ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲ್ಲೂಕಿನ ವಿವಿಧ ಕಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರು ಕುಳಗೇರಿ ಕ್ರಾಸ್ನಲ್ಲಿರುವ ನಾಲ್ಕೈದು ಮನೆಗಳಿಗೆ ನುಗ್ಗಿದೆ. ಅಸ್ಲಮ್ ದಾಸ್ಯಾಳ ಎಂಬುವವರ ಮನೆ ಸೇರಿದಂತೆ ಐದು ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಾತ್ರೆ-ಪಗಡೆ, ಮನೆಯಲ್ಲಿರುವ ವಿವಿಧ ವಸ್ತುಗಳು ಜಲಾವೃತಗೊಂಡಿದ್ದವು. ಹೀಗಾಗಿ ಬುಟ್ಟಿ, ಬಕೆಟ್ ನಿಂದ ನಿವಾಸಿಗಳು ನೀರನ್ನು ರಾತ್ರಿಯಿಂದ ಬೆಳಗ್ಗೆವರೆಗೂ ಹೊರ ಹಾಕಿದ ಪ್ರಸಂಗ ಕೂಡ ನಡೆದಿದೆ. ಮಳೆ ಬಂದಾಗೆಲ್ಲಾ …
Read More »ಇಂದು ಕೊರೊನಾ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿತರಾದ 28.64 ಲಕ್ಷ ಮಂದಿಯಲ್ಲಿ 27.90 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಹೊಸದಾಗಿ 2,530 ಮಂದಿ ಕೋವಿಡ್ ಪೀಡಿತರಾಗಿರುವುದು ಹಾಗೂ ಸೋಂಕಿತರಲ್ಲಿ 3,344 ಮಂದಿ ಗುಣಮುಖರಾಗಿರುವುದು ಗುರುವಾರ ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.57 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇ 1.60ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಬೆಂಗಳೂರಿನಲ್ಲಿ 514 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ರ ಗಡಿಯೊಳಗೆ ವರದಿಯಾಗಿವೆ. …
Read More »ಯೋಗೇಶಗೌಡ ಹತ್ಯೆ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಿ ಹೊರಡಿಸಲಾದ ಆದೇಶದ ಸಿಂಧುತ್ವ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಕುರಿತು ಎರಡನೇ ಎಫ್ಐಆರ್ ದಾಖಲಿಸಿರುವ ಸಿಬಿಐ ಕ್ರಮವನ್ನು ಪ್ರಶ್ನಿಸಿ ಚಂದ್ರಶೇಖರ ಇಂಡಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಎರಡೂ ಅರ್ಜಿಗಳಿಗೆ ಸಂಬಂಧಿಸಿದಂತೆ ಜುಲೈ 24ರೊಳಗೆ ಪ್ರತಿಕ್ರಿಯೆ ನೀಡಬೇಕು …
Read More »ಬೆಂಬಲ ಬೆಲೆ ಬಾಕಿ ಹಣ ಬಿಡುಗಡೆ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿ ರೈತರಿಂದ ಆಹಾರ ಧಾನ್ಯ ಖರೀದಿಸಿದ ಬಾಕಿ ಇರುವ 721 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಗುರುವಾರ ನಡೆದ ಸಂಪುಟ ಉಪ ಸಮಿತಿ ತೀರ್ಮಾನಿಸಿದ್ದು, 2-3 ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿದೆ ಎಂದು ಸಮಿತಿ ