ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದ ವಿದ್ಯಾರ್ಥಿಯನ್ನು ಶಿಕ್ಷಕಿ ಬಾಸುಂಡೆ ಬರುವಂತೆ ಥಳಿಸಿದ್ದಾರೆ. ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ ನಂತರ ಶಿಕ್ಷಕಿ ಕ್ಷಮೆಯಾಚಿಸಿದ್ದಾರೆ. ಹೊನ್ನಾವರದ ಸರ್ಕಾರಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಸಹಪಾಠಿಗೆ ಲವ್ ಲೆಟರ್ ನೀಡಿದ್ದರಿಂದ ಆಕ್ರೋಶಗೊಂಡ ಶಿಕ್ಷಕಿ ಥಳಿಸಿದ್ದರಿಂದ ಬಾಸುಂಡೆ ಬಂದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈಗಾಗಲೇ …
Read More »ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಬೆಂಗಳೂರು: ಎವಿಬಿಪಿ ಸಂಘಟನೆ ಜೊತೆ ಸೇರಿ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ವಿವಿ ಆವರಣದ ಮುಂಭಾಗದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ (ಜ್ಞಾನ ಭಾರತಿ) ನಡೆದ ಪ್ರತಿಭಟನೆಯಲ್ಲಿ ಮುಖ್ಯವಾಗಿ ಪರೀಕ್ಷೆ, ಮೌಲ್ಯಮಾಪನ ಮತ್ತು ಫಲಿತಾಂಶ ನೀಡುವಲ್ಲಿ ವಿವಿಯ ವಿಳಂಬ ಧೋರಣೆ ಮತ್ತು ದ್ವಂದ್ವ ನಿಲುವು …
Read More »ಸಿಟಿ ಬಸ್ ತೆರಳದ ಜಾಗಕ್ಕೆ ಕೆಎಸ್ಸಾರ್ಟಿಸಿ ಬಸ್
ಮಹಾನಗರ: ಪರವಾನಿಗೆ ಹೊಂದಿರುವ ಮಾರ್ಗಗಳಲ್ಲಿ ಸಿಟಿ ಬಸ್ಗಳು ಸಂಚರಿಸದಿದ್ದರೆ ಅಂತಹ ರೂಟ್ಗಳಲ್ಲಿ ಕೆಎಸ್ಸಾರ್ಟಿಸಿ ಬಸ್ಗಳಿಗೆ ತಾತ್ಕಾಲಿಕವಾಗಿ ಪರವಾನಿಗೆ ನೀಡಲು ಆರ್ಟಿಒ ಮುಂದಾಗಿದೆ. ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಗಗಳಲ್ಲಿ ಸ್ಥಗಿತಗೊಂಡಿದ್ದ ಸಿಟಿ ಬಸ್ ಕಾರ್ಯಾಚರಣೆ ಇನ್ನೂ ಆರಂಭ ಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿ ಕರಿಂದ ದೂರುಗಳು ಕೇಳಿ ಬರುತ್ತಿವೆ. ಇದೇ ಕಾರಣಕ್ಕೆ ಸಾರ್ವಜನಿ ಕರು ಲಿಖೀತ ದೂರು ನೀಡಲು ಆರ್ಟಿಒ ಮನವಿ ಮಾಡಿತ್ತು. ಅದರಂತೆ ಈಗಾ ಗಲೇ ಸುಮಾರು 15 ಮಂದಿ …
Read More »ನರಗುಂದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ಸಿಪಿಐ ಅಮಾನತು
ನರಗುಂದ (ಗದಗ): ನರಗುಂದ ಪಟ್ಟಣದಲ್ಲಿ ನಡೆದ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಿಪಿಐ ನಂದೀಶ್ವರ ಕುಂಬಾರ ಅವರನ್ನು ಅಮಾನತು ಮಾಡಲಾಗಿದೆ. ಜ. 17ರಂದು ಹಿಂದೂ ಯುವಕರಿಂದ ಮುಸ್ಲಿಂ ಯುವಕನ ಕೊಲೆಯಾಗಿತ್ತು. ಇಡೀ ಪ್ರಕರಣವನ್ನು ಸರಿಯಾಗಿ ನಿಭಾಯಿಸುವಲ್ಲಿ ಕರ್ತವ್ಯ ಲೋಪವಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಎನ್.ಸತೀಶ್ ಕುಮಾರ್ ಅವರು ಸಿಪಿಐ ನಂದೀಶ್ವರ ಕುಂಬಾರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ …
