Home / ರಾಜ್ಯ (page 2369)

ರಾಜ್ಯ

ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.

ಕನಕಪುರ: ಶಾಂತಿಯ ಹೆಸರಿನಲ್ಲಿ ಬಾಲಗಂಗಾಧರ ತಿಲಕ್​ ಪ್ರತಿಮೆ ನಿರ್ಮಾಣ ಮಾಡಬೇಕಿತ್ತು. ಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಮಾಡಿದ್ದರೂ ಅಡ್ಡಿಯಿಲ್ಲ, ಆದರೆ ಸೋನಿಯಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲು ನಮ್ಮ ಅಡ್ಡಿ ಇದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ನಾವು ಶಾಂತಿ ಕದಡಲು ಇಲ್ಲಿ ಬಂದಿಲ್ಲ. ಹಿಂದು ಸಮಾಜವನ್ನು ನಾಶ ಮಾಡುವುದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಅವರಿಗೆ ತಾಕತ್ತಿದ್ದರೆ ಏಸು ಪ್ರತಿಮೆ ಮಾಡಲಿ. ಹಿಂದು ತಾಕತ್ತು ಏನು ಎಂದು …

Read More »

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ವಾರ್ಷಿಕ ಅಂದಾಜು 100 ಕೋಟಿ ರೂ.ಆದಾಯದೊಂದಿಗೆ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ.

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವಂತಹ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಪ್ರಮುಖ 10 ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿಯು ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ವಾರ್ಷಿಕ ಅಂದಾಜು 100 ಕೋಟಿ ರೂ. ಆದಾಯದೊಂದಿಗೆ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ 90 ರಿಂದ 92 ಕೋಟಿ ರೂ. ಆದಾಯದೊಂದಿಗೆ ಉಡುಪಿಯ ಕೊಲ್ಲೂರು ಮೂಕಾಂಬಿಕೆ …

Read More »

ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ಸೌ. ಶಶಿಕಲಾ ಜೊಲ್ಲೆ,

ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ” ಮಂಗಳೂರಿನ ಪಿ.ವಿ.ಎಸ್ ಸರ್ಕಲ್ ಬಳಿ ಇರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರನ್ನು ಅಕ್ಕರೆಯಿಂದ ಮಾತನಾಡಿಸಿ, ಹೂಗುಚ್ಛ …

Read More »

ವಿಮಾನ ನಿಲ್ದಾಣಕ್ಕೆಚೆನ್ನಮ್ಮನ ಹೆಸರನ್ನು ತಿರಸ್ಕರಿಸಿದ್ದೇಕೆ ಎನ್ನುವ ಪ್ರಶ್ನೆ ಎದ್ದಿದೆ.

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮನ ಹೆಸರನ್ನು ಇಡುವಂತೆ ರಾಜ್ಯ ಸಕಾ೯ರ ಮಾಡಿದ್ದ ಶಿಫಾರಸ್ಸನ್ನು ವಷ೯ದ ಹಿಂದೆಯೇ ತಿರಸ್ಕರಿಸಿರುವ ಕೇಂದ್ರ ಸಕಾ೯ರ, ಈಗ ಹೊಸದಾಗಿ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಸೂಚಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಕೇಂದ್ರದ ನಿಲುವಿನ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಿತ್ತೂರು ಚನ್ನಮ್ಮ ಐತಿಹಾಸಿಕ ವ್ಯಕ್ತಿ ಅಲ್ಲವೇ ಎಂದು ಚನ್ನಮ್ಮನ ಅನುಯಾಯಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧರಾಮಯ್ಯ ಸಕಾ೯ರ ಇದ್ದಾಗ, ವಿಮಾನ ನಿಲ್ದಾಣಕ್ಕೆ …

Read More »

ಗಾಂಧೀಜಿಯಿಂದ ರಸ್ತೆ ನಿಯಮಗಳ ಅರಿವು.

