Breaking News

ರಾಜ್ಯ

ಸಿಂದಗಿಯಲ್ಲಿ ಕಾಂಗ್ರೆಸ್‌ ಮೂರನೇ ಸ್ಥಾನ’

ಹಾಸನ: ‘ಹಾನಗಲ್‌ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಸಕಲೇಶಪುರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮೂರನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಸೋಲಿಸಲು ಮುಸ್ಲಿಂ ಅಭ್ಯರ್ಥಿ ಹಾಕಿದ್ದಾರೆ ಎಂದು ಹೇಳುವವರು, ಅಭ್ಯರ್ಥಿ ಹಾಕಲು ಯೋಗ್ಯತೆ ಇಲ್ಲದೆ ಜೆಡಿಎಸ್‌ನಿಂದ ಅಶೋಕ್‌ ಮನಗೂಳಿ ಅವರನ್ನು ಹೈಜಾಕ್ ಮಾಡಿಕೊಂಡು …

Read More »

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ನ 2000 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶದಲ್ಲೇ ಅತಿದೊಡ್ಡ ಬ್ಯಾಂಕ್‌ ಎಂಬ ಹೆಗ್ಗಳಿಕೆಯ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ 2,056 ಪ್ರೊಬೆಷನರಿ ಅಧಿಕಾರಿಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೈಕಿ ಸಾಮಾನ್ಯ ವರ್ಗಕ್ಕೆ 810, ಆರ್ಥಿಕವಾಗಿ ಹಿಂದುಳಿದವರಿಗೆ 200, ಒಬಿಸಿಗೆ 560, ಎಸ್‌.ಸಿ.ಗೆ 324, ಎಸ್‌ಟಿ ಅಭ್ಯರ್ಥಿಗಳಿಗೆ 162 ಹುದ್ದೆಗಳು ಖಾಲಿ ಇವೆ. ಅ. 25ರವರೆಗೆ https://sbi.co.in/ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿಗಳ ಮಾರ್ಪಾಡಿಗೂ ಸಮಯ ನೀಡಲಾಗಿದೆ. ಮೊದಲು ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ನೋಂದಣಿ ಮಾಡಿಕೊಳ್ಳುವುದು …

Read More »

ಡ್ರೀಮ್ ಇಲೆವೆನ್ ಸೇರಿ ಎಲ್ಲಾ ಆನ್ಲೈನ್ ಗೇಮ್ ಗಳು ರಾಜ್ಯದಲ್ಲಿ ಬ್ಯಾನ್

ಬೆಂಗಳೂರು: ಇಂಟರ್ನೆಟ್‌ ಮೂಲಕ ಕ್ರೀಡೆ ಅಥವಾ ಕ್ಯಾಸಿನೋಗಳ ಮೇಲೆ ಬೆಟ್ಟಿಂಗ್‌ ಮಾಡುವ ಆನ್‌ ಲೈನ್‌ ಜೂಜನ್ನು (ಇ-ಗ್ಯಾಂಬ್ಲಿಂಗ್‌) ನಿಷೇಧಿಸಿ ರಾಜ್ಯ ಸರಕಾರ ಭಾನುವಾರ ಅಧ್ಯಾದೇಶ ಜಾರಿ ಮಾಡಿದೆ. ಸರಕಾರದ ನಿರ್ಧಾರದಿಂದ ಡ್ರೀಮ್ ಇಲೆವೆನ್ , ಪೇಟಿಎಂ ಫಸ್ಟ್ ಗೇಮ್ ಸೇರಿ ಎಲ್ಲಾ ಪ್ರಮುಖ ಆನ್‌ ಲೈನ್‌ ಗೇಮ್ ಗಳಿಗೆ ಅಂಕುಶ ಬಿದ್ದಂತಾಗಿದೆ. ರಾಜ್ಯದಲ್ಲಿ ಆನ್‌ಲೈನ್‌ ಜೂಜು ಅಥವಾ ಬೆಟ್ಟಿಂಗ್‌ಗೆ ನಿಷೇಧ ಹೇರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಕರ್ನಾಟಕ ಪೊಲೀಸ್‌ …

Read More »

