Breaking News

ರಾಜ್ಯ

ಹಿಂದೂ ದೇಗುಲ ಕಟ್ಟಿಸಿ ಭಾವೈಕ್ಯತೆ ಮಂತ್ರ ಸಾರಿದ ಮುಸ್ಲಿಂ ವ್ಯಕ್ತಿ

ರಾಮನಗರ: ಕರ್ನಾಟಕ ಅಂದ್ರೆನೇ ಭಾವೈಕತೆಯ ತವರೂರು. ಹಿಂದೂ-ಮುಸ್ಲಿಂ ಬಾಂಧವರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಅದೇ ರೀತಿ ನಗರದ ಮುಸ್ಲಿಂ ಮುಖಂಡರೊಬ್ಬರು ಹಿಂದೂ ದೇಗುಲ ನಿರ್ಮಿಸಿ ಭಾವೈಕ್ಯತೆ ಮಂತ್ರ ಸಾರಿದ್ದಾರೆ.     ಚನ್ನಪಟ್ಟಣ ಕ್ಷೇತ್ರದ ಸೈಯದ್ ಸಾದತ್ ಉಲ್ಲಾ ಸಕಾಫ್ ಎಂಬುವವರು ಹಿಂದೂ ದೇವಾಲಯಗಳನ್ನು ಕಟ್ಟಿಸಿ ಭಾವೈಕ್ಯತೆ ಸಾರಿದ್ದಾರೆ. ಲಾಕ್​ ಡೌನ್​ ಸಮಯದಲ್ಲೂ ಫುಡ್​ ಕಿಟ್ ವಿತರಿಸುವ ಮೂಲಕ ನೆರವಾಗಿದ್ದ ಸಕಾಫ್​, ಇದೀಗ ತಮ್ಮ ಸ್ವಂತ ಖರ್ಚಿನಲ್ಲಿ ದೇಗುಲ ನಿರ್ಮಾಣಕ್ಕೆ ಮುಂದಾಗಿದ್ದಾರೆ. …

Read More »

ಅಗಲಿದ ಪತ್ನಿಯ ಫೋಟೋಗೆ ಹೂ ತರಲು ಬಂದ ಗಂಡನ ಪ್ರಾಣವನ್ನೂ ಹೊತ್ತೊಯ್ದ ಜವರಾಯ!

ಯಳಂದೂರು: ಅಗಲಿದ ಪತ್ನಿಯ ಫೋಟೋಗೆ ಹೂ ತರಲೆಂದು ಮನೆಯಿಂದ ಹೊರಬಂದ ಗಂಡನ ಮೇಲೆ ಟೆಂಪೋ ಹರಿದಿದ್ದು, ಆತ ಸ್ಥಳದಲ್ಲೇ ದುರಂತ ಅಂತ್ಯ ಕಂಡ ಹೃದಯ ವಿದ್ರಾವಕ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ಪಟ್ಟಣದಲ್ಲಿ ಸಂಭವಿಸಿದೆ. ಯರಗಂಬಳ್ಳಿ ಗ್ರಾಮದ ಮರಿಸ್ವಾಮಿ(40) ಮೃತರು. ಇವರ ಪತ್ನಿ ಇತ್ತೀಚಿಗೆ ಕರೊನಾ ಸೋಂಕಿಗೆ ಬಲಿಯಾಗಿದ್ದರು. ಮನೆಯಲ್ಲಿದ್ದ ಪತ್ನಿಯ ಫೋಟೋಗೆ ಹೂ ಹಾಕಲೆಂದು ಇಂದು ಬೆಳಗ್ಗೆ ಹೂ ಖರೀದಿಸಿ ತರಲು ಪಟ್ಟಣಕ್ಕೆ ಮರಿಸ್ವಾಮಿ ಬಂದಿದ್ದರು. ಯಳಂದೂರು ಪಟ್ಟಣದ …

Read More »

ಕೆಎಸ್​ಆರ್​ಟಿಸಿ ಬಸ್ ಅ​ನ್ನೇ ಖತರ್ನಾಕ್​ ಖದೀಮರು ಕದ್ದೊಯ್ದು ಅಚ್ಚರಿ ಮೂಡಿಸಿದ್ದಾರೆ.

