Breaking News

ರಾಜ್ಯ

ಗುಡಿಸಲು ಕಟ್ಟಲು ವೇಸ್ಟ್ ಬ್ಯಾನರ್ ಕೊಡಿ ಎಂದ ಅಜ್ಜ-ಅಜ್ಜಿಗೆ 2 ಲಕ್ಷದ ಮನೆಯನ್ನೇ ನಿರ್ಮಿಸಿಕೊಟ್ಟ ಕಾರ್ಪೊರೇಟರ್

ದಾವಣಗೆರೆ: ನಗರದ ಶೇಖರಪ್ಪ ಬಡಾವಣೆ ವಾರ್ಡ್ ನಂ 19 ರಲ್ಲಿ ಪಾಲಿಕೆ ಸದಸ್ಯರೋರ್ವರು ವಯಸ್ಸಾದ ಅಜ್ಜ ಅಜ್ಜಿಗೆ ಮನೆಯನ್ನ ಗಿಫ್ಟ್ ನೀಡಿದ ಮಾನವೀಯ ಘಟನೆ ನಡೆದಿದೆ. ಕಳೆದ 15 ವರ್ಷಗಳಿಂದ ಅಜ್ಜ ಅಜ್ಜಿ ಮನೆಯಿಲ್ಲದೇ ಪರದಾಡುತ್ತಿದ್ದರು. ಇದ್ದ ಮಕ್ಕಳು ತೀರಿಹೋದ ನಂತರ ಸೊಸೆಯಂದಿರು ಅಜ್ಜ ಅಜ್ಜಿಯನ್ನ ಮನೆಯಿಂದ ಹೊರಹಾಕಿದ್ದರು ಎನ್ನಲಾಗಿದೆ. ಹೀಗಾಗಿ ಕಾರ್ಪೊರೇಟರ್ ಬಳಿ ಗುಡಿಸಲು ನಿರ್ಮಿಸಲು ವೇಸ್ಟ್ ಬ್ಯಾನರ್ ಕೊಡಿ ಎಂದು ಅಜ್ಜಿ ಕೇಳಿದ್ದರಂತೆ. ಈ ವೇಳೆ ಅಜ್ಜಿ …

Read More »

ಬೆದರಿದ ಎತ್ತುಗಳು..ಕೆಳಗೆ ಬಿದ್ದ ಕಾಂಗ್ರೆಸ್ ನಾಯಕರು

ಬೆಂಗಳೂರು, ಸೆ.13- ಇಂಧನ, ಅಡುಗೆ ಅನಿಲ ದರ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನಸೌಧಕ್ಕೆ ಎತ್ತಿನ ಗಾಡಿಗಳಲ್ಲಿ ಮುತ್ತಿಗೆ ಹಾಕಿ ಪ್ರತಿಭಟಿಸಿದ ವೇಳೆ ಎತ್ತುಗಳು ಬೆದರಿಕೊಂಡು ಓಡಾಡಿದ್ದರಿಂದ ಗಾಡಿಯಲ್ಲಿದ್ದ ಶಾಸಕರು ಕೆಳಗೆ ಬಿದ್ಧ ಘಟನೆ ನಡೆದಿದೆ. ಶಾಸಕ ವೆಂಕಟರಮಣಯ್ಯ ಮತ್ತು ಸಂಗಮೇಶ್ ಇದ್ದ ಎತ್ತಿನ ಗಾಡಿಯ ಎತ್ತುಗಳು ಹೆದರಿಕೊಂಡು ಅಡ್ಡಾದಿಡ್ಡಿ ಒಡಾಡಿದ್ದರಿಂದ ಆಯಾತಪ್ಪಿ ಅವರು ಕೆಳಗೆ ಬಿದ್ದಿದ್ದಾರೆ. ಇಂದು ಬೆಳಗ್ಗೆ ಬೆಲೆ ಏರಿಕೆ ವಿರೋಧಿಸಿ ಎತ್ತಿನ ಗಾಡಿಗಳಲ್ಲಿ …

Read More »

