ಪಾಲಿಕೆಗೆ ಗೆದ್ದವರ ಸಂಪೂರ್ಣ ವಿವರ ಇಲ್ಲಿದೆ. 1 ಇಕ್ರಾ ಮುಲ್ಲಾ – ಸ್ವತಂತ್ರ 2 ಮುಜಾಮಿಲ್ ಡೋನಿ -ಕಾಂಗ್ರೆಸ್ 3 ಜ್ಯೋತಿ ಕಡೋಲ್ಕರ್ -ಕಾಂಗ್ರೆಸ್ 4 ಜಯತೀರ್ಥ ಸೌದತ್ತಿ -ಬಿಜೆಪಿ 5 ಅಫ್ರಿಜಾ ಮುಲ್ಲಾ -ಕಾಂಗ್ರೆಸ್ 6 ಸಂತೋಷ್ ಪೆಡ್ನೇಕರ್ -ಬಿಜೆಪಿ 7 ಶಂಕರ್ ಪಾಟೀಲ್ -ಸ್ವತಂತ್ರ 8 ಸೊಹೈಲ್ ಸಂಗೋಲಿ -ಕಾಂಗ್ರೆಸ್ 9 ಪೂಜಾ ಪಾಟೀಲ್ -ಸ್ವತಂತ್ರ 10 ವೈಶಾಲಿ ಬಾತ್ಕಾಂಡೆ -ಸ್ವತಂತ್ರ 11 ಸಮಿಯುಲ್ಲಾ ಮಾಡಿವಾಲೆ -ಕಾಂಗ್ರೆಸ್ …
Read More »20 ವರ್ಷಗಳಿಂದ ಒಂದೇ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂಜನಿಯರ್ ಕೊನೆಗೂ ಎತ್ತಂಗಡಿ
ಬೆಳಗಾವಿ: ಕಳೆದ ಹಲವು ವರ್ಷಗಳಿಂದ ಒಂದೇ ಜಾಗದಲ್ಲಿ ಜಾಂಡ ಹೂಡಿದ್ದ ಎಂಜನಿಯರ್ನನ್ನು 20 ವರ್ಷಗಳ ಬಳಿಕ ಕೊನೆಗೂ ಎತ್ತಂಗಡಿ ಮಾಡಲಾಗಿದೆ. ಎಸ್.ಆರ್ .ಚೌಗಲಾ ಎಂಬ ದಿನಗೂಲಿ ಎಂಜನಿಯರ್, 1995ರಲ್ಲಿ ದಿನಗೂಲಿ ಆಧಾರದ ಮೇಲೆ ಜ್ಯೂನಿಯರ್ ಇಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಬಳಿಕ ಚೌಗಲಾ ತಮ್ಮ ಪ್ರಭಾವ ಬಳಸಿ ಇಪ್ಪತ್ತು ವರ್ಷಗಳಿಂದ ಬಹುತೇಕ ಕಾಲ ರಾಯಭಾಗ ತಾಲೂಕಿನಲ್ಲಿ ಕೆಲಸ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಕುಡಚಿ ಪುರಸಭೆ, ರಾಯಭಾಗ ಪಟ್ಟಣ ಪಂಚಾಯಿತಿ, ಮುಗಳಖೋಡ, …
Read More »ಬೆಳಗಾವಿಯಲ್ಲಿ ಬಿಜೆಪಿ, ಕಾಂಗ್ರೆಸ್ ಗೆ ಮೊದಲ ಗೆಲುವು
ಬೆಳಗಾವಿ – ಬೆಳಗಾವಿಯ 2 ವಾರ್ಡ್ ಗಳ ಫಲಿತಾಂಶ ಪ್ರಕಟವಾಗಿದೆ. ವಾರ್ಡ್ 15ರಲ್ಲಿ ಬಿಜೆಪಿಯ ನೇತ್ರಾವತಿ ಭಾಗ್ವತ್, ಮತ್ತು ವಾರ್ಡ್ 3ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿ ಕಡೋಲ್ಕರ್ ಗೆಲುವು ಸಾಧಿಸಿದ್ದಾರೆ. ವಾರ್ಡ್ 11ರಲ್ಲಿ ಸಹ ಕಾಂಗ್ರೆಸ್ ಮುನ್ನಡೆಯಲ್ಲಿದೆ. ನೇತ್ರಾವತಿ 40 ಮಗಳಿಂದ ಗೆಲುವು ಸಾಧಿಸಿದ್ದಾರೆ, ಜ್ಯೋತಿ ಹೆಚ್ಚಿನ ಅಂತರದಿಂದ ಗೆದ್ದಿದ್ದಾರೆ. ಬಹುತೇಕ ವಾರ್ಡ್ ಗಳಲ್ಲಿ ಪಕ್ಷೇತರರು ಮನ್ನಡೆಯಲ್ಲಿದ್ದಾರೆ.
