ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಮಧ್ಯೆ ತೆರಿಗೆಯನ್ನು ಹೆಚ್ಚಿಸದಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಹೀಗಾಗಿ ಈ ಬಾರಿಯ ಬಜೆಟ್ನಲ್ಲಿ ಜನರಿಂದ ಯಾವುದೇ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ಇಳಿದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಜೆಟ್ ಬಳಿಕ ಇಲಾಖೆಯ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿರುವ ಜನರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಬಾರದು ಎಂದು ಪ್ರಧಾನಿ ಮೋದಿ ಅವರು ಕಳೆದ ವರ್ಷ ಸೂಚಿಸಿದ್ದರು. ಈ ಕಾರಣಕ್ಕೆ …
Read More »ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿ, ಬಿಜೆಪಿ ಶಾಸಕ ನಿತೇಶ್ ರಾಣೆಗೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.
ಮುಂಬೈ: ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ c ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್ಬಿ ರೋಟೆ ಅವರು ರಾಣೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಕಳೆದ ಡಿಸೆಂಬರ್ 2021ರಲ್ಲಿ ಸಿಂಧುದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತ ಸಂತೋಷ್ ಪರಬ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣವನ್ನು ದಾಖಲಿಸಲಾಗಿತ್ತು.ಪ್ರಕರಣ ಸಂಬಂಧಿಸಿ ರಾಣೆಯನ್ನು 10 ದಿನಗಳ …
Read More »ತಗ್ಗಿದ ಕೋವಿಡ್ ಕೇಸ್.. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳಿಗಿದ್ದ ನಿರ್ಬಂಧ ತೆರವು
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ಹರಡುವ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಜನವರಿ 6 ರಿಂದ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನದಲ್ಲಿ ಎಲ್ಲಾ ಸೇವೆಗಳನ್ನು ರದ್ದು ಮಾಡಿ, ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ರಾಜ್ಯದಲ್ಲಿ ಇದೀಗ ಸೋಂಕು ತಗ್ಗಿದ ಹಿನ್ನೆಲೆ ನಿರ್ಬಂಧಗಳನ್ನು ರದ್ದು ಮಾಡಿ ಆದೇಶಿಸಲಾಗಿದೆ. ಹೀಗಾಗಿ ಕುಕ್ಕೆ …
Read More »ದೇಶದ ಸಂವಿಧಾನ ಪಾಲಿಸದ ಸಮುದಾಯ ಪಾಕಿಸ್ತಾನಕ್ಕೆ ಹೋಗಲಿ