ಹೇಯ ಕೃತ್ಯ; ಮಹಿಳೆಯನ್ನು ಸಂಪೂರ್ಣ ಬೆತ್ತಲಾಗಿಸಿ ವಿಡಿಯೋ ಮಾಡಿ ಕಾಮುಕರು ವಿಕೃತಿ

ಯಾದಗಿರಿ: ರಾಜ್ಯದಲ್ಲೊಂದು ಬಿಹಾರ್​​ ಮಾದರಿಯಲ್ಲಿ ಹೇಯ ಕೃತ್ಯವೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರನ್ನು ಸಂಪೂರ್ಣ ಬೆತ್ತಲಾಗಿಸಿದ ಕಿಡಿಗೇಡಿಗಳ ಗುಂಪೊಂದು ವಿಡಿಯೋ ಮಾಡಿ ವಿಕೃತಿ ಮೆರೆದಿದೆ. ನಿಮ್ಮ ಕಾಲು ಮುಗಿತೀನಿ ಬಿಡಿ ಎಂದರೂ ಕ್ಯಾರೇ ಎನ್ನದೆ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಂಗಾಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಯಾವುದೋ ಮಾರ್ಗ ಮಧ್ಯೆ ಖಾಲಿ ಜಮೀನೊಂದರಲ್ಲಿ ಕಗ್ಗತ್ತಲಲ್ಲಿ ಮಹಿಳೆಯನ್ನು ಥಳಿಸಿ ವಿಡಿಯೋ ಮಾಡಲಾಗಿದೆ. ಹಲ್ಲೆಕೋರರ ಗುಂಪೇ …

Read More »

ಬಾಲಕಿಗೆ ಲೈಂಗಿಕ ಕಿರುಕುಳ: ಆರೋ‍ಪಿ ಸೆರೆಹಿಡಿದ ಸ್ಥಳೀಯರು

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ದಲ್ಲಿ ಬೆಂಗಳೂರು ಕಲಾಸಿಪಾಳ್ಯದ ಆರೀಫ್ ಪಾಷಾ(30) ಎಂಬಾತನನ್ನು ಇಲ್ಲಿನ ಕಲ್ಕಟ್ಟದಲ್ಲಿ ಭಾನುವಾರ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಫೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಬಂಧಿತನು ಕೂಲಿ ಕಾರ್ಮಿಕ ನಾಗಿದ್ದು, ತಿನಿಸು ನೀಡುವುದಾಗಿ ಹೇಳಿ ಪರಿಚಿತ ವ್ಯಕ್ತಿಯೊಬ್ಬರ ಮಗಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದನು. ಆತನ ಕೃತ್ಯಕ್ಕೆ ಹೆದರಿ ಬಾಲಕಿ ಓಡಿ ಬಂದಿದ್ದು, ಅದೇ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ …

Read More »

ನಿಯಂತ್ರಣ ತಪ್ಪಿ ಪಲ್ಟಿಯಾದ ಸಾರಿಗೆ ಸಂಸ್ಥೆಯ ಬಸ್​- ಅದೃಷ್ಟವಶಾತ್ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್

ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್​ ಪಲ್ಟಿಯಾದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ.   ಹುಬ್ಬಳ್ಳಿ-ಇಳಕಲ್ ಮಾರ್ಗದ ಸಾರಿಗೆ ಸಂಸ್ಥೆಯ ಬಸ್ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ್ದು, ಏಕಾಏಕಿ ಪಲ್ಟಿಯಾಗಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಬಸ್ ಪಲ್ಟಿಯಾದ ಮೇಲೆ ಗ್ಲಾಸ್ ಒಡೆದು ಹೊರಗಡೆ ಬಂದ್ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣ …

Read More »

