Breaking News

ರಾಜ್ಯ

ಗಣೇಶ ಮೂರ್ತಿ ತಯಾರಿಕೆಯಿಂದ ಬದುಕು ಕಟ್ಟಿಕೊಂಡಿದ್ದವರು ಬೀದಿ ಪಾಲು

ರಾಯಚೂರು: ಕೊರೊನಾ ಮೂರನೇ ಅಲೆಯ ಆತಂಕ ಹಿನ್ನೆಲೆ ಸರ್ಕಾರ ಸಾಮೂಹಿಕ ಗಣೇಶೋತ್ಸವಕ್ಕೆ ನಿಷೇಧ ಹೇರಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ತಯಾರಿಕೆ , ಮಾರಾಟಕ್ಕಂತೂ ಸಂಪೂರ್ಣ ಬ್ರೇಕ್ ಬಿದ್ದಿದೆ. ಗಣೇಶ ಮೂರ್ತಿಗಳನ್ನು ತಯಾರಿಸಿ, ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ರಾಯಚೂರಿನ ಕೆಲ ಕುಟುಂಬಗಳು ಈಗ ಅಕ್ಷರಶಃ ಬೀದಿಗೆ ಬಂದಿವೆ. ನಗರದ ಲಿಂಗಸುಗೂರು ರಸ್ತೆ ಬಳಿ ಸುಮಾರು ವರ್ಷಗಳಿಂದ ಗಣೇಶ ಮೂರ್ತಿ, ಬೊಂಬೆಗಳನ್ನ ಮಾರಾಟ ಮಾಡಿ ಬದುಕು ಕಟ್ಟಿಕೊಂಡಿರುವ ರಾಜಸ್ಥಾನ ಮೂಲದ …

Read More »

ಪಾಪದ ಪ್ರಾಯಶ್ಚಿತಕ್ಕೆ ಶಶಿಕಲಾ ಜೊಲ್ಲೆಗೆ ಮೊಟ್ಟೆ ಖಾತೆ ಬಿಟ್ಟು, ದೇವರ ಖಾತೆ: ಸತೀಶ್ ಜಾರಕಿಹೊಳಿ ಲೇವಡಿ

ಬೆಳಗಾವಿ: ಶಶಿಕಲಾ ಜೊಲ್ಲೆ ಅವರಿಗೆ ಮೊಟ್ಟೆ ಖಾತೆ ಬಿಟ್ಟು ಜಪ ಮಾಡುವಂತೆ ದೇವರ ಖಾತೆ ಕೊಟ್ಟಿದ್ದಾರೆ. ಅವರು ಮಾಡಿದ ಪಾಪಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲು ಈ ಖಾತೆ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೊಟ್ಟೆ ಖಾತೆ ನೀಡದೇ ಇರುವುದು ಒಳ್ಳೆಯ ಸಂಗತಿ, ಬೇರೆ ಖಾತೆ ಕೊಟ್ಟಿದ್ದಾರೆ. ದೇವರ ಜಪ ಮಾಡಲಿ, ಅಲ್ಲಿ ಮಾಡಿದ ತಪ್ಪನ್ನು ಪ್ರಾಯಶ್ಚಿತ ಮಾಡಿಕೊಳ್ಳಲು, ಪೂಜೆ …

Read More »

ಇನ್ನಾದರೂ ಸುಳ್ಳು ಹೇಳುವುದನ್ನು ನಿಲ್ಲಿಸಿ’: ಶಾಸಕ ಶ್ರೀನಿವಾಸ್- ಸಂಸದ ಬಸವರಾಜ್ ಮಾತಿನ ಸಮರ

ತುಮಕೂರು: 500 ಕೋಟಿ ರೂಪಾಯಿ ಅನುದಾನ ವಿಚಾರವಾಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಮತ್ತು ಸಂಸದ ಜಿ.ಎಸ್.ಬಸವರಾಜ್ ನಡುವೆ ಮಾತಿನ ಜಟಾಪಟಿ ನಡೆದ ಪ್ರಸಂಗ ಶನಿವಾರ ನಡೆಯಿತು. ಗುಬ್ಬಿ ತಾಲೂಕಿನ ಸಿ. ನಂದಿಹಳ್ಳಿಯಲ್ಲಿ ಬೆಸ್ಕಾಂ ವಿದ್ಯುತ್ ಎಂಎಸ್‌ಎಸ್ ಘಟಕ ಉದ್ಘಾಟನಾ ಸಮಾರಂಭದ ವೇಳೆ ಈ ಘಟನೆ ನಡೆದಿದೆ. ಭಾಷಣ ಮಾಡುವ ವೇಳೆ ಸಂಸದ ಬಸವರಾಜು ಅವರು, ಚೇಳೂರು ಹೋಬಳಿಯಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಕೇಂದ್ರ ಸರ್ಕಾರದಿಂದ 550 ಕೋಟಿ …

