ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಕ್ಕಳ ಆರೋಗ್ಯತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿ, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ …
Read More »ಗೋವಾದಲ್ಲಿ ಜಾರಿಗೆ ತಂದ ‘ಹರ್ ಘರ್ ನಲ್’ ಯೋಜನೆ ಸಂಪೂರ್ಣ ವಿಫಲ : ಮಹಾದೇವ್ ನಾಯ್ಕ ವಾಗ್ದಾಳಿ
ಪಣಜಿ: ಮುಂಬರುವ ಐದು ವರ್ಷಗಳಲ್ಲಿ ಗೋವಾ ರಾಜ್ಯದಲ್ಲಿನ ಪ್ರತಿಯೊಂದು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆಯೇ…? ಎಂಬುದನ್ನು ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರಿಂದ ಖಚಿತಪಡಿಸಿಕೊಳ್ಳಲು ಸಾಧ್ಯವೇ..? ಮಳೆಗಾಲದಲ್ಲಂತೂ ಗೋವಾ ರಾಜ್ಯದ ಜನರು ಕೊಳಕು ಕುಡಿಯುವ ನೀರಿನ ಪೂರೈಕೆಯಿಂದ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಾವಂತ್ ರವರ ಹರ್ ಘರ್ ನಲ್ ಯೋಜನೆ ಸಂಪೂರ್ಣ ವಿಫಲವಾಗಿದ್ದು, ಜನರು ಕುಡಿಯುವ ನೀರಿಗಾಗಿ ಬಾವಿಗಳನ್ನು ಅವಲಂಭಿಸಿರುವಂತಾಗಿದೆ ಎಂದು ಆಮ್ ಆದ್ಮಿ ನಾಯಕ ಮಹಾದೇವ್ ನಾಯ್ಕ ವಾಗ್ದಾಳಿ …
Read More »ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು-ನೀರು ಬಿಡಲು ಬಿಜೆಪಿ ತೀರ್ಮಾನ!
ಬೆಂಗಳೂರು: ಪಕ್ಷ ಸಂಘಟನೆ ಬಲಪಡಿಸುವುದು, ಗುಂಪುಗಾರಿಕೆ, ಜಾತಿಯತೆ ಆರ್ಭಟ ತಡೆಯುವ ಉದ್ದೇಶದಿಂದ ಇನ್ನು ಮುಂದೆ ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು- ನೀರು ಬಿಡಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರ ಕಾಲದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿತ್ತು. ಪಕ್ಷದ ಸಂಘಟನೆ ಗಿಂತಲೂ ಹೆಚ್ಚಾಗಿ, ಯಡಿಯೂರಪ್ಪ ಅವರನ್ನು ನಿಯಂತ್ರಣ ಮಾಡುವ ಉದ್ದೇಶವೇ ಇದರಲ್ಲಿ ಅಡಗಿತ್ತು ಎಂಬುದು ಬಿಜೆಪಿಯ ಮೂಲಗಳಿಂದಲೇ ಸ್ಪಷ್ಟವಾಗಿದೆ. ಯಡಿಯೂರಪ್ಪ ಅವರ …
Read More »ಉಲ್ಟಾ ಮಚ್ಚೆ ಹೇಳಿಕೆ ನಿಜವಾಗಲಿ; ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ; ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಹೇಳುತ್ತಾರೆ ಅದು ಉಲ್ಟಾ ಆಗುತ್ತೆ, ಅವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ ಎಂದಿದ್ದಾರೆ. ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಚಿವರಾಗಲಿ ಎಂದು ಹಾರೈಸುತ್ತೇನೆ. ಆ ಮೂಲಕ ನನ್ನ ನಾಲಿಗೆ ಮೇಲೆ ಉಲ್ಟಾ …
Read More »ಆಫ್ಘಾನ್ನಿಂದ ತಾಯ್ನಾಡಿಗೆ 120 ಮಂದಿ ಭಾರತೀಯರು- ರಣಾಂಗಣದಂತಾದ ಅಫ್ಘಾನಿಸ್ತಾನದಿಂದ ರಕ್ಷಣೆಯೇ ರೋಚಕ
ಅಫ್ಘಾನಿಸ್ತಾನವನ್ನ ಇದೀಗ ತಾಲಿಬಾನಿಗಳು ವಶಪಡಿಸಿಕೊಂಡು ತಮ್ಮದೇ ಸರ್ಕಾರ ರಚಿಸಲು ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಮಾನವ ಹಕ್ಕುಗಳಿಗೆ ಮಾರಕವಾದ ಸಿದ್ಧಾಂತಗಳನ್ನ ನಂಬಿರುವ ತಾಲಿಬಾನಿಗಳು ಅಫ್ಘಾನಿಸ್ತಾನದ ಜನರನ್ನ ಹಿಂಸಿಸಲು ಮುಂದಾಗಬಹುದು ಎಂಬ ಆತಂಕ ಜಗತ್ತಿನಾದ್ಯಂತ ಮನೆಮಾಡಿದೆ. ಈ ಮಧ್ಯೆ ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಒಬ್ಬರ ಮಾತುಗಳು ಎಂಥವರ ಹೃದಯವನ್ನೂ ಹಿಂಡುವಂತಿದೆ. : ಸರ್ಕಾರಿ ಅಧಿಕಾರಿಗಳಿಗೆ ‘ಸಾರ್ವತ್ರಿಕ ಕ್ಷಮಾದಾನ’ ಕೋರಿದ ತಾಲಿಬಾನಿಗಳು ತಾಲಿಬಾನಿಗಳು ನನ್ನನ್ನು ಕೊಲ್ತಾರೆ, ನಮ್ಮ ಕುಟುಂಬವನ್ನು ಕೊಲ್ತಾರೆ.. …
