Breaking News

ರಾಜ್ಯ

ಕಳಪೆ ಕಾಮಗಾರಿ ಸ್ಮಾರ್ಟ್‍ಸಿಟಿ ಅವಾಂತರ ನಾಲ್ಕೇ ತಿಂಗಳಲ್ಲಿ ಕುಸಿದ ರಸ್ತೆ..!

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಾಡಲಾಗಿದ್ದ ರಸ್ತೆ ನಾಲ್ಕೇ ತಿಂಗಳಲ್ಲಿ ಹಾಳಾಗಿದ್ದು ಇಟ್ಟಿಗೆ ತುಂಬಿದ ವಾಹನ ತೆರಳುತ್ತಿದ್ದ ವೇಳೆ ಕುಸಿದಿದ್ದು ಕಳಪೆ ಕಾಮಗಾರಿ ಮಾಡಿದ್ದಾರೆ ಎಂದು ಸಾರ್ವಜನಿಕರು ಹಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿ ನಗರದ ಪಾಂಗುಳಗಲ್ಲಿಯಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಸ್ಮಾರ್ಟ ಸಿಟಿ ಯೋಜನೆಯಡಿ ರಸ್ತೆ ಕಾಮಗಾರಿಯನ್ನು ಮಾಡಲಾಗಿತ್ತು. ಚಂದ್ರಪ್ರಭ ಜೈನಮಂದಿರದ ಎದುರಿಗೆ ಇದೇ ಮಾರ್ಗವಾಗಿ ಇಟ್ಟಿಗೆ ತುಂಬಿಕೊಂಡು ಸಾಗುತ್ತಿದ್ದ ವಾಹನವೊಂದು ತೆರಳುತ್ತಿದ್ದ ವೇಳೆ ರಸ್ತೆ ಇದ್ದಕ್ಕಿದ್ದಂತೆ ಕುಸಿದು, ಇಟ್ಟಿಗೆ …

Read More »

ಜಿ.ಪಂ. ಸಿಇಓ ದರ್ಶನ್‍ಗೆ ಕೊರೊನಾ ಪಾಸಿಟಿವ್

ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್ ಎಚ್.ವ್ಹಿ ಅವರಿಗೆ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡರೂ ಕೂಡ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಅವರಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಸಾಮಾನ್ಯ ಲಕ್ಷಣಗಳು ಇರುವ ಹಿನ್ನೆಲೆ ದರ್ಶನ್ ಅವರು ಹೋಮ್ ಐಸೋಲೇಶನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ 18 ವರ್ಷ ವಯಸ್ಸಿನ ಇಬ್ಬರು ಯುವಕರು ಸೇರಿದಂತೆ ಇತರ 34 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

Read More »

ಜನ ನಿರ್ಲಕ್ಷ್ಯವಹಿಸಿದರೆ ಮುಂಬೈ, ದೆಹಲಿ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ: ಆರ್.ಅಶೋಕ್

ಬೆಂಗಳೂರು: ಜನ ನಿರ್ಲಕ್ಷ್ಯ ವಹಿಸಿದರೆ ಮುಂಬೈ, ದೆಹಲಿ, ಪಶ್ಚಿಮ ಬಂಗಾಳದ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದರು. ಸಿಎಂ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಬಗ್ಗೆ ಸಿಎಂ ಮತ್ತೊಮ್ಮೆ ಸಭೆ ಮಾಡುತ್ತಾರೆ. ಮೂರನೇ ಅಲೆ ಬರುತ್ತದೆ ಎಂಬ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರನ್ನು ರೆಡ್ ಜೋನ್ ಎಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಸಿಎಂ …

Read More »

ಬಸ್‍ಸ್ಟಾಂಡ್‍ನ್ನು ಮುಖ್ಯಮಂತ್ರಿಗಳೇ ಉದ್ಘಾಟನೆ ಮಾಡಿ ಇನ್ನು 15 ದಿನ ಕಳೆದಿಲ್ಲ. ಅಷ್ಟರೊಳಗೆ ಈ ಬಸ್‍ಸ್ಟಾಂಡ್ ದನದ ಕೊಟ್ಟಿಗೆ ಆಗಿಬಿಟ್ಟಿದೆ.

