Breaking News

ರಾಜ್ಯ

ಗೋಕಾಕ ತಾಲೂಕಿಗೆ 20 ಸಾವಿರ ಲಸಿಕೆ ಗುರಿ

        ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …

Read More »

ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆ ಎಡಿಜಿಪಿಯಾಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅವಕಾಶ ಕೋರಿದ್ದಾರೆ.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆ ಎಡಿಜಿಪಿಯಾಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅವಕಾಶ ಕೋರಿದ್ದಾರೆ. ಈ ಮೂಲಕ ಪೊಲೀಸ್ ಅಧಿಕಾರಿ ಹುದ್ದೆಯಿಂದ ನಿವೃತ್ತಿ ಪಡೆದು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಎಂಬ ಚರ್ಚೆ ಆರಂಭವಾಗಿದೆ. ಭಾಸ್ಕರ್ ರಾವ್ ಅವರ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇದೆ. ಆದರೆ ಈಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ಸ್ವಯಂ ನಿವೃತ್ತಿಗಾಗಿ ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು …

Read More »

ಚಿತ್ರರಂಗದಲ್ಲಿ ಕಷ್ಟಪಡುತ್ತಿದ್ದ ಯುವತಿಯರೇ ರಾಜ್ ಕುಂದ್ರಾ ಮತ್ತು ಇತರ ಆರೋಪಿಗಳ ದಂಧೆಗೆ ಟಾರ್ಗೆಟ್

ಉದ್ಯಮಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಅಶ್ಲೀಲ ಸಿನಿಮಾ ತಯಾರಿಕೆ ಮತ್ತು ಹಂಚಿಕೆ ಪ್ರಕರಣ ಕುಂದ್ರಾ ಪಾಲಿಗೆ ಮತ್ತಷ್ಟು ಉರುಳಾಗಿದೆ. ದಂಧೆಯಿಂದ ಕೋಟಿಗಟ್ಟಲೆ ಹಣವನ್ನು ರಾಜ್ ಸಂಪಾದಿಸಿದ್ದಾರೆ ಎಂದು ಪೊಲೀಸರು ಚಾರ್ಜ್​ಶೀಟಿನಲ್ಲಿ ಆರೋಪಿಸಿದ್ಧಾರೆ. ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್‌ ಕುಂದ್ರಾ ಭಾಗಿಯಾಗಿರುವ ‘ಪೋರ್ನ್ ಫಿಲ್ಮ್ ಕೇಸ್’ಗೆ ಸಂಬಂಧಪಟ್ಟಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಈ ಚಾರ್ಜ್ ಶೀಟ್​ನಲ್ಲಿ ರಾಜ್ ಕುಂದ್ರಾರನ್ನು …

Read More »

ನಮ್ಮಲ್ಲಿ‌ ಚಿರತೆಯನ್ನೇ ಕೊಂದು ಒಬ್ಬರು ಹೀರೋ ಆಗಿದ್ದಾರೆ -ಸರ್ಕಾರದ ವಿರುದ್ಧ ಶಿವಲಿಂಗೇಗೌಡ ಲೇವಡಿ

ಬೆಂಗಳೂರು: ಹಳ್ಳಿಗಳಲ್ಲಿ ಕಾಡು ಪ್ರಾಣಿಗಳ‌ ಹಾವಳಿ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆ ಕಲಾಪದಲ್ಲಿ ಜೆಡಿಎಸ್​ ಸದಸ್ಯ ಶಿವಲಿಂಗೇಗೌಡ, ರಾಜ್ಯ ಸರ್ಕಾರವನ್ನ ಲೇವಡಿ ಮಾಡಿದರು. ನಮ್ಮಲ್ಲಿ‌ ಚಿರತೆಯನ್ನೇ ಕೊಂದು ಒಬ್ಬ ಹೀರೋ ಆಗಿದ್ದಾರೆ. ಕಾಡು ಪ್ರಾಣಿಗಳನ್ನ ನೀವು‌ ಸರಿಯಾಗಿ ಸಾಕ್ತಿಲ್ಲ. ಅದಕ್ಕೆ ಅವುಗಳು ಊರಿಗೆ ಬರ್ತಿವೆ. ಇದರಿಂದ ಸಾಕು ಪ್ರಾಣಿಗಳು ಉಳಿಯಲ್ಲ. ಕಾಡು ಪ್ರಾಣಿಗಳಿಗೆ, ಆಹಾರ, ನೀರು ಒದಗಿಸಿ ಎಂದು ಆಗ್ರಹಿಸಿದರು. ಶಿವಲಿಂಗೇಗೌಡರ ಪ್ರಶ್ನೆಗೆ ಅರಣ್ಯ ಸಚಿವ ಉಮೇಶ್ ಕತ್ತಿ ಉತ್ತರಿಸಿ, ಹಾಸನ …

