ಬೆಂಗಳೂರು (ಜುಲೈ 10); ರಾಜ್ಯ ಪ್ರಾದೇಶಿಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಸಾರ್ವಜನಿಕವಾಗಿ ಕಾಂಗ್ರೆಸ್ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ಮೂಲಕ ಸುದ್ದಿಯಾಗಿದ್ದರು. ಡಿ.ಕೆ. ಶಿವಕುಮಾರ್ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ, ಈ ವಿಡಿಯೋವನ್ನು ರಾಷ್ಟ್ರೀಯ ಮಾಧ್ಯಮಗಳೂ ಪ್ರಸಾರ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷರ ವರ್ತನೆಯನ್ನು ಕಟುವಾಗಿ ವಿಮರ್ಶೆ ಮಾಡಿತ್ತು. ಕರ್ನಾಟಕ ಬಿಜೆಪಿ ಘಟಕ ಸಹ ಡಿಕೆ ಶಿವಕುಮಾರ್ ಅವರ ಈ …
Read More »ಶಿಕ್ಷಣ ಹಕ್ಕು ಕಾಯ್ದೆಯಡಿ ಮೊದಲ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಶೈಕ್ಷಣಿಕ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದ್ದು, ಇದರ ಮಧ್ಯೆಯೂ ಈ ಹಿಂದಿನಂತೆ ಪ್ರವೇಶ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ ಅಡಿ ಈಗಾಗಲೇ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಅವಧಿಯನ್ನು ಜುಲೈ 16ರ …
Read More »ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ” ಎಂದರು. ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ …
Read More »ಬೈಕ್ ಅಪಘಾತ : ಸ್ಥಳದಲ್ಲಿಯೇ ಇಬ್ಬರ ಸಾವು.
ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ. ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ. ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ …
Read More »ವಿಜಯಪುರ ಕಲ್ಲು ಗಣಿಗಾರಿಕೆ ಸ್ಫೋಟಕ ಪ್ರಕರಣ ತನಿಖೆ ನಡೆಯುತ್ತಿದೆ : ನಿರಾಣಿ
ವಿಜಯಪುರ : ಗುರುವಾರ ಸಂಜೆ ವಿಜಯಪುರ ನಗರದ ಹೊರ ವಲಯದಲ್ಲಿನ ಕಲ್ಲು ಗಣಿಗಾರಿಕೆ ಯಲ್ಲಿ ನಡೆದ ಸ್ಫೋಟದ ದುರಂತದ ಕುರಿತು ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರ ಬರಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಗಣಿ- ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ಶುಕ್ರವಾರ ದುರಂತ ನಡೆದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಅಲಿಯಾಬಾದ್, ಐನಾಪುರ …
Read More »ಎಚ್ಡಿಕೆ-ಸುಮಲತಾ ವಾಕ್ ಸಮರ ತಮಾಷೆಯಾಗಿದೆ ,ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಸವದಿ
ವಿಜಯಪುರ: ಮಂಡ್ಯ ಅಕ್ರಮ ಗಣಿಗಾರಿಕೆ ಹಾಗೂ ಕೆ ಆರ್ ಎಸ್ ಜಲಾಶಯದ ವಿಷಯದಲ್ಲಿ ಮಾಜಿ ಸಿ.ಎಂ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ಮಧ್ತೆ ನಡೆಯುತ್ತಿರುವ ವಾಕ್ಸಮರ ಜೋರಾಗಿದೆ. ಇಬ್ಬರ ಹೇಳಿಕಗಳು ಜನರಿಗೆ ನೋಡಲು, ಕೇಳಲು ತಮಾಷೆಯಾಗಿದ್ದರೂ ಕೇಳಲು ನಮಗೆ ಸಮಯವಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಇಬ್ಬರನ್ನೂ ಕುಟುಕಿದ್ದಾರೆ. ಶುಕ್ರವಾರ ಸಂಜೆ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೃಷ್ಣರಾಜ ಸಾಗರ ಜಲಾಶಯದ ಕುರಿತು ಮುಖ್ಯ ಅಭಿಯಂತರರಿಂದ ಸರ್ಕಾರ ಸ್ಪಷ್ಟಿಕರಣ …
