Breaking News

ರಾಜ್ಯ

ಮೇಕೆದಾಟು: ಪರ್ಯಾಯ ಭೂಮಿ ಹಂಚಿಕೆಗೆ ಪ್ರಸ್ತಾವ

ರಾಮನಗರ: ಬಹು ನಿರೀಕ್ಷಿತ ಮೇಕೆದಾಟು ಅಣೆಕಟ್ಟೆ ನಿರ್ಮಾಣದಿಂದ ಸಾವಿರಾರು ಹೆಕ್ಟೇರ್‌ನಷ್ಟು ಅರಣ್ಯ ಪ್ರದೇಶ ಮುಳುಗಡೆ ಆಗಲಿದ್ದು, ಅದಕ್ಕೆ ಪ್ರತಿಯಾಗಿ ಅಷ್ಟೇ ಪ್ರಮಾಣದ ಅರಣ್ಯ ಬೆಳೆಸಲು ಸಿದ್ಧತೆ ನಡೆದಿದೆ. ಇದಕ್ಕಾಗಿ ಸದ್ಯದಲ್ಲೇ ರಾಮನಗರ ಜಿಲ್ಲಾಡಳಿತದಿಂದ ಅರಣ್ಯ ಇಲಾಖೆಗೆ ಭೂಮಿ ಹಸ್ತಾಂತರವೂ ಆಗಲಿದೆ. ಜಿಲ್ಲೆಯಲ್ಲಿರುವ ಸಂಗಮ-ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ₹ 9 ಸಾವಿರ ಕೋಟಿ ವೆಚ್ಚದಲ್ಲಿ ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಜಲಾಶಯಕ್ಕಾಗಿ ಸುಮಾರು 4,996 ಹೆಕ್ಟೇರ್‌ ಪ್ರದೇಶವು ಮುಳುಗಡೆ …

Read More »

ಮುಖಕ್ಕೆ ಧರಿಸಬೇಕಿದ್ದ ಮಾಸ್ಕನ್ನು ಸಚಿವರು ಎಲ್ಲಿ ಹಾಕಿಕೊಂಡಿದ್ದಾರೆ ನೋಡಿ- ಜಾಲತಾಣದಲ್ಲಿ ಟ್ರೋಲ್​

ಡೆಹ್ರಾಡೂನ್: ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಆಗಿದ್ದಾರೆ. ಇದಕ್ಕೆ ಕಾರಣ ಅವರು ಧರಿಸಿರುವ ಮಾಸ್ಕ್​. ಮಾಸ್ಕ್​ ಅನ್ನು ಮುಖಕ್ಕೆ ಹಾಕಿಕೊಳ್ಳದೇ ಸಭೆಯೊಂದರಲ್ಲಿ ಅದನ್ನು ಕಾಲಿನ ಬೆರಳಿಗೆ ಸಿಕ್ಕಿಸಿಕೊಂಡು ಕುಳಿತಿದ್ದು ಜಾಲತಾಣದಲ್ಲಿ ಫೋಟೋ ವೈರಲ್​ ಆಗಿದೆ. ಸೋಫಾ ಮೇಲೆ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಸಚಿವರು ತಮ್ಮ ಕಾಲಿನ ಬೆರಳಿನಲ್ಲಿ ಮಾಸ್ಕ್ ಸಿಕ್ಕಿಸಿಕೊಂಡಿದ್ದಾರೆ. ಸಚಿವರೇ ಈ ರೀತಿ ಕರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು …

Read More »

ಶಾಸಕರು, ಮಾಜಿ ಶಾಸಕರು ಸೇರಿ 24 ಮಂದಿಗೆ ಬೆಂಗಳೂರು ಸಿಬಿಐ ಕೋರ್ಟ್​ನಿಂದ ಸಮನ್ಸ್ ಜಾರಿ

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ(Mandya Urban Development Authority) ಹಗರಣ ಪ್ರಕರಣಕ್ಕೆ ಸಂಬಂಧಿಸಿ ಶಾಸಕರು, ಮಾಜಿ ಶಾಸಕರು, ಮಾಜಿ ಅಧ್ಯಕ್ಷರಿಗೆ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್‌ನಿಂದ(CBI Court) ಸಮನ್ಸ್ ಜಾರಿ ಮಾಡಲಾಗಿದೆ. 2009ರಲ್ಲಿ ನಡೆದಿದ್ದ 107 ಸೈಟ್ ಅಕ್ರಮ ಹಂಚಿಕೆ ಕೇಸ್ ದಾಖಲಿಸಿಕೊಂಡು ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. 24 ಜನರ ವಿರುದ್ಧ ಸಿಬಿಐನಿಂದ ದೋಷಾರೋಪ ಪಟ್ಟಿ ಸಿದ್ಧವಾಗಿತ್ತು. ಸದ್ಯ ಸಿಬಿಐ ಚಾರ್ಜ್‌ಶೀಟ್ ಆಧಾರದ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ. …

Read More »

ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಗಮನಿಸಿ: ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ಶಾಲೆ ಎದುರು ವಿದ್ಯಾರ್ಥಿ, ಕುಟುಂಬದವರಿಂದ ಧರಣಿ