700 ಅಡಿಕೆ ಮರಗಳನ್ನು ಕಡಿದು ಹಾಕಿದ್ದ ಆರೋಪಿಯನ್ನ 5 ಗಂಟೆಗಳಲ್ಲಿ ಬಂಧಿಸಿದ ಪೊಲೀಸ್

ಹಾವೇರಿ: ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ಬರೋಬ್ಬರಿ 700 ಅಡಿಕೆ ಮರಗಳನ್ನು ಕತ್ತರಿಸಿದ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಐದು ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರೈತ ಸಹೋದರರ ಮನೆಯಲ್ಲಿ ಬಾಡಿಗೆ ಇದ್ದವನೇ ಗಿಡಗಳನ್ನು ಕಡಿದಿರುವ ಆರೋಪಿ ಎನ್ನಲಾಗಿದೆ. ರಾಜಾಸಬ ಹೊಸಮನಿ ಎಂಬಾತನನ್ನು ಬಂಧಿಸಲಾಗಿದ್ದು ಈತ ತೋಟದಲ್ಲಿ ಬಂದ ಫಸಲಲ್ಲಿ ಶೇರ್ ಕೊಡುವಂತೆ ಕೇಳಿದ್ದನಂತೆ. ಈ ವಿಚಾರಕ್ಕೆ ರೈತರು ಹಾಗೂ ಆರೋಪಿ ನಡುವೆ ಜಗಳವಾಗಿತ್ತು.. ಈ ಹಿನ್ನಲೆ ರಾಜಾಸಾಬ ಹೊಸಮನಿಯನ್ನ ಮನೆ …

Read More »

ಹಂಸಲೇಖ, ನಾನು ಗುಡ್ ಫ್ರೆಂಡ್ಸ್ ಅಲ್ಲವೇ ಅಲ್ಲ’ ಎಂದು ಹೇಳಿ ಅಚ್ಚರಿ ಮೂಡಿಸಿದ ರವಿಚಂದ್ರನ್

ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಮತ್ತು ಖ್ಯಾತ ಸಂಗೀತ ಸಂಯೋಜಕ ಹಂಸಲೇಖ ಅವರ ಸಂಬಂಧದ ಕುರಿತು ಟಿವಿ9ನೊಂದಿಗೆ ಮಾತನಾಡಿದ್ದಾರೆ. ಈ ವೇಳೆ ನಾವೀರ್ವರೂ ಉತ್ತಮ ಗೆಳೆಯರೇ ಅಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಹಾಗಾದರೆ ಅವರೀರ್ವರ ಸಂಬಂಧ ಹೇಗಿತ್ತು? ವಿಡಿಯೊ ನೋಡಿ ಕನ್ನಡ ಬೆಳ್ಳಿತೆರೆಯಲ್ಲಿ ತಮ್ಮ ಸೂಪರ್ ಹಿಟ್ ಕಾಂಬಿನೇಷನ್​ನಿಂದ ಗಮನ ಸೆಳೆದ ಜೋಡಿಗಳಲ್ಲಿ ರವಿಚಂದ್ರನ್ ಹಾಗೂ ಹಂಸಲೇಖ ಪ್ರಮುಖರು. ದೃಶ್ಯ 2 ಚಿತ್ರದ ಬಿಡುಗಡೆಯ ಸಂದರ್ಭದಲ್ಲಿಮಾತನಾಡಿರುವ ರವಿಚಂದ್ರನ್ ಹಳೆಯ ದಿನಗಳನ್ನು …

Read More »

ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಇನ್ನೂ ಮೂರು ದಿನಗಳ ಕಾಲ …

Read More »

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನ

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ.   ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ, ವರ್ಗಾವಣೆ ದಂಧೆ ಕುರಿತು ಪ್ರಸ್ತಾವಿಸುವುದಾಗಿ ವಿಪಕ್ಷ ಕಾಂಗ್ರೆಸ್‌ ಘೋಷಿಸಿದ್ದು, ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಮಧ್ಯೆ ವಾಕ್ಸಮರ, ಆರೋಪ – ಪ್ರತ್ಯಾರೋಪ, ಬಿಸಿ ಬಿಸಿ ಚರ್ಚೆಗೆ ವೇದಿಕೆಯಾಗಲಿದೆ.   6 …

Read More »

ಅಡುಗೆ ಎಣ್ಣೆ ಸುಂಕ ಇಳಿಕೆ:4ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ: ಗುಂಡೂರಾವ್ ವ್ಯಂಗ್ಯ

ಬೆಂಗಳೂರು : ಹಬ್ಬಗಳ ಋತುವಿನಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದ ಬೆನ್ನಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಮೋದಿ ಸರ್ಕಾರ ಹಬ್ಬಕ್ಕೆ ಜನಸಾಮಾನ್ಯರಿಗೆ ಕೊಟ್ಟ ಬಹುದೊಡ್ಡ ಕೊಡುಗೆಯಿದು ಎಂದು ಹೇಳಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಧ್ವನಿಯಲ್ಲಿ ಟೀಕೆ ಮಾಡಿದ ಗುಂಡೂರಾವ್, ಕೇಂದ್ರ ಸರ್ಕಾರ ಅಡುಗೆ …

Read More »