ಹೈಕೋರ್ಟ್ ಗೆ ನೂತನ ನ್ಯಾಯಾಧೀಶ ನೇಮಕ

ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ಅಲಹಾಬಾದ್ ಮೂಲದ ನ್ಯಾ.ರಿತು ರಾಜು ಅವಸ್ಥಿ ನೇಮಕವಾಗಿದೆ. ಇನ್ನು ಕರ್ನಾಟಕದ ನ್ಯಾ.ಅರವಿಂದ್ ಕುಮಾರ್ ಅವರನ್ನು ಗುಜರಾತ್ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಕರ್ನಾಟಕ ಸೇರಿದಂತೆ 8 ಹೈಕೋರ್ಟ್​ಗಳ ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ ರಮಣ ಅವರ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿತ್ತು. ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿರುವ ರಿತು ರಾಜ್‌ ಅವಸ್ತಿ ಅವರ ಹೆಸರನ್ನು …

Read More »

ಹಾಸ್ಟೆಲ್‌ಗೆ ಬಸ್‌ ಸೌಲಭ್ಯಕ್ಕೆ ಆದ್ಯತೆ

ಸಿಂಧನೂರು: ‘ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ನಗರದಿಂದ ಎರಡು ಕಿ.ಮೀ ದೂರದಲ್ಲಿ ಇರುವುದರಿಂದ ಕಾಲೇಜಿಗೆ ಹೋಗಲು ಬಸ್ ಸೌಕರ್ಯ, ರಕ್ಷಣೆಯ ಹಿನ್ನೆಲೆಯಲ್ಲಿ ಸಿ.ಸಿ ಟಿವಿ ಕ್ಯಾಮೆರಾ ಮತ್ತು ಸೆಕ್ಯೂರಿಟಿ ಗಾರ್ಡ್ ಸೌಕರ್ಯ ಕಲ್ಪಿಸಲಾಗುವುದು’ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು. ಇಲ್ಲಿನ ಹೊರವಲಯದ ಶಿವಜ್ಯೋತಿ ನಗರದಲ್ಲಿ ನಿರ್ಮಿಸಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ …

Read More »

ಸಮುದಾಯ ಭವನಕ್ಕೆ ಸಿಂಹಪಾಲು: ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ

ಚನ್ನಮ್ಮನ ಕಿತ್ತೂರು: ಕಿತ್ತೂರು ಕ್ಷೇತ್ರದ ಬಿಜೆಪಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರು ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 2018ರಿಂದ ಇಲ್ಲಿಯವರೆಗೆ ಶೇ 70ರಷ್ಟು ಪಾಲನ್ನು ಸಮುದಾಯ ಭವನ ನಿರ್ಮಾಣಕ್ಕೆ ನೀಡಿದ್ದಾರೆ. 2018ರಲ್ಲಿ ವಿವಿಧ ಸಮಾಜದವರ ಅಥವಾ ದೇವಸ್ಥಾನಗಳ ಭವನಗಳ ನಿರ್ಮಾಣಕ್ಕೆ ಬಿಡುಗಡೆಯಾದ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 2019 ಮತ್ತು 2020ರಲ್ಲಿ ನೀಡಿದ ಹಣದಲ್ಲಿ ಭವನಗಳ ಕಾಮಗಾರಿ ಕೆಲವೆಡೆ ಮುಗಿದಿವೆ. ಕೆಲವೆಡೆ ಪ್ರಗತಿಯಲ್ಲಿದೆ. ಶಾಲೆಗಳ ಮೂಲ ಸೌಲಭ್ಯಗಳ ಕೊರತೆ ನೀಗಿಸಲು ಕೂಡ …

Read More »

ಗ್ರಾಮಗಳ ಅಭ್ಯುದ್ಯಯಕ್ಕೆ ಶ್ರಮಿಸಿ: ಸಚಿವ ಕೆ.ಎಸ್.ಈಶ್ವರಪ್

ಗದಗ: ‘ಗ್ರಾಮ ಪಂಚಾಯ್ತಿಗಳ ಚುನಾಯಿತ ಜನಪ್ರತಿನಿಧಿಗಳು ಗ್ರಾಮಗಳ ಅಭ್ಯುದಯಕ್ಕೆ ಶ್ರಮಿಸಬೇಕು. ಈ ಮೂಲಕ ಮತದಾರರ ಋಣ ತೀರಿಸಬೇಕು’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸಲಹೆ ನೀಡಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ಶನಿವಾರ ನಡೆದ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಆಯ್ಕೆಯಾಗುವುದು ಅತ್ಯಂತ ಸವಾಲಿನ ಸಂಗತಿ. ಗ್ರಾಮಗಳ ಸಮಗ್ರ ಅಭಿವೃದ್ಧಿಯ ಗುರುತರ ಜವಾಬ್ದಾರಿ ಚುನಾಯಿತ …

