Breaking News

ರಾಜ್ಯ

ಸಮಾಜಸೇವೆ, ರಾಷ್ಟ್ರನಿರ್ಮಾಣವನ್ನು ಸಿದ್ದರಾಮಯ್ಯರಿಂದ ಕಲಿಯುವ ಅಗತ್ಯವಿಲ್ಲ: ಕ್ಯಾ.ಕಾರ್ಣಿಕ್

ಬೆಂಗಳೂರು: ನಾನು ಶಾಖೆಯಿಂದ ಹೊರ ಬಂದು ಸೈನ್ಯ ಸೇರಿದೆ. ಅದೇ ರೀತಿ ಶಾಖೆಯಿಂದ ಬಂದು ಹಲವರು ಬೇರೆ ಬೇರೆ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಸಮಾಜ ಸೇವೆ, ರಾಷ್ಟ್ರ ನಿರ್ಮಾಣವನ್ನು ಸಿದ್ದರಾಮಯ್ಯರಿಂದ ಕಲಿಯುವ ಅಗತ್ಯ ಇಲ್ಲ ಎಂದು ಮಾಜಿ ಪರಿಷತ್ ಸದಸ್ಯ, ಬಿಜೆಪಿ ನಾಯಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್‌ಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದರು. ನಾನು ಸೈನ್ಯದಲ್ಲಿ …

Read More »

ಕೆಪಿಟಿಸಿಎಲ್ ನ 1899 ಹುದ್ದೆಗಳ ಭರ್ತಿಗೆ ಚಾಲನೆ: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂದು ಅದರ ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ …

Read More »

ಸತ್ಯ ಗೊತ್ತಾದ ಮೇಲೆ, ಆಕ್ರೋಶದ ಕಟ್ಟೆ ಒಡೆಯಲಿದೆ: ಎಚ್.ಕೆ.ಪಾಟೀಲ್

ಹಾವೇರಿ: ದೇಶದಲ್ಲಿ ಅಜಾರಕತೆ ಸೃಷ್ಟಿಯಾಗಿದೆ. ಇಂತಹ ಕೆಟ್ಟ ಆಡಳಿತವನ್ನು ಎಂದಿಗೂ ನೋಡಿಲ್ಲ. ಜನರಿಗೆ ಸತ್ಯ ಗೊತ್ತಾದ ಮೇಲೆ, ಆಕ್ರೋಶದ ಕಟ್ಟೆ ಒಡೆಯಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಸೋಮವಾರ ಕಿಡಿಕಾರಿದ್ದಾರೆ. ಅವರು ಸೋಮವಾರ ಹಾನಗಲ್ಲ ಉಪಚುನಾವಣೆ ಹಿನ್ನಲೆಯಲ್ಲಿ ಹಾವೇರಿಯಲ್ಲಿ ನಡೆದ ಕಾಂಗ್ರೆಸ್ ಹಿರಿಯ ಮುಖಂಡರ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಜೆಪಿ ರೈತ ವಿರೋಧಿ ಕೆಲಸ ಮಾಡಿದೆ. ರೈತರನ್ನು ಕೊಲೆ ಮಾಡಿದ್ದಾರೆ. ಬೆಲೆ ಏರಿಕೆಯಿಂದ ಸಾಮಾನ್ಯ ಜನರ …

Read More »

ರಬಕವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ನಿರ್ಧಾರ : ಅಧ್ಯಕ್ಷ ಸೊಲ್ಲಾಪುರ

ರಬಕವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧಾರ. ಕಳೆದ ವರ್ಷ ಕರೋನ ರೋಗದ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಆಚರಿಸಿದ ರಾಜ್ಯೋತ್ಸವವನ್ನು ಈ ವರ್ಷ ಕರೋನ ಅಲೆ ನಿಯಂತ್ರಣದಲ್ಲಿ ಇರುವುದರಿಂದ ಈಗಾಗಲೇ ಎಲ್ಲ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಉಪಚುನಾವಣೆಗಳು ಮೈಸೂರು ದಸರಾ ನಾಡಹಬ್ಬ ಮತ್ತು ಚಲನಚಿತ್ರಗಳು ಎಂದಿನಂತೆ ಪ್ರಾರಂಭವಾಗಿರುವುದರಿಂದ ಈ ವರ್ಷ ರಬಕವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಹಾಗೂ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಚಿದಾನಂದ …

Read More »

