ಚಿಕ್ಕೋಡಿ: ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ ಎಂದು ವಿದ್ಯಾರ್ಥಿಗಳಲ್ಲಿ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳಿಂದ ಇಂದಿನಿಂದ ಶಾಲಾ ಕಾಲೇಜುಗಳನ್ನ ಆರಂಭಿಸಲಾಗಿದ್ದು, ಯಾವುದೇ ಭಯ, ಆತಂಕವಿಲ್ಲದೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕು. ಇಂದಿನಿಂದ ಶಾಲಾ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಗುಡಸ್ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬುವ ಕಾರ್ಯ ಮಾಡಿದರು. ಕೊರೊನಾ ಕುರಿತು ಸಕಲ ಮುನ್ನೆಚ್ಚರಿಕೆ …
Read More »ಪಕ್ಷ ಸಂಘಟನೆಗೆ ಮಮತಾ ಬ್ಯಾನರ್ಜಿಯೇ ಸ್ಫೂರ್ತಿ: ಎಚ್.ಡಿ. ಕುಮಾರಸ್ವಾಮಿ
ಹುಬ್ಬಳ್ಳಿ: ‘ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನನಗೆ ಸ್ಫೂರ್ತಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಎಂಸಿಯ ಸುಮಾರು 60ರಿಂದ 70 ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಿತು. ಆದರೂ, ಮಮತಾ ಅವರು ಏಕಾಂಗಿಯಾಗಿ ಹೋರಾಡಿ ಚುನಾವಣೆಯಲ್ಲಿ ಮತ್ತೆ ಗೆದ್ದು ಬಂದರು. ಪಕ್ಷ ಕಟ್ಟಲು ಅವರಿಗಿಂತ ಸ್ಫೂರ್ತಿ ಬೇಕೇ’ ಎಂದರು. …
Read More »ಕೋವಿಡ್ ನಿಂದ ರೈಲ್ವೆಗೆ 36000 ಕೋಟಿ ನಷ್ಟ
ಮುಂಬೈ: ಕೊರೊನಾದಿಂದಾಗಿ ಭಾರತೀಯ ರೈಲ್ವೆ ಇಲಾಖೆಗೆ 36,000 ಕೋಟಿ ರೂಪಾಯಿ ನಷ್ಟವಾಗಿರುವುದಾಗಿ ರೈಲ್ವೆ ಇಲಾಖೆ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಹೇಳಿದ್ದಾರೆ. ಸರಕು ರೈಲುಗಳೇ ನಮಗೆ ನಿಜವಾದ ಆದಾಯ ತಂದು ಕೊಡುತ್ತಿರುವುದು ಎಂದು ಅವರು ತಿಳಿಸಿದ್ದಾರೆ. ಭಾನುವಾರದಂದು ಮಹಾರಾಷ್ಟ್ರದ ಜಲ್ನಾ ರೈಲು ನಿಲ್ದಾಣದ ಅಂಡರ್ ಪಾಸ್ ಗುದ್ದಲಿ ಪೂಜೆ ನೆರವೇರಿಸಿದ ಅವರು, “ಪ್ಯಾಸೆಂಜರ್ ರೈಲುಗಳಿಂದ ಯಾವಾಗಲೂ ಲಾಭ ಸಿಗುವುದಿಲ್ಲ. ಟಿಕೆಟ್ ದರ ಹೆಚ್ಚಿಸಿದರೆ ಜನರಿಗೆ ತೊಂದರೆಯೆಂದು ದರ ಹೆಚ್ಚಳ ಮಾಡಿಲ್ಲ. ಕೊರೊನಾದಿಂದಾಗಿ ಇಲಾಖೆಗೆ …
Read More »ಮುಂದುವರಿದ ಕಾಬುಲ್ ಕಾರ್ಮೋಡ: ಏರ್ಪೋರ್ಟ್ನಲ್ಲಿ ಸಾವಿರಾರು ಜನರು ಅತಂತ್ರ; ಹಿಂಸೆ ನಡುವೆಯೂ ದೇಶ ತೊರೆಯಲು ಯತ್ನ
ಐಸಿಸ್ ದಾಳಿ ಆತಂಕ ತಾಲಿಬಾನಿಗಳ ಪೈಶಾಚಿಕ ಆಳ್ವಿಕೆಗೆ ಹೆದರಿ ಕಾಬುಲ್ ವಿಮಾನ ನಿಲ್ದಾಣಕ್ಕೆ ಜನಪ್ರವಾಹವೇ ಹರಿದುಬರುತ್ತಿದೆ. ಬಹುತೇಕರು ಅನ್ನಾಹಾರವಿಲ್ಲದೆ ನಿತ್ರಾಣರಾಗಿದ್ದಾರೆ. ಈ ನಡುವೆ, ಐಸಿಸ್ ಉಗ್ರರು ಏರ್ಪೋರ್ಟ್ ಮೇಲೆ ದಾಳಿ ನಡೆಸಬಹುದು ಎಂಬ ಸುಳಿವು ಸಿಕ್ಕ ಕಾರಣ, ಅವರ ದಾರಿ ತಪ್ಪಿಸುವುದಕ್ಕಾಗಿ ವಿಮಾನದಲ್ಲಿರುವ ಹೀಟ್-ಸೀಕಿಂಗ್ ಟೆಕ್ನಾಲಜಿಯನ್ನು ಬಳಸಿ ಜ್ವಾಲೆ ಉಗುಳುವಂತೆ ಮಾಡಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಹಾರಾಟ ಸ್ಥಗಿತವಾಗಿದ್ದರೂ, ಸೇನಾ ವಿಮಾನಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಲು ಧಾವಂತ ಎಲ್ಲರಲ್ಲೂ …
