರುಗಲೆಂದು ರಾಯಚೂರಿನ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ. ಈ ಸಂದರ್ಭದಲ್ಲಿ ಆತನ ಬಳಿ ಬಂದ ಮಧ್ಯವಯಸ್ಕ ಮಹಿಳೆಯೊಬ್ಬಳು ತನ್ನ ಬಳಿಯಿದ್ದ 9 ತಿಂಗಳ ಮಗುವನ್ನು ಆತನ ಕೈಗಿಟ್ಟು ಸ್ವಲ್ಪ ಹೊತ್ತು ನೋಡಿಕೊಳ್ಳಿ, ವಾಪಸ್ ಬರುತ್ತೇನೆ ಎಂದು …
Read More »ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಧರೆಗುರುಳಿದ ಸ್ಟೇಡಿಯಂ ಗ್ಯಾಲರಿ!
ಬೆಂಗಳೂರು: ಹೆಚ್ಎಸ್ಆರ್ ಲೇಔಟ್ನಲ್ಲಿ ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಅಟಲ್ ಬಿಹಾರಿ ವಾಹಪೇಯಿ ಕ್ರೀಡಾಂಗಣದ ಗ್ಯಾಲರಿ ನೆಲಕ್ಕುರುಳಿದೆ. ನಾಲ್ಕು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಕ್ರೀಡಾಂಗಣವನ್ನು ಮಾರ್ಚ್ 1 ರಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದರು. ನಿನ್ನೆ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಗ್ಯಾಲರಿ ಧರೆಗುರುಳಿದೆ. ಒಂದು ಗ್ಯಾಲರಿ ಮರಗಳಲ್ಲಿ ಸಿಲುಕ್ಕಿದ್ದರೇ ಮತ್ತೊಂದು ಗ್ಯಾಲರಿ ಸೀದಾ ಧರೆಗುರುಳಿದೆ. ಗ್ಯಾಲರಿ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೂ ಕಬ್ಬಿಣದ ಸರಳುಗಳು ಬಿದ್ದಿವೆ. ಗ್ರಾನೈಟ್ ಸಮೇತ …
Read More »ಬೆಳಗ್ಗಿನ ಜಾವದ ಅಝಾನ್ ಎಲ್ಲರ ನಿದ್ದೆ ಹಾಳು ಮಾಡುತ್ತದೆ.: ಚಕ್ರವರ್ತಿ ಸೂಲಿಬೆಲೆ,
ಮಂಗಳೂರು : ಪ್ರತಿ ನಾಗರಿಕನಿಗೆ ತೊಂದರೆಯಾಗದಂತೆ ನೋಡಿಕೊಳ್ಳೋದು ಸರ್ಕಾರದ ಜಬಾವ್ದಾರಿ. ಆದರೆ ದುರಾದೃಷ್ಟವಶಾತ್ ಸರ್ಕಾರ ಮುಂದೆ ಎಷ್ಟೇ ಮೊರೆ ಹೋದರೂ ಇದು ಸಾಧ್ಯವಾಗಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ, ರಾಜ್ಯದಲ್ಲಿ ಆಝಾನ್ ವಿರುದ್ಧ ಸುಪ್ರಭಾತ ಅಭಿಯಾನದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗ್ಗಿನ ಅಜಾನ್ ಜಾತ್ಯಾತೀತ ರಾಷ್ಟ್ರಕ್ಕೆ ಹೇಳಿ ಮಾಡಿಸಿರೋದು ಅಲ್ಲ. ಅಲ್ಲಾ ಒಬ್ಬನೇ. ದೇವರು ಬೇರೆ ಯಾರೂ ದೇವರಿಲ್ಲ ಅನ್ನೋದನ್ನು ಪ್ರತಿಯೊಬ್ಬ ಹಿಂದೂ ಕೇಳೋಕೆ ಸಾಧ್ಯ ಇಲ್ಲ. ಬೆಳಗ್ಗಿನ ಜಾವದ …
Read More »
Laxmi News 24×7