Read More »ಧಾರವಾಡದಲ್ಲಿ 8 ಮನೆಗಳ ಬಾಗಿಲಿಗೆ ಹೊರಗಡೆಯಿಂದ ಬೀಗ ಹಾಕಿದ ದುಷ್ಕರ್ಮಿಗಳು! ವಿಚಿತ್ರ ಘಟನೆಗೆ ಬೆಚ್ಚಿಬಿದ್ದ ಸ್ಥಳೀಯರು
ಧಾರವಾಡ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಕಳ್ಳರ ಹಾವಳಿ ಹೆಚ್ಚಾಗಿದೆ. ಮನೆ ಕಳ್ಳತನ, ಬೈಕ್ ಕಳ್ಳತನ ನಡೆಯುತ್ತಲೇ ಇವೆ. ಇದೇ ವೇಳೆ ನಗರದ ವಸತಿ ಗೃಹದಲ್ಲಿ ನಡೆದ ಘಟನೆಯೊಂದು ಜನರನ್ನು ಮತ್ತಷ್ಟು ಬೆಚ್ಚಿ ಬೀಳಿಸಿದೆ. ಎಂದಿನಂತೆ ಬೆಳಿಗ್ಗೆ ಎದ್ದು ಮನೆಯಿಂದ ಹೊರ ಬರಬೇಕು ಅಂದುಕೊಂಡ ಜನರಿಗೆ ಶಾಕ್ ಆಗಿದೆ. ಸುಮಾರು ಎಂಟು ಮನೆಗಳಿಗೆ (Homes) ದುಷ್ಕರ್ಮಿಗಳು (Perpetrators) ಹೊರಗಡೆಯಿಂದ ಕೀಲಿ (Key) ಹಾಕಿದ್ದು, ಜನರು ಮನೆಯಿಂದ ಹೊರಬರದಂತೆ ಮಾಡಿದ್ದರು. ಆಕಾಶವಾಣಿ ವಸತಿಗೃಹದ …
Read More »ಬಾಸುಂಡೆ ಬರುವ ರೀತಿ ಹೊಡೆದು ಕ್ಷಮೆ ಕೇಳಿದ ಶಿಕ್ಷಕಿ!
ಕಾರವಾರ: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವ ರೀತಿ ಶಿಕ್ಷಕಿಯೊಬ್ಬರು ಹೊಡೆದು ದಂಡಿಸಿದ ಘಟನೆ ಹೊನ್ನಾವರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ.ಕಲ್ಪನಾ ಹೆಗಡೆ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕಿ. ಶಾಲೆಯಲ್ಲಿ ನಡೆದ ಸಣ್ಣ ಪ್ರಮಾದವೊಂದಕ್ಕೆ ಕುಪಿತರಾದ ಶಿಕ್ಷಕಿ ಕಲ್ಪನಾ ಹೆಗಡೆ 6 ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವ ರೀತಿ ಹೊಡೆದು ಗಾಯಗೊಳಿಸಿದ್ದಾರೆ. ಇನ್ನು ವಿಷಯ ಪಾಲಕರಿಗೆ ತಿಳಿಯುತ್ತಿದ್ದಂತೆ ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಪಾಲಕರ ಬಳಿ ಕ್ಷಮೆಯಾಚಿಸಿದ್ದು …
Read More »ಧಾರವಾಡ | ಡಿಕ್ಕಿ: ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರರು ಸಾವು
ಕಲಘಟಗಿ: ತಾಲ್ಲೂಕಿನ ತಂಬೂರ ಕ್ರಾಸ್ ಬಳಿ ಹುಬ್ಬಳ್ಳಿ- ಕಾರವಾರ ರಾಷ್ಟೀಯ ಹೆದ್ದಾರಿಯಲ್ಲಿ ಭಾನುವಾರ ನಡೆದ ಲಾರಿ, ಬೈಕ್ ಡಿಕ್ಕಿಯಲ್ಲಿ ಬೈಕ್ ಸವಾರರಾದ ಧಾರವಾಡ ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೂರಅಹ್ಮದ್ ಬೆಳಗಾಮ್ (38) ಹಾಗೂ ಜಾವಿದ್ ಪಠಾಣ್ (42) ಮೃತರು. ಲಾರಿ ಚಾಲಕನ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ದೇಹವನ್ನು …
Read More »ದಿವ್ಯಾಂಗ ಮಹಿಳೆಗೆ ಬೂಟು ಕಾಲಲ್ಲಿ ಒದ್ದ ಪ್ರಕರಣ: ಟೋಯಿಂಗ್ ಎಎಸ್ಐ ಅಮಾನತು!
