ಬೆಂಗಳೂರು: ಮೊದಲು ಕಾಂಗ್ರೆಸ್ನ್ನು ಸೋಲಿಸಬೇಕೆಂದು ಹೇಳಿದ್ದ ನಟ ಹಾಗೂ ಹೋರಾಟಗಾರ ಚೇತನ್ ಕುಮಾರ್, ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಟೀಕಿಸಿದ್ದಾರೆ. ಕುಟುಂಬ ರಾಜಕಾರಣದ ವಿಚಾರವನ್ನಿಟ್ಟುಕೊಂಡು, ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಟ್ವೀಟ್ ಮಾಡಿರುವ ಚೇತನ್, ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಮತ್ತು ಸ್ವಜನ ಪಕ್ಷಪಾತಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಆರೋಪಿಸಿದ್ದಾರೆ. 1959 ರಲ್ಲಿ ಜವಾಹರಲಾಲ್ ನೆಹರೂ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಅವರ …
Read More »ಸೂತ್ರಧಾರಿ ಪಟ್ಟ ಅಳಿಯುತ್ತದೆ, ಸೂತ್ರಧಾರಿ ಸರಕಾರವನ್ನು ನಡೆಸುತ್ತಾನೆ: ಕೋಡಿಶ್ರೀಗಳ ಭವಿಷ್ಯ
ಕಳೆದ ಒಂದೂವರೆ ತಿಂಗಳಲ್ಲಿ ಕೋಡಿಮಠದ ಶ್ರೀಗಳು ಮತ್ತೊಮ್ಮೆ ಭವಿಷ್ಯವನ್ನು ನುಡಿದಿದ್ದಾರೆ. ಸಾಮಾನ್ಯವಾಗಿ, ಹಿಂದೂಗಳ ಹಬ್ಬದ ಸಂದರ್ಭಗಳಲ್ಲಿ ಭವಿಷ್ಯ ನುಡಿಯುವ ಶ್ರೀಗಳು, ಈಗ ತಾವು ಭಾಗವಹಿಸುವ ಧಾರ್ಮಿಕ ಕಾರ್ಯಕ್ರಮದ ನಂತರ ಕೂಡಾ ಭವಿಷ್ಯವನ್ನು ನುಡಿಯಲಾರಂಭಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಶ್ರೀಗಳು, ‘ಸೂತ್ರಧಾರಿ ಪಟ್ಟ ಅಳಿಯುತ್ತದೆ’ ಎಂದು ಹೇಳಿದ್ದು, ಒಂದು ತಿಂಗಳ ಹಿಂದೆ ಅವರು ಹೇಳಿದ ಭವಿಷ್ಯಕ್ಕೂ ಈಗ ಹೇಳುತ್ತಿರುವ ಭವಿಷ್ಯಕ್ಕೂ ತಾಳೆಯಾಗುತ್ತಿಲ್ಲ ಎನ್ನುವುದು ಗಮನಿಸಬೇಕಾದ ವಿಚಾರ. …
Read More »ಸಚಿವರಾದ ಪ್ರಹ್ಲಾದ್ ಜೋಶಿ, ತೋಮರ್ ಗೆ ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಹೊಣೆ?
ಅಹ್ಮದಾಬಾದ್: ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾಣಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಗುಜರಾತ್ ನ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ ಇಬ್ಬರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ನರೇಂದ್ರ ಸಿಂಗ್ ತೋಮರ್ ಅವರನ್ನು ಭಾನುವಾರ (ಸೆ.12) ಕಳುಹಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ದಿಢೀರ್ ರಾಜೀನಾಮೆ ನೀಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ರಾಜ್ಯಪಾಲರಿಗೆ ರಾಜೀನಾಮೆ …
Read More »ಮೈಸೂರು ಗ್ಯಾಂಗ್ ರೇಪ್ ಪ್ರಕರಣ, ವಿಶೇಷ ಪ್ಯಾಸಿಕ್ಯೂಟರ್ ನೇಮಕ
ಶಿವಮೊಗ್ಗ : ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಶೀಘ್ರ ತನಿಖೆ ನಡೆಸಲು ವಿಶೇಷ ಪ್ಯಾಸಿಕ್ಯೂಟರ್ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಂತ್ರಸ್ತೆ ಪೋಷಕರ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ. ಅಗತ್ಯಬಿದ್ದರೆ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ. ಈ ಕುರಿತು ತನಿಖೆ ನಡೆಸಲು ಮುಂದಿನ ದಿನಗಳಲ್ಲಿ ವಿಶೇಷ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
Read More »ಧಾರವಾಡಿ ಎಮ್ಮೆ ತಳಿಗೆ ಸಿಕ್ಕಿತು ರಾಷ್ಟ್ರೀಯ ಮಾನ್ಯತೆ; ಈ ಎಮ್ಮೆಗೆ ಎಷ್ಟೆಲ್ಲಾ ವೈಶಿಷ್ಟ್ಯಗಳಿವೆ ಗೊತ್ತಾ?
