ಮುಂಬೈ: ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ವಿತರಣೆ ಆರೋಪದಲ್ಲಿ ಉದ್ಯಮಿ ಹಾಗೂ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಬಂಧನವು ಸದ್ಯದ ಮಟ್ಟಿಗೆ ಬಹು ಚರ್ಚಿತ ವಿಷಯವಾಗಿದೆ. ಕುಂದ್ರಾ ಬಂಧನವಾದಾಗಿನಿಂದ ಅವರ ಕುರಿತಾದ ಕರಾಳ ಸಂಗತಿಗಳು ಒಂದೊಂದಾಗಿ ಕಳಚಿ ಬೀಳುತ್ತಿವೆ. ಹಾಟ್ಶಾಟ್ಸ್ ಮತ್ತು ಇತರೆ ವೆಬ್ಸೈಟ್ಗಳಿಗಾಗಿ ಬೋಲ್ಡ್ ಸಿನಿಮಾಗಳಲ್ಲಿ ನಟಿಸಿರುವ ಮಾಡೆಲ್ ಜೊಯಾ ರಾಥೋಡ್ ಅವರು ರಾಜ್ ಕುಂದ್ರಾರಿಂದ ಆಫರ್ ಸ್ವೀಕರಿಸಿದ್ದಾಗಿ ಮಾಧ್ಯಮವೊಂದಕ್ಕೆ ಬಹಿರಂಗಪಡಿಸಿದ್ದಾರೆ. …
Read More »ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ : ಆತಂಕದಲ್ಲಿ ರೈತರು
ಗಂಗಾವತಿ : ಗಂಗಾವತಿ ತಾಲ್ಲೂಕಿನ ರಾಂಪುರ ಮಲ್ಲಾಪೂರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ ಕಂಡುಬಂದಿದೆ. ಆತಂಕದಲ್ಲಿ ರೈತರಿದ್ದಾರೆ. ಕಳೆದ ವರ್ಷ ಇದೇ ಜಾಗದ ಬಲಭಾಗದಲ್ಲಿ ಸೋರಿಕೆ ಕಂಡು ಬಂದಿತ್ತು ಆಗ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸಿಮೆಂಟ್ ಮೂಲಕ ಗ್ರೌಂಡಿಂಗ್ ಮಾಡಿ ಸೋರಿಕೆಯನ್ನು ತಡೆದಿದ್ದರು. ಜುಲೈ ಹದಿನೆಂಟ ರಂದು ಕಾಲುವೆಗೆ ನೀರು ಹರಿಸಲಾಗಿದ್ದು ಸದ್ಯ ಕಾಲುವೆಯಲ್ಲಿ 4ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಭರದಿಂದ …
Read More »ಅಪಹರಣವಾಗ್ತಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು!
ಹಾಸನ: ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಅಪಹರಣ ಮಾಡುತ್ತಿದ್ದ ಕಿಡಿಗೇಡಿಗಳ ತಂಡದಿಂದ ಪೊಲೀಸರು ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ಆತನನ್ನು ರಕ್ಷಿಸಿದ ಘಟನೆ ಹಾಸನದ ಗೊರೂರಿನಲ್ಲಿ ನಡೆದಿದೆ. ಹಣಕಾಸಿನ ವಿಷಯ ಸಂಬಂಧ ಕಾಸರಗೋಡಿನ ಅನ್ವರ್(33) ಎಂಬ ಯುವಕನನ್ನು ಕಿಡಿಗೇಡಿಗಳ ತಂಡವೊಂದು ಕಿಡ್ನಾಪ್ ಮಾಡಿ ಹಾಸನಕ್ಕೆ ಎಂಟ್ರಿಯಾಗಿತ್ತು. ಈ ವೇಳೆ ಕಾರು ಗೊರೂರಿನ ಮೂಲಕ ಪಾಸ್ ಆಗುತ್ತಿರುವುದು ತಿಳಿದ ಪೊಲೀಸರು, ಅವರನ್ನು ಹಿಡಿಯುವ ಸಲುವಾಗಿಯೇ ಯಾರಿಗೂ ಅನುಮಾನ ಬಾರದಂತೆ …
Read More »ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …
Read More »ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ: ಜಗದೀಶ್ ಶೆಟ್ಟರ್
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ. ನಾನು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಆಗಿರುವುದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. bಇ.ಎಸ್. ಯಡಿಯೂರಪ್ಪ ಜೊತೆ ಕೆಲಸ ಮಾಡಿರುವುದರಿಂದ ಹೀಗೆ ನಿರ್ಧಾರ ಕೈಗೊಂಡಿದ್ದೇನೆ ಎಂದು ಟಿವಿ9ಗೆ ಮಾಜಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದೆ …
Read More »2020: ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿ : ಭಾರತಕ್ಕೆ ಎಷ್ಟನೇ ಸ್ಥಾನ?
ಟೋಕಿಯೋ ಒಲಿಂಪಿಕ್ಸ್ ಶುರುವಾಗಿ 5 ದಿನಗಳು ಕಳೆದಿವೆ. ಆರಂಭದಿಂದಲೂ ಜಪಾನ್ ಮತ್ತು ಚೀನಾ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡುತ್ತಿದ್ದು, ಪದಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕಾಗಿ ಭರ್ಜರಿ ಪೈಪೋಟಿ ನಡೆಸುತ್ತಿದೆ. ಇನ್ನು ಮೊದಲ ಐದು ದಿನಗಳಲ್ಲಿ ಹಲವು ವಿಭಾಗದಲ್ಲಿ ಸ್ಪರ್ಧಿಸಿದರೂ ಭಾರತಕ್ಕೆ ಕೇವಲ ಒಂದು ಪದಕ ಮಾತ್ರ ಲಭಿಸಿದೆ. 49 ಕೆಜಿ ವೇಟ್-ಲಿಫ್ಟಿಂಗ್ ಮಹಿಳಾ ವಿಭಾಗದಲ್ಲಿ ಸ್ಪರ್ಧಿಸಿದ್ದ ಮೀರಾಬಾಯಿ ಚಾನು ಒಟ್ಟು 202 ಕೆಜಿ ಭಾರ ಎತ್ತುವ (87 ಕೆಜಿ ಸ್ನ್ಯಾಚ್ ಮತ್ತು …
Read More »ಕೃಷ್ಣಾ ನದಿ ಪ್ರವಾಹ: ಕುಲಹಳ್ಳಿ ಗ್ರಾಮದ 100 ಕುಟುಂಬಗಳು ಸ್ಥಳಾಂತರ
ಬನಹಟ್ಟಿ: ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ರಬಕವಿ ಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಗ್ರಾಮದ 100 ಕ್ಕೂ ಹೆಚ್ಚು ಕುಟುಂಬಗಳ ಅಂದಾಜು ೩೦೦ ಕ್ಕೂ ಹೆಚ್ಚು ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಗ್ರಾಮದ ಮೋರೆ ಮತ್ತು ಗಸ್ತಿ ಪ್ರದೇಶದ ಜನರು ಪ್ರವಾಹದಿಂದ ತೊಂದರೆಗೆ ಒಳಗಾಗಿದ್ದಾರೆ. ಅದೇ ರೀತಿಯಾಗಿ ನದಿ ತೀರದ ತೋಟ ಹಾಗೂ ಹೊಲಗಳಲ್ಲಿ ವಾಸವಿದ್ದ ಜನರನ್ನು ಕೂಡಾ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಮೋರೆ ಮತ್ತು ಗಸ್ತಿ …
Read More »ಕೃಷ್ಣಾ ಪ್ರವಾಹಕ್ಕೆ ಬದುಕು ದುಸ್ತರ..