ಬಾಗಲಕೋಟೆ: ಇನ್ನೇನು ಜುಲೈ 19 ಎದುರಿಗೆ ಇದೆ. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗುವ ದಿನ. ಅದರೆ ದುರ್ದೈವ ಅಂದ್ರೆ ಇನ್ನೂ ಅನೇಕ ವಿದ್ಯಾರ್ಥಿಗಳಿಗೆ ಹಾಲ್​ ಟಿಕೆಟ್​​ ಕೈಗೆ ಸೇರಿಲ್ಲ. ಇದಕ್ಕೆ ಶಾಲಾ ಆಡಳಿತ ಮಂಡಳಿಗಳ ದಿವ್ಯ ನಿರ್ಲಕ್ಷ್ಯ ಕಾರಣವಾಗಿದೆ. ಜೊತೆಗೆ ಅದೇಕೋ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸಹ ಈ ನತದೃಷ್ಟ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸದೆ ಮೌನಕ್ಕೆ ಶರಣಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ವಿದ್ಯಾರ್ಥಿ …

Read More »

ಮೋದಿ, ಶಾ ಭೇಟಿಗಾಗಿ ಸಿಎಂ ಯಡಿಯೂರಪ್ಪ ದೆಹಲಿಗೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆಗೆ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಶುಕ್ರವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಅವರು ದೆಹಲಿಗೆ ತೆರಳಲಿದ್ದಾರೆ. ಸಂಜೆ 7 ಕ್ಕೆ ಪ್ರಧಾನಿ ಮೋದಿಯವರು ಸಮಯ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಇದೇ ಸಂದರ್ಭದಲ್ಲಿ ಅವರು ಮೇಕೆದಾಟು ಸಮತೋಲನ ಅಣೆಕಟ್ಟೆ ಯೋಜನೆಗೆ ಅನುಮತಿ …

Read More »

ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್

ಬೆಂಗಳೂರು: 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವುದನ್ನು ನಿರ್ಬಂಧಿಸಿದ್ದ ಕೆಪಿಟಿಸಿಎಲ್ ನ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ತಂದೆ ತಾಯಿ ಇಲ್ಲದೇ ಮಕ್ಕಳು ಜನಿಸುವುದಿಲ್ಲ. ತಂದೆ ತಾಯಿ ಮಧ್ಯೆ ಅನೈತಿಕ ಸಂಬಂಧವಿರಬಹುದು. ಆದರೆ ಅನೈತಿಕ ಮಕ್ಕಳಿರುವುದಿಲ್ಲ. ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ …

Read More »

ಮಹಾ ಮಳೆಗೆ ಕೊಡಗು ಜಿಲ್ಲೆಯಲ್ಲಿ ಮೊದಲ ಬಲಿ

ಕೊಡಗು : ಮಹಾ ಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಮಡಿಕೇರಿಯ ಆವಂದೂರು ಗ್ರಾಮದ ಕಿರು ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಮೃತದೇಹ ಪತ್ತೆಯಾಗಿದೆ. ಬಾಬಿ ಚಿಣ್ಣಪ್ಪ(70) ಮೃತರಾಗಿದ್ದಾರೆ. ಬಾಬಿ ಚಿಣ್ಣಪ್ಪ ನಿನ್ನೆ ಸಂಜೆ ಕಿರು ಹೊಳೆ ದಾಟುವಾಗ ಆಯತಪ್ಪಿ ಬಿದ್ದು, ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿಹೋಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯಚರಣೆ ಮುಂದುವರೆಸಿದ್ದರು. ಆದ್ರೆ ಮಳೆ ಹೆಚ್ಚಾದ ಕಾರಣ ಕಾರ್ಯಚರಣೆ ಸ್ಥಗಿತಗೊಳಿಸಿದ್ದರು. ಇಂದು …

Read More »

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 38,949 ಕೋವಿಡ್ ಪ್ರಕರಣ ಪತ್ತೆ, 542 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕಳೆದ 24ಗಂಟೆಯಲ್ಲಿ 39,949 ಕೋವಿಡ್ ಪ್ರಕರಣ ವರದಿಯಾಗಿದೆ. ಅಲ್ಲದೇ 542 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 16) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.   ದೇಶದಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 4,30,422ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 542 ಮಂದಿ ಸಾವನ್ನಪ್ಪಿದ್ದು, 40,026 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ …

Read More »

ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ -ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೇಕೆದಾಟು ಜಲಾಶಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ. ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಿಎಮ ಚರ್ಚಿಸಲಿದ್ದಾರೆ. ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ, ಡಿಸಿಎಂ ಗೋವಿಂದ …

Read More »

ಬೆಳಗಾವಿಯ ಹೊರ ವಲಯದಲ್ಲಿ ಕಂಟೇನರ್​ಗೆ ಲಾರಿ ಡಿಕ್ಕಿ

ಬೆಳಗಾವಿ: ಕಂಟೇನರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಹೊರ ವಲಯದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬಳಿಯ ವಂಟಮೂರಿ ಘಾಟ್‍ನಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಶಿಗ್ಗಾಂವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್, ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ಡಿವೈಡರ್ ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ …

Read More »