ವಿಜಯಪುರ : ಆರೋಪಿಗಳು ಯಾರೇ ಆಗಿರಲಿ, ಎಂಥವರೇ ಇರಲಿ, ಮುಂದೆ ಒಂದು ದಿನ ಅವರಿಗೆ ಶಿಕ್ಷೆ ತಪ್ಪಿದ್ದಲ್ಲ. ಅದರಲ್ಲೂ ಇಡಿಗೆ ಸಿಕ್ಕವರು ಅಷ್ಟು ಸುಲಭವಾಗಿ ಪಾರಾಗಲಾರರು. ಇಡಿ ಕೈಗೆ ಸಿಕ್ಕವರ ವಿರುದ್ಧ ಈಗಿಲ್ಲದಿದ್ರೂ ಇನ್ನು ಹತ್ತು ವರ್ಷಕ್ಕೆ ನಿಶ್ಚಿತವಾಗಿ ಕ್ರಮ ಆಗೇ ಆಗುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಮೊನ್ನೆ ಒಬ್ಬ ಬಸ್ ಕಂಡೆಕ್ಟರ್ ಸಿಕ್ಕಿದ್ದಾರೆ. ಅವರ ಮನೆಯಲ್ಲಿ ಸಾವಿರಾರು ಕೋಟಿ ಜಪ್ತಿ ಮಾಡಲಾಗಿದೆ. …
Read More »ಹೈಕಮಾಂಡ್ ಈ ಬಾರಿ ಸಚಿವ ಸ್ಥಾನ ನೀಡಲಾಗುವುದು ಎಂದಿದೆ :ಶ್ರೀಮಂತ ಪಾಟೀಲ್
(ಬೆಳಗಾವಿ): ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಮಂತ್ರಿಸ್ಥಾನ ನೀಡುವುದಾಗಿ ಹೈಕಮಾಂಡ್ ಹೇಳಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.ಕಾಗವಾಡ ತಾಲೂಕಿನ ಕೇಂಪವಾಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ತಪ್ಪಿದೆ. ಹಾಗಾಗಿ, ಈ ಬಾರಿ ಮಂತ್ರಿಸ್ಥಾನ ನೀಡಲಾಗುವುದೆಂದು ಹೈಕಮಾಂಡ್ ಹೇಳಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಮರಳುತ್ತಾರೆ ಎಂಬುದೆಲ್ಲಾ ಊಹಾಪೋಹ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಮಾಡಿದರೂ ನಾನು …
Read More »ಕಲಬುರಗಿಯಲ್ಲಿ ಸಾಂಕ್ರಾಮಿಕ ಕೋಗಕ್ಕೆ ಬಲಿಯಾದ್ರಾ ಸಹೋದರರು!?
ಕಲಬುರಗಿ: ಜಿಲ್ಲೆಯಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದು, ಇದಕ್ಕೆ ಸಾಂಕ್ರಾಮಿಕ ರೋಗ ಚಿಕನ್ ಪಾಕ್ಸ್ ಕಾರಣ ಎಂದು ಹೇಳಲಾಗುತ್ತಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ್ ಗ್ರಾಮದಲ್ಲಿ ಸ್ಟೇಷನ್ ಬಡಾವಣೆಯ ನಿವಾಸಿಗಳಾದ ಇಮ್ರಾನ್ ಪಟೇಲ್(16) ಹಾಗೂ ರೆಹಮಾನ್ ಪಟೇಲ್ (14) ಸಾವಿಗೀಡಾದ ಬಾಲಕರು. ಹಾಪೀಸಾ ಬೇಗಂ ಎಂಬುವರ ನಾಲ್ವರು ಮಕ್ಕಳಲ್ಲಿ ಚಿಕನ್ ಪಾಕ್ಸ್ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿದೆ. ಇದರಿಂದ ಆತಂಕಗೊಂಡ ಬೇಗಂ ತನ್ನ ಇಬ್ಬರು ಮಕ್ಕಳನ್ನು ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ …
Read More »ಇದು ‘ಸಬ್ ಕಾ ವಿನಾಶ್ ಬಜೆಟ್’ – ಸಿದ್ದರಾಮಯ್ಯ