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ: ಬಾಲಕಿಯರೇ ಮೇಲುಗೈ

ಬೆಂಗಳೂರು, ಅ.11: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಲಾಗಿದ್ದು, ಒಟ್ಟಾರೆ ಶೇ.55.54ರಷ್ಟು ಫಲಿತಾಂಶ ಬಂದಿದೆ. 2020-21ನೇ ಸಾಲಿನ ಪೂರಕ ಪರೀಕ್ಷೆಯನ್ನು ಕಳೆದ ಸೆಪ್ಟೆಂಬರ್ 27 ಮತ್ತು 29ರಂದ ನಡೆಸಲಾಗಿತ್ತು. ಒಟ್ಟಾರೆ 53,155 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.55.54ರಷ್ಟು ಫಲಿತಾಂಶ ಬಂದದೆ. ಫಲಿತಾಂಶ ವಿವರಗಳನ್ನು ವೆಬ್‌ಸೈಟ್ (http://karresults.nic.in ಹಾಗೂ https:kseeb.karnataka.gov.in/sslcseptresults2021) ಪರಿಶೀಲಿಸಬಹುದು. ಫಲಿತಾಂಶದ ವಿವರಗಳನ್ನು ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಮಧ್ಯಾಹ್ನ 3 ಗಂಟೆಯ …

Read More »

ಮದುವೆಯಾದರೂ ಸಿಂಗಲ್ ಆಗಿರುವ ಮೋದಿಗೆ ಹೇಳುವ ಧೈರ್ಯವಿದೆಯೇ? ಸುಧಾಕರ್ ಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಆಧುನಿಕ ಮಹಿಳೆಯರು ವಿವಾಹವಾಗಲು, ಮಕ್ಕಳನ್ನು ಹೆರಲು ನಿರಾಕರಿಸುತ್ತಿದ್ದಾರೆ ಎಂದುರುವ ಸಚಿವ ಕೆ.ಸುಧಾಕರ್ ಅವರೇ, ಮದುವೆಯಾದರೂ ‘ಸಿಂಗಲ್’ ಆಗಿರುವ ಮೋದಿಯವರ ಬಗ್ಗೆಯೂ ಹೀಗೆ ಹೇಳುವ ಧೈರ್ಯವಿದೆಯೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಸುಧಾಕರ್ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಮಹಿಳೆಯರ ಬದುಕನ್ನ ನಿರ್ಧರಿಸುವ, ಅವರ ಆಯ್ಕೆಯನ್ನು ನಿಯಂತ್ರಿಸುವ, ಅವರ ಸ್ವತಂತ್ರ ಪ್ರಶ್ನಿಸುವ ಬಿಜೆಪಿಗೂ ತಾಲಿಬಾನ್‌ಗೂ ವ್ಯತ್ಯಾಸವಿಲ್ಲ ಎಂದಿದೆ.   ಮಹಿಳೆಯರ ಬಗ್ಗೆ ಸಚಿವ ಸುಧಾಕರ್ ಆಡಿದ ಮಾತು …

Read More »

ಮಳೆಗೆ ಬಿದ್ಧ ಮನೆ- ಸ್ವಲ್ಪದರಲ್ಲೇ ಬದುಕುಳಿದ 8 ಜೀವಗಳು.

ಬೆಳಗಾವಿ: ನಿನ್ನೆ ತಡರಾತ್ರಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮನೆಗಗಳಿಗೆ ನೀರು ನುಗ್ಗಿದ್ದು, ಬಾಳು ಕಡೊಲಕರ ಎಂಬವರ ಮನೆ ಕುಸಿದಿರುವ ಘಟನೆ ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದಲ್ಲಿ ನಡೆದಿದೆ. ಮನೆಗೆ ಬಂದಿದ್ದ ಮಳೆನೀರನ್ನು ಹೊರಹಾಕಿ ಜಾರಿದ ಕುಟುಂಬದ ಸದಸ್ಯರು ಮತ್ತೆ ನಿದ್ರೆಗೆ ಜಾರಿದ ಸಂದರ್ಭದಲ್ಲಿ ಮನೆ ಛಾವಣಿ ಕುಸಿದಿದೆ. ಶಬ್ದ ಕೇಳಿ 8 ಸದಸ್ಯರು ಮನೆಯಿಂದ ಹೊರಬಂದಿದ್ದಾರೆ. ಮನೆ ಮಾಲೀಕ ಬಸವಣ್ಣಿ ಕಡೊಲಕರ್ ಸಮಯ ಪ್ರಜ್ಞೆಯಿಂದ 8 ಜೀವಗಳು ಬದುಕುಳಿದಿವೆ. ಮನೆ …

