Breaking News

ರಾಜ್ಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ -4 ವರ್ಷದ ಬಾಲಕ ಸೇರಿ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ. ಜಯರಾಂ (28), ಸುಶೀಲಾ (26), ಆಕಾಶ್ (4) ಮೃತರು. ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಮೃತರು ರಾಜಸ್ಥಾನ ಮೂಲದವರಾಗಿದ್ದು ರಾಜಸ್ಥಾನ ದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು …

Read More »

ನಾಳೆ ಸಂಜೆ 4.30ಕ್ಕೆ ಪಿಯು ಫಲಿತಾಂಶ; ರಿಜಿಸ್ಟರ್​​ ನಂಬರ್​​, ರಿಸ್ಟಲ್ಟ್​​​​ ಪಡೆಯುವ ವಿಧಾನ ಇಲ್ಲಿದೆ

2020-21ನೇ ಸಾಲಿನ ಪಿಯುಸಿ ಫಲಿತಾಂಶ (PU Result) ನಾಳೆ ಸಂಜೆ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ. ನಾಳೆ ಸಂಜೆ 4. 30ಕ್ಕೆ ಪಿಯು ಮಂಡಳಿ ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಿದೆ. https://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶಕ್ಕೂ ಮುನ್ನ Know my register numbar ಮೂಲಕ ರಿಜಿಸ್ಟರ್​ ನಂಬರ್ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೊರೋನಾ ಹಿನ್ನಲೆ ಈ ಬಾರಿ ಪರೀಕ್ಷೆ ನಡೆಸದೇ ಎಸ್​ಎಸ್​ಎಲ್​ಸಿ …

Read More »

ಶ್ರುತಿಗೆ ಶಾಕ್, ಕಾಪುಸಿಗೆ ಮಣೆ: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಶ್ರುತಿ ಅವರ ನೇಮಕವನ್ನು ಸರ್ಕಾರ ಹಿಂಪಡೆದಿದೆ. ಅಚ್ಚರಿ ರೀತಿಯಲ್ಲಿ ಆ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಬಿದ್ದಿದೆ. ಈ ಬದಲಾವಣೆ ನಡೆದು 48 ತಾಸು ಕಳೆದರೂ ತೀರ್ಮಾನದ ವಿಷಯ ಶ್ರುತಿ ಅವರ ಗಮನಕ್ಕೆ ಬಂದಿಲ್ಲ. ಸರ್ಕಾರದ ಕಡೆಯಿಂದ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಶ್ರುತಿ ಅವರಿಗೆ ತಿಳಿಸುವ ಪ್ರಯತ್ನವನ್ನೂ ಮಾಡಿಲ್ಲ ಎನ್ನಲಾಗಿದೆ.ಶನಿವಾರ ಬೆಳಗ್ಗೆ ಆದೇಶ ಹೊರಟಿದ್ದು, ಭಾನುವಾರ ರಾತ್ರಿ …

Read More »

ಯಾರಿಗೂ ಹೇಳ್ಬೇಡಿ ಎನ್ನುತ್ತಲೇ ‘ಈ ಮೂವರಲ್ಲಿ ಯಾರೂ ಸಿಎಂ ಆಗಬಹುದು’ ಎಂದ ನಳಿನ್ ಕಟೀಲ್!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್‌ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ನಡೆಯುತ್ತಿರುವಾಗಲೇ ಈ ಆಡಿಯೋ ಸಂಚಲನ ಸೃಷ್ಟಿಸಿದೆ. ತುಳುವಿನಲ್ಲಿರುವ ಆಡಿಯೋದಲ್ಲಿ, ” ಯಾರಿಗೂ ಹೇಳ್ಬೇಡಿ, ಜಗದೀಶ್ ಶೆಟ್ಟರ್‌ ಮತ್ತು ಈಶ್ವರಪ್ಪ ತಂಡವನ್ನು ತೆಗೆದು ಹೊಸ ತಂಡ ಕಟ್ಟಲಾಗುವುದು. …

Read More »

ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ: ಈಶ್ವರಪ್ಪ,

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಳೀನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ನಡೆದಿದೆ, ಅವರನ್ನು ಬಲಿಪಶು ಮಾಡಲು ಹೊರಟಂತಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ಒಂದುವೇಳೆ ನನ್ನ ವಿರುದ್ಧ ಸಂಚು ನಡೆದರೂ ನಾನು ತಲೆ ಕೆಡಿಸಿಕೊಳ್ಳಲ್ಲ, ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ ಎಂದು ಅಸಮಾಧಾನ ಹೊಸಹಾಕಿದರು. ಇದೇ …

Read More »

ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ: ಯತ್ನಾಳ್ ಹೊಸ ಬಾಂಬ್ …!