ಮೈಸೂರು: ಇಂದು ಮಂಡನೆಯಾಗಿರುವ ಕೇಂದ್ರ ಬಜೆಟ್ ಯಾವುದಕ್ಕೂ ಆದ್ಯತೆ ನೀಡಿಲ್ಲ. ಸಮಸ್ಯೆಗಳಿಗೆ ಪರಿಹಾರ ನೀಡಿಲ್ಲ. ಇದೊಂದು ಸಬ್ ಕಾ ವಿನಾಶ್ ಬಜೆಟ್ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಬಜೆಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇಂದು ಹೆಚ್ ಡಿ ಕೋಟೆ ಜಂಗಲ್ ಲಾಡ್ಜ್ ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಮಂಡನೆಯಾದ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇರಲಿಲ್ಲ. ಆದ್ದರಿಂದ ನಿರಾಶೆಯಾಗಿಲ್ಲ. ಆದರೆ ಮಹಿಳೆಯರು, ರೈತರು ಹಾಗೂ ಮಧ್ಯಮ ವರ್ಗದವರು …
Read More »4ನೇ ಬಾರಿ ಬಜೆಟ್ ಮಂಡನೆ ಆರಂಭಿಸಿದ ನಿರ್ಮಲಾ ಸೀತಾರಾಮನ್
2022ನೇ ಸಾಲಿನ ಬಜೆಟ್ನ ಅಧಿವೇಶನವು ಜನವರಿ 31ರಿಂದ ಆರಂಭವಾಗಿದ್ದು, ಕೇಂದ್ರ ಬಜೆಟ್ ದಿನಕ್ಕೂ ಮೊದಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಿದ್ದಾರೆ. ಆರ್ಥಿಕ ಸಮೀಕ್ಷೆಯನ್ನು ಪ್ರತಿ ಬಾರಿಯು ಕೇಂದ್ರ ಬಜೆಟ್ ಮಂಡನೆಯ ಒಂದು ದಿನ ಮೊದಲು ಮಂಡಿಸಲಾಗುತ್ತದೆ. ನಿರ್ಮಲಾ ಸೀತಾರಾಮನ್ರ ನಾಲ್ಕನೇ ಬಜೆಟ್ನಲ್ಲಿ ಉದ್ಯೋಗಗಳು, ಆರೋಗ್ಯ ರಕ್ಷಣೆ ಮತ್ತು ಶಿಕ್ಷಣದ ಮೇಲಿನ ರಿಯಾಯಿತಿಗಳು, ತೆರಿಗೆ ವಿನಾಯಿತಿಗಳು ಮತ್ತು ಗಗನಕ್ಕೇರುತ್ತಿರುವ ಹಣದುಬ್ಬರವನ್ನು ನಿಭಾಯಿಸುವ ಕ್ರಮಗಳ ಭರವಸೆಯನ್ನು ಹೊಂದಿದ್ದಾರೆ. …
Read More »ಭಾರತದಲ್ಲಿಂದು 2,51,209 ಕೊರೊನಾ ಕೇಸ್ ಪತ್ತೆ, 627 ಮಂದಿ ಸಾವು
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 627 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 2,51,209 …
Read More »ಜಾರಕಿಹೊಳಿ ಕುಟುಂಬದ ಮೊದಲನೆಯ ಮರಿ ಮೊಮ್ಮಗ ನ ಹುಟ್ಟು ಹಬ್ಬದ ಸಂಭ್ರಮ
ಗೋಕಾಕ: ಜಾರಕಿಹೊಳಿ ಇದೊಂದು ಹೆಸರು ರಾಜ್ಯ ರಾಜಕಾರಣ ಹಾಗೂ ಬೆಳಗಾವಿಯಲ್ಲಿ ಅಂತೂ ಫುಲ್ ಫೇಮಸ್, ಪ್ರತಿದಿನ ಯಾವುದಾದರೂ ಒಂದು ವಿಷಯದ ಬಗ್ಗೆ ಚರ್ಚೆ ಯಲ್ಲಿ ಇದ್ದೆ ಇರುತ್ತಾರೆ. ಅದೇರೀತಿ ಇಂದು ಮರಿ ಸಾಹುಕಾರರ ಹುಟ್ಟು ಹಬ್ಬ, ಹೌದು ಶ್ರೀ ಸಂತೋಷ್ ಹಾಗೂ ಅಂಬಿಕಾ ಜಾರಕಿಹೊಳಿ ದಂಪತಿಯ ಮಗು ಶ್ರೀ ಸೂರ್ಯ ಶ್ರೇಷ್ಠ ಜಾರಕಿಹೊಳಿ ಇಂದು ಅವರ್ ಎರಡನೆಯ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿ ಕೊಳ್ಳುತ್ತಿದ್ದಾರೆ . ಎಲ್ಲರ ಪ್ರೀತಿಯ ಪಾತ್ರದ …
Read More »
Laxmi News 24×7