Read More »ಏನೇ ಮಾಡಿದರೂ ನೇರವಾಗಿ ಮಾಡುತ್ತೇನೆ; ಸ್ಪೀಕರ್ ಭೇಟಿ ಅವಶ್ಯಕತೆಯಿಲ್ಲ; ಆನಂದ್ ಸಿಂಗ್
ಕಾರವಾರ: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಡುವ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ತಮ್ಮ ಮುಂದಿನ ನಡೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ನಾನು ಮಾತಿನ ಮೇಲೆ ನಿಲ್ಲುವ ವ್ಯಕ್ತಿ. ಕೆಲವರ ಟೀಕೆಗಳಿಗೆ ಪ್ರತಿಕ್ರಿಯಿಸಲು ಇಚ್ಛಿಸಲ್ಲ. ನನ್ನ ಆತ್ಮಸಾಕ್ಷಿಗೆ ನಾನು ಉತ್ತರ ಕೊಡಬೇಕಾಗಿದೆ ಎಂದು ಹೇಳಿದರು. ಇಂದು ಸ್ಪೀಕರ್ ಕಾಗೇರಿ …
Read More »ಇನ್ನು 4 ದಿನಗಳಲ್ಲಿ ಎಲ್ಲವೂ ನಿರ್ಧಾರ; ಶಾಸಕ ಶ್ರೀಮಂತ ಪಾಟೀಲ್
ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ. ನಾನು ಕೆಳಗೆ ಬರೋದಿಲ್ಲ. ಮೇಲಿನ ಸ್ಥಾನ ಕೊಟ್ಟರೆ ನಿಭಾಯಿಸುವೆ. ಅದು ಪಕ್ಷಕ್ಕೂ ಸರಿ ಅಲ್ಲ, ನನಗೂ ಸರಿಯಲ್ಲ ಅಂತ ಬೆಳಗಾವಿಯಲ್ಲಿ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಹೇಳಿದ್ದಾರೆ. ಇನ್ನು ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ, ಸಾಕಷ್ಟು ಸಮಯವಿದೆ, ಸಚಿವ ಸ್ಥಾನ ಕೊಡಬಹುದು. ಮರಾಠಾ ಸಮುದಾಯದವರು ಬೇಸರ ಮಾಡಿಕೊಳ್ಳಬೇಡಿ. 4 ದಿನದಲ್ಲಿ …
Read More »ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. …
Read More »ಕಾಡಾಪೂರ ಗ್ರಾಮದಲ್ಲಿ ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಅಂಕಲಿ ಗ್ರಾಮದಲ್ಲಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ
ಅಂಕಲಿ : ಅತ್ಯಂತ ಪ್ರತಿಕೂಲ ಸನ್ನಿವೇಶದಲ್ಲೂ ತಮ್ಮ ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ಯೋಧರಯ ನಮ್ಮ ದೇಶದ ಅಮೂಲ್ಯ ಆಸ್ತಿ ಅತಂಹ ಗಡಿ ಕಾಯುವ ಕರ್ತವ್ಯ ನಿರಂತ ಯೋಧನ ತಾಯಿಯ ಮೇಲೆ ಐದಾರು ಜನ ಹಲ್ಲೆ ಮಾಡಿದ್ದಾರೆ. ಅವರುಗಳ ವಿರುದ್ಧ ಸಾಮಾನ್ಯವಾದ ಪ್ರಕರಣವನ್ನು ಫೋಲಿಸ್ ಅಧಿಕಾರಿಗಳು ದಾಖಲು ಮಾಡಿದ್ದಾರೆಂದು ಮಾಜಿ ಸೈನಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಧ್ಯಕ್ಷರಾದ ಕೆ. ಶಿವಾನಂದ ಆರೋಪಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆಯ …
Read More »ಪ್ರಿಯಕರ ಜೊತೆಗೂಡಿ ಮತ್ತೊಬ್ಬ ಪ್ರಿಯಕರನನ್ನು ಕೊಂದ ಪ್ರೇಯಸಿ
ಪ್ರಿಯಕರನ ಜೊತೆಗೂಡಿ ಮತ್ತೊಬ್ಬ ಪ್ರಿಯಕರನನ್ನು ಪ್ರೇಯಸಿಯೊಬ್ಬಳು ಕೊಂದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ರಾಮಚಂದ್ರಪುರದಲ್ಲಿ ನಡೆದಿದೆ. ಹಿಂದೂಪುರ ಮೂಲದ ಫುಜೈಲ್ ಖಾನ್ ಪ್ರೇಯಸಿ ಪ್ರಮೀಳಾ ಮತ್ತು ಆಕೆಯ 2ನೇ ಪ್ರಿಯಕರ ಸುರೇಶ್ ನಿಂದ ಕೊಲೆಯಾದ ವ್ಯಕ್ತಿ. ಸುರೇಶ್ ಜೊತೆಗಿನ ಸಂಬಂಧಕ್ಕೆ ಅಡ್ಡಿಪಡಿಸಿದ್ದ ಹಿನ್ನೆಲೆಯಲ್ಲಿ ಫುಜೈಲ್ ಖಾನ್ ನನ್ನು ವಿಧುರಾಶ್ವತ್ಥ ರಾಮಚಂದ್ರಪುರದ ಅರಣ್ಯಕ್ಕೆ ಕರೆದೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಮದ್ಯದ ಬಾಟಲಿ ಹಗ್ಗದಿಂದ ಕತ್ತಿಗೆ ಬಿಗಿದು ಕೊಲೆ ಮಾಡಿ ಶವವನ್ನು …
Read More »
Laxmi News 24×7