Breaking News

ರಾಜ್ಯ

BJP ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ: ಮಧು ಬಂಗಾರಪ್ಪ ವಾಗ್ದಾಳಿ

ಕೊಪ್ಪಳ : ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಬದಲಾವಣೆ ಸುದ್ದಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಇದೇ ಸಂದರ್ಭದಲ್ಲೇ ಬಿಜೆಪಿ ಅಂದ್ರೇ ಬ್ಯುಸಿನೆಸ್ ಜನತಾ ಪಾರ್ಟಿ ಎಂಬುದಾಗಿ ಮಾಜಿ ಶಾಸಕ ಮಧುಬಂಗಾರಪ್ಪ ( Madhu Bangarappa ) ಆರೋಪಿಸಿದ್ದಾರೆ.   ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜನಪರ ಕೆಲಸ ಮಾಡುವ ಸರ್ಕಾರ ಅಂದ್ರೇ ಅದು ಕಾಂಗ್ರೆಸ್ ಪಕ್ಷ(Congress Party )ವಾಗಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ …

Read More »

ಮೊಟ್ಟೆಗೆ ಟೆಂಡರ್ ಕರೆದಿಲ್ಲ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು,

ಬೆಂಗಳೂರು, ಜು. 24: “ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ” ಎಂದು ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಹೊರಡಿಸಿರುವ ಅವರು, “ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …

Read More »

ದಲಿತ ಮುಖ್ಯಮಂತ್ರಿ ಬಗ್ಗೆ ನಿರ್ಧಾರಿಸುವುದು ನಾನಲ್ಲ, ಹೈಕಮಾಂಡ್:B.S.Y.

ಬೆಳಗಾವಿ: ದಲಿತ ಮುಖ್ಯಮಂತ್ರಿ ಬಗ್ಗೆ ನಿರ್ಧಾರಿಸುವುದು ನಾನಲ್ಲ, ಹೈಕಮಾಂಡ್ ಅಂತ ಸಿಎಂ ಬಿಎಸ್‌ ಯಡಿಯ್ಯೂರಪ್ಪನವರು (BS Yeddyurappa) ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಿದ್ದ ವೇಳೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ಹೇಳಿದರು, ಇದೇ ವೇಳೆ ಅವರು ದೇವರ ದಯೆಯಿಂದ ಮಳೆ ಕಡಿಮೆಯಾಗಿದ್ದು, ಇದೇ ರೀತಿ ಇನ್ನೇರಡು ದಿನದಲ್ಲಿ ಮಳೆ ಪ್ರಮಾಣದಲ್ಲಿ ಕಡಿಮೆಯಾದ್ರೆ, ಎಲ್ಲವೂ ಸರಿ ಹೋಗುತ್ತದೆ ಅಂತ ಹೇಳಿದರು. ಇನ್ನೂ ಮಳೆಗೆ …

Read More »

10 ನಿಮಿಷಕ್ಕಿಂತ ಹೆಚ್ಚು ಟೈಂ ಒಂದೇ ಕಡೆ ನಿಲ್ಲೋವಂತಿಲ್ಲ – ಹೊಯ್ಸಳ ಪೊಲೀಸರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಕರ್ತವ್ಯ ನಿರತರಾಗಿದ್ದ ವೇಳೆ ಕೆಲ ಹೊಯ್ಸಳ ಪೊಲೀಸರು ಸುಖಾಸುಮ್ಮನೆ ವಾಹನ ನಿಲ್ಲಿಸಿಕೊಂಡು ಕಾಲಹರಣ ಮಾಡುತ್ತಿರುವ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ಪೊಲೀಸರ ಕಾರ್ಯವೈಖರಿಗೆ ಚುರುಕು ಮುಟ್ಟಿಸುವ ಸಲುವಾಗಿ, ಒಂದಷ್ಟು ಬದಲಾವಣೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಮೊದಲು ಅಯಾಯ ಪೊಲೀಸ್ ಠಾಣೆಯಿಂದಲೇ ಹೊಯ್ಸಳ ಬೀಟ್ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿತ್ತು. ಸದ್ಯ ಕಮಿಷನರ್ ಕಚೇರಿಯ ಕಮಾಂಡೆಂಟ್ ಸೆಂಟರ್ ನಿಂದ ಹೊಯ್ಸಳ ಪೊಲೀಸರ ಕೆಲಸದ ಬಗ್ಗೆ ನಿಗಾ …

Read More »

ಹೈಕಮಾಂಡ್‍ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ.

ಬೆಳಗಾವಿ: ಹೈಕಮಾಂಡ್‍ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಹೆಚ್ಚು ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಮಾಧ್ಯಮದವರೊಂದಿಗೆ ಮಾತನಾಡಿ, ಸಂಜೆಯ ವೇಳೆಗೆ ಹೈಕಮಾಂಡ್ ಅವರ ನಿರ್ಧಾರವನ್ನು ಕಳುಹಿಸುತ್ತಾರೆ. ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ. ಯವುದೇ ಸ್ವಾಮಿಜಿಗಳು ಸಭೆ, ಸಮಾವೇಶ ಮಾಡುವ ಅಗತ್ಯವಿಲ್ಲ. ನನಗೆ ಮೋದಿ, ಅಮಿತ್ ಶಾ ಅವರ ಕುರಿತಾಗಿ ವಿಶ್ವಾಸವಿದೆ ಎಂದಿದ್ದಾರೆ. ಎರಡು ವರ್ಷಗಳ …

Read More »

ಒಲಿಂಪಿಕ್ಸ್: ಬೆಳ್ಳಿ ಗೆದ್ದ ಚಾನು, ಭಾರತಕ್ಕೆ ಮೊದಲ ಪದಕದ ಪುಳಕ

ಟೋಕಿಯೊ: ಭಾರತದ ಮೀರಾಬಾಯಿ ಚಾನು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.