ಬೆಳಗಾವಿ ದಿನದಿಂದ ದಿನಕ್ಕೆ ಸ್ಮಾರ್ಟ ಆಗುತ್ತಿದೆ ಎಂದು ಇಲ್ಲೊಂದು ಸ್ಮಾರ್ಟ ಬಸ್‍ಸ್ಟಾಂಡ್‍ನ್ನು ನಿರ್ಮಾಣ ಮಾಡಲಾಗಿತ್ತು. ಈ ಬಸ್‍ಸ್ಟಾಂಡ್‍ನ್ನು ಮುಖ್ಯಮಂತ್ರಿಗಳೇ ಉದ್ಘಾಟನೆ ಮಾಡಿ ಇನ್ನು 15 ದಿನ ಕಳೆದಿಲ್ಲ. ಅಷ್ಟರೊಳಗೆ ಈ ಬಸ್‍ಸ್ಟಾಂಡ್ ದನದ ಕೊಟ್ಟಿಗೆ ಆಗಿಬಿಟ್ಟಿದೆ. ಈ ಬಸ್‍ಸ್ಟಾಂಡ್‍ಗೆ ಹೇಳೋವರಿಲ್ಲ..ಕೇಳವರಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಬಸ್‍ಸ್ಟಾಂಡ್‍ನಲ್ಲಿಯೇ ಆರಾಮವಾಗಿ ಓಡಾಡುತ್ತಿರುವ ಎಮ್ಮೆ ಕರು, ಕಂಠಪೂರ್ತಿ ಸಾರಾಯಿ ಕುಡಿದು ಎಲ್ಲೆಂದರಲ್ಲಿ ಮಲಗಿರುವ ವ್ಯಕ್ತಿ, ಕಸದ ರಾಶಿಯಿಂದ ಸುತ್ತಲೂ ದುರ್ವಾಸನೆ, ಬೀದಿ ನಾಯಿಗಳ …

Read More »

ರಾಜ್ಯಾಂದ್ಯಂತ ಕೊವಿಡ್ ರೂಪಾಂತರಿ ಒಮಿಕ್ರಾನ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಗಡಿಭಾಗಗಳಲ್ಲಿ ವ್ಯಾಪಕ ಕಟ್ಟೆಚ್ಚರ

ರಾಜ್ಯಾಂದ್ಯಂತ ಕೊವಿಡ್ ರೂಪಾಂತರಿ ಒಮಿಕ್ರಾನ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಗಡಿಭಾಗಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದಲ್ಲಿ ಹೊಸ ಕೊವಿಡ್ ತಳಿ ಒಮಿಕ್ರಾನ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗಡಿ ಭಾಗಗಳಾದ ಕೊಗನೊಳ್ಳಿ ಚೆಕ್‍ಪೋಸ್ಟ್, ಹಾಗೂ ಕಾಗವಾಡ ಚೆಕ್‍ಪೋಸ್ಟ್‍ಗಳಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದಾರೆ. ಇತ್ತ ಐಗಳಿಯಲ್ಲಿ ಪೊಲೀಸ್ ಇಲಾಖೆ ರಸ್ತೆಯ …

Read More »

ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಬೆಳಗಾವಿ ನಗರದ ಸಾರ್ವಜನಿಕರ ಗಮನಕ್ಕೆ ಹೆಸ್ಕಾಂನಿಂದ ವಿದ್ಯುತ್ ಲೈನ್ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಭಾನುವಾರ ವಿದ್ಯುತ್ ಕಡಿತವಾಗಿತ್ತು. ಹೀಗಾಗಿ ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೌದು ಹಿಂಡಲಗಾ ಪಂಪ್ ಹೌಸ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದ್ದರಿಂದ ಸೋಮವಾರ ಮತ್ತು ಮಂಗಳವಾರ ಎರಡು ದಿವಸ ಬೆಳಗಾವಿ ನಗರಕ್ಕೆ 24/7 ಪ್ರಾತ್ಯಕ್ಷಿಕ ವಲಯ ಸಹಿತ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗುತ್ತದೆ ಎಂದು ಎಲ್ & ಟಿ, …

Read More »

