Breaking News

ರಾಜ್ಯ

ಹೈದ್ರಾಬಾದನಲ್ಲಿ ತೆಲಂಗಾಣ ಅಣುಕು ಶಾಸನ ಸಭೆ ಸ್ಪರ್ಧೆ ಸಂಜನಾ ಪಾಟೀಲಗೆ ಗೌರವ

ಹೈದ್ರಾಬಾದನಲ್ಲಿ ತೆಲಂಗಾಣ ಅಣುಕು ಶಾಸನ ಸಭೆ ಸ್ಪರ್ಧೆ ಸಂಜನಾ ಪಾಟೀಲಗೆ ಗೌರವ ಹೈದ್ರಾಬಾದಿನಲ್ಲಿ ನಡೆದ ಅನಕು ಶಾಸನ ಸಭೆ ಸ್ಪರ್ಧೆಯಲ್ಲಿ ಸಂಜನಾ ಪಾಟೀಲ ಭಾಗವಹಿಸಿ ಅತ್ಯುತ್ತಮ ಅಣುಕು ಶಾಸಕಿಯಾಗಿ ತೆಲಂಗಾಣ ರಾಜ್ಯಪಾಲರ ಗೌರವಕ್ಕೆ ಪಾತ್ರರಾಗಿದ್ದಾಳೆ ಇತ್ತೀಚೆಗೆ ತೆಲಂಗಾಣ ರಾಜ್ಯದ ಹೈದ್ರಾಬಾದನಲ್ಲಿ ಅಂಡರ್ ಏಟೀನ್ ವರ್ಲ್ಡ್ ನ್ಯಾಶನಲ್ ಆರ್ಗನೈಸೇಷನ್ ನಿಂದ ೧೦ ನೇ ತರಗತಿ ಒಳಗಿನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಣುಕು ಶಾಸನ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ …

Read More »

ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್

ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಜಾನಪದ ಗಾಯಕ ಮಾರುತಿ ಲಕ್ಕೆ ನಡೆದ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುತಿ ಅವರ ತಂದೆ ನೀಡಿದ ದೂರಿನ ಮೇರೆಗೆ ರಾಯಬಾಗ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳಾದ ಸಿದ್ರಾಮನಿ ಮತ್ತು ಆಕಾಶ ಪೂಜಾರಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. …

Read More »

ಶಾಲಾ ಮಗುವಿನ ಬಿಸಿಯೂಟಕ್ಕೆ ₹12, ಬೀದಿನಾಯಿಗೆ ₹22′: ಬಿಬಿಎಂಪಿ ‘ಚಿಕನ್​ ಬಿರಿಯಾನಿ’ ಯೋಜನೆಗೆ ತೀವ್ರ ಟೀಕೆ

ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಚಿಕನ್​ ಬಿರಿಯಾನಿ ಊಟ ನೀಡಲು ಉದ್ದೇಶಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಯೋಜನೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಯೋಜನೆಯ ಸ್ವರೂಪ, ಖರ್ಚು, ಅನುಷ್ಠಾನ ಮತ್ತು ಆದ್ಯತೆಯ ಬಗ್ಗೆ ಜನರು ಪ್ರಶ್ನೆ ಎತ್ತಿದ್ದಾರೆ. ಇತ್ತೀಚೆಗೆ ಬಿಬಿಎಂಪಿ ಅಧಿಕಾರಿಗಳು ಬೀದಿ ನಾಯಿ ರಕ್ಷಣೆಗೆ ಹೊಸ ಯೋಜನೆಯ ರೂಪಿಸುವುದಾಗಿ ಘೋಷಿಸಿದ್ದರು. ಅದರಂತೆ ನಗರದಲ್ಲಿನ ಆಯ್ದ ಬೀದಿನಾಯಿಗಳಿಗೆ ಚಿಕನ್​ ಬಿರಿಯಾನಿ ಊಟ ನೀಡಲಾಗುವುದು ಎಂದು ತಿಳಿಸಿದ್ದರು. ಈಗಾಗಲೇ ನಾಯಿಗಳ ಉಪಟಳ, …

Read More »

ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಿಗಂದೂರು ಸೇತುವೆಯನ್ನು ಇಂದು ಬೆಳಗ್ಗೆ ಉದ್ಘಾಟಿಸಲಿದ್ದಾರೆ

ಶಿವಮೊಗ್ಗ: ದೇಶದ ಅತಿ ಉದ್ದದ ಎರಡನೇ ಕೇಬಲ್​ ಸೇತುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ಸೇತುವೆಯನ್ನು ಇಂದು (ಜು.14) ಕೇಂದ್ರದ ಭೂ ಸಾರಿಗೆ ಸಚಿವರಾದ ನಿತಿನ್​ ಗಡ್ಕರಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಬಹುನಿರೀಕ್ಷಿತ ಈ ಸೇತುವೆಯು ಶರಾವತಿ ದ್ವೀಪದ ಜನರ ದಶಕಗಳ ಬೇಡಿಕೆಯಾಗಿತ್ತು. 2010ರಲ್ಲಿ ಪ್ರಾರಂಭವಾದ ಸೇತುವೆಯು 2025ರಲ್ಲಿ ಮುಕ್ತಾಯವಾಗಿದೆ. ಸೇತುವೆಗೆ ಸುಮಾರು 423.15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಸಾಗರ ಪಟ್ಟಣದಿಂದ ಹೊಸನಗರ ತಾಲೂಕಿನ ಮರಕುಟುಕದ ತನಕ ಗ್ರಾಮೀಣ …

