ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ವಿರೋಧಿ ಮಸೂದೆ ಸೇರಿದಂತೆ ವಿವಿಧ ನೀತಿಗಳ ವಿರುದ್ಧ ಕಿಸಾನ್ ಮೋರ್ಚಾದಿಂದ ಸೆಪ್ಟೆಬರ್ 27ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಸಾರಿಗೆ ಬಸ್ ಗಳ ಮೇಲೆ ಉಂಟಾಗುವಂತ ದಾಳಿ, ಹಾನಿ ತಪ್ಪಿಸಲು ಕೆ ಎಸ್ ಆರ್ ಟಿ ಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು …
Read More »ಗೋಕಾಕ ಜನತೆಗೆ ಅನುಕೂಲಕ್ಕಾಗಿ ಅತಿ ಸುಂದರವಾದ ಸಮುದಾಯ ಭವನ: ಸತೀಶ್ ಜಾರಕಿಹೊಳಿ ಭೇಟಿನೀಡಿ ವೀಕ್ಷಣೆ.
ಗೋಕಾಕ: ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯು ಆರಾಧ್ಯ ದೇವತೆ ಇನ್ನು ಪ್ರತಿಯೊಂದು ಕುಟುಂಬ ಈ ಆರಾಧ್ಯ ದೇವತೆಯ ಭಕ್ತರು ಇನ್ನು ಈ ಒಂದು ದೇವಸ್ಥಾನದ ಕಮಿಟಿ ಒಂದು ಅಧ್ಬೂತ ವಾದ ಕೆಲಸಕ್ಕೆ ಮುಂದಾಗಿದ್ದು ಇಂದು ಅದರ ಪ್ರತಿಫಲವಾಗಿ ಒಂದು ಸುಂದರವಾದ ಸಮುದಾಯ ಭವನ ಜನತೆಯೇ ಹಿತಾಸಕ್ತಿ ಗಾಗಿ ನಿರ್ಮಾಣ ವಾಗಿದೆ. ಈ ಒಂದು ಕೆಲಸಕ್ಕೆ ಗೋಕಾಕ ಜನತೆ ಜಾತ್ರಾ ಕಮಿಟಿ ಹಾಗೂ ಸಾಹುಕಾರರ …
Read More »ಚಿತ್ರಮಂದಿರ ಪೂರ್ಣ ತೆರೆಯಲು ಅವಕಾಶ: ಕೆಲವು ಜಿಲ್ಲೆಗಳಲ್ಲಿ ಮಾತ್ರ
ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಆ ನಂತರ ಸರ್ಕಾರದ ಆದೇಶದಂತೆ 50% ನಿಯಮಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದ್ದವು. ಇದೀಗ ಸರ್ಕಾರವು ಚಿತ್ರಮಂದಿರಗಳ ಮೇಲೆ ಕೃಪೆ ತೋರಿದ್ದು 100% ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ. ರಾಜ್ಯದ ಯಾವ ಜಿಲ್ಲೆಯಲ್ಲಿ ಕೊರೊನಾ ಶೇ 1ಕ್ಕಿಂತಲೂ ಕಡಿಮೆ ಪ್ರಸರಣ ಇದೆಯೋ ಆ ಜಿಲ್ಲೆಗಳಲ್ಲಿ ಮಾತ್ರವೇ ಚಿತ್ರಮಂದಿರಗಳು ಪೂರ್ಣವಾಗಿ ಬಾಗಿಲು ತೆರೆಯಬಹುದಾಗಿದೆ. ಯಾವ ಜಿಲ್ಲೆಗಳಲ್ಲಿ ಶೇ 1ಕ್ಕಿಂತಲೂ …