Read More »ನಮ್ಮವರು ಪಾರು : ಅಫ್ಘಾನ್ನಿಂದ 392 ಮಂದಿ ವಾಪಸ್; ಕಾರ್ಯಾಚರಣೆಗೆ ಯಶ
ಕಾಬೂಲ್/ಹೊಸದಿಲ್ಲಿ/ಲಂಡನ್: ಅಫ್ಘಾನಿಸ್ಥಾನದಲ್ಲಿ ತಾಲಿಬಾನಿ ಕಪಿಮುಷ್ಠಿ ಯಿಂದ 392 ಮಂದಿ ಭಾರತೀಯರನ್ನು ಪಾರು ಮಾಡಿ ಸ್ವದೇಶಕ್ಕೆ ಕರೆತರುವಲ್ಲಿ ಭಾರತ ಸರಕಾರ ಯಶಸ್ವಿಯಾಗಿದೆ. ಈ ಪೈಕಿ ಏಳು ಮಂದಿ ಕನ್ನಡಿಗರಿದ್ದಾರೆ. ಮೂವರು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸ್ವದೇಶಾಗಮನಕ್ಕೆ ಸಿದ್ಧರಾಗಿದ್ದಾರೆ. ಅಫ್ಘಾನಿಸ್ಥಾನವು ತಾಲಿಬಾನ್ ವಶವಾಗಿ 8 ದಿನಗಳು ಕಳೆದಿವೆ. ರವಿವಾರದ ವರೆಗೆ ಒಟ್ಟು 392 ಮಂದಿ ಭಾರತಕ್ಕೆ ಆಗಮಿಸಿದ್ದಾರೆ. ಇವರಲ್ಲಿ 23 ಮಂದಿ ಅಫ್ಘಾನಿ ಹಿಂದೂಗಳು ಮತ್ತು ಸಿಕ್ಖರಿದ್ದಾರೆ. ರವಿವಾರ 257 ಮಂದಿ ಆಗಮಿಸಿದ್ದಾರೆ. 168 …
Read More »ಗೋವಾದಲ್ಲಿ ಆಲ್ಕೋಹಾಲ್ ಮ್ಯೂಸಿಯಂ!
ಪಣಜಿ: ಪ್ರವಾಸಿ ರಾಜ್ಯ ಗೋವಾದಲ್ಲಿ ಮೊದಲ ಆಲ್ಕೋಹಾಲ್ ಮ್ಯೂಸಿಯಂ ತೆರೆಯಲಾಗಿದೆ. ಸ್ಥಳೀಯ ವಿಶೇಷ ಮದ್ಯವೆನಿಸಿಕೊಂಡಿರುವ ಫೆನ್ನಿಯ ಪ್ರಸಿದ್ಧತೆಯನ್ನು ದೇಶ ವಿದೇಶಕ್ಕೆ ಹರಡಿಸುವ ಉದ್ದೇಶದೊಂದಿಗೆ ಈ ಮ್ಯೂಸಿಯಂ ತೆರೆಯಲಾಗಿದೆ. ಉದ್ಯಮಿ ನಂದನ್ ಕುಡcಡ್ಕರ್ “ಆಲ್ ಎಬೌಟ್ ಆಲ್ಕೋಹಾಲ್’ ಹೆಸರಿನ ಮ್ಯೂಸಿಯಂ ತೆರೆದಿದ್ದಾರೆ. ಕಾಂಡೋಲಿಮ್ ಬೀಚ್ ಗ್ರಾಮದ ಬಳಿ ಈ ಮ್ಯೂಸಿಯಂ ಇದೆ. ಇದರಲ್ಲಿ ವಿಶೇಷವಾಗಿ ಪೆನ್ನಿಗೆ ಸಂಬಂಧಪಟ್ಟ ಸಾಮಗ್ರಿಗಳನ್ನು ಪ್ರದರ್ಶಿಸಲಾಗುವುದು. ಹಿಂದಿನ ಕಾಲದಲ್ಲಿ ಪೆನ್ನಿಯನ್ನು ಸಂಗ್ರಹಿಸುಡುತ್ತಿದ್ದ ಬೃಹದಾಕಾರದ ಹೂಜಿಗಳು, ಪೆನ್ನಿಗೆ ಸಂಬಂಧಿಸಿದ …
Read More »ನಡುರಾತ್ರಿ ರಂಗೇರಿದ ಬೆಳಗಾವಿ ರಾಜಕೀಯ: ಪಾಲಿಕೆ ಚುನಾವಣೆಗೆ ಕೈ-ಕಮಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಳಗಾವಿ: ಬೆಳಗಾವಿಯ ಮಹಾನಗರ ಪಾಲಿಕೆಯ ಚುನಾವಣೆಯ ಕಾವು ರಂಗೇರುತ್ತಿದೆ. ಸೆಪ್ಟೆಂಬರ್ 3 ರಂದು 58 ವಾರ್ಡ್ಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ನಡುರಾತ್ರಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿವೆ. ಬಿಜೆಪಿಯಿಂದ ರಾತ್ರಿ ತುರ್ತು ಸುದ್ದಿ ಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಾಸಕ ಅಭಯ್ ಪಾಟೀಲ್, ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ 21 ಜನರ ಅಭ್ಯರ್ಥಿಗಳ ಮೊದಲ ಹಂತದ ಮೊದಲ …
