Breaking News

ರಾಜ್ಯ

ನಾಲ್ಕು ವರ್ಷದಿಂದ ಕೂತಲ್ಲೇ ಕೂತಿದ್ದಾರೆ. ಹೀಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ :ಲಕ್ಷ್ಮಣ ಸವದಿ

ಕೊಪ್ಪಳ: ಕಾಂಗ್ರೆಸ್‍ನವರಿಗೆ ಕೆಲಸದ ಕೊರತೆ ಇದೆ, ಹಾಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರು ನೀರಾವರಿ ಮಂತ್ರಿಯಾಗಿದ್ದಾಗ ಕೆಲಸ ಮಾಡಲಿಲ್ಲ. ಈಗ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ಮಹಾದಾಯಿ ವಿಚಾರದ ಬಗ್ಗೆ ಕಾಂಗ್ರೆಸ್‍ನವರು ನಮಗೆ ಹೇಳುವ ಅವಶ್ಯಕತೆಯಿಲ್ಲ. ಮಹಾದಾಯಿ ನಮ್ಮ ಬದ್ಧತೆಯಾಗಿದೆ. ಅದಕ್ಕಾಗಿ ನಾವು ಮಹಾದಾಯಿ ಕೆಲಸ ಮಾಡೇ ಮಾಡುತ್ತೇವೆ ಎಂದರು. ಕಾಂಗ್ರೆಸ್‍ನವರಿಗೆ ಸ್ವಲ್ಪ ಬಿಪಿ, ಶುಗರ್ …

Read More »

ವೈಶ್ಯ ವಾಟಿಕೆಯಲ್ಲಿ ಸಿಕ್ಕ ಮೂವರು ಇವರೇ

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಸಂಜಯ ಭೈರಪ್ಪ ಮಾಳಿ, ಅರುಣ್ ಜೈಪಾಲ ಶೇಕಣ್ಣವರ್, ಖಂಡೋಬಾ ಚವ್ಹಾಣ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿ 5 ಜನ ಮಹಿಳೆಯರನ್ನ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ರವಾನಿಸಲಾಗಿದೆ.  ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ನಗರ ಠಾಣೆಯ …

Read More »

ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.   22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …

Read More »

ಸೂಪರ್ ಸಂಡೇಯನ್ನು ಅಭಿಮಾನಿಗಳ ಜೊತೆ ಸಂಭ್ರಮಿಸಿದ ಕಿಚ್ಚ

ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅಭಿಮಾನಿಗಳ ಜೊತೆಗೆ ಕೆಲವು ಸಮಯ ಕಳೆದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಕೊರೊನಾದಿಂದ ಬಹಳ ದಿನಗಳಿಂದ ಸುದೀಪ್ ಅವರು ಅಭಿನಿಗಳನ್ನ ಭೇಟಿ ಮಾಡಿರಲಿಲ್ಲ. ಇಂದು ಬೆಳಗ್ಗೆ ಮನೆ ಬಳಿ ಸೇರಿದ್ದರು. ಸೂಪರ್ ಸಂಡೇಯನ್ನು ಕಿಚ್ಚ ಅಭಿಮಾನಿಗಳ ಜೊತೆಗೆ ಕಳೆದಿದ್ದಾರೆ. ಜೆ.ಪಿ ನಗರದ ಸುದೀಪ್ ಮನೆ ಮುಂದೆ ಸೇರಿದ ಕಿಚ್ಚನ ಅಭಿಮಾನಿಗಳು ಸೇರಿದ್ದರು. ಈ ವೇಳೆ ಸುದೀಪ್ ಅವರು ಫೋಟೋ ಕ್ಲಿಕಿಸಿಕೊಂಡು ಆಟೋ ಗ್ರಾಫ್ …

Read More »