ತುಮಕೂರು: ಕಳ್ಳರು ಚಿನ್ನ, ಬೆಳ್ಳಿ, ಹಣ ಕದ್ದು ಪರಾರಿಯಾಗೋದು ಕಾಮನ್. ಆದರೆ ಇಲ್ಲಿ ಕೆಎಸ್​ಆರ್​ಟಿಸಿ ಬಸ್ ಅ​ನ್ನೇ ಖತರ್ನಾಕ್​ ಖದೀಮರು ಕದ್ದೊಯ್ದು ಅಚ್ಚರಿ ಮೂಡಿಸಿದ್ದಾರೆ. ಹೌದು.. ಜಿಲ್ಲೆಯ ಗುಬ್ಬಿ ಬಸ್​ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ ಅ​ನ್ನ ಕದ್ದೊಯ್ದ ಕಳ್ಳರು, ಸಿ.ಎಸ್. ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜನ್ನೇನಹಳ್ಳಿ ಗ್ರಾಮದ ಬಳಿ ಬಿಟ್ಟು ಪರಾರಾಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಸ್ಸಿನಲ್ಲಿದ್ದ ಡಿಸೇಲ್ ಕದ್ದು ಬಳಿಕ ಬಿಟ್ಟು ಹೋಗಿರುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ. …

Read More »

ನೂತನ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಕಲಿಕೆಗೆ ಆದ್ಯತೆ: ಗೆಹ್ಲೋಟ್

ಹುಬ್ಬಳ್ಳಿ: ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯನ್ನು ರಾಷ್ಟ್ರದಲ್ಲಿ ಮಟ್ಟದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಯ ಕಲಿಕೆಗೂ ಆದ್ಯತೆಯನ್ನು ನೀಡಲಾಗಿದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆ ರಾಜ್ಯಪಾಲರು ಸಂವಾದ ನಡೆಸಿದ್ದು ವಾರ್ತಾ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ರಾಜ್ಯಪಾಲರು ಹೇಳಿದ್ದೇನು? ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. …

Read More »

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

ದಾಂಡೇಲಿ : ನಗರದ ಶೋಭೆ ಹೆಚ್ಚಿಸುವ ದೃಷ್ಟಿಯಿಂದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಸಿ.ಎಸ್.ಆರ್ ಯೋಜನೆಯಡಿ ಜೆ.ಎನ್.ರಸ್ತೆಯಲ್ಲಿ ನಿರ್ಮಾಣ ಮಾಡಲಾದ ವಾಚ್ ಟವರ್ ಸರಿಯಿರುವುದಕ್ಕಿಂತ ಕೆಟ್ಟು ನಿಂತಿರುವುದೆ ಹೆಚ್ಚು ಎಂಬ ಮಾತು ನಗರದಲ್ಲಿ ಕೇಳಿ ಬರುತ್ತಿದೆ. ವಾಚ್ ಟವರ್ ದುರಸ್ತಿ ಬಗ್ಗೆ ಸಾಕಷ್ಟು ಬಾರಿ ನಗರ ಸಭೆಗೆ ಗಮನ ಸೆಳೆಯಲಾಗಿತ್ತು. ಪರಿಣಾಮವಾಗಿ ಕಳೆದೆರಡು ದಿನಗಳ ಹಿಂದೆ ನಗರ ಸಭೆಯವರು ಕಾಗದ ಕಾರ್ಖಾನೆಯ ಸಹಕಾರದಲ್ಲಿ ದುರಸ್ತಿ ಮಾಡಿದ್ದರು. ದುರಸ್ತಿ ಮಾಡಿ ಎರಡು …

Read More »

B.S.Y. ಅವರ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ಭ್ರಷ್ಟಾಚಾರ ಬಯಲಿಗೆ ಎಳೆದರೂ ಬೊಮ್ಮಾಯಿ ಮೌನ ಯಾಕೆ?

ಮುಖ್ಯಮಂತ್ರಿ ಕಚೇರಿಯ ನೌಕರ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ಭ್ರಷ್ಟಾಚಾರ ಬಯಲಿಗೆ ಎಳೆದರೂ ಬಸವರಾಜ ಬೊಮ್ಮಾಯಿ ಅವರು ಯಾಕೆ ನೈತಿಕ ಹೊಣೆ ಹೊರಲಿಲ್ಲ ಎಂದು ಕಾಂಗ್ರೆಸ್‌ ವಕ್ತಾರ ಹಾಗೂ ಪರಿಷತ್‌ನ ಮಾಜಿ ಸದಸ್ಯ ರಮೇಶ್‌ ಬಾಬು ಪ್ರಶ್ನಿಸಿದ್ದಾರೆ. ವಿಜಯೇಂದ್ರ ಅವರನ್ನು ಹಣಿಯಲು ಬಿಜೆಪಿಯ ಮುಖಂಡರೇ ಈ ದಾಳಿಗೆ ಕಾರಣಕರ್ತರಾಗಿದ್ದು ದಾಳಿಯ ಸುಳಿವು ಮೊದಲೇ ಬಸವರಾಜ ಬೊಮ್ಮಾಯಿಯವರಿಗೆ ತಿಳಿದಿತ್ತು. …

Read More »

ಕೇರಳದಲ್ಲಿ ಮಳೆ ಆರ್ಭಟ, ಮೃತರ ಸಂಖ್ಯೆ 38ಕ್ಕೆ ಏರಿಕೆ;