ಬಾಗಲಕೋಟೆ: ಕೃಷ್ಣಾ ನದಿ ಈ ಬಾರಿ ಉಗ್ರ ರೂಪ ತಾಳಿದ ಪರಿಣಾಮ ಪ್ರವಾಹ ಅಕ್ಷರಶಃ ನದಿ ಪಾತ್ರದ ಜನರ ಬದುಕನ್ನು ಬರ್ಬರವಾಗಿಸಿ ಬಿಟ್ಟಿದೆ. ಕಣ್ಣು ಹಾಯಿಸಿದ ಕಡೆಯೆಲ್ಲ ಪ್ರವಾಹ, ಭೀಕರ ಮಳೆ ಜಿಲ್ಲೆಯನ್ನು ಆಘಾತಕ್ಕೆ ತಳ್ಳಿದೆ. ಪ್ರವಾಹದ ರಣ ಕೇಕೆಗೆ ಗ್ರಾಮಗಳು ಜಲಾವೃತಗೊಂಡರೆ, ಗ್ರಾಮಕ್ಕೆ ಗ್ರಾಮಗಳೆ ನಡುಗಡ್ಡೆಯಾಗಿ ಹೋಗಿವೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು ಅಪಾರ ಹಾನಿ ಉಂಟು ಮಾಡಿದೆ. ಜನಜೀವನವನ್ನು ಸಂಪೂರ್ಣ ಅಸ್ಯವ್ಯಸ್ತಗೊಳಿಸಿದೆ. ಸಂತ್ರಸ್ಥರಿಗಾಗಿ …
Read More »15 ಲಕ್ಷ ರೂ ಲಂಚ ಪಡೆಯುವಾಗ ತಹಸೀಲ್ದಾರ್ ಲೋಕಾಯುಕ್ತ ಬಲೆಗೆ
ಬೀದರ್: ಲಂಚ ಪಡೆಯುತ್ತಿದ್ದರು ಎನ್ನಲಾದ ವೇಳೆ ತಹಶಿಲ್ದಾರ್ ಎಸಿಬಿ ಬಲೆಗೆ ಬಿದ್ದ ಘಟನೆ ಬೀದರ್ನಲ್ಲಿ ನಡೆದಿದೆ. ತಹಶಿಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ನಗರದ ಲೀಲಾಧರ್ ಎನ್ನುವವರಿಗೆ ಚಿದ್ರಿ ಸರ್ವೆ ನಂಬರ್ನಲ್ಲಿನ 15ರ ಭೂಮಿ ಮುಟೆಷನ್ ಮಾಡಲು ತಹಶೀಲ್ದಾರ್ ಗಂಗಾದೇವಿ ಅವರು 20 ಲಕ್ಷ ನೀಡುವಂತೆ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. 15 ಲಕ್ಷ ಕೊಡುವದಾಗಿ ಒಪ್ಪಿಕೊಂಡಿದ್ದ ಲೀಲಾಧರ್ ಎಸಿಬಿಗೆ ಮಾಹಿತಿ ನೀಡಿದ್ದರು. 15 ಲಕ್ಷ ಹಣವನ್ನು ತಹಶೀಲ್ದಾರ ತಮ್ಮ …
Read More »ವಾರದ ಹಿಂದೆ ಪ್ರವಾಹ ಹಾಗೂ ಮಳೆಯಿಂದಾಗಿ ಲೋಳಸೂರ ಸೇತುವೆ ಸಂಪೂರ್ಣ ಜಲಾವೃತ: 10 ದಿನಗಳೊಳಗೆ ಸೇತುವೆ ದುರಸ್ತಿಗೊಳಿಸಿ ಬಾಲಚಂದ್ರ ಜಾರಕಿಹೊಳಿ ಸೂಚನೆ
ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು ೧೦ ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಅಧಿಕಾರಿಗಳ ತಂಡಕ್ಕೆ ಹದಗೆಟ್ಟಿರುವ ಸೇತುವೆ ಹಾಗೂ ರಸ್ತೆ ದುರಸ್ತಿ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ. ವಾರದ ಹಿಂದೆ ಪ್ರವಾಹ ಹಾಗೂ ಮಳೆಯಿಂದಾಗಿ ಲೋಳಸೂರ ಸೇತುವೆ …
Read More »
Laxmi News 24×7