Read More »

ಭದ್ರಾ ಮೇಲ್ದಂಡೆ ಶೀಘ್ರದಲ್ಲೇ ರಾಷ್ಟ್ರೀಯ ಯೋಜನೆಯಾಗಲಿದೆ: ಗೋವಿಂದ ಕಾರಜೋಳ

ಚಿತ್ರದುರ್ಗ, ಆಗಸ್ಟ್ 14: “ಮಧ್ಯ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಕಾಮಗಾರಿ ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ,” ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಬೆಂಗಳೂರಿನಿಂದ ದಾವಣಗೆರೆಗೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಆಗಬೇಕು ಎನ್ನುವುದು ನಿಮ್ಮ ಆಸೆ ಹಾಗೂ …

Read More »

ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿದ ತಮಿಳುನಾಡು ಸರ್ಕಾರ; ಕರ್ನಾಟಕದಲ್ಲಿ ಯಾವಾಗ?; ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪ್ರತಿ ಲೀಟರೆ ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿ ಆದೇಶಿಸಿದ್ದು, ತಮಿಳುನಾಡು ಸರ್ಕಾರ ಈ ನಿರ್ಧಾರವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಯಾವಾಗ ಎಂದು ಶುಕ್ರವಾರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪೆಟ್ರೋಲ್ ಮೇಲಿನ ಸುಂಕವನ್ನು ರೂ.3 ಇಳಿಸಿ ತಮಿಳುನಾಡು ಸರ್ಕಾರ ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ. ನಾನು …

Read More »

ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ, ಯಾವುದೇ ಸಂದರ್ಭದಲ್ಲಿ ಪತನ:ಸಿದ್ದರಾಮಯ್ಯ

ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ್, ರಾಮದಾಸ ಮತ್ತಿತರ ಶಾಸಕರು ದೆಹಲಿಗೆ ಹೋಗಿ ಬಂದು ಮಾಡುತ್ತಿದ್ದಾರೆ. ಹೀಗಾಗಿ ಈ ಸರ್ಕಾರ ಬಹಳ ದಿನ ಬಾಳುವುದಿಲ್ಲ ಎಂದರು. ಕೋವಿಡ್ ಮೂರನೇ …

Read More »

ಬಿರಿಯಾನಿ ಜಾಹೀರಾತಿನಲ್ಲಿ ಹಿಂದೂ ಸಂತರಿಗೆ ಅಪಮಾನ ಮಾಡಿದ ಬೆಳಗಾವಿಯ ಖಾಸಗಿ ಹೋಟೆಲ್​ ಹಿಂದೂ ಪರಿಷತ್ ಮತ್ತು ಭಜರಂಗ ದಳ ಸಂಘಟನೆಗಳು ಪೊಲೀಸರಿಗೆ ದೂರು ನೀಡಿವೆ.

ಬೆಳಗಾವಿಯ ಖಾಸಗಿ ಹೋಟೆಲ್​ ಒಂದು ಬಿರಿಯಾನಿ ಜಾಹೀರಾತಿನಲ್ಲಿ ಹಿಂದೂ ಸಂತರಿಗೆ ಅಪಮಾನ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಗಳು ಪೊಲೀಸರಿಗೆ ದೂರು ನೀಡಿವೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ವಿಕ್ರಂ ಆಮ್ಟೆ ಅವರಿಗೆ ದೂರು ಸಲ್ಲಿಕೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೋಟೆಲ್ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಾಹಿರಾತು ವಿವಾದ ಸೃಷ್ಟಿಸುತ್ತಿದ್ದಂತೆಯೇ ಪೋಸ್ಟ್ ಡಿಲೀಟ್ ಮಾಡಿ, ಹೊಟೆಲ್ ಕ್ಷಮೆಯಾಚಿಸಿದೆ.   …

Read More »

ಅಧಿವೇಶನ ಬೆಂಗಳೂರಲ್ಲಿಯೋ ಅಥವಾ ಬೆಳಗಾವಿಯಲ್ಲಿಯೋ ಎಂಬುದನ್ನೂ ಸರ್ಕಾರ ತಿಳಿಸಲಿದೆ.

ಬೆಂಗಳೂರು: “ರಾಜ್ಯಸಭೆಯಲ್ಲಿ ಈಚೆಗೆ ನಡೆದ ಘಟನೆ ಅತ್ಯಂತ ವಿಷಾದಕರ. ಹೊಣಗೇಡಿತನದಿಂದ ವರ್ತಿಸಿದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು’ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜ್ಯಸಭೆ ಸಭಾಪತಿ ಹಾಗೂ ಲೋಕಸಭಾಧ್ಯಕ್ಷರನ್ನು ಆಗ್ರಹಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಗಳು ಪ್ರಜಾಪ್ರಭುತ್ವದ ದೇಗುಲಗಳು. ಅಲ್ಲಿ ಈ ರೀತಿ ಬೇಜವಾಬ್ದಾರಿತನದಿಂದ ನಡೆದುಕೊಳ್ಳುವುದು ಅಕ್ಷಮ್ಯ. ಆದ್ದರಿಂದ ಈ ಸಂಬಂಧ ಕ್ರಮಕ್ಕೆ ಆಗ್ರಹಿಸಿ ಸಭಾಪತಿ ಹಾಗೂ ಸಭಾಧ್ಯಕ್ಷರು ಇಬ್ಬರಿಗೂ ಪತ್ರ ಬರೆಯಲಾಗುವುದು. ಅಗತ್ಯಬಿದ್ದರೆ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದು …

Read More »

ಟ್ವಿಟರ್‌ ಇಂಡಿಯಾ ಎಂಡಿ ಅಮೆರಿಕಕ್ಕೆ ಎತ್ತಂಗಡಿ

ನ್ಯೂಯಾರ್ಕ್‌: ಟ್ವಿಟರ್‌ ಇಂಡಿಯಾ ಮತ್ತು ಕೇಂದ್ರ ಸರ್ಕಾರ ನಡುವಿನ ಮುಸುಕಿನ ಗುದ್ದಾಟ ಮತ್ತೊಂದು ಘಟ್ಟ ತಲುಪಿದೆ. ಭಾರತದಲ್ಲಿ ಟ್ವಿಟರ್‌ ಕಾರ್ಯಾಚರಣೆ ನಿರ್ವಹಣೆಗೆ ಯಾವುದೇ “ಕಂಟ್ರಿ ಡೈರೆಕ್ಟರ್‌'(ದೇಶೀಯ ನಿರ್ದೇಶಕ)ರನ್ನು ನಿಯೋಜಿಸದೆ ಇರಲು ಸಾಮಾಜಿಕ ಜಾಲತಾಣ ಸಂಸ್ಥೆ ತೀರ್ಮಾನಿಸಿದೆ. ಟ್ವಿಟರ್‌ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಷ್‌ ಮಹೇಶ್ವರಿ ಅವರನ್ನು ಅಮೆರಿಕಕ್ಕೆ ದಿಢೀರ್‌ ಎತ್ತಂಗಡಿ ಮಾಡಿದೆ. ಅಲ್ಲದೆ, ಮನೀಷ್‌ಗೆ ಸ್ಯಾನ್‌ ಫ್ರಾನ್ಸಿಸ್ಕೋದ ಹಿರಿಯ ನಿರ್ದೇಶಕ ಹುದ್ದೆಯನ್ನೂ ನೀಡಲಾಗಿದೆ.   ಲೀಡರ್‌ಶಿಪ್‌ ಕೌನ್ಸಿಲ್‌ ಮಾರ್ಗದರ್ಶನದಂತೆ ಪ್ರಮುಖ …

Read More »

ಅವಾಚ್ಯ ಪದ ಬಳಕೆ ಮಾಡಿದ್ದು ಬಿ ಕೆ ಹರಿ ಪ್ರಸಾದ್‌ ವಿರುದ್ದ ಮಾತ್ರ ಎಂದ ಈಶ್ವರಪ್ಪ

ಶಿವಮೊಗ್ಗ: ಪ್ರಪಂಚದಲ್ಲಿ ಜನಾನುರಾಗಿ ನಾಯಕರಲ್ಲಿ ಪ್ರಧಾನಿ ಮೋದಿ ಸಹ ಒಬ್ಬರು. ಪ್ರಪಂಚವೇ ಮೋದಿ ಅವರನ್ನ ಒಪ್ಪಿಕೊಳ್ಳುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸುಲಭ್ ಶೌಚಾಲಯಕ್ಕೆ ಮೋದಿ ಹೆಸರಿಡಿ ಎಂದು ಹೇಳುತ್ತಾರೆ. ಹೀಗಾಗಿಯೇ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದು. ಈಡೀ ಕಾಂಗ್ರೆಸ್ ನಾಯಕರ ವಿರುದ್ಧ ಬಳಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದರು. ನಗರದಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶದ ಗೌರವಾನ್ವಿತ ಪ್ರಧಾನಿ …

Read More »