ತಿರುವನಂತಪುರ: ಕೇರಳದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಪರಿಣಾಮ ಮೃತರ ಸಂಖ್ಯೆ ಸೋಮವಾರ 38ಕ್ಕೆ ಏರಿದೆ. ಕೊಟ್ಟಾಯಂ ಜಿಲ್ಲೆಯ ಕೂಟ್ಟಿಕಲ್ ಪಂಚಾಯಿತಿಯ ಪ್ಲಾಪಲ್ಲಿಯಲ್ಲಿ ಭೂಕುಸಿತದ ಅವಶೇಷದಡಿಯಲ್ಲಿ ಏಳು ವರ್ಷದ ಬಾಲಕಿ ಸಹಿತ 13 ಶವಗಳು ಪತ್ತೆಯಾಗಿವೆ. ಮುಂಡಕಾಯಂನಲ್ಲಿ ಪ್ರವಾಹದ ರಭಸಕ್ಕೆ ಒಂದು ಮನೆ ಕೊಚ್ಚಿಕೊಂಡು ಹೋಗಿದೆ. ಇಡುಕ್ಕಿ ಜಿಲ್ಲೆಯ ಕೊಕ್ಕಾಯರ್ ಮತ್ತು ಪೆರುವನಂತಮ್ ಗ್ರಾಮಗಳಲ್ಲಿ ಎಂಟು ಮೃತದೇಹಗಳು ದೊರಕಿವೆ. ಈ ಮೂಲಕ ಸತ್ತವರ ಸಂಖ್ಯೆ 38ಕ್ಕೆ ಹೆಚ್ಚಳವಾಗಿದೆ. ಎರ್ನಾಕುಲಂನಲ್ಲಿ …

Read More »

ಈ ದ ಮಿಲಾದ್ ವಿಶೇಷತೆ ಏನು…?

ಮುಸ್ಲಿಮರಿಗೆ ಪವಿತ್ರವಾದ ಎರಡು ಹಬ್ಬಗಳಾದ ಈದ್ ಉಲ್ ಫಿತ್ರ್ ಮತ್ತು ಈದ್ ಉಲ್ ಅಧಾ ಬಳಿಕ ಪ್ರಮುಖವಾದ ದಿನವೆಂದರೆ ಮಿಲಾದುನ್ನಬೀ ಅಥವಾ ಈದ್ ಮಿಲಾದ್ ಆಗಿದೆ. ಇದು ಪ್ರವಾದಿಯವರ ಜನ್ಮ ಮತ್ತು ಪುಣ್ಯ ತಿಥಿಯದಿನದ ರೂಪದಲ್ಲಿ ಆಚರಿಸಲಾಗುತ್ತದೆ. ಇಸ್ಲಾಮಿಕ್ ತಿಂಗಳಾದ ರಬಿ ಉಲ್ ಅವ್ವಲ್ ನಲ್ಲಿ ಬರುವ ಈ ದಿನವನ್ನು ಸುನ್ನಿಗಳು ಮತ್ತು ಶಿಯಾಗಳು ಬೇರೆ ಬೇರೆ ದಿನದಂದು ಆಚರಿಸುತ್ತಾರೆ. ಶಿಯಾ ಮುಸ್ಲಿಮರು ಈ ತಿಂಗಳ ಹದಿನೇಳರಂದು ಆಚರಿಸಿದರೆ ಸುನ್ನಿ …

Read More »

ಅಕ್ಟೋಬರ್‌ 25, 1-ರಿಂದ 5ನೇ ತರಗತಿ ವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರ : 1-ರಿಂದ 5ನೇ ತರಗತಿ ವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಗಸೂಚಿ ಕೂಡ ಪ್ರಕಟವಾಗಿದೆ. ಅಕ್ಟೋಬರ್‌ 25 ರಿಂದ ಶಾಲೆ ಆರಂಭ ಮಾಡಲು ಕೋವಿಡ್‌ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಲಾಗಿದೆ. ಈಗಾಗಲೇ 6 ನೇ ತರಗತಿಯಿಂದ ಉನ್ನತ ಶಿಕ್ಷಣ ಹಂತದವರೆಗಿನ ಎಲ್ಲ ತರಗತಿಗಳ ಭೌತಿಕ ಕ್ಲಾಸ್‌ ಅನುಮತಿ ನೀಡಿದ್ದು, ಇದೀಗ 1-ರಿಂದ 5ನೇ ತರಗತಿ ಶಾಲೆಗಳನ್ನು ಪುನರ್‌ ಆರಂಭ ಮಾಡಲು ಮುಂದಾಗಿದೆ. …

Read More »

ಸಿಂದಗಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಬೇಕು : ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಸಿಂದಗಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲೆಯ ಸಿಂದಗಿ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ, ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರಚುನಾವಣೆ ಪ್ರಚಾರ ನಡೆಸಿ ಅವರು ಮಾತನಾಡಿದರು. ಸಿಂದಗಿ ಮತಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರಿಗೆ ಮತದಾರರು …

Read More »