Read More »

ಇದು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಯಿತು: ದಿನೇಶ್ ಗುಂಡೂರಾವ್

ಬೆಂಗಳೂರು: ದೇಶದೆಲ್ಲೆಡೆ ಏಕಾಏಕಿ ಕಲ್ಲಿದ್ದಲು ಕೊರತೆ ಉಂಟಾಗಿರುವುದು ಆಶ್ಚರ್ಯಕರ. ಕಲ್ಲಿದ್ದಿಲಿನ ಅಭಾವ ರಾಜ್ಯದ ಮೇಲೂ ತಟ್ಟಿದೆ ರಾಜ್ಯದ ಮೂರು ವಿದ್ಯುತ್ ಕೇಂದ್ರಗಳು ಅವಲಂಬಿತವಾಗಿರುವುದು ಕಲ್ಲಿದ್ದಿಲಿನ ಮೇಲೆ. ಈ ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದಿಲು ಪೂರೈಕೆಯಾಗದಿದ್ದರೆ, ಉತ್ಪಾದನೆ ಸ್ಥಗಿತಗೊಳ್ಳಲಿದೆ. ಆಗ ರಾಜ್ಯ ಕತ್ತಲಲ್ಲಿ ಮುಳುಗುವುದು ನಿಶ್ಚಿತ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ತನಗೆಷ್ಟು ಕಲ್ಲಿದ್ದಲು ಬೇಕು ಎಂದು ಅಂದಾಜಿಸಿ ಮುಂಜಾಗ್ರತಾ …

Read More »

ರಾಜ್ಯಕ್ಕೆ ಕಲ್ಲಿದ್ದಲು ಸಿಕ್ಕಿದೆ, ವಿದ್ಯುತ್ ಅಭಾವ ಸೃಷ್ಟಿಯಾಗದು: ಸಚಿವ ಸುನಿಲ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗದು ಮತ್ತು ವಿದ್ಯುತ್ ಅಭಾವ ಸೃಷ್ಟಿಯಾಗದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಅವರು ಸೋಮವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಮುತುವರ್ಜಿಯಿಂದ ರಾಜ್ಯಕ್ಕೆ ಹಂಚಿಕೆಯಾಗಬೇಕಿದ್ದ ಕಲ್ಲಿದ್ದಲು ಸಿಕ್ಕಿದೆ ಎಂದರು. ದೇಶದಲ್ಲಿ ವಿದ್ಯುತ್‌ ಪೂರೈಕೆ ಸರಾಗವಾಗಿದ್ದು, ಕೊರತೆ ಉಂಟಾಗುವ ಯಾವುದೇ ಸ್ಥಿತಿಯಿಲ್ಲ. ಕೋಲ್‌ ಇಂಡಿಯಾ ಲಿ.ನಲ್ಲಿ ಸಾಕಷ್ಟು ಕಲ್ಲಿದ್ದಲು ದಾಸ್ತಾನು …

Read More »

ಹಾಫ್ ಮೆಂಟ್ಲು ಚಿತ್ರದ ನಿರ್ಮಾಪಕ ಅರೆಸ್ಟ್

: ಸಿನಿಮಾ ಸ್ಟೈಲ್ ನಲ್ಲೇ ಕಿಡ್ನ್ಯಾಪ್ ಮಾಡಲು ಹೋಗಿ ನಿರ್ಮಾಪಕನೊಬ್ಬ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಹಾಫ್ ಮೆಂಟ್ಲು ಸಿನಿಮಾ ನಿರ್ಮಾಪಕ ಶಶಿಕುಮಾರ್ ಬಂಧಿತ ಆರೋಪಿ. ಐಟಿ ಅಧಿಕಾರಿಗಳೆಂದು ಹೇಳಿ ಈರುಳ್ಳಿ ವ್ಯಾಪಾರಿ ಶ್ರೀನಿವಾಸ್ ಎಂಬುವವರನ್ನು ಶಶಿಕುಮಾರ್ ಹಾಗೂ ಗ್ಯಾಂಗ್ ಕಿಡ್ನ್ಯಾಪ್ ಮಾಡಿತ್ತು. 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಾಗ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿ ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿ ಬಿಟ್ಟು ಹೋಗಿದ್ದರು. …

Read More »