Read More »ಜೇಮ್ಸ್ ದಾಖಲೆ: ಭರ್ಜರಿ ಬೆಲೆಗೆ ಸ್ಯಾಟ್ಲೈಟ್ ಹಕ್ಕು ಸೇಲ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಯುವರತ್ನ ಚಿತ್ರದ ನಂತರ ಅಪ್ಪು ನಾಯಕನಾಗಿ ಅಭಿನಯಿಸುತ್ತಿರುವ ಚಿತ್ರ ಇದಾಗಿದ್ದು, ಬಹುದ್ಧೂರ್, ಭರ್ಜರಿ ಖ್ಯಾತಿಯ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಜೇಮ್ಸ್ ಸಿನಿಮಾ ಪ್ರತಿ ಹಂತದಲ್ಲೂ ಕುತೂಹಲ ಹೆಚ್ಚಿಸುತ್ತಲೇ ಇದೆ. ಕಳೆದ ಆಗಸ್ಟ್ 15 ರಂದು ಜೇಮ್ಸ್ ಹೊಸ ಪೋಸ್ಟರ್ ಬಂದಿತ್ತು. ಅದಾದ ಮೇಲೆ ಮತ್ತೆ ಯಾವ …
Read More »ಸುವರ್ಣ ವಿಧಾನಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ‘ಸುವರ್ಣ ವಿಧಾನಸೌಧದ ಬಳಿ ಕೆಲವು ಸಂಘ ಸಂಸ್ಥೆಯವರು, ಪ್ರತಿಭಟನಾಕಾರರು ಹಲವು ಬೇಡಿಕೆಗಳ ಈಡೇರಿಕೆಗಾಗಿ ಚಿಕ್ಕಪುಟ್ಟ ವಿಷಯಗಳಿಗೆ ಪದೇ ಪದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸುವರ್ಣಸೌಧದ ಸುತ್ತಲೂ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ವಹಿಸಲಾಗಿದೆ’ ಎಂದು ತಿಳಿಸಿದ್ದಾರೆ. ‘ಸೌಧದ …
Read More »ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ: ಬರಿಗೈನಿಂದಲೇ ಚರಂಡಿ ಸ್ವಚ್ಛಗೊಳಿಸಿದ ಪೌರ ಕಾರ್ಮಿಕರು
ಮಂಡ್ಯ: ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ಕೂ ಮುನ್ನ ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ ತೋರಿರುವ ಘಟನೆ ವರದಿಯಾಗಿದೆ. ಬರಿಗೈನಿಂದಲೇ ಪೌರ ಕಾರ್ಮಿಕರು ಚರಂಡಿ ಸ್ವಚ್ಛಗೊಳಿಸಿರುವ ಅಮಾನವೀಯ ದೃಶ್ಯ ಕಂಡುಬಂದಿದೆ. ಮೊನ್ನೆ ನಡೆದ ಪೌರ ಕಾರ್ಮಿಕರ ದಿನಾಚರಣೆ ದಿನವೇ ಕಾರ್ಮಿಕರಿಗೆ ಅಗೌರವ ಸೂಚಿಸಿಲಾಗಿದೆ. ಗ್ಲೌಸ್, ಗಮ್ ಬೂಟ್ ಇಲ್ಲದೇ ಪೌರ ಕಾರ್ಮಿಕರು ಚರಂಡಿ ಸ್ವಚ್ಛ ಮಾಡಿದ್ದಾರೆ. ಪಿಡಿಓ ಅಧಿಕಾರಿ ಗ್ಲೌಸ್, ಬೂಟ್ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ. …
Read More »ಭಾರತೀನಗರದಲ್ಲಿ ದುನಿಯಾವಿಜಯ್ಗೆ ಅದ್ಧೂರಿ ಸ್ವಾಗತ
ಭಾರತೀನಗರ: ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಭಾರತೀನಗರದಲ್ಲಿ ಚಿತ್ರನಟ ದುನಿಯಾ ವಿಜಯ್ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸಿಕ್ಕಿತು. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ಖಾಸಗೀ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದುನಿಯಾ ವಿಜಯ್ ಅವರನ್ನು ಭಾರತೀನಗರದ ಕಾಲೇಜ್ ಗೇಟ್ನಲ್ಲಿ ಅಭಿಮಾನಿಗಳು ಅಡ್ಡಗಟ್ಟಿ ಅದ್ದೂರಿಯಾಗಿ ಸ್ವಾಗತಿಸಿ ಜೈಕಾರ ಹಾಕಿದರು. ನಂತರ ಕಾರಿನಿಂದ ಇಳಿಯುವಂತೆ ಅಭಿಮಾನಿಗಳು ದುನಿಯಾವಿಜಯ್ಗೆ ಒತ್ತಡ ಹೇರಿದ ಮೇಲೆ ಕಾರಿನಿಂದ ಇಳಿದು ಅಭಿಮಾನಿಗಳತ್ತ ಕೈಬೀಸಿ ನಮಸ್ಕರಿಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೆರೆಕಾಣಲಿರುವ ಸಲಗ ಚಿತ್ರವನ್ನು ವೀಕ್ಷಿಸಿ …
Read More »ಮನಸ್ಸಿದ್ದರೆ ವಯಸ್ಸಿನ ಹಂಗೇಕೆ? ಬಾಳ ಇಳಿ ಸಂಜೆಯಲ್ಲಿ ಜತೆಯಾದರು- ಮಗನೇ ಮಾಡಿಸಿದ ಅಪ್ಪನ ಮದುವೆ
ಸಾಂಗ್ಲಿ (ಮಹಾರಾಷ್ಟ್ರ): ಮದುವೆ ಎನ್ನುವುದು ಎಲ್ಲರಿಗೂ ದೇಹ ಸುಖವೇ ಆಗಬೇಕೆಂದಿಲ್ಲ. ಬಾಳಿನ ಇಳಿ ಸಂಜೆಯಲ್ಲಿ ಬದುಕಿಗೆ ಆಧಾರವಾಗಿ ಇರಲು ಸಾಧ್ಯವಾಗುವುದು ಗಂಡ-ಹೆಂಡತಿ ಎಂಬ ಜೋಡಿ ಇದ್ದಾಗಲೇ. ಆದರೆ ಪತಿ- ಪತ್ನಿ ತೀರಿ ಹೋದಾಗ ಅಥವಾ ವಿಚ್ಛೇದನ ಪಡೆದಾಗ ಮತ್ತೊಮ್ಮೆ ಮದುವೆಯಾಗುವವರಿಗೆ ಸ್ವಲ್ಪ ವಯಸ್ಸಾಗಿದ್ದರೆ ಎಷ್ಟೋ ಮಂದಿ ಅಂಥವರನ್ನು ವಿಚಿತ್ರ ದೃಷ್ಟಿಯಿಂದ ನೋಡುವುದು ಇಂದಿಗೂ ಉಂಟು. ಆದರೆ ಇವನ್ನೆಲ್ಲಾ ಮೀರಿ ಖುದ್ದು ಮಗನೇ ಮುಂದೆ ನಿಂತು 79 ವರ್ಷ ವಯಸ್ಸಿನ ತಮ್ಮ …
Read More »ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು
ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಕೈ ಸನ್ನೆ ಮಾಡಿ ಯುವಕನೊಬ್ಬನನ್ನು ಆಟೋದಲ್ಲಿ ಬಂಜಾರ ಕಾಲನಿ ಬಳಿ ಕರೆದುಕೊಂಡು ಹೋಗಿ ಸಹಚರರಿಂದ ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಯಚೂರು ಮೂಲದ ಶಿರಡಿ ನಗರ ಹಾಸ್ಟೆಲ್ನಲ್ಲಿ ವಾಸವಿರುವ ಕುಮಾರ ಚವ್ಹಾಣ್ ಹಲ್ಲೆಗೀಡಾದ ಯುವಕ, ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಕುಮಾರ ಚವ್ಹಾಣ್, ಬಟ್ಟೆ ಖರೀದಿಸಿ ಹಾಸ್ಟೆಲ್ಗೆ …
Read More »ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ
ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ …
Read More »
Laxmi News 24×7