ವಿಜಯಪುರ: ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರರಾದ ಬಿ.ವೈ ವಿಜಯೇಂದ್ರ, ರಾಘವೇಂದ್ರ ದೆಹಲಿ ಭೇಟಿ ವಿಚಾರದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ ಎಂದು ಹೊಸ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಯಾರ್ಯಾರೋ ದೆಹಲಿಗೆ ಹೋಗುತ್ತಾರೆ ಬೇರೆ ಬೇರೆ ರೀತಿಯ ಆಮಿಷಗಳನ್ನು ಒಡ್ಡಿ ಸಿಎಂ ಮಾಡಿ ಎನ್ನುತ್ತಾರೆ. 2000 ಕೋಟಿ ಕೊಡ್ತೀವಿ ನಮ್ಮನ್ನು ಸಿಎಂ ಮಾಡಿ …

Read More »

ಕಚ್ಚಾ ತೈಲ ಪೂರೈಕೆ ಹೆಚ್ಚಿಸಲು ಒಪೆಕ್+ ಸಮ್ಮತಿ

ಮಾಸ್ಕೊ/ದುಬೈ/ಲಂಡನ್: ಆಗಸ್ಟ್‌ ತಿಂಗಳಿನಿಂದ ಕಚ್ಚಾ ತೈಲ ಪೂರೈಕೆಯನ್ನು ಹೆಚ್ಚುಮಾಡಲು ಪೆಟ್ರೋಲಿಯಂ ರಫ್ತುದಾರ ರಾಷ್ಟ್ರಗಳ ಒಕ್ಕೂಟ (ಒಪೆಕ್) ಮತ್ತು ಆ ಒಕ್ಕೂಟದ ಮಿತ್ರರಾಷ್ಟ್ರಗಳ (ಒಪೆಕ್‌+) ಪ್ರತಿನಿಧಿಗಳು ಸಮ್ಮತಿ ಸೂಚಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ದುಷ್ಪರಿಣಾಮದಿಂದ ವಿಶ್ವದ ಅರ್ಥ ವ್ಯವಸ್ಥೆಯು ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯು ಎರಡೂವರೆ ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿತ್ತು. ಪೂರೈಕೆ ಜಾಸ್ತಿ ಮಾಡಲು ಒಪ್ಪಿರುವುದರ ಪರಿಣಾಮವಾಗಿ, ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತಗ್ಗಬಹುದು ಎನ್ನಲಾಗಿದೆ. ‘ಒಪ್ಪಂದವು …

Read More »

ಜಾತ್ರೆ ಬಿಟ್ಟು ಎಲ್ಲ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ

ಬೆಂಗಳೂರು : ನಾಳೆಗೆ ಮೂರನೇ ಹಂತದ ಅಲ್ ಲಾಕ್ ಅವಧಿ ಮುಗಿಯಲಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದಲ್ಲಿ ಇನ್ನಷ್ಟು ಲಾಕ್ ಡೌನ್ ಸಡಿಲಿಕೆಗೆ ನಿರ್ಧರಿಸಿದ್ದಾರೆ. ಮುಖ್ಯವಾಗಿ ಎಲ್ಲಾ ದೇವಾಲಯಗಳಲ್ಲಿ ಭಕ್ತರು ಸೇವೆ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಹಿಂದೆ ಅನ್ ಲಾಕ್ 3.0 ನಲ್ಲಿ ದೇವಾಲಯಗಳನ್ನು ಓಪನ್ ಮಾಡಿದ್ರೂ, ಜನರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ಹೊರೆತುಪಡಿಸಿದರೆ ಪ್ರಸಾದ, ತೀರ್ಥ, ವಿಶೇಷ ಪೂಜೆ, ಸೇವೆಗಳಿಗೆ ನಿಷೇಧ …

Read More »

ಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ, ರಾಜ, ರಾಣಿ, ರೋರರ್, ರಾಕೆಟ್ ನಾಪತ್ತೆ

ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ. ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಧುಮ್ಮಿಕ್ಕುವ ಸದ್ದು ಕೇಳುತ್ತಿದೆ. ಆದರೆ ಜಲಪಾತವನ್ನು …

Read More »

ಸಂಸತ್ ಮುಂಗಾರು ಅಧಿವೇಶನ; ಚರ್ಚೆಗೆ ಸರ್ವಪಕ್ಷಗಳು ಅಣಿ

ನವದೆಹಲಿ, ಜುಲೈ 19: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸದ್ಯಕ್ಕೆ ದೇಶದಲ್ಲಿನ ಸಮಸ್ಯೆಗಳಾದ ಇಂಧನ ಬೆಲೆ ಏರಿಕೆ, ಕೊರೊನಾ ನಿರ್ವಹಣೆ, ರೈತರ ಪ್ರತಿಭಟನೆ, ಲಸಿಕೆಯ ಕೊರತೆಯಂಥ ವಿಚಾರಗಳನ್ನು ಚರ್ಚೆ ಮಾಡುವ ಸಾಧ್ಯತೆಯಿದೆ. ಜುಲೈ 19ರಿಂದ 17ನೇ ಲೋಕಸಭೆಯ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಆಗಸ್ಟ್‌ 13ರಂದು ಮುಕ್ತಾಯವಾಗಲಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆದ ನಂತರ ನಡೆಸಲಾಗುತ್ತಿರುವ ಮೊದಲ ಮುಂಗಾರು ಅಧಿವೇಶನ ಇದಾಗಿದೆ. ಕಳೆದ …

Read More »