ಧಾರವಾಡ(ಸೆ.12): ಧಾರವಾಡ ಪೇಡಾ ಅಂದ್ರೆ ಸಾಕು ಎಲ್ಲರ ಬಾಯಲ್ಲೂ ನೀರು ಬರುತ್ತೆ. ಇದರಿಂದಲ್ಲದೇ ಇಂದು ಧಾರವಾಡ ಪೇಡಾದ ಖ್ಯಾತಿ ವಿಶ್ವಮಟ್ಟಕ್ಕೇರಿದೆ. ಈ ಪೇಡಾ ಸ್ವಾದಿಷ್ಟಕ್ಕೆ ಕಾರಣವೇ ಧಾರವಾಡದ ಎಮ್ಮೆಯ ಹಾಲು. ಧಾರವಾಡ ಪೇಡಾದಂತೆಯೇ ಧಾರವಾಡದ ಎಮ್ಮೆಗೂ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಸಿಕ್ಕಿದೆ. ಹೌದು, ಇಷ್ಟು ದಿನ ಕೇವಲ ಧಾರವಾಡಕ್ಕೆ ಮಾತ್ರವೇ ಸೀಮಿತವಾಗಿದ್ದ ಧಾರವಾಡದ ಸ್ಥಳೀಯ ಎಮ್ಮೆ ತಳಿಗೆ ಈಗ ದೇಸಿ ತಳಿಯ ಸ್ಥಾನಮಾನ ನೀಡಲಾಗಿದೆ. ವಿಶೇಷ ತಳಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಸಿಕ್ಕಾಗ …
Read More »ಕಾಂಗ್ರೆಸಿಗರು 2 ದಶಕ ಅಧಿಕಾರಕ್ಕೆ ಬರುವ ಕನಸು ಕಾಣಬೇಡಿ: ನಳಿನ್
ಬೆಳ್ತಂಗಡಿ: ಕಾಂಗ್ರೆಸ್ಸಿಗರು ಇನ್ನೆರಡು ದಶಕಗಳ ಕಾಲ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದೇ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ಕುಮಾರ್ ಕಟೀಲ್ ತಿಳಿಸಿದರು. ಧರ್ಮಸ್ಥಳದಲ್ಲಿ ಶನಿವಾರ 161ನೇ ಬೂತ್ ಸಮಿತಿಯ ಅಧ್ಯಕ್ಷರ ಮನೆಗೆ ಬಿಜೆಪಿ ನಾಮಫಲಕ ಅಳವಡಿಸಿದ ಬಳಿಕ ಅವರು ಮಾತನಾಡಿದರು. ರಾಜ್ಯ ಸರಕಾರ ಎಲ್ಲರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಯ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಇಂತಹ ಕಾರ್ಯಗಳು ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯ ಎಂದರು. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನಡೆಸಿಕೊಂಡು ಬಂದಿದ್ದ ಕೀಳುಮಟ್ಟದ …
Read More »ಸ್ಮಾರ್ಟ್ ಸಿಟಿ ಕಾಮಗಾರಿ ವರ್ಷದಲ್ಲಿ ಪೂರ್ಣ: ಗೋವಿಂದ ಕಾರಜೋಳ
ಬೆಳಗಾವಿ: ‘ನಗರದಲ್ಲಿ ಸ್ಮಾರ್ಟ್ ಸಿಟಿ ಕೆಲಸಗಳನ್ನು ಇನ್ನೊಂದು ವರ್ಷದಲ್ಲಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ‘ಕೇಂದ್ರ ಮತ್ತು ರಾಜ್ಯದಲ್ಲಿನ ನಮ್ಮ ಸರ್ಕಾರವು ಅನೇಕ ಜನಪರ ಯೋಜನೆಗಳಿಂದ ಜನರ ವಿಶ್ವಾಸ ಗಳಿಸಿದೆ. ರಾಜ್ಯದಲ್ಲಿ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾರಿಗೊಳಿಸಿದ ಅಭಿವೃದ್ಧಿ ಕಾರ್ಯಗಳು, ಇಲ್ಲಿನ ಎಲ್ಲ ನಾಯಕರು ಒಗ್ಗೂಡಿ ಶ್ರಮ ವಹಿಸಿದ ಪ್ರತಿಫಲದಿಂದ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟ …
Read More »ಮಧ್ಯಾಹ್ನದ ಬಿಸಿ ಊಟದ ಯೋಜನೆ ಆಡಿಟ್ ಮಾಡು ಕೇಂದ್ರ ಸರ್ಕಾರ ನಿರ್ಧಾರ
