Breaking News

ರಾಜ್ಯ

ವಿಷಾಹಾರ ಸೇವನೆ; ಒಂದೇ ಕುಟುಂಬದ 7 ಜನರ ಸ್ಥಿತಿ ಗಂಭೀರ

ಬಾಗಲಕೋಟೆ; ವಿಷಾಹಾರ ಸೇವಿಸಿದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಕುಟುಂಬದ 7 ಸದಸ್ಯರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿಯೇ ತಯಾರಿಸಿದ ಗೋಧಿ ಚಪಾತಿ ಸೇವಿಸಿದ ಬಳಿಕ ಕುಟುಂಬ ಸದಸ್ಯರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು, ವಾಂತಿ-ಭೇದಿ ಶುರುವಾಗಿದೆ. ತಾಯಿ, ಮಗ, ಸೊಸೆ, ಮೊಮ್ಮಕ್ಕಳು ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.   ದುಂಡವ್ವ ಮಹಾರುದ್ರಪ್ಪ (60), ಮಗ ಲಕ್ಷ್ಮಣ (38), ಸೊಸೆ ಶಾಂತಾ (28) ಮೊಮ್ಮಕ್ಕಳಾದ ತೇಜಸ್ವಿನಿ (12), ಪಲ್ಲವಿ (10), ಪ್ರಥಮ್ …

Read More »

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜೀನಾಮೆಗೆ ರೆವಲ್ಯೂಶನ್ ಗೋವನ್ಸ್ ಒತ್ತಾಯ..!

ಪಣಜಿ : ಮಹಿಳೆಯ ಮೇಲೆ ನಡೆದಿರುವ ಲೈಂಗಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕೂಡಲೆ ರಾಜೀನಾಮೆ ನೀಡಬೇಕು ಎಂದು ರೆವಲ್ಯೂಶನ್ ಗೋವನ್ಸ್ ಒತ್ತಾಯಿಸಿದೆ. ಪಕ್ಷದ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೆವಲ್ಯೂಶನ್ ಗೋವನ್ಸ್ ನ ಸುನಯನಾ ಗಾವಡೆ, ಗೋವಾಕ್ಕೆ ಶಾಂತಿಪ್ರಿಯ ಎಂಬ ಗುರುತು ಬದಲಾಗುತ್ತಿದೆ. ಇದಕ್ಕೆ ಜನಪ್ರತಿನಿಧಿಗಳೇ ಕಾರಣ. ಗೋವಾ ರಾಜ್ಯವು ಯಾವಾಗ ಸುರಕ್ಷಿತವಾಗಲಿದೆ..? ರಾತ್ರಿಯ ಸಂದರ್ಭದಲ್ಲಿ ಹೆಣ್ಣುಮಕ್ಕಳು ಮನೆಯಿಂದ ಹೊರ …

Read More »

ಪ್ರಬಲ ಖಾತೆ ಮೇಲೆ ಹಿರಿಯರ ಕಣ್ಣು

ಬೆಂಗಳೂರು: ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ಪ್ರಮುಖ ಖಾತೆಗಳ ಮೇಲೆ ಹಿರಿಯ ಸಚಿವರ ಕಣ್ಣು ಬಿದ್ದಿದೆ. ಪ್ರಭಾವಿ ಖಾತೆಗಳಿಗಾಗಿ ಸಿಎಂ ಬಳಿ ಬೇಡಿಕೆ ಇರಿಸಿದ್ದು, ಬಹುತೇಕ ಶುಕ್ರವಾರ ಸಚಿವರಿಗೆ ಖಾತೆಗಳ ಹಂಚಿಕೆಯಾಗುವ ಸಾಧ್ಯತೆ ಇದೆ. ಗೃಹ, ಇಂಧನ, ಕಂದಾಯ, ಆರ್‌ಡಿಪಿಆರ್‌, ಬೃಹತ್‌ ಕೈಗಾರಿಕೆ, ಬೆಂಗ ಳೂರು ನಗರಾಭಿವೃದ್ಧಿ, ಜಲ ಸಂಪನ್ಮೂಲ ಖಾತೆಗಳ ಮೇಲೆ ಹಿರಿಯ ಸಚಿವರು ನಿರೀಕ್ಷೆ ಇರಿಸಿ ದ್ದಾರೆ. ಬಿಎಸ್‌ವೈ ಸರಕಾರದಲ್ಲಿ ಸಚಿವರಾಗಿದ್ದವರಿಗೆ ಅದೇ ಖಾತೆ  ಗಳನ್ನು ನೀಡುವಂತೆ ಪಕ್ಷದ ವರಿಷ್ಠರು ಸಲಹೆ …

Read More »

