Breaking News

ರಾಜ್ಯ

ನನ್ನ ವಿಡಿಯೋ, ಫೋಟೋ ನೋಡಿ ಶಿಲ್ಪಾ ಶೆಟ್ಟಿ ಮೆಚ್ಚಿದ್ದರು’: ಶೆರ್ಲಿನ್ ಚೋಪ್ರಾ

ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಬಂಧನ ಆಗಿದೆ. ಈ ಕೇಸ್‌ನಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪಾತ್ರ ಇರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ. ರಾಜ್ ಕುಂದ್ರಾ ಆಪ್ ಅಥವಾ ಸಂಸ್ಥೆಗೂ ಶಿಲ್ಪಾ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಪ್ರಾಥಮಿಕ ತನಿಖೆ ವೇಳೆ ಸ್ಪಷ್ಟಪಡಿಸಿದ್ದರು. ಆದರೆ, ರಾಜ್ ಕುಂದ್ರಾ ಪತ್ನಿಗೆ ಈಗಲೇ ಕ್ಲೀನ್ ಚಿಟ್ ಕೊಡಲು ಸಾಧ್ಯವಿಲ್ಲ ಎಂದು ಸಹ ಹೇಳಿದ್ದರು. ಅಶ್ಲೀಲ ವಿಡಿಯೋ …

Read More »

ಬೊಮ್ಮಾಯಿ ಅವರ ಸಂಪುಟದಲ್ಲಿ ಕಚ್ಚಾಟ ಬಿಜೆಪಿ ಸರ್ಕಾರವು ಪೂರ್ಣಾವಧಿ ಅಧಿಕಾರ ನಡೆಸಲಾರದು: ಧ್ರುವನಾರಾಯಣ

ರಾಯಚೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ, ಹಲವು ಗೊಂದಲ, ಅಸಮಾಧಾನ, ಆಂತರಿಕ ಕಚ್ಚಾಟ ನಡೆಯುತ್ತಿರುದರಿಂದ ಬಿಜೆಪಿ ಸರ್ಕಾರವು ಪೂರ್ಣಾವಧಿ ಅಧಿಕಾರ ನಡೆಸಲಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು. ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ, ಹಳೆ ಮೈಸೂರು ಭಾಗಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡಿಲ್ಲ. ಭ್ರಷ್ಟಾಚಾರ ಆರೋಪ …

Read More »

ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 18ರಿಂದ 20ರಷ್ಟು ಹೆಚ್ಚಿಸುವ ಪ್ರಸ್ತಾವ?: ಶ್ರೀರಾಮುಲು

ಚಿತ್ರದುರ್ಗ: ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 18ರಿಂದ 20ರಷ್ಟು ಹೆಚ್ಚಿಸುವ ಪ್ರಸ್ತಾವವನ್ನು ಪರಿಶೀಲಿಸುತ್ತಿದ್ದೇನೆ. ಈ ಸಂಬಂಧ ಮಂಗಳವಾರ ಅಧಿಕಾರಿಗಳ ಸಭೆ ಕರೆದಿದ್ದು, ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಜನರಿಗೆ ಹೊರೆಯಾಗಲು ಬಿಡುವುದಿಲ್ಲ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದಲ್ಲಿ ಕೊವಿಡ್ 3ನೇ ಅಲೆ ತಡೆ ಮತ್ತು ಮಳೆ ಹಾನಿ ಪರಿಹಾರ ಬಗ್ಗೆ ಸೋಮವಾರ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. …

Read More »

ಮುಖಚಂಡಿಯ ಎಸ್​ಎಸ್​ಎಲ್​ಸಿ ಸಾಧಕಿಗೆ ಹೃದಯ ಕಾಯಿಲೆ: ಸಚಿವ ಗೋವಿಂದ ಕಾರಜೋಳ ಸ್ಪಂದನೆ

ಬಾಗಲಕೋಟೆ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿದ ತಾಲ್ಲೂಕಿನ ಮುಖಚಂಡಿ ತಾಂಡಾದ ದುರ್ಗಾದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಬಸಪ್ಪ ಹುಡೇದ ಅವರಿಗೆ ಹೃದಯ ಸಂಬಂಧಿ ಇರುವ ಕಾಯಿಲೆ ದೃಢಪಟ್ಟ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು. ವಿದ್ಯಾರ್ಥಿನಿಯು 625ಕ್ಕೆ 625 ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಸಂತಸದಿಂದ ಅಭಿನಂದಿಸಿದರು. ಆ ಬಾಲಕಿಗೆ ಹೃದಯ ಸಂಬಂಧಿ ರೋಗವಿರುವ ಬಗ್ಗೆ ತಿಳಿದ ಕೂಡಲೇ ಬಾಲಕಿಯ ಪೋಷಕರೊಂದಿಗೆ ಮಾತನಾಡಿದರು. …