Read More »ಕೇಂದ್ರ ಸರ್ಕಾರಕ್ಕೆ ಬಿಗ್ ಶಾಕ್: ರೈತ ಹೋರಾಟಕ್ಕೆ ಬಿಜೆಪಿ ಸಂಸದ ಬೆಂಬಲ
ದೆಹಲಿ: ʼಅವರು ನಮ್ಮದೇ ಮಾಂಸ ಮತ್ತು ರಕ್ತ’ ಎಂದು ರೈತರ ಪ್ರತಿಭಟನೆಗೆ ಪಿಲಿಭಿತ್ ನ ಬಿಜೆಪಿ ಸಂಸದ ವರುಣ್ ಗಾಂಧಿ ಬೆಂಬಲ ನೀಡಿದ್ದಾರೆ. ಬಿಜೆಪಿ ಸಂಸದರಾಗಿದ್ದರೂ ಕೇಂದ್ರ ಸರಕಾರವನ್ನು ಗುರಿಯಾಗಿಸಿಕೊಂಡು ವರುಣ್ ಗಾಂಧಿ ಕಿಸಾನ್ ಮಹಾ ಪಂಚಾಯತ್ ಅನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ರೈತರೊಂದಿಗೆ ಮಾತುಕತೆಗೆ ಮರುಪ್ರವೇಶಿಸಲು ಕೇಂದ್ರಕ್ಕೆ ಮನವಿ ಮಾಡಿದ್ದಾರೆ. “ಮುಜಾಫರ್ ನಗರದಲ್ಲಿ ಇಂದು ಲಕ್ಷಾಂತರ ರೈತರು ಪ್ರತಿಭಟನೆಯಲ್ಲಿ ಜಮಾಯಿಸಿದ್ದಾರೆ. ಅವರು ನಮ್ಮದೇ ಮಾಂಸ ಮತ್ತು ರಕ್ತ. ನಾವು ಅವರೊಂದಿಗೆ …
Read More »ಸಾಲದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಾಲದ ಹೊರೆ ಇಳಿಸಲಿದೆ ಸರ್ಕಾರ -ಹೊಲದಲ್ಲೇ ಸಾಲ ವಿತರಣೆ
ಬೆಂಗಳೂರು: ರೈತರ ಸಾಲದ ಹೊರೆ ಇಳಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮದುವೆ, ಕಾಯಿಲೆ ಮೊದಲಾದ ಕಾರಣಗಳಿಂದ ರೈತರಲ್ಲಿ ಸಾಲದ ಹೊರೆ ಹೆಚ್ಚಾಗುತ್ತಿದ್ದು, ಇದನ್ನು ಇಳಿಸಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಹೇಳಿದ್ದಾರೆ. ದೇಶದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗಿದೆ. ರೈತರ ಮಕ್ಕಳ ಶಿಕ್ಷಣ, ಮದುವೆ, ಕುಟುಂಬದ ಆರೋಗ್ಯ ಮೊದಲಾದವುಗಳಿಗೆ ಹೆಚ್ಚಿನ ಖರ್ಚು …
Read More »ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ …
Read More »ಅಂಗನವಾಡಿ ಸಹಾಯಕಿ ಪತಿಯಿಂದ ಆಹಾರ ಧಾನ್ಯ ಕಳ್ಳಸಾಗಾಟ
ತುಮಕೂರು: ಅಂಗನವಾಡಿ ಆಹಾರ ಸಾಮಾಗ್ರಿಗಳ ಕಳ್ಳಸಾಗಾಟ ಮಾಡುತ್ತಿದ್ದ ಅಂಗನವಾಡಿ ಸಹಾಯಕಿ ಪತಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ತಿಪಟೂರು ತಾಲ್ಲೂಕಿನ ಹುಚ್ಚನಹಳ್ಳಿ ಗ್ರಾಮ ಅಂಗನವಾಡಿ ಸಹಾಯಕಿ ಚೈತ್ರಾ ಪತಿ ಅಶೋಕ್ ಆಹಾರ ಧಾನ್ಯಗಳ ಕಳವು ಮಾಡುತ್ತಿದ್ದ. ಇಂದು ಆಹಾರ ಧಾನ್ಯಗಳನ್ನು ಕಳವು ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಮಕ್ಕಳಿಗಾಗಿ ನೀಡಿದ್ದ ತೊಗರಿಬೇಳೆ, ಕಡ್ಲೆಬೀಜ, ಕಡ್ಲೆಬೇಳೆ, ಹಾಲಿನ ಪಾಕೇಟ್, ಸಕ್ಕರೆಯನ್ನು ಬೈಕ್ ನಲ್ಲಿ ಸಾಗಿಸುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.
