Breaking News

ರಾಜ್ಯ

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನ‌‌ರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ …

Read More »

ಸಿಎಂ ಬೊಮ್ಮಾಯಿ ನವೆಂಬರ್​ವರೆಗೆ ಮಾತ್ರ ಅಧಿಕಾರದಲ್ಲಿ ಇರುತ್ತಾರೆ: ಸಿಎಂ ಇಬ್ರಾಹಿಂ

ತುಮಕೂರು: ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ತುಮಕೂರಿನಲ್ಲಿ ಮಾತನಾಡಿದ್ದು ಸಿಎಂ ಬೊಮ್ಮಾಯಿ ನವೆಂಬರ್​ವರೆಗೆ ಮಾತ್ರ ಅಧಿಕಾರದಲ್ಲಿ ಇರುತ್ತಾರೆ ಎಂದು ಹೇಳಿದ್ದಾರೆ. ಈ ಕುರಿತು ಭವಿಷ್ಯ ನುಡಿದ ಇಬ್ರಾಹಿಂ.. ಕೇಶವಕೃಪಾದವರು ಯಡಿಯೂರಪ್ಪಗೇ ಬಿಟ್ಟಿಲ್ಲ.. ಬೊಮ್ಮಾಯಿಗೆ ಬಿಡುತ್ತಾರಾ.? ಬೊಮ್ಮಾಯಿ ಏನು ಮಾಡಿದರೂ ಅವರು ಒಪ್ಪಲ್ಲ. ಬಸವ ತತ್ವದ ಮೇಲೆ ಅಧಿಕಾರ ನಡೆಸೋದಾದರೆ ನಡೆಸಿ.. ಇಲ್ಲಾ ಅಂದರೆ ಅಧಿಕಾರದಿಂದ ಕೆಳಗಿಳೀರಿ ಎಂದು ಇಬ್ರಾಹಿಂ ಹೇಳಿದ್ದಾರೆ. ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮಾತನಾಡಿ.. ಇದಕ್ಕೆ …

Read More »

ಫೈರಿಂಗ್​​​​​ ಮಾಡಿ ಜೈಲು ಸೇರಿದ್ದ ಉದ್ಯಮಿ ಬಿಚ್ಚಿಟ್ಟ ಸತ್ಯ; ಚಾಕು ತೋರಿಸಿ ಹಲ್ಲೆ ಮಾಡಿದ್ದನಂತೆ ಸವಾರ

ಬೆಂಗಳೂರು: ರಾಮಯ್ಯ ಆಸ್ಪತ್ರೆ ಬಳಿ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದಕ್ಕೆ ಜಗಳ ತೆಗೆದು, ಬೈಕ್ ಸವಾರನ ಮೇಲೆ ಫೈರಿಂಗ್​​ಗೆ ಯತ್ನಿಸಿದ್ದ ಪ್ರಕರಣ ಮತ್ತಷ್ಟು ತಿರುವು ಪಡೆದುಕೊಂಡಿದೆ. ಬೈಕ್ ಸವಾರ ಅನಿಲ್ ಎಂಬಾತನ ಮೇಲೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕೇಸ್ ಸಂಬಂಧ ಉದ್ಯಮಿ ರವೀಶ್ ಗೌಡನನ್ನ ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಮೇಲ್ನೋಟಕ್ಕೆ ಉದ್ಯಮಿಯದ್ದೇ ತಪ್ಪು ಅಂತ ತಿಳಿಯಲಾಗಿತ್ತು. ಆದ್ರೀಗ ಪ್ರಕರಣ ಬೈಕ್ ಸವಾರ …

Read More »

ಸಿದ್ದರಾಮಯ್ಯರನ್ನು ಭೇಟಿಯಾದ ಬಿಜೆಪಿ ಶಾಸಕ ಕುಮಾರ್‌ ಬಂಗಾರಪ್ಪ

ಬೆಂಗಳೂರು: ಮಾಜಿ ಸಚಿವ ಬಿಜೆಪಿಯ ಶಾಸಕ ಕುಮಾರ್‌ ಬಂಗಾರಪ್ಪ ಅವರು ಶುಕ್ರವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಕುಮಾರ್‌ ಬಂಗಾರಪ್ಪ ಅವರು ಆಗಮಿಸುವ ಮೊದಲು ಸಹೋದರ ಮಧು ಬಂಗಾರಪ್ಪ ಅವರೂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು. ಪುತ್ರಿ ಮದುವೆಗೆ ಆಹ್ವಾನ ತಾನು ಪುತ್ರಿಯ ಮದುವೆಗೆ ಆಮಂತ್ರಿಸಲು ಬಂದಿದ್ದು, ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ನಾನು ಕಾಂಗ್ರೆಸ್‌ ಸೇರುವುದೂ ಇಲ್ಲ. ಸಿದ್ದರಾಮಯ್ಯ ಇಂಥ ಆಹ್ವಾನವನ್ನೂ ನೀಡಿಲ್ಲ …

Read More »

ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು , ಮತ್ತೊಬ್ಬನ ಸ್ಥಿತಿ ಗಂಭೀರ

ರಾಯಚೂರು: ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಇಬ್ಬರು ಸಾವನಪ್ಪಿದ್ದು ಮತ್ತೊಬ್ಬ ಸವಾರನಿಗೆ ಗಂಭೀರ ಗಾಯವಾಗಿದೆ.ಮೃತರು ರಾಯಚೂರು ನಗರದ ತಿಮ್ಮಪೂರ ಪೇಟೆ ನಿವಾಸಿಗಳಾದ ದೀಪಕ್ (22) ಮತ್ತು ಹುಸೇನ್(23)ಎಂದು ತಿಳಿದು ಬಂದಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು ರೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಬಿದ್ದು ಒದ್ದಾಡುತ್ತಿದ್ದ ಗಾಯಾಳುವಿಗೆ ನೀರು ಹಾಕಿ ಸ್ಥಳೀಯರು ಮಾನವೀಯತೆ ಮೆರೆದಿದ್ದಾರೆ.‌ಕೂಡಲೇ ಆಂಬುಲೆನ್ಸ್​ಗೆ ಕರೆ ಮಾಡಿ ಗಾಯಾಳುವನ್ನ ಆಸ್ಪತ್ರೆಗೆ ರವಾನಿಸಿದರು. …

Read More »

ವಿಧಾನ ಪರಿಷತ್ ಸದಸ್ಯೆ ಪಾಸ್ ದುರ್ಬಳಕೆ: ದೂರು ನೀಡಿದ ಮಗಳು

ಬೆಂಗಳೂರು: ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಹೆಸರಿನಲ್ಲಿ ಪಾಸ್ ಸೃಷ್ಟಿಸಿಕೊಂಡು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಈ ಸಂಬಂಧ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ತೇಜಸ್ವಿನಿ ಗೌಡ ಅವರ ಮಗಳು ಬಿ.ಎಸ್. ಯಶಸ್ವಿನಿ ದೂರು ನೀಡಿದ್ದಾರೆ. ಹುಂಡೈ ಐ- 20 (ಕೆಎ 03 ಎಂವೈ 6331) ಕಾರಿನ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆತನನ್ನು ಪತ್ತೆ ಮಾಡಿ ವಿಚಾರಣೆ ನಡೆಸಬೇಕಿದೆ’ ಎಂದು ಪೊಲೀಸರು ಹೇಳಿದರು. ‘ತೇಜಸ್ವಿನಿ ಗೌಡ ಅವರು ಯಾರಿಗೂ ಪಾಸ್ …

Read More »

ನಿಯಮ ಮರೆತ ಸಚಿವೆ

ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದಿದ್ದು, ಕೊರೋನಾ ರೂಲ್ಸ್‌ಗಳನ್ನು ಮರೆತು ದೇವಾಲಯಕ್ಕೆ ತೆರಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇಗುಲಕ್ಕೆ ತೆರಳಿದ್ದ ಶಶಿಕಲಾ ಜೊಲ್ಲೆ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ದೇವಿಯ ದರ್ಶನ ಪಡೆದಿದ್ದಾರೆ. ಮಾಸ್ಕ್ ಇಲ್ಲದೇ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಇಲ್ಲಿ ಅನುಮತಿ ಇಲ್ಲ. ಆದರೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರಿಂದಲೇ ಕೋವಿಡ್ ರೂಲ್ಸ್ ಬ್ರೇಕ್ …

Read More »

ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇನ್ನಿಲ್ಲ

ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಗೋವಿಂದ ರಾವ್ ಗುರುತಿಸಿಕೊಂಡಿದ್ದರು. ಇವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಇನ್ನು ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30 ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಈ ಬಗ್ಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ”ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. …

Read More »

ಗಂಗಾವತಿ : ವೈಭವದಿಂದ ಜರುಗಿದ ಹೇಮಗುಡ್ಡದ ಅಂಬಾರಿ ಮೆರವಣಿಗೆ

ಗಂಗಾವತಿ :ನಾಡಹಬ್ಬ ದಸರಾ ಸಕಲ ಜೀವರಾಶಿಗಳಿಗೆ ಒಳಿತನ್ನು ಮಾಡಲಿ ಜಗತ್ತನ್ನು ಕಾಡುತ್ತಿರುವ ಕೊರೋನಾ ಮಹಾಮಾರಿ ಬೇಗನೆ ದೂರವಾಗಲಿ ದುರ್ಗಾಪರಮೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಮಾಜಿ ಸಂಸದ ಎಚ್. ಜಿ .ರಾಮುಲು ಹೇಳಿದರು . ಅವರು ತಾಲ್ಲೂಕಿನ ಸುಕ್ಷೇತ್ರ ಹೇಮಗುಡ್ಡದಲ್ಲಿ ಶರನ್ನವರಾತ್ರಿ ನಿಮಿತ್ತ ದಸರಾ ಆನೆ ಮೇಲೆ ಅಂಬಾರಿ ಮೆರವಣಿಗೆಗೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು . ನಾಡಹಬ್ಬ ದಸರಾ ಆಚರಣೆ ಮಾಡಿದ್ದು ಮೊದಲು ಕುಮ್ಮಟ ದುರ್ಗದ …

Read More »

ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ಕೋರಿದ ಸಿಎಂ

ಬೆಂಗಳೂರು : ದೇಶಾದ್ಯಂತ ಇಂದು ದಸರಾ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಬ್ಬದ ಶುಭಾಶಯ ಕೋರಿದ್ದಾರೆ. ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ಹಬ್ಬದ ಶುಭಾಶಯ ತಿಳಿಸಿದ್ದಾರೆ. ದಸರಾ ಮತ್ತು ವಿಜಯದಶಮಿ ಹಬ್ಬ ತಮಗೆ ಶುಭ ತರಲಿ …

Read More »