ಯುದ್ಧಪೀಡಿತ ಉಕ್ರೇನ್‍ನಿಂದ ಬೆಳಗಾವಿಗೆ ವಿದ್ಯಾರ್ಥಿನಿ

ಬೆಳಗಾವಿ: ಯುದ್ಧಪೀಡಿತ ಉಕ್ರೇನ್‍ನಿಂದ ಬೆಳಗಾವಿಯ ಎಂಬಿಬಿಎಸ್ ವಿದ್ಯಾರ್ಥಿನಿ ಫೈಜಾ ಸುಬೇದಾರ್ ಸುರಕ್ಷಿತವಾಗಿ ಆಗಮಿಸಿದ್ದು, ಕುಟುಂಬಸ್ಥರಲ್ಲಿ ಸಂಭ್ರಮ ಮನೆಮಾಡಿದೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಫೈಜಾ ಸುಬೇದಾರ್ ವಿದ್ಯಾರ್ಥಿನಿಯನ್ನು ಅಂಬೇಡ್ಕರ್ ಜನಜಾಗೃತಿ ವೇದಿಕೆಯಿಂದ ಸ್ವಾಗತಿಸಿಕೊಳ್ಳಲಾಯಿತು. ಮಗಳು ಸುರಕ್ಷಿತವಾಗಿ ಮರಳಿದ ಹಿನ್ನೆಲೆ ಕುಟುಂಬಸ್ಥರಲ್ಲಿಯೂ ಸಂಭ್ರಮ ಮನೆಮಾಡಿತು.  ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಫೈಜಾ, ನಾವು ರೊಮೇನಿಯಾ ಗಡಿಗೆ ಬಂದು ಅಲ್ಲಿಂದ 12 ಗಂಟೆ ಪ್ರಯಾಣ ಮಾಡಿ ಏರ್‍ಪೆÇೀರ್ಟ್ ತಲುಪಿದ್ವಿ. ನಾವು ಉಕ್ರೇನ್ ಪಶ್ಚಿಮ ಭಾಗದಲ್ಲಿ ಇದ್ವಿ. …

Read More »

ಡಬಲ್ ಇಂಜಿನ್ ಸರ್ಕಾರವಿದ್ದರೂ, ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ: ಸಿದ್ದು ವ್ಯಂಗ್ಯ

ರಾಮನಗರ: ಬಿಜೆಪಿ ಅವರು ನಮ್ಮದು ಡಬಲ್ ಇಂಜಿನ್ ಸರ್ಕಾರ ಅಂತಾರೆ. ಆದರೂ ಕೂಡ ಯೋಜನೆ ಮಾಡಲೂ ಸಾಧ್ಯವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‍ನಿಂದ ಮೂರನೇ ಅಲೆ ಪಾದಯಾತ್ರೆ ಸ್ಥಗಿತವಾಗಿತ್ತು. ರಾಜ್ಯದ ಹಿತ, ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಮೊಟಕುಗೊಳಿಸಲು ತೀರ್ಮಾನಿಸಲಾಗಿತ್ತು. ಮತ್ತೇ ಕೋವಿಡ್ ಕಡಿಮೆಯಾದ ಹಿನ್ನೆಲೆ ಪಾದಯಾತ್ರೆ ಮುಂದುವರಿಸುತ್ತಿದ್ದೇವೆ. ಇಂದಿನಿಂದ ಐದು ದಿನಗಳ ಕಾಲ ಪಾದಯಾತ್ರೆ ನಡೆಯುತ್ತದೆ. ಪಾದಯಾತ್ರೆಗೆ ಚಾಲನೆ ಕೊಟ್ಟ …

Read More »

ಸರ್ ಫ್ಲೀಸ್ ಆಟೋಗ್ರಾಫ್ ಹಾಕಿ – ಮಕ್ಕಳ ಬೇಡಿಕೆಗೆ ಮಣಿದ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಕ್ಕಳ ಜೊತೆ ಮಕ್ಕಳಾದ ಪ್ರಸಂಗ ನಡೆಯಿತು. ಮಕ್ಕಳನ್ನ ನಗುಮುಖದಿಂದ ಮಾತನಾಡಿಸಿ ಮಕ್ಕಳ ಬೇಡಿಕೆಯನ್ನು ಮುಖ್ಯಮಂತ್ರಿಗಳು ಈಡೇರಿಸಿದರು. ತಮ್ಮ ಬೇಡಿಕೆ ಈಡೇರಿಸಿದ್ದಕ್ಕೆ ಸಂತೋಷಗೊಂಡ ಮಕ್ಕಳು ತಮ್ಮ ಮುಗ್ಧ, ಮುದ್ದು ಮನಸ್ಸಿನಿಂದ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದರು. ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ 100ಕ್ಕೂ ಹೆಚ್ಚು ಮಕ್ಕಳು ಆಗಮಿಸಿದ್ದರು. ಸಿಎಂ ಕಾರ್ಯಕ್ರಮಕ್ಕೆ ಅರ್ಧ ಗಂಟೆ ತಡವಾಗಿ ಬಂದರು. ಕಾರ್ಯಕ್ರಮಕ್ಕೆ …