Read More »ಬೆಳಗಾವಿ :ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ 28 ಜನರ ಬಂಧನ ನಗದು ಜಪ್ತಿ: ಡಿಸಿಪಿ ವಿಕ್ರಂ ಅಮಟೆ
ಬೆಳಗಾವಿ– ಮೂರು ಕಡೆಗಳಲ್ಲಿ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 28 ಜನರನ್ನು ಬಂಧಿಸಿದ್ದಾರೆ. ಈ ಕುರಿತು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾ್ರೆ. ದಿ. 21/08/2021 ರಂದು ರಾತ್ರಿ ಅಂಬೇಡ್ಕರ ನಗರದ ಸಾವ೯ಜನಿಕ ಸ್ಥಳದಲ್ಲಿ ಕುಳಿತುಕೊಂಡು ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಣಕ್ಕೆ ಕಟ್ಟಿ ಅಂದರ ಬಾಹರ್ ಅನ್ನುವ ಜುಗಾರ ಆಟ ಆಡುತ್ತಿರುವವರ ದಾಳಿ ಮಾಡಿದ್ದು, ದಾಳಿ ಕಾಲಕ್ಕೆ 10 ಜನ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ. ಅವರಿಂದ …
Read More »ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದರು; ಸ್ಥಳದಲ್ಲೇ ಸಾವಿಗೀಡಾದ ದಂಪತಿ
ಆನೇಕಲ್: ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತ ಎರಡು ಜೀವಗಳನ್ನು ಬಲಿ ಪಡೆದಿದ್ದು, ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದಂತಾಗಿದೆ. ಆನೇಕಲ್ ತಾಲೂಕಿನ ಚೂಡಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯ ನಿವಾಸಿಗಳಾದ ಮುನಿರಾಜಾಚಾರಿ (55), ಅಕ್ಕಯಮ್ಮ (50) ಮೃತಪಟ್ಟ ದಂಪತಿ. ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಇವರು ದ್ವಿಚಕ್ರವಾಹನದಲ್ಲಿ ಆನೇಕಲ್ ತಾಲೂಕಿನ ಚೂಡಹಳ್ಳಿಗೆ ಹೋಗಿದ್ದರು. ಚೂಡಗಾನಹಳ್ಳಿ ಬಳಿ ಎದುರುಗಡೆಯಿಂದ ಬರುತ್ತಿದ್ದ ತಮಿಳುನಾಡು …
Read More »‘2ಎ’ಗೆ ಪಂಚಮಸಾಲಿ ಸೇರ್ಪಡೆಗೆ ವಿರೋಧ
ತುಮಕೂರು: ಹಿಂದುಳಿದ ಪ್ರವರ್ಗ 2ಎಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಸೇರ್ಪಡೆಮಾಡಿ, ಮೀಸಲಾತಿ ಕಲ್ಪಿಸಬಾರದು. ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಜನರ ಮುಂದಿಡಬೇಕು ಎಂದು ಅತಿ ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಒಮ್ಮತದಿಂದ ಒತ್ತಾಯಿಸಿದರು. ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ನೇತೃತ್ವದಲ್ಲಿ ಶನಿವಾರ ನಡೆದ ಹಿಂದುಳಿದ ವರ್ಗಗಳ ಜಾಗೃತಿ ಸಭೆಯಲ್ಲಿ ಮಾತನಾಡಿದ ಮುಖಂಡರು, ‘ಸದಾಶಿವ ಆಯೋಗದ ವರದಿಯಲ್ಲಿ ಒಳಮೀಸಲಾತಿ ಪ್ರಸ್ತಾಪಿಸಿ ರುವ ಮಾದರಿಯಲ್ಲಿ ಹಿಂದುಳಿದ …
Read More »
Laxmi News 24×7