ಹೀಗೆ ರಸ್ತೆಯಲ್ಲಿ ನಾಮ ಫಲಕಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ರಸ್ತೆ ನಿಯಮಗಳ ಹಾಗೂ ದ್ವಿಚಕ್ರ ಸವಾರರಿಗೆ ಹೆಲ್ಮೆಟನ ಮಹತ್ವ ವನ್ನು ತಿಳಿಸುತ್ತಿರೋ ಈ ವ್ಯಕ್ತಿಯನ್ನು ನೋಡಿದ್ರೆ ಸೇಮ್ ನಾವು ಫೋಟೋದಲ್ಲಿ ,ಹಾಗೂ ನೋಟ ಗಳಲ್ಲಿ ಕಾಣೋ ಗಾಂಧಿ ತರಾನೆ ಇದಾರೆ ಅಂತಾ ನೀವು ಊಹೆ ಮಾಡ್ಕೊಂಡು ಇವರೇನಾ ನಮ್ಮ ಗಾಂಧಿ ಅಂತಾ ನೀವು ತಿಳ್ಕೊಂಡ್ರೆ ನಿಮ್ಮ ಊಹೆ ತಪ್ಪು… ಇವರೇನು ಗಾಂಧಿ ಅಲ್ಲ ಆದ್ರೆ ಗಾಂಧಿ ತತ್ವಗಳನ್ನು ಅನುಕರಿಸುತ್ತಿರೋ ಗಾಂಧಿ ಅನುವಾದಿ …

Read More »

ಈ ದೇಶದ ಯಾವ ಪ್ರಜೆಯನ್ನೂ ಧರ್ಮದ ಆಧಾರದ ಮೇಲೆ ಹೊರಹಾಕುವ ಯಾವುದೆ ಕಾನೂನುಗಳು ಇಲ್ಲ ಎಂದು ನ್ಯಾಯವಾದಿ ಎಮ್.ಬಿ.ಜೀರಲಿ ಹೇಳಿದರು.

ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರಪಂಚದ ಅಗ್ರಸ್ಥಾನದ ದೇಶ ಭಾರತವಾಗಿದ್ದು ಎಲ್ಲ ಜನಾಂಗಕ್ಕೆ ಶಾಂತಿಯದೋಟವಾಗಿದೆ. ಈ ದೇಶದ ಯಾವ ಪ್ರಜೆಯನ್ನೂ ಧರ್ಮದ ಆಧಾರದ ಮೇಲೆ ಹೊರಹಾಕುವ ಯಾವುದೆ ಕಾನೂನುಗಳು ಇಲ್ಲ ಎಂದು ನ್ಯಾಯವಾದಿ ಎಮ್.ಬಿ.ಜೀರಲಿ ಹೇಳಿದರು. ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಪದವಿ ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್.ವತಿಯಿಂದ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ2019ರ ಅಗತ್ಯತೆ ಮತ್ತು ವಾಸ್ತವಿಕತೆಯ ಜಾಗೃತಿ ಸಭೆಯ ಮುಖ್ಯ ಅತಿಥಿಗಳಾಗಿ ಮಾತನಾಡಿ, ಭಾರತ ದೇಶ ಅನೇಕ ಭಾಷೆ, ಸಾವಿರಾರು …

Read More »

ರಾಬರ್ಟ್‘ ಸಿನಿಮಾದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ’ರಾಬರ್ಟ್’ ಸಿನಿಮಾ ಈಗಾಗಲೇ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದೆ. ಸಂಕ್ರಾಂತಿ ಹಬ್ಬದಂದು ಚಿತ್ರದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದೆ. ಈ ನಡುವೆ ರಾಬರ್ಟ್ ಚಿತ್ರದಲ್ಲಿ ದರ್ಶನ್ ತ್ರಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಇದೀಗ ಅಭಿಮಾನಿಗಳ ಕಾತರವನ್ನು ಇಮ್ಮಡಿಗೊಳಿಸಿದೆ. ಈಗಾಗಲೇ ರಾಬರ್ಟ್ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇಲ್ಲಿಯವರೆಗೆ ‘ರಾಬರ್ಟ್‘ ಸಿನಿಮಾದಲ್ಲಿ ದರ್ಶನ್ ಅವರ ಪಾತ್ರದ ಬಗ್ಗೆ …

Read More »

‘ಸಂಕ್ರಾಂತಿ’ ಗೆ ತನ್ನದೇ ಆದ ವಿಶೇಷತೆ ಮತ್ತು ಆಧ್ಯಾತ್ಮಿಕ ಹಿನ್ನೆಲೆ ಇದೆ.