Read More »

ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿ: ಇನ್ನೊಂದು ದಿನ ನಿಗದಿಗೆ ಕೋರಿ ಕೇಂದ್ರ ಸಚಿವ ಗಡ್ಕರಿಗೆ ಸಿಎಂ ಪತ್ರ

ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದ ಬಗ್ಗೆ ಮುಂಗಡವಾಗಿ ನನಗೆ ಮಾಹಿತಿ ನೀಡಿಲ್ಲ. ಹೀಗಾಗಿ ಕಾರ್ಯಕ್ರಮವನ್ನು ಮುಂದೂಡಿ, ಇನ್ನೊಂದು ದಿನ ನಿಗದಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸೋಮವಾರ (ಜುಲೈ 14) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬಹು ನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ.‌ ಆದರೆ, …

Read More »

ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ

ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದ ಚಿಕ್ಕೋಡಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ, ಕ್ಯಾರಂ ಹಾಗೂ ಚೆಸ್ ಸ್ಪರ್ಧೆಗಳ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಈ ವೇಳೆ ರಾಜ್ಯಸಭಾ ಸದಸ್ಯ ಶ್ರೀ …

Read More »

ಕುಮಾರ್ ಗಂಧರ್ವ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಇಂದು ಬೆಳಗಾವಿ ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ತೋಂಟದಾರ್ಯ ಮಠದ ಶ್ರೀ ನಿಜಗುಣ ಮಹಾಸ್ವಾಮಿಗಳು, ಶಾಸಕ ಶ್ರೀ ಆಸೀಫ್ ಸೇಠ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀ ಸಿ.ಎಸ್. ಷಡಾಕ್ಷರಿ ಹಾಗೂ …

Read More »

ಸಾವಿರ ರೂಪಾಯಿಗೆ ಕಿರಿಕ್, ಹಣ ವಾಪಸ್ ಕೇಳಿದ್ದಕ್ಕೆ ಇಬ್ಬರ ಮೇಲೆ ಚಾಕು ಇರಿತ

ನೆಲಮಂಗಲ : ಪ್ರೀತಿಸುವಾಗ ಕೊಟ್ಟಿದ್ದ ಹಣವನ್ನು ವಾಪಸ್ ಕೇಳಿದ ಯುವಕನಿಗೆ ಪ್ರೇಯಸಿಯ ಸ್ನೇಹಿತರು ಚಾಕು ಇರಿದಿರುವ ಘಟನೆ ನೆಲಮಂಗಲ ಟೌನ್​​ನ ಜೆಪಿ ಹಾಸ್ಟೆಲ್ ಮುಂಭಾಗದ ವಿನಾಯಕ ಜ್ಯೂಸ್ ಸೆಂಟರ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಚೇತನ್ ಮತ್ತು ಸುದೀಪ್ ಎಂಬುವರ ಮೇಲೆ ನಾಲ್ವರು ಯುವಕರು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಚೇತನ್ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದೀಪ್ ಬೆನ್ನಿನ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಸುದೀಪ್ ನೆಲಮಂಗಲ …

Read More »

ಹಿರಿಯ ಪತ್ರಕರ್ತ ಕೆ.ಬಿ. ಗಣಪತಿ ಹೃದಯಾಘಾತದಿಂದ ನಿಧನ

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಅವರು ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಭಾನುವಾರ ಹೃದಯಾಘಾತದಿಂದ ನಿಧನರಾದರು. ಕಳೆದ 50 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಅವರು ಮೂಲತಃ ಕೊಡಗಿನವರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀಲರಾಗಿದ್ದವರು. ಮುಂಬೈನ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಿಂದ ವೃತ್ತಿ ಜೀವನ …

Read More »

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ಕಾರು ಅಪಘಾತ; ಮೂವರು ಸಾವು

ರಾಮನಗರ: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ, ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವನಿಗೆ ತೀವ್ರ ಗಾಯಗಳಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಜಯಪುರ ಬ್ರಿಡ್ಜ್​ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಗಂಭೀರ ಗಾಯಗೊಂಡ ಮತ್ತೋರ್ವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಮಂಡ್ಯ ಜಿಲ್ಲೆಯ ಕೆ.ಆರ್​. ಪೇಟೆ ಮೂಲದವರಾಗಿದ್ದಾರೆ. ಮೃತರನ್ನು ಮುತ್ತುರಾಜು (55), ತಮ್ಮನಗೌಡ …

Read More »