Read More »

ಅಯ್ಯೋ ಮಗನೇ ಬೇಡ ಬೇಡ ಅಂದ್ರೂ ಸಿನಿಮಾ ಫೀಲ್ಡ್​ಗೆ ಹೋಗಿ ಅಲ್ಲೇ ಕೊನೆಯುಸಿರೆದು ಬಿಟ್ಟಲ್ಲೋ

ರಾಮನಗರ: ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಹೈಟೆನ್ಷನ್​ ವಿದ್ಯುತ್​ ತಂತಿ ತಗುಲಿ ಸೋಮವಾರ ಫೈಟರ್​ ವಿವೇಕ್​(35) ಮೃತಪಟ್ಟಿದ್ದಾನೆ. ಈತ ಹೆತ್ತಮ್ಮನ ಮಾತು ಕೇಳಿದ್ದರೆ ಇಷ್ಟು ಬೇಗ ಸಾಯುತ್ತಿರಲಿಲ್ಲವೇನೋ… ಮಗನ ಸಾವಿನ ಸುದ್ದಿ ಕೇಳಿ ವಿವೇಕ್​ರ ತಾಯಿ ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಆಕ್ರಂದಿಸುತ್ತಿದ್ದ ದೃಶ್ಯ ನೋಡಿದ್ರೆ ಎಂಥವರ ಮನದಲ್ಲೂ ಈ ಪ್ರಶ್ನೆ ಮೂಡುತ್ತಿತ್ತು. ‘ನಾನು ನಿನ್ನೆ ದೇವಸ್ಥಾನಕ್ಕೆ ಹೋಗಿ ರಾತ್ರಿ ಮನೆಗೆ …

Read More »

ಚಿತ್ರತಂಡದ ಮೇಲೆ ನಾಯಕ ಅಜಯ್ ರಾವ್ ಗಂಭೀರ ಆರೋಪ: ನ್ಯಾಯ ಸಿಗುವವರೆಗೂ ಶೂಟಿಂಗ್‌ಗೆ ಹೋಗದಿರಲು ನಿರ್ಧಾರ

ಸ್ಯಾಂಡಲ್‌ವುಡ್ ಕೃಷ್ಣ ಅಜಯ್ ರಾವ್ ನಾಯಕನಾಗಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿರುವ ಸಿನಿಮಾ ಲವ್ ಯೂ ರಚ್ಚು. ಇಂದು ಬಿಡದಿಯಲ್ಲಿ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿ ವಿವೇಕ್ ಎಂಬ ಸಾಹಸ ಕಲಾವಿದ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಯಕ ಕೃಷ್ಣ ಅಜಯ್ ರಾವ್, ವಿವೇಕ್ ಸಾವಿಗೆ ನ್ಯಾಯ ಸಿಗುವವರೆಗೂ ಯಾವುದೇ ಕಾರಣಕ್ಕೂ ಚಿತ್ರೀಕರಣಕ್ಕೆ ಹೋಗುವುದಿಲ್ಲ ಎಂದು ನಿರ್ಧಾರ ಮಾಡಿದ್ದಾರೆ. 2017ರ ನವೆಂಬರ್ ತಿಂಗಳಲ್ಲಿ ಮಾಸ್ತಿಗುಡಿ …

Read More »

ಶೂಟಿಂಗ್‌ ವೇಳೆ ವಿದ್ಯುತ್‌ ಸ್ಪರ್ಶ ; ಸಾಹಸ ಕಲಾವಿದನ ಸಾವು

ರಾಮನಗರ: ತಾಲ್ಲೂಕಿನ ಜೋಗನದೊಡ್ಡಿ ಬಳಿ ʻಲವ್‌ ಯೂ ರಚ್ಚುʼ ಸಿನಿಮಾ ಶೂಟಿಂಗ್‌ ವೇಳೆ ಫೈಟರ್‌ವೊಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ ನಡೆದಿದೆ. ಮೃತರನ್ನು ತಮಿಳುನಾಡು ಮೂಲದ ವಿವೇಕ್‌ ಎಂದು ಗುರುತಿಸಲಾಗಿದೆ. ಸಾಹಸ ದೃಶ್ಯ ಚಿತ್ರೀಕರಣ ವೇಳೆ ಫೈಟರ್​ ವಿವೇಕ್‌ಗೆ​ ವಿದ್ಯುತ್​ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ವಿದ್ಯುತ್‌ ತಂತಿಗೆ ರೋಪ್‌ ಸ್ಪರ್ಷಿಸಿದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಲವ್​ ಯೂ ರಚ್ಚು’ ಸಿನಿಮಾದಲ್ಲಿ …