Read More »

40 ಕೆಜಿ ಇದ್ದ ಅಕ್ಕ 15 ಕೆಜಿಗೆ ಇಳಿದ್ರು, ಆಮೇಲೆ ತೀರೋದ್ರು; ಭಾವುಕರಾದ ಧರ್ಮಣ್ಣ

ಧರ್ಮಣ್ಣ ಅವರಿಗೆ ಅಕ್ಕ ಇದ್ದರು. ದೊಡ್ಡಪ್ಪನ ಮಗಳು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ಅವರ ಅಕ್ಕ ಮೃತಪಟ್ಟಿದ್ದರು. ನಲವತ್ತರಿಂದ ಐವತ್ತು ಕೇಜಿ ಇದ್ದ ಅವರ ಅಕ್ಕ 15 ಕೆಜಿಗೆ ಇಳಿದು ಹೋಗಿದ್ದರು. ನಟ ಧರ್ಮಣ್ಣ ಸ್ಯಾಂಡಲ್​ವುಡ್​ನಲ್ಲಿ ಪೋಷಕ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಅವರು ಮಾಡುವ ಕಾಮಿಡಿ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಈಗ ಧರ್ಮಣ್ಣ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಅವರ ಕುಟುಂಬದ ವಿಚಾರ ಕೇಳಿ …

Read More »

ಬಾಗಲಕೋಟೆ ದೋಣಿ ದುರಂತ; ಮೂವರ ಸಾವಿಗೆ ಹೊಣೆ ಯಾರು?

ಬಾಗಲಕೋಟೆ: ಓರ್ವ ವೃದ್ದನ ಸಾವು ಮೂವರ ಪ್ರಾಣ ಬಲಿ ಪಡೆದ ದುರ್ಘಟನೆ ಬಾಗಲಕೋಟೆ ಮತ್ತು ವಿಜಯನಗರ ಜಿಲ್ಲೆಗಳ ಜನರ ಮನಕಲುಕಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಗ್ರಾಮದ ಬಳಿ ನಾರಾಯಣಪುರ ಜಲಾಶಯ ಹಿನ್ನೀರಲ್ಲಿ ನಡೆದ ದುರಂತ ಎರಡು ಜಿಲ್ಲೆಗಳ ಜನರ ಮನಕಲುಕಿಸಿದೆ‌. ವಿಜಯಪುರ ಜಿಲ್ಲೆ ತಾಳಿಕೋಟಿ ತಾಲ್ಲೂಕಿನ ಹರನಾಳ ಗ್ರಾಮದ ಶಿವಪ್ಪ ಅಮಲೂರ ಅಕ್ಟೋಬರ್ 7 ರಂದು ಧನ್ನೂರ ಬಳಿ ನಾರಾಯಣಪುರ ಜಲಾಶಯದ ಹಿನ್ನೀರಲ್ಲಿ ಸಾವನ್ನಪ್ಪಿದ್ದ. ಆತನ ಶವ …

Read More »

ಆಟವಾಡುತ್ತಾ ಕಾಲುವೆಗೆ ಬಿದ್ದ 4 ಮಕ್ಕಳು.. ಇಬ್ಬರು ಕಂದಮ್ಮಗಳ ದಾರುಣ ಸಾವು

ಚಿಕ್ಕೋಡಿ: ಆಟ ಆಡುತ್ತ ಹೋಗಿ ಕರಿಮಸೂತಿ ಏತ ನೀರಾವರಿಯ ಕಾಲುವೆಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಟ ಆಡುತ್ತ ಸಂಜೆ ಕೆನಾಲ್ ಬಳಿ ಹೋಗಿದ್ದ ನಾಲ್ವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಸಪ್ನಾ ವಿನಾಯಕ್ ಪುಂಡಿಪಲ್ಲೆ(11) ಮತ್ತು ಪ್ರಥಮ ವಿನಾಯಕ ಪುಂಡಿಪಲ್ಲೆ (7) ಮೃತ ಮಕ್ಕಳು. ಮಕ್ಕಳು ಕಾಲುವೆಗೆ ಬಿದ್ದ ತಕ್ಷಣ …

Read More »