ಬಿಎಸ್​ವೈ ಬ್ಲೂಪ್ರಿಂಟ್​ಗೆ ವಿರೋಧಿ ಬಣ ತತ್ತರ; ವಿರೋಧಿಗಳಿಗೆ ರಾಜಾಹುಲಿ ಕೊಟ್ಟ ಏಟು ಹೇಗಿದೆ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನೂತನವಾಗಿ ರಾಜ್ಯ ಸಚಿವ ಸಂಪುಟ ರಚನೆ ಹಾಗೂ ಹೊಸ ಕ್ಯಾಬಿನೆಟ್ ಗಮನಿಸಿದರೆ ಪ್ರಮುಖವಾಗಿ ಒಂದು ವಿಚಾರ ಎದ್ದು ಕಾಣುತ್ತದೆ. ಅದೇನೆಂದರೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಅಡಿರುವ ಗೇಮ್​ನಿಂದ ಬಿಎಸ್​ವೈ ವಿರೋಧಿ ಬಣ ಸದ್ಯಕ್ಕೆ ಪುಲ್ ಸೈಡ್ ಲೈನ್ ಆಗಿದೆ. ರಾಜಾಹುಲಿಯ ಬ್ಲೂಪ್ರಿಂಟ್​ಗೆ ಕಕ್ಕಾಬಿಕ್ಕಿಯಾಗಿ ಅಡ್ರೆಸ್ ಕಳೆದುಕೊಂಡು ಆಫೋಸಿಟ್ ಗ್ಯಾಂಗ್​ನವರು ಈಗ ಎಲ್ಲಿ ಇದ್ದಾರೆ ಅನ್ನೋದೇ ಗೊತ್ತಾಗ್ತಾ ಇಲ್ಲ. ರಾಜ್ಯ ಬಿಜೆಪಿಯ …

Read More »

ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಮಾಹಿತಿ, ಪ್ರಮುಖ ಖಾತೆಗೆ ಹೆಚ್ಚಿದ ಪೈಪೋಟಿ

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಶುಕ್ರವಾರವೇ ನೂತನ ಸಚಿವರಿಗೆ ಬಹುತೇಕ ಖಾತೆ ಹಂಚಿಕೆ ಆಗಲಿದೆ. ಪ್ರಮುಖ ಖಾತೆಗಾಗಿ ಒತ್ತಡವಿದ್ದು, ಹೆಚ್ಚುವರಿ ಹೊಣೆಗಾರಿಕೆ ಮೇಲೆಯೂ ನೂತನ ಸಚಿವರು ಕಣ್ಣಿಟ್ಟಿದ್ದಾರೆ. ಇದರಿಂದಾಗಿ ಖಾತೆ ಹಂಚಿಕೆ ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ. ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಿ, ಕೊಠಡಿಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಬಿಎಸ್ವೈ ಸಂಪುಟದಲ್ಲಿದ್ದ ಸಚಿವರೇ ಬಹುತೇಕ ಮುಂದುವರೆದಿದ್ದಾರೆ. ಈ ಮೊದಲು ನಿರ್ವಹಿಸುತ್ತಿದ್ದ …

Read More »

ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್: ಇ -ಕೆವೈಸಿಗೆ ಸರ್ವರ್ ಪ್ರಾಬ್ಲಂ, ದಿನಗಟ್ಟಲೆ ಕಾದರೂ ತಪ್ಪದ ಅಲೆದಾಟ

ಪಡಿತರ ಪಡೆದುಕೊಳ್ಳಲು ರೇಷನ್ ಕಾರ್ಡ್ ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ -ಕೆವೈಸಿ ಮಾಡಿಸಬೇಕೆಂದು ಆದೇಶಿಸಲಾಗಿದೆ. ಆದರೆ, ಅನೇಕ ಕಡೆಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ಪರದಾಡುವಂತಾಗಿದೆ. ದಿನಗಟ್ಟಲೆ ಕಾದರೂ ನೋಂದಣಿ ಕಷ್ಟಸಾಧ್ಯವಾಗಿದೆ. ಇ-ಕೆವೈಸಿ ಮಾಡಲು ಬಯೋಮೆಟ್ರಿಕ್ ನೀಡಬೇಕಿದೆ. ಸರ್ವರ್ ಸಮಸ್ಯೆಯಿಂದ ಬಯೋಮೆಟ್ರಿಕ್ ಅಪ್ಡೇಟ್ ಮಾಡುವುದು ಕಷ್ಟ ಸಾಧ್ಯವಾಗಿ ಪರಿಣಮಿಸಿದೆ ಎಂಬ ದೂರುಗಳು ಕೇಳಿಬಂದಿವೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಅನ್ವಯ ಪಡಿತರ ಚೀಟಿ ದೃಢೀಕರಣಕ್ಕಾಗಿ ಮಕ್ಕಳು, …