Read More »

ಗೋಕರ್ಣ: ಸಮುದ್ರದಲ್ಲಿ ಈಜಲು ಹೋದ ಯುವಕ ನಾಪತ್ತೆ

ಕಾರವಾರ: ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾಗಿದ್ದಾನೆ. ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ನೀರಿನಲ್ಲಿ ಮುಳಗಿ ನಾಪತ್ತೆಯಾದ ಯುವಕ. ಒಟ್ಟು ಎಂಟು ಜನ ಸ್ನೇಹಿತರೊಂದಿಗೆ ಈತ ಪ್ರವಾಸಕ್ಕಾಗಿ ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ. ಸ್ಥಳೀಯ ಜನರ ಎಚ್ಚರಿಕೆ ನಡುವೆಯೂ ಎಂಟು ಜನ ಈಜಲು ಸಮುದ್ರಕ್ಕೆ ಇಳಿದಿದ್ದರು.ಅಲೆಯ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದರು. ಈ ವೇಳೆ ಓರ್ವನನ್ನು ಲೈಫ್ ಗಾರ್ಡ ಹಾಗೂ ಸ್ಥಳೀಯರ …

Read More »

ವ್ಯಕ್ತಿಯ ಸಾವಿನ ನಂತರ ಆಧಾರ್ ಸಂಖ್ಯೆಯನ್ನ ಸರ್ಕಾರ ಏನು ಮಾಡುತ್ತೆ…? ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಅಗತ್ಯ ದಾಖಲೆಯಾಗಿದೆ. ಸರ್ಕಾರಿ ಯೋಜನೆ ಲಾಭ ಸೇರಿದಂತೆ ಖಾಸಗಿಯ ಕೆಲ ಸೇವೆಗಳಿಗೆ ಈಗ ಆಧಾರ್ ಕಡ್ಡಾಯವಾಗಿದೆ. ಕೊರೊನಾ ಲಸಿಕೆಯನ್ನು ಪಡೆಯುವ ಸಂದರ್ಭದಲ್ಲಿ ಆಧಾರ್​ ಕಾರ್ಡ್​ ಅತ್ಯಗತ್ಯ. ಆಧಾರ್ ಕಾರ್ಡ್ ಪಡೆದ ವ್ಯಕ್ತಿ ಸಾವನ್ನಪ್ಪಿದ್ರೆ ಆತನ ಆಧಾರ್ ಏನಾಗುತ್ತದೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುವುದು ಸಹಜ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆಯಲ್ಲಿ ಇತ್ತಿಚೆಗೆ ಸವಿಸ್ತಾರವಾಗಿ ಹೇಳಿದ್ದಾರೆ. ಅವರು ಹೇಳುವ ಪ್ರಕಾರ, ವ್ಯಕ್ತಿಯ …

Read More »

ತೋಟಗಾರಿಕೆ ಖಾತೆ ತೃಪ್ತಿ ತಂದಿದೆ : ಸಚಿವ ಮುನಿರತ್ನ

ತುಮಕೂರು,ಆ.9-ನನಗೆ ಕೊಟ್ಟಿರಿವ ತೋಟಗಾರಿಕೆ ಖಾತೆ ತೃಪ್ತಿ ತಂದಿದೆ, ಬೇರೆ ಪಕ್ಷದಿಂದ ಬಿಜೆಪಿಗೆ ಬಂದು ಸಚಿವನಾಗಿದ್ದೇನೆ ಎಂದು ಮುನಿರತ್ನ ತಿಳಿಸಿದ್ದಾರೆ. ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಸಿದ್ದಲಿಂಗ ಸ್ವಾಮೀಜಿಗಳ ಆಶಿರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅನ್ಯ ಪಕ್ಷದಿಂದ ಬಿಜೆಪಿಗೆ ಬಂದು ನಂತರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ.   ಪಕ್ಷದ ವರಿಷ್ಠರು ನಮಗೆ ಜವಾಬ್ದಾರಿ ನೀಡಿದ್ದಾ. ಅದನ್ನು …

Read More »