ನವದೆಹಲಿ: ಕೊರೋನಾದಿಂದಾಗಿ ಮಾರ್ಚ್, 2020 ರಿಂದ ಶಾಲೆಗಳು ಬಂದ್ ಆಗಿದ್ದು, ಮಧ್ಯಾಹ್ನದ ಬಿಸಿ ಊಟದ ಯೋಜನೆಯ ವಿವರವಾದ ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅದರ ಅಡಿಯಲ್ಲಿ ಆಹಾರ ಭದ್ರತೆ ಭತ್ಯೆಯ ಭಾಗವಾಗಿ ಮಕ್ಕಳಿಗೆ ಆಹಾರ ಧಾನ್ಯಗಳು ಮತ್ತು ಅಡುಗೆ ವೆಚ್ಚವನ್ನು ರಾಜ್ಯಗಳಿಗೆ ನೀಡಲಾಗುತ್ತದೆ. ಕಳೆದ ಒಂದೂವರೆ ವರ್ಷದಲ್ಲಿ ಕೇಂದ್ರವು ಯೋಜನೆಯ ಫಲಾನುಭವಿಗಳಾದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗೆ ತಲಾ 100 …
Read More »ಮಹಿಳಾ ಉದ್ಯೋಗಿಗೆ ಮತ್ತು ಬರಿಸಿ ಚಲಿಸುವ ಕಾರ್ ನಲ್ಲೇ ಗ್ಯಾಂಗ್ ರೇಪ್; ಐವರು ಅರೆಸ್ಟ್
ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಪೊಲೀಸರು ಚಲಿಸುತ್ತಿದ್ದ ಕಾರ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐದು ಮಂದಿಯನ್ನು ಬಂಧಿಸಿದ್ದಾರೆ. ಮೊಬೈಲ್ ಫೋನ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ 20 ವರ್ಷದ ಮಹಿಳೆ ಪರಿಚಯಸ್ಥ ವ್ಯಕ್ತಿಯನ್ನು ಭೇಟಿಯಾಗಲು ತೆರಳಿದ್ದು, ಈ ವೇಳೆ ಆಕೆಗೆ ಮತ್ತು ಬರುವ ಪಾನೀಯ ನೀಡಿದ ಪರಿಚಯಸ್ಥ ತನ್ನ ಸ್ನೇಹಿತರೊಂದಿಗೆ ಸೇರಿ ಚಲಿಸುವ ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ. ಕಾಂಚಿಪುರಂ ನಗರದ ರಸ್ತೆಗಳಲ್ಲಿ ಆರೋಪಿಗಳು ಆಕೆಯ ಮೇಲೆ ಕಾರ್ ನಲ್ಲೇ ಸಾಮೂಹಿಕ …
Read More »ಜತೆ ಮಹಿಳಾ ಕಾನ್ಸ್ಟೇಬಲ್ ಅಶ್ಲೀಲತೆ, ಮಗನ ದುರ್ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರಿಗೂ ಶಾಕ್!
ಜೈಪುರ: ಮಹಿಳಾ ಕಾನ್ಸ್ಟೇಬಲ್ ಜತೆ ಸ್ವಿಮ್ಮಿಂಗ್ಪೂಲ್ನಲ್ಲಿ ಅಶ್ಲೀಲ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ರಾಜಸ್ಥಾನದ ಉಪ ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅಶ್ಲೀಲ ವಿಡಿಯೋ ವೈರಲ್ ಆದ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ. ಡಿಎಸ್ಪಿ ಹಿರಾಲಾಲ್ ಸೈನಿ ಮತ್ತು ಮಹಿಳಾ ಕಾನ್ಸ್ಟೇಬಲ್ ಸ್ವಿಮ್ಮಿಂಗ್ ಪೂಲ್ ಒಳಗಡೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಇದು ಅವರ ಖಾಸಗಿ ವಿಚಾರವಾದರೂ ಸೈನಿ ಇನ್ನೊಂದು ಘೋರ ಅಪರಾಧವನ್ನು ಎಸಗಿದ್ದಾರೆ. ಮಹಿಳಾ ಸಿಬ್ಬಂದಿಯ ಮಗನ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಇದಕ್ಕೆ …
Read More »
Laxmi News 24×7