ಬೆಂಗಳೂರು, : ವಿಕಲಚೇತನ ಮಹಿಳೆಗೆ ಬೀದಿಯಲ್ಲಿ ಬೂಟು ಕಾಲಿನಲ್ಲಿ ಒದ್ದ ಪ್ರಕರಣ ರಾಜ್ಯದಲ್ಲಿ ಟೋಯಿಂಗ್ ವ್ಯವಸ್ಥೆ ಬದಲಾವಣೆಗೆ ಮುನ್ನಡಿ ಬರೆದಿದೆ. ಪ್ರಕರಣ ಸಂಬಂಧ ಹಲಸೂರು ಗೇಟ್ ಎಎಸ್ಐ ನಾರಾಯಣ ಅವರನ್ನು ಅಮಾನತು ಮಾಡಲಾಗಿದೆ. ಇನ್ನು ಘಟನೆ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ ಮಾಡಿದ್ದಾರೆ. ಟೋಯಿಂಗ್ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ …
Read More »ನಿಮ್ಮ ಮತದಾರರ ಗುರುತಿನ ಚೀಟಿಯನ್ನು ನಿಮ್ಮ ಸ್ಮಾರ್ಟ್ಫೋನ್ನಲ್ಲೇ ಡೌನ್ಲೋಡ್ ಮಾಡುವುದು ಹೇಗೆ ಗೊತ್ತಾ?
ದೇಶದಲ್ಲಿ 2022ರ ವಿಧಾನಸಭಾ ಚುನಾವಣೆಯ ದಿನಗಳು ಹತ್ತಿರ ಬಂದಿವೆ. ಇಂತಹ ಪರಿಸ್ಥಿತಿಯಲ್ಲಿ ಕರೋನಾ ಅವಧಿಯಲ್ಲಿ ಅಂತರವನ್ನು ಕಾಯ್ದುಕೊಳ್ಳಲು ನಿಮ್ಮ ಫೋನ್ನಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡುವುದು ಬಹಳ ಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡು, ಭಾರತದ ಚುನಾವಣಾ ಆಯೋಗವು ಕಳೆದ ವರ್ಷ e-EPIC (ಎಲೆಕ್ಟ್ರಾನಿಕ್ ಎಲೆಕ್ಟೋರಲ್ ಫೋಟೋ ಐಡೆಂಟಿಟಿ ಕಾರ್ಡ್) ಕಾರ್ಯಕ್ರಮವನ್ನು ಪರಿಚಯಿಸಿತು. ಮುಂದಿನ ತಿಂಗಳು ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಫೆಬ್ರವರಿ 10 ರಿಂದ …
Read More »ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: DL, LLR ನವೀಕರಣ ಆನ್ಲೈನ್
ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕೆ RTO ಕಚೇರಿಗೆ ಅಲೆದಾಡಬೇಕಿಲ್ಲ. ಆನ್ಲೈನ್ ನಲ್ಲಿ ಡಿಎಲ್ ಮತ್ತು ಎಲ್.ಎಲ್. ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಆನ್ಲೈನ್ ನಲ್ಲಿ ಹಲವು ಸೇವೆಗಳು ಲಭ್ಯವಿವೆ. ವಿಳಾಸ, ಹೆಸರು ತಿದ್ದುಪಡಿಗೂ ಅವಕಾಶ ನೀಡಲಾಗಿದೆ. https://sarathi.parivahan.gov.in/sarathiservice ವೆಬ್ಸೈಟ್ ನಲ್ಲಿ ಸೇವೆ ಲಭ್ಯವಿದೆ. ಡಿಎಲ್ ನವೀಕರಣ, ಚಾಲನಾ ಪರವಾನಿಗೆ ನವೀಕರಣ, ವಿಳಾಸ, ಹೆಸರು ತಿದ್ದುಪಡಿಗೆ ಅವಕಾಶ …
Read More »
Laxmi News 24×7