ಇಂದಿನ ಜಗತ್ತಿನಲ್ಲಿ ನಿಜವಾದ ಸ್ನೇಹ ಪ್ರೀತಿಯ ಕೊರತೆಯು ಎದ್ದು ಕಾಣುತ್ತಿದೆ. ಸಂಬಂಧಗಳಲ್ಲಿ ಆತ್ಮಿಯತೆ ಮಾಯವಾಗಿದೆ. ಮೊಬೈಲ್‌ಗಳಲ್ಲಿ ಮಾತನಾಡುವವರು ಪಕ್ಕದಲ್ಲಿ ಕುಳಿತವರ ಜೊತೆಗೆ ಮಾತನಾಡುವುದು ಕಡಿಮೆ ಆಗಿದೆ. ಟಿವಿ ಪರದೆಯ ಮೇಲೆ ಬರುವ ನೆಚ್ಚಿನ ಕಾರ್ಯಕ್ರಮಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆಯೇ ಹೊರತು ಅತಿಥಿಗಳ ಸತ್ಕಾರ ಮಾಡಲು ಜನರಿಗೆ ಸಮಯದ ಅಭಾವವಿದೆ. ಈ ದೃಶ್ಯಗಳು ಸಾಮಾನ್ಯವಾಗಿ ಎಲ್ಲರ ಮನೆಗಳಲ್ಲಿ ಕಾಣುತ್ತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಹೋಗಲಾಡಿಸಲು ನಮ್ಮ ಪೂರ್ವಜರು ಹಬ್ಬಗಳ ಆಚರಣೆಗೆ ಮಹತ್ವ …

Read More »

ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಸಾಹಿತಿ ಡಾ.ಎಂ.ಚಿದಾನಂದಮೂರ್ತಿ ನಿಧನ ಹಿನ್ನಲೆಯಲ್ಲಿ ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನೆರವೇರಿಸುತ್ತೇವೆ. ಚಿದಾನಂದಮೂರ್ತಿಯವರ ಸಾವು ನೋವುಂಟು ಮಾಡಿದೆ‌. ಕನ್ನಡ ನಾಡು, ನುಡಿ ಅಸ್ಮಿತೆಗಾಗಿ ಹೋರಾಟ ಮಾಡುತ್ತಿದ್ದವರು. ಅವರ ನಿಧನದಿಂದ ಕನ್ನಡ ಸ್ವಾರಸ್ವತಲೋಕಕ್ಕೆ ತುಂಬಾ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ. ನಾನು ಹಿಂದೆ ಸಿಎಂ ಆಗಿದ್ದಾಗಲೇ ಚಿದಾಮೂರ್ತಿಯವರಿಗೆ …

Read More »

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ‌ ವಿಧಿವಶರಾಗಿದ್ದಾರೆ.‌

ಹುಬ್ಬಳ್ಳಿ ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ‌ ವಿಧಿವಶರಾಗಿದ್ದಾರೆ.‌ ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ (87 ) ಇಂದು‌ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಹಲವಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಕ್ಕನಬಳಗದಲ್ಲಿ ಸಕ್ರಿಯರಾಗಿದ್ದರು‌. ಕೇಶ್ವಾಪುರದ ಶಬರಿ ನಗರದಲ್ಲಿ ತಮ್ನ ಇನ್ನೊಬ್ಬ ಪುತ್ರ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ನಿವಾಸದಲ್ಲಿ ಇದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ವಿಧಿವಶರಾಗಿದ್ದಾರೆ. ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ ನಿಧನಕ್ಕೆ …

Read More »