Read More »

ಖಾಸಗೀ ಶಾಲೆಗಳನ್ನು ಆಗಸ್ಟ್‌ 2 ರಿಂದ ಆರಂಭಿಸಲು ಶಾಲೆಗಳ ಒಕ್ಕೂಟ ಪ್ರಯತ್ನ

ಬೆಂಗಳೂರು: ಕೊರೋನ ಲಾಕ್‌ ಡೌನ್‌ ನಿಂದಾಗಿ ನಿಂತೇ ಹೋಗಿರುವ ಶಾಲೆಗಳನ್ನು ಆರಂಭಿಸಲು ಖಾಸಗಿ ಶಾಲೆಗಳ ಒಕ್ಕೂಟ ಮುಂದಾಗಿದೆ. ಸರ್ಕಾರ ಶಾಲೆ ಆರಂಭಿಸದೇ ಹೋದರೆ ಅಗಸ್ಟ್ 2 ರಿಂದ ಖಾಸಗಿ ಶಾಲೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿವೆ. ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಲ್ಲದೇ, ಶಾಲೆ ಆರಂಭಕ್ಕೆ ICMC, ದೇವಿಶೆಟ್ಟಿ ವರದಿ ಹಾಗೂ ಟಾಸ್ಕ್ ಫೋರ್ಸ್ ಸಭೆ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಜುಲೈ 30 ರ …

Read More »

ಮಳೆ ಕಡಿಮಯಾಗಿದೆ ಆದ್ರೆ ಪ್ರವಾಹದ ಭೀತಿ ಹೋಗಿಲ್ಲ ಸತೀಶ್ ಜಾರಕಿಹೊಳಿ ಗೋಕಾಕ್ ರೌಂಡ್ಸ್

ಸತತವಾಗಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಕೊಂಚ ನಿರಾಳ ವಾಗಿದೆ ಇಂದು ಬೇಳಂ ಬೆಳಿಗ್ಗೆ ಸತಿ ಶ ಜಾರಕಿಹೊಳಿ ಅವರು ನಗರದ ಗೋಕಾಕ ಫಾಲ್ಸ್ ,ಚಿಕ್ಕೊಳ್ಳಿ ಪರ್ಸಿ ಹಾಗೂ ಇನ್ನಿತರ ಪ್ರದೇಶ ಗಳಿಗೆ ಭೇಟಿ ನೀಡಿ ನೀರಿನ ಮಟ್ಟ ವೀಕ್ಷಿಸಿದರು ಒಬ್ಬ ವಿರೋಧ್ ಪಕ್ಷದ ನಾಯಕರು ಜನರ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದು ಎಲ್ಲರಿಗೂ ಕುತೂಹಲ ಮೂಡಿಸಿದೆ ಇದಷ್ಟೇ ಅಲ್ಲದೇ ನಿನ್ನೆ ಕಾಂಗ್ರೆಸ್ ಶಾಸಕರು ಸುಮಾರು ಕಡೆ ಭೇಟಿ ನೀಡಿದ್ದಾರೆ ನೀರಿನ …

Read More »

ಯಡಿಯೂರಪ್ಪ ಬದಲಾವಣೆ ವಿರೋಧಿಸಿ ಚಿಂಚೋಳಿಯಲ್ಲಿ ಪ್ರತಿಭಟನೆ

ಚಿಂಚೋಳಿ : ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡೋದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ನಿರ್ಧಾರ ವಿರೋಧಿಸಿ ಚಿಂಚೋಳಿಯಲ್ಲಿ ವೀರಶೈವ ಲಿಂಗಾಯತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರೂ ಭಾಗವಹಿಸಿದ್ದು, ವಿಶೇಷವಾಗಿತ್ತು. ಈ ಪ್ರತಿಭಟನೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲೂಕು ಘಟಕ ಹಾಗೂ ಬಸವೇಶ್ವರ ಸೇವಾ ಸಮಿತಿ ಆಯೋಜಿಸಿತ್ತು. ಸಮಾಜದ …

Read More »

ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’ ಎಂದು ಕೆಪಿಸಿಸಿ ವಕ್ತಾರೆಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದವರು ಚೂರಿ ಹಾಕಲು ಸಾಧ್ಯವೇ?’ ಎಂದು ಕೇಳಿದರು. ‘ಯಾರನ್ನು ಬೆಳೆಸಿದರೋ, ಯಾರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದರೋ ಅವರೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿದರು. ‘2019ರಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೆ ಪರಿಹಾರ …

Read More »