Read More »

ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆಗೆ ಪೂರ್ಣಕುಂಭ ಸ್ವಾಗತ

ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಪಡೆ ಗುರುವಾರ ಅರಣ್ಯಭವನದಿಂದ ಅರಮನೆ ಪ್ರವೇಶಿಸಿದ್ದು, ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಅರಣ್ಯಭವನದಲ್ಲಿ ಅಭಿಮನ್ಯು, ಧನಂಜಯ, ಕಾವೇರಿ, ಚೈತ್ರಾ, ಅಶ್ವತ್ಥಾಮ, ಲಕ್ಷ್ಮೀ, ಗೋಪಾಲಸ್ವಾಮಿ ಹಾಗೂ ವಿಕ್ರಂ ಆನೆಗಳನ್ನು ಸಿಂಗರಿಸಿ ಗಜಪಡೆಗೆ ಪೂಜಾ ಕಾರ್ಯ ನೆರವೇರಿಸಲಾಯಿತು. ನಂತರ ವಾದ್ಯ ಮೇಳದೊಂದಿಗೆ ಗಜಪಡೆ ಅರಮನೆಯತ್ತ ಹೆಜ್ಜೆ ಹಾಕಿದವು. ಅರಮನೆಯ ಜಯಮಾರ್ತಂಡ ದ್ವಾರದಲ್ಲಿ ಗಜಪಡೆಗೆ ಹೂಮಳೆಗರೆಯಲಾಯಿತು. ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಪೂಜೆ ನೆರವೇರಿಸಿ ಸ್ವಾಗತ ಕೋರಿದರು. ಇದೇ ವೇಳೆ ಕಬ್ಬು, ಬೆಲ್ಲ, …

Read More »

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ

ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ. ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ವಿಕಾಸಸೌಧದಲ್ಲಿ ಸಚಿವ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ …

Read More »

6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕಾಮುಕ ಆತ್ಮಹತ್ಯೆಗೆ ಶರಣು: ರೈಲ್ವೆ ಹಳಿ ಮೇಲೆ ಶವ ಪತ್ತೆ

ಹೈದರಾಬಾದ್​: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಗುರುವಾರ ವರದಿಯಾಗಿದೆ. ಆರೋಪಿಯ ಮೃತದೇಹವು ಘಣಪುರ್​ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದ್ದು, ಪೊಲೀಸರು ಈ ಬಗ್ಗೆ ಮಾಹಿತಿಯನ್ನು ಖಚಿತಪಡಿಸಬೇಕಿದೆ. ಆರೋಪಿಯನ್ನು ಪಲ್ಲಕೊಂಡ ರಾಜು (30) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್​ 9ರಂದು 6 ವರ್ಷದ ಬಾಲಕಿ ಸೈದಾಬಾದ್​ನ ಸಿಂಗ್ರೌಣಿ ಕಾಲನಿಯಲ್ಲಿರುವ ತನ್ನ ನಿವಾಸದಿಂದ ನಾಪತ್ತೆಯಾಗಿದ್ದಳು. ಮರುದಿನ ಆಕೆಯ ಮೃತದೇಹವು ಬೆಡ್​ಶೀಟ್​ನಲ್ಲಿ ಸುತ್ತಿಟ್ಟಿದ್ದ ಸ್ಥಿತಿಯಲ್ಲಿ …

Read More »

‘ಮೂವರು ಹೆಂಡಿರು, ಸೊಸೆಯಂದಿರನ್ನಿಟ್ಟುಕೊಂಡಿರೋ ರಾಜು ತಾಳಿಕೋಟಿಗೆ ನನ್ನ ಬಗ್ಗೆ ಮಾತನಾಡೋ ನೈತಿಕ ಹಕ್ಕಿಲ್ಲ’