Read More »ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಆಪ್ತ ಸೊಮು ನ್ಯಾಮಗೌಡ ನ್ಯಾಯಾಂಗ ಬಂಧನ
ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಬಿಐ ವಶಕ್ಕೆ ಪಡೆದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿ ಸೋಮು ನ್ಯಾಮಗೌಡ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಈಗಾಗಲೇ ಹಲವು ಬಾರಿ ಸೋಮು ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ ಗುರುವಾರ ಬೆಳಗ್ಗೆ ಗದಗದಲ್ಲಿ ನ್ಯಾಮಗೌಡ ಅವರನ್ನು ವಶಕ್ಕೆ ತೆಗೆದುಕೊಂಡು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ಗೆ ಒಳಪಡಿಸಲಾಗಿತ್ತು. ಶುಕ್ರವಾರ …
Read More »ಇದೇ 25ರಂದು ಕೆ-ಸೆಟ್ ಪರೀಕ್ಷೆ
ಕೊರೊನಾ ಹಿನ್ನೆಲೆ ಮುಂದೂಡಲಾಗಿದ್ದ ಕೆ-ಸೆಟ್( ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ)ಯನ್ನು ಇದೇ ತಿಂಗಳ 25ರಂದು ನಡೆಯಲಿದೆ. ಮರುದಿನ ನಿಗದಿ ಮಾಡಿ ಮೈಸೂರು ವಿವಿ ಪ್ರಕಣೆಯಲ್ಲಿ ತಿಳಿಸಿದೆ. ಈ ಹಿಂದೆ ಏಪ್ರಿಲ್ 11ರಂದು ಕೆ-ಸೆಟ್ ಪರೀಕ್ಷೆಯನ್ನು ನಿಗದಿ ಮಾಡಲಾಗಿದ್ದು. ಕೋವಿಡ್ 2ನೇ ಅಲೆಯಿಂದಾಗಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶ ಹೊರಡಿಸಿತ್ತು. ಇದೀಗ ಜುಲೈ 25ರಂದು ಪರೀಕ್ಷೆ ನಡೆಯಲಿದೆ ಎಂದು ಮೈಸೂರು ವಿವಿ ತಿಳಿಸಿದೆ.
Read More »“ರಸ್ತೆ ಬದಿಯಲ್ಲಿ ಸಸ್ಯೀಕರಣ” ಕಾರ್ಯಕ್ಕೆ ಗಿಡ ನೆಡುವ ಮೂಲಕ ಚಾಲನೆ
ದೇಶದ 75ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ, ರಸ್ತೆ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ಶಾಸಕರಾದ ಶ್ರೀ ಅಭಯ್ ಪಾಟೀಲ್ ಅವರೊಂದಿಗೆ “ರಸ್ತೆ ಬದಿಯಲ್ಲಿ ಸಸ್ಯೀಕರಣ” ಕಾರ್ಯಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯೋಗಿತಾ ಪರಶುರಾಮ, ಗ್ರಾ.ಪಂ. ಸದಸ್ಯರಾದ ಶ್ರೀ ಅಶೋಕ ರುದ್ರೇಗೌಡ ಪಾಟೀಲ್, ಶ್ರೀ ಕೊನೇರಿ ಬಸವಂತ, ಶ್ರೀ ಮನೋಹರ …
Read More »ಎಲ್ಲರಿಗೂ ಲಸಿಕೆ, ಎಲ್ಲರಿಗೂ ಉಚಿತ! : ಮಂಗಳಾ ಅಂಗಡಿ
ಇಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬೆಳಗುಂದಿ ಗ್ರಾಮದಲ್ಲಿ, ಕೋವಿಡ್ 19 ಉಚಿತ ಲಸಿಕಾಕರಣ ಅಭಿಯಾನಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆನು. ಪ್ರತಿಯೊಬ್ಬ ನಾಗರಿಕರೂ ಕೋವಿಡ್ ಲಸಿಕೆ ಪಡೆದು, ದೇಶವನ್ನು ಕೊರೋನಾ ಸೋಂಕು ಮುಕ್ತ ಮಾಡಲು ಕೈಜೋಡಿಸುವಂತೆ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಮಾಜಿ ಅಧ್ಯಕ್ಷರಾದ ಶ್ರೀ ವಿನಯ್ ಕದಮ್, ಬೆಳಗುಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹೇಮಾ ಹದಗಲ್, ಉಪಾಧ್ಯಕ್ಷರಾದ ಶ್ರೀ ಬಾಲು …
Read More »
Laxmi News 24×7