Breaking News

ರಾಜ್ಯ

ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿ.

ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್‍ಐಆರ್ ದಾಖಲಾಗದಿರುವುದು ನಾಚಿಕೆಗೇಡಿನ ವಿಚಾರ. ಆದಷ್ಟು ಬೇಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಮಾಧ್ಯಮದವರ ಜೊತೆ ಮಾತನಾಡಿ, ಗೃಹ ಮಂತ್ರಿಗಳು ತಮ್ಮ ಮೇಲೆ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ ಎಂಬ …

Read More »

ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೇ ಸಂಚಾರ, ಮಹಾರಾಷ್ಟ್ರ ಗಡಿಯಲ್ಲಿ ಕಾಟಾಚಾರದ ಚೆಕಿಂಗ್

ಚಿಕ್ಕೋಡಿ: ಶೀಘ್ರದಲ್ಲೇ ಕೊರೊನಾ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹೀಗಾಗಿ ಸರ್ಕಾರ ಮಹಾರಾಷ್ಟ್ರ ಗಡಿಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಕೊರೊನಾ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಬಿಡಬೇಕೆಂದು ಆದೇಶಿಸಿದೆ. ಆದರೆ ಚೆಕ್ ಪೋಸ್ಟ್‍ಗಳಲ್ಲಿ ಕಾಟಾಚಾರಕ್ಕೆ ಚೆಕ್ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರ ವಲಯದಲ್ಲಿ ಮಹಾರಾಷ್ಟ್ರದ ಗಡಹಿಂಗ್ಲಜ್ ತಾಲೂಕಿನ ಗಡಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್‍ನಲ್ಲಿ ಅಧಿಕಾರಿಗಳು ಕಾಟಾಚಾರಕ್ಕೆ ಎನ್ನುವಂತೆ …

Read More »

Bagalkot 105 ಕೆ.ಜಿ.ಯ ಚೀಲ ಹೊತ್ತು 1 ಕಿ.ಮೀ. ದೀರ್ಘದಂಡ ನಮಸ್ಕಾರ ಹಾಕಿದ 19ರ ಯುವಕ

ಬಾಗಲಕೋಟೆ: ಕುರಿಗಾಹಿ 19 ವರ್ಷದ ಯುವಕ ಬರೋಬ್ಬರಿ 105 ಕೆ.ಜಿ.ತೂಕದ ಚೀಲವನ್ನು ಬೆನ್ನ ಮೇಲೆ ಹೊತ್ತು 1 ಕಿ.ಮೀ.ವರೆಗೆ ದೀರ್ಘದಂಡ ನಮಸ್ಕಾರ ಹಾಕಿ ಹುಬ್ಬೇರಿಸುವಂತೆ ಮಾಡಿದ್ದಾನೆ. ಜಿಲ್ಲೆಯ ಬಾದಾಮಿ ತಾಲೂಕಿನ ಕರಡಿಗುಡ್ಡ ಎಸ್.ಎ ಗ್ರಾಮದ 19 ವರ್ಷದ ಕುರಿಗಾಹಿ ಯುವಕ ಆನಂದ್ ಗಳಕ್ಕನವರ್ ವಿಶಿಷ್ಟ ಸಾಧನೆ ಮಾಡಿ ಜನರ ಮನಸ್ಸನ್ನ ಗೆದ್ದಿದ್ದಾರೆ. ಯುವಕ ಬರೋಬ್ಬರಿ 105 ಕೆ.ಜಿ. ತೂಕದ ಚೀಲವನ್ನು ಬೆನ್ನ ಮೇಲೆ ಹೊತ್ತು, ಯಾರ ಸಹಾಯವೂ ಇಲ್ಲದೆ, ದಾರಿಯುದ್ದಕ್ಕೂ …

Read More »

ಒಂದೇ ಕುಟುಂಬದ ನಾಲ್ವರು ಕಾರು ಸಮೇತ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಕಾರಿನ ಜೊತೆಗೆ ನೀರಿಗೆ ಹಾರಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಸಂಭವಿಸಿದೆ. ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಅದರಲ್ಲಿ ಇಬ್ಬರು ನೀರು ಪಾಲಾಗಿದ್ದಾರೆ. ಇನ್ನಿಬ್ಬರು ಪಾರಾಗಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ ಭದ್ರಾವತಿ ತಾಲೂಕಿನ ಹಳೇ ಜೆ.ಡಿ.ಕಟ್ಟೆಯವರು. ಸದ್ಯ ತರೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಾಲ್ವರು ಸ್ವಿಫ್ಟ್ ಕಾರಿನ ಸಮೇತ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಲ್ಲಿ ಪತಿ ಮಂಜು, ಅತ್ತೆ ಸುನಂದಮ್ಮ ನೀರು …