ವಿಜಯಪುರ: ಮೂವರು ಹೆಂಡಿರು, ಮೂರು ಮೂರು ಸೊಸೆಯಂದಿರನ್ನಿಟ್ಟುಕೊಂಡಿರುವ ರಾಜು ತಾಳಿಕೋಟಿಗೆ ನನ್ನ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ, ಅವನೊಬ್ಬ ಬಕೆಟ್ ಕಲಾವಿದ, ಕಲಿಯುಗದ ಕುಡುಕ ಸ್ಕ್ರಿಪ್ಟ್ ಸಹ ಕದ್ದು ಕ್ಯಾಸೆಟ್ ಮಾಡಿದವ ಎಂದು ಅವನ ಅಳಿಯ ಶೇಕ್‌ಹುಸೇನ ಮೋದಿ ಆರೋಪಿಸಿದ್ದಾರೆ. ಕಲಿಯುಗದ ಕುಡುಕ ಸ್ಕ್ರಿಪ್ಟ್ ರಾಜು ತಾಳಿಕೋಟಿ ಬರೆದಿದ್ದು ಅಲ್ಲ. ಪಾಪ ಅದನ್ನು ಯಾರೋ ಬರೆದದ್ದು, ಅದನ್ನಿಟ್ಟುಕೊಂಡು ಈತ ಕ್ಯಾಸೆಟ್ ಮಾಡಿದ. ಇದೀಗ ನನಗೆ ದೊಡ್ಡ ದೊಡ್ಡ ನಿರ್ಮಾಪಕರು …

Read More »

ಆತ್ಮೀಯ ಗೆಳೆಯನ ಅಗಲಿಕೆ: ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ನಿನ್ನೆ ನಿಧನರಾದ ಸ್ನೇಹಿತ ಹಾಘೂ ಸಂಬಂಧಿಕರಾದ ರಾಜು ಪಾಟೀಲ್​​ ಮನೆಗೆ ನೇರವಾಗಿ ತೆರಳಿದ್ದಾರೆ. ಹುಬ್ಬಳ್ಳಿಯ ಶಕ್ತಿ ನಗರದಲ್ಲಿರುವ ಮೃತ ರಾಜು ಪಾಟೀಲ್ ಮನೆಗೆ ಭೇಟಿ ನೀಡಿದ ಸಿಎಂ, ಸ್ನೇಹಿತನ ನಿಧನಕ್ಕೆ ಕಣ್ಣೀರ ವಿದಾಯ ಹೇಳಿದ್ದಾರೆ. ಬಳಿಕ ಕುಟುಂಬಸ್ಥರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.

Read More »

ಒಂದೇ ಸೆಟ್​ನಲ್ಲಿ ಡ್ಯಾನ್ಸ್​ ಕಿಂಗ್ & ಪವರ್ ಸ್ಟಾರ್​ -ಏನ್ ಹೊಸ ಸಮಾಚಾರ..?

ಮನಸೆಲ್ಲಾ ನೀನೇ’ ಖ್ಯಾತಿಯ ನಾಗೇಂದ್ರ ಪ್ರಸಾದ್ ಫಸ್ಟ್ ಟೈಮ್ ಡೈರೆಕ್ಷನ್​​ ಮಾಡ್ತಿರೋ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಹೀರೊ ಆಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡೊಂದಕ್ಕೆ ಇಂಡಿಯನ್​ ಡ್ಯಾನ್ಸ್​ ಕಿಂಗ್​ ಪ್ರಭುದೇವ ಮತ್ತು ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಜೊತೆಯಾಗಿ ಹೆಜ್ಜೆ ಹಾಕುತ್ತಿದ್ದಾರೆ ಎಂದು ನಾವು ಮೊದಲೇ ಹೇಳಿದ್ವಿ. ಅದರಂತೇ ಇದೀಗ ಪ್ರಭುದೇವ ಹಾಗೂ ಪುನೀತ್​ ಜೊತೆಗಿರುವ ಫೋಟೋಗಳು ವೈರಲ್​ ಆಗುತ್ತಿವೆ.     ಹೌದು, ಚಿತ್ರದ ಸೆಟ್​ನಲ್ಲಿ ಪ್ರಭುದೇವ ಹಾಗ ಪುನೀತ್​ …

Read More »