Read More »ಮೈಸೂರು ಆಯ್ತು, ಇದೀಗ ಕಲಬುರಗಿಯಲ್ಲಿ ಪೈಶಾಚಿಕ ಕೃತ್ಯ -ಡ್ರಾಪ್ ಕೊಡೋ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಮೊನ್ನೆ ಮೊನ್ನೆಯಷ್ಟೇ ಮೈಸೂರು ಆಯ್ತು. ಇದೀಗ ಕಲಬುರಗಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಒಂಟಿ ಮಹಿಳೆಯ ಮೇಲೆ ಕಾಮ ಪಿಶಾಚಿ ಒಬ್ಬ ಅತ್ಯಾಚಾರವೆಸಗಿರೋ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡ್ರಾಪ್ ಕೊಡೋ ನೆಪದಲ್ಲಿ ಒಂಟಿ ಮಹಿಳೆ ಮೇಲೆ ಪೈಶಾಚಿಕ ಕೃತ್ಯ ಎಸಗಿದ ಆರೋಪಿ ನಾಗರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ..? ಕಳೆದ ಮೇ 24ರಂದು ಸರ್ಕಾರ ಲಾಕ್ಡೌನ್ ಘೋಷಿಸಿತ್ತು. ಈ ಹಿನ್ನೆಲೆ ಸಾರಿಗೆ ಸಂಚಾರ ಸ್ಥಗಿತಗೊಂಡಿತ್ತು. ಸರ್ಕಾರಿ ಕಚೇರಿಯಲ್ಲಿ ಕಂಪ್ಯೂಟರ್ …
Read More »ಶಿಕ್ಷಕರಿಗಾಗಿ ದೇವಸ್ಥಾನವನ್ನೇ ಕಟ್ಟಿಸಿದ ಗ್ರಾಮಸ್ಥರು -ಮನೆ ಮನೆಗೆ ತೆರಳಿ ಅಕ್ಷರ ಕ್ರಾಂತಿ ಮಾಡಿದ್ದ ಮಾಸ್ಟರ್
ಐತಿಹಾಸಿಕಸ್ಥಳಗಳು, ಸ್ವಾತಂತ್ರ್ಯ ಹೋರಾಟಗಾರರು, ಅನೇಕ ಸಾಹಿತಿಗಳು, ಕವಿಪುಂಗವರನ್ನು ಕೊಟ್ಟಂತಹ ಜಿಲ್ಲೆ ವಿಜಯಪುರ. ಇದೀಗ, ಈ ಜಿಲ್ಲೆಯು ಕಲ್ಲನ್ನು ಕೆತ್ತಿ ಸುಂದರ ಶಿಲ್ಪಿಯನ್ನಾಗಿಸೋ ಶಕ್ತಿ ಇರೋ ಶಿಕ್ಷಕರನ್ನು ಸಹ ನೀಡಿದೆ. ಗುರುಬ್ರಹ್ಮ, ಗುರುವಿಷ್ಣು, ಗುರುದೇವೋ ಮಹೇಶ್ವರ, ಗುರುಸಾಕ್ಷಾತ್ ಪರಬ್ರಹ್ಮ, ತಸ್ಮೈಶ್ರೀ ಗುರುವೇ ನಮಃ ಎಂಬ ಮಾತು, ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಅಕ್ಷರಶಃ ನಿಜವಾಗಿದೆ. ಗುಮ್ಮಟನಗರಿ ಜನರು ಶಿಕ್ಷಕರ ಮೇಲಿನ ಅಪಾರ ಪ್ರೀತಿಯಿಂದಾಗಿ, ರೇವಣಸಿದ್ದಪ್ಪ ಮಾಸ್ತರಿಗಾಗಿ ಒಂದು ಗುಡಿಯನ್ನೇ ನಿರ್ಮಿಸಿದ್ದಾರೆ. ಇಂದಿಗೂ …
Read More »ಹಾರ, ತುರಾಯಿ ನಿಷೇಧದ ಆದೇಶ ಉಲ್ಲಂಘಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದ ಆದೇಶವನ್ನು ಸ್ವತಃ ಉಲ್ಲಂಘಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದರು. ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ಬೆಲೆಯ ಉಡುಗೊರೆ ನೀಡುವುದನ್ನು ನಿಷೇಧಿಸಿ ಮುಖ್ಯಮಂತ್ರಿಯವರು ಕೆಲ ದಿನಗಳ ಹಿಂದೆ ಆದೇಶ ಹೊರಡಿಸಿದ್ದರು. ಹಾರ, ತುರಾಯಿ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು …
Read More »
Laxmi News 24×7