Read More »

ವಸಿಷ್ಠ ಕೋ-ಆಪರೇಟಿವ್ ಬ್ಯಾಂಕ್‌ ವಂಚನೆ ಪ್ರಕರಣ ಅಧಿಕೃತವಾಗಿ ಸಿಐಡಿಗೆ ಹಸ್ತಾಂತರ

ಕಳೆದ 10 ವರ್ಷಗಳಿಂದ ಈ ಸೊಸೈಟಿ ಚಾಲ್ತಿಯಲ್ಲಿತ್ತು. ಅದರ ನಂಬಿಕೆ ಆಧಾರದ ಮೇಲೆ ಜನ ಹೆಚ್ಚು ಹೆಚ್ಚಾಗಿ ಇತ್ತೀಚೆಗೆ ಠೇವಣಿಗಳನ್ನು ಇಡತೊಡಗಿದ್ದರು. ಜನರ ಆ ಅಮಾಯಕ ನಂಬಿಕೆಯನ್ನೇ ಆಧಾರವಾಗಿಸಿಕೊಂಡು ಹಣ ಕ್ರೋಢೀಕರಣವಾಗುತ್ತಿದ್ದಂತೆ ಸೊಸೈಟಿ ಕಡೆಯಿಂದ ವಂಚನೆ ನಡೆದಿದ್ದು, ಇಬ್ಬರು ಪರಾರಿಯಾಗಿದ್ದರು. ಬೆಂಗಳೂರು: ವಸಿಷ್ಠ ಕೋ-ಆಪರೇಟಿವ್ ಬ್ಯಾಂಕ್‌ ವಂಚನೆ ಪ್ರಕರಣದ ತನಿಖೆ ಸಿಐಡಿಗೆ ಅಧಿಕೃತ ಹಸ್ತಾಂತರವಾಗಿದೆ. ಹನುಮಂತನಗರ ಠಾಣೆ ಪೊಲೀಸರು ಸಿಐಡಿಗೆ ಇಂದು (ಆಗಸ್ಟ್ 26) ಅಧಿಕೃತವಾಗಿ ಪ್ರಕರಣದ ತನಿಖೆಯನ್ನು ಮುಂದುವರೆಸುವಂತೆ …

Read More »

ರಾಯಚೂರಿನಲ್ಲಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 59 ಮಕ್ಕಳ ರಕ್ಷಣೆ

ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದ ಸುಮಾರು 59 ಮಕ್ಕಳನ್ನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಮತ್ತು ಸಿರವಾರ ಕ್ರಾಸ್ ಬಳಿ ರಕ್ಷಣೆ ಮಾಡಲಾಗಿದೆ. ಜೊತೆಗೆ ಬಾಲ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ 5 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ರಾಯಚೂರು: ಸರ್ಕಾರ 14 ವರ್ಷದವರೆಗೆ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು. ಜೊತೆಗೆ ಈ ಅವಧಿಯಲ್ಲಿ ಮಕ್ಕಳು ದುಡಿಯುವಂತಿಲ್ಲ ಎಂದು ಭಾರತ ಸಂವಿಧಾನ ತಿಳಿಸಿದೆ. ತಮ್ಮ ತಮ್ಮ ಮನೆಗಳಲ್ಲಿ ಕೆಲಸಗಳನ್ನು ಮಾಡಬಹುದು. ಆದರೆ ಒತ್ತಾಯದಿಂದ ಕೆಲಸಕ್ಕೆ …

Read More »

ಕಾರಾಗೃಹಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ವಿರುದ್ದ ಕಠಿಣ ಕ್ರಮ: ಆರಗ ಜ್ಞಾನೇಂದ್ರ