ಕಡಲೆಕಾಯಿ ಸಾಲ ಹಿಂದಿರುಗಿಸಲು ಅಮೆರಿಕದಿಂದ ಭಾರತಕ್ಕೆ ಹಾರಿಬಂದ ಅಣ್ಣ ತಂಗಿ

ಕಾಕಿನಾಡ: 2010ರಲ್ಲಿ ಅಮೆರಿಕವಾಸಿಯಾಗಿದ್ದ ಕುಟುಂಬ ಕೆಲ ದಿನಗಳಿಗೆಂದು ಭಾರತಕ್ಕೆ ಬಂದಿತ್ತು. ಆ ಕುಟುಂಬ ಸಮೇತ ಬೀಚಿಗೆ ತೆರಳಿದ್ದರು. ಆಲ್ಲಿ ಅವರ ಕುಟುಂಬ ಕಡಲೆಕಾಯಿ ಮಾರುತ್ತಿದ್ದ ಅಜ್ಜಿಯೊಬ್ಬರಿಂದ ಕಡಲೆ ಖರೀದಿಸಿದ್ದರು.   ಕಡಲೆ ಖರೀದಿಸಿದ ಹಣವನ್ನು ನೀಡಲು ಪ್ರಣವ್ ತಂದೆ ಜೇಬಿಗೆ ಹಾಕಿದರು. ಆದರೆ ಅವರು ತಮ್ಮ ಪರ್ಸನ್ನು ಮನೆಯಲ್ಲೇ ಮರೆತುಬಂದಿದ್ದರು. ಹೀಗಾಗಿ ಆ ಅಜ್ಜಿಯ ಫೋಟೊ ಕ್ಲಿಕ್ಕಿಸಿ, ತಾವು ಹಣವನ್ನು ಮರಳಿಸುವುದಾಗಿ ಭರವಸೆ ನೀಡಿ ಅಲ್ಲಿಂದ ವಾಪಸ್ಸಾಗಿದ್ದರು.   ಇದಾದ ಸ್ವಲ್ಪ …

Read More »

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುತ್ತಿದ್ದ ಬಸ್ ವಾಪಸ್ ಕಳುಹಿಸಿದ ಪೊಲೀಸರು..!

ಬೆಳಗಾವಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುತ್ತಿದ್ದ ಬಸ್ ಅನ್ನು ಬೆಳಗಾವಿ ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಬಸ್​ನಲ್ಲಿದ್ದ ಪ್ರಯಾಣಿಕರಲ್ಲಿ ಆರ್​ಟಿಪಿಸಿಆರ್​ ನೆಗೆಟಿವ್ ವರದಿ ಇಲ್ಲದಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಖಾಸಗಿ ಬಸ್ ಅನ್ನು ವಾಪಸ್​ ಕಳುಹಿಸಲಾಗಿದೆ.   ಖಾಸಗಿ ಬಸ್ ಪುಣೆಯಿಂದ ಬೆಳಗಾವಿಗೆ ಬರುತ್ತಿತ್ತು. ರಾಜ್ಯದಲ್ಲಿ ಕೊರೊನಾ ಹಾಗೂ ಒಮೈಕ್ರಾನ್​ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಜಿಲ್ಲಾಡಳಿತದ ವತಿಯಿಂದ ಹೈಅಲರ್ಟ್ ಮಾಡಲಾಗಿದೆ.

Read More »

ಕೊರೋನಾ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಧಾರವಾಡ 2 ಸೇರಿ ರಾಜ್ಯದಲ್ಲಿ ಮತ್ತೆ 10 ಒಮಿಕ್ರಾನ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಏರುಗತಿಯಲ್ಲಿ ಸಾಗಿ ಸಾವಿರದ ಗಡಿದಾಟಿ ಹೊಸ ಪ್ರಕರಣ ಪತ್ತೆಯಾಗ್ತಿವೆ. ಇದೇ ವೇಳೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆ ಆಗಿದೆ. ಇವತ್ತು ಹೊಸದಾಗಿ 10 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ಕೂಡ ಏರಿಕೆ ಕಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ 8 ಕೇಸ್ ಗಳು ಪತ್ತೆಯಾಗಿದೆ. ಇವರಲ್ಲಿ 5 ಜನ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಧಾರವಾಡದಲ್ಲಿ 2 ಕೇಸ್ …

Read More »

ರಾಜ್ಯ ಸರಕಾರದಿಂದ ಗುಡ್ ನ್ಯೂಸ್ : ಇನ್ಮುಂದೆ ಸಿಗಲಿದೆ ಫ್ರಿ ಡ್ರೈವಿಂಗ್ ಲೈಸೆನ್ಸ್

ಬಾಗಲಕೋಟೆ : ಮುಂಬರುವ ದಿನಗಳಲ್ಲಿ ಚಾಲನಾ ಲೈಸೆನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಚಾಲನಾ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು.   ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ …

Read More »