Read More »

ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

ಬೆಂಗಳೂರು: ಉಕ್ರೇನ್‍ನಲ್ಲಿರೋ ಕನ್ನಡಿಗರು ವಾಪಸ್ ಕರೆ ತರುವ ಸಂಪೂರ್ಣ ವೆಚ್ಚ ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಕನ್ನಡಿಗರ ರಕ್ಷಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಉಕ್ರೇನ್‍ನಿಂದ ಮೊದಲ ತಂಡ ಭಾರತಕ್ಕೆ ಆಗಮಿಸಿದೆ. ವೆಸ್ಟರ್ನ್ ಭಾಗದಲ್ಲಿ ಇದ್ದ ವಿದ್ಯಾರ್ಥಿಗಳು ಈಗ ಆಗಮಿಸಿದ್ದಾರೆ. ದೆಹಲಿ ಹೈ ಕಮಿಷನರ್ ಗೆ ಸೂಚನೆ ಕೊಟ್ಟಿದ್ದೇನೆ. ಮುಂಬೈಯಿಂದಲೂ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು ರಾಷ್ಟ್ರೀಯ ವಿಪತ್ತು ನಿರ್ವಹಣೆ …

Read More »

ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2022ರ ಫೆಬ್ರವರಿ 27, ಭಾನುವಾರದಿಂದ 2022ರ ಮಾರ್ಚ್ 02 ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮಾನ್ಯ ಸ್ಥಳೀಯ ಶಾಸಕರಾದ ಶ್ರೀ ಉದಯ್ ಬಿ ಗರುಡಾಚಾರ್, ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಇಂದು ದಾಸಪ್ಪ ಆಸ್ಪತ್ರೆಯ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೊ …

Read More »

ಲಿಂಗ ಪರಿವರ್ತನೆ ಶಸ್ತ್ರ ಚಿಕಿತ್ಸೆ ವೇಳೆ ವ್ಯಕ್ತಿ ಸಾವು – ಇಬ್ಬರ ಬಂಧನ

ಹೈದರಾಬಾದ್: ಇಬ್ಬರು ಪದವಿಪೂರ್ವ ವೈದ್ಯಕೀಯ ವಿದ್ಯಾರ್ಥಿಗಳು ಯೂಟ್ಯೂಬ್ ನೋಡಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಯತ್ನಿಸಿದ್ದರಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ. ಮೃತದುರ್ದೈವಿಯನ್ನು ಪ್ರಕಾಶಂ ಜಿಲ್ಲೆಯ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಕೆಲ ದಿನಗಳ ಹಿಂದೆ ಪತ್ನಿಯನ್ನು ತೊರೆದು ಒಂಟಿ ಜೀವನ ನಡೆಸುತ್ತಿದ್ದರು. ನಂತರ ಇಬ್ಬರು ಬಿಫಾರ್ಮಾ ವಿದ್ಯಾರ್ಥಿಗಳೊಂದಿಗೆ ಸಂಪರ್ಕಿಸಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಇಚ್ಛೆಯನ್ನು ಬಹಿರಂಗಪಡಿಸಿದ್ದರು. ಅಲ್ಲದೇ ಕಡಿಮೆ ಬೆಲೆಗೆ ಆಪರೇಷನ್ ಮಾಡುವಂತೆ ಕೇಳಿಕೊಂಡು ಶಸ್ತ್ರ …

Read More »