ಬೆಂಗಳೂರು: ಕಾರಾಗೃಹಗಳಲ್ಲಿ ಯಾವುದೇ ತರಹದ ಅಕ್ರಮ ಚಟುವಟಿಕೆಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಕಾರಾಗೃಹ ಕಚೇರಿಗೆ ಇಂದು ಭೇಟಿ ನೀಡಿ ಕಾರಾಗೃಹ ಗಳ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರಾಗೃಹಗಳಲ್ಲಿ ಅನಧಿಕೃತವಾಗಿ ಹಾಗೂ ಕಾನೂನುಬಾಹಿರವಾಗಿ ಕೈದಿಗಳು ಮಾದಕ ವಸ್ತುಗಳ ನ್ನು ಪಡೆದುಕೊಳ್ಳುತ್ತಿರುವ ಹಾಗೂ ಹೊರ ಜಗತ್ತಿನೊಂದಿಗೆ ವ್ಯವಹರಿಸಲು ಫೋನ್ ಸೌಲಭ್ಯ …

Read More »

ಸೂಪರ್ ಮಾರ್ಕೆಟ್ ತಿಂಡಿ ಮೇಲೆ ಉಗುಳಿದ್ದ ಮಹಿಳೆಗೆ ಜೈಲು

ಕೊರೊನಾ, ಇಡೀ ವಿಶ್ವದ ಚಿತ್ರಣವನ್ನು ಬದಲಿಸಿದೆ. ಇಡೀ ಜಗತ್ತು ಕೊರೊನಾ ಭಯದಲ್ಲಿದೆ. ಕೊರೊನಾದಿಂದ ಹೊರ ಬರಲು ಎಲ್ಲ ಪ್ರಯತ್ನ ನಡೆಯುತ್ತಿದೆ. ಈ ಮಧ್ಯೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಕೊರೊನಾ ಸೋಂಕು ಹರಡಲು ಮುಂದಾಗಿದ್ದ ಅಮೆರಿಕಾ ಮಹಿಳೆಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೊರೊನಾ ಹರಡಲು ಮುಂದಾಗಿದ್ದ ಮಹಿಳೆಯ ಈ ಪ್ರಯತ್ನ ಅತ್ಯಂತ ಅಪಾಯಕಾರಿ ಮತ್ತು ಅಸಹ್ಯಕರವಾಗಿತ್ತು. ಪೆನ್ಸಿಲ್ವೇನಿಯಾದ ಸೂಪರ್‌ ಮಾರ್ಕೆಟ್‌ನಲ್ಲಿ ಮಹಿಳೆ ಉದ್ದೇಶಪೂರ್ವಕವಾಗಿ ಆಹಾರಕ್ಕೆ ಎಂಜಲು ಹಾಕಿದ್ದಳು. ಕಫವನ್ನು …

Read More »

ಸುಪ್ರೀಂಕೋರ್ಟ್ʼಗೆ ನೂತನ ಒಂಬತ್ತು ನ್ಯಾಯಾಧೀಶರ ನೇಮಕ

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ನೇಮಕಾತಿ ವಾರಂಟ್ʼಗಳಿಗೆ ಸಹಿ ಹಾಕಿದ್ದು, ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಾಧೀಶರನ್ನ ಗುರುವಾರ ಸುಪ್ರೀಂ ಕೋರ್ಟ್ʼಗೆ ನೇಮಿಸಲಾಗಿದೆ. ಉನ್ನತ ನ್ಯಾಯಾಲಯದ ಹೊಸ ನ್ಯಾಯಾಧೀಶರಲ್ಲಿ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರು ಸೆಪ್ಟೆಂಬರ್ 2027ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ (CJI) ಆಗಲಿದ್ದಾರೆ. ನ್ಯಾಯಮೂರ್ತಿ ಬೆಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ …

Read More »

ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

    ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ನವದೆಹಲಿಯ ಕರ್ನಾಟಕ ಭವನಕ್ಕೆ ಜಾರಕಿಹೊಳಿ ಸಹೋದರರು ಆಗಮಿಸಿದ್ದಾರೆ. ನಾವು ಬೇರೆ ಕೆಲಸದ ವಿಚಾರವಾಗಿ ನವದೆಹಲಿಗೆ ಬಂದಿದ್ದೇವೆ. ಸಿಎಂ ಬಂದಿದ್ದಾರೆಂದು ಗೊತ್ತಾಯ್ತು. ಹಾಗಾಗಿ, ಭೇಟಿಗೆ ಆಗಮಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಹೋಗುತ್ತೇವೆ. ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿ​ಗೆ ಸಚಿವ ಸ್ಥಾನ …

Read More »