Read More »

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಗೌರವಧನವಾಗಿ 25.07 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. 2, 4 ಮತ್ತು 6 ನೇ ಸೆಮಿಸ್ಟರ್ ಪಾಠ ಮಾಡಲು ನೇಮಕ ಮಾಡಿಕೊಳ್ಳಲಾಗಿದ್ದ ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಅಂತೆಯೇ ಕಾಲೇಜು ಶಿಕ್ಷಣ ಇಲಾಖೆ ಪ್ರಸ್ತಾವನೆ ಸ್ವೀಕರಿಸಿ 25.07 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. …

Read More »

ಪದವಿ ಪರೀಕ್ಷೆಗೆ ಕಳೆದ ವರ್ಷದ ಪ್ರಶ್ನೆಪತ್ರಿಕೆ ಪೂರೈಸಿದ ಗುಲಬರ್ಗಾ ವಿಶ್ವವಿದ್ಯಾಲಯ!

ಲಿಂಗಸುಗೂರು: ಕಳೆದ ವರ್ಷದ ಪದವಿ ಪ್ರಶ್ನೆ ಪತ್ರಿಕೆ ಪೂರೈಸಿದ ಗುಲಬರ್ಗಾ ವಿವಿ ಅಧಿಕಾರಿಗಳ ಯಡವಟ್ಟಿನಿಂದ ವಿದ್ಯಾರ್ಥಿಗಳು ಒಂದು ತಾಸು ತಡವಾಗಿ ಪರೀಕ್ಷೆ ಬರೆದ ಘಟನೆ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ಗುರುವಾರ ಪದವಿ ಪರೀಕ್ಷೆ ಆರಂಭವಾಗಿದ್ದು, ವಿವಿಧ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಪೂರೈಸಲು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ನೋಡಲ್‌ ಕೇಂದ್ರವನ್ನಾಗಿ ಮಾಡಲಾಗಿದೆ. ಗುರುವಾರ ಬಿಎ ಮೂರನೇ ಸೆಮಿಸ್ಟರ್‌ನ ಇತಿಹಾಸ ವಿಷಯ ಪರೀಕ್ಷೆ ನಡೆದಿದ್ದು, …

Read More »

ಶಿವಸೇನ ಪುಂಡರಿಗೆ ಖಡಕ ಎಚ್ಚರಿಕೆ ನೀಡಿದ ಕರ್ನಾಟಕ ಪೊಲೀಸ್

ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.‌ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ. ‌ ಮಹಾರಾಷ್ಟ್ರ ಕೆಲ ಹಳ್ಳಿಗಳಿಗೆ ಕರ್ನಾಟಕದ ಎನ್ ಎಚ್4 ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗಬೇಕು. …

Read More »

ರಾಜಕೀಯಕ್ಕೆ ಮತ್ತೊಬ್ಬ ಐಪಿಎಸ್ ಅಧಿಕಾರಿ: ಬಿಜೆಪಿ ಸೇರಲಿದ್ದಾರಾ ರವಿ ಚನ್ನಣ್ಣನವರ್?

ಬೆಂಗಳೂರು, ಆಗಸ್ಟ್ : ಇತ್ತೀಚೆಗೆ ಐಎಎಸ್, ಐಪಿಎಸ್ ಅಧಿಕಾರಿಗಳು ಅವಧಿ ಮುನ್ನವೇ ಸ್ವಯಂ ನಿವೃತ್ತಿ ಪಡೆದು ರಾಜಕಾರಣಕ್ಕೆ ಸೇರುತ್ತಿದ್ದಾರೆ. ಇದಕ್ಕೆ ಇತ್ತೀಚಿಗೆ ಬಿಜೆಪಿ ಸೇರಿದ ಕೆ.ಅಣ್ಣಾಮಲೈ ತಾಜಾ ಉದಾಹರಣೆಯಾಗಿದ್ದಾರೆ. ಕರ್ನಾಟಕ ಕೇಡರ್​​ ಐಪಿಎಸ್ ಅಧಿಕಾರಿಯಾಗಿದ್ದ ಕೆ. ಅಣ್ಣಾಮಲೈ ತಮ್ಮ ಕೆಲಸಕ್ಕೆ ರಾಜೀನಾಮೆ‌ ನೀಡಿ ಭಾರತೀಯ ಜನತಾ ಪಕ್ಷ ಸೇರಿದ್ದರು. ಕಳೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಸೋತು ಈಗ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಈಗ ಅಣ್ಣಾಮಲೈ ತುಳಿದ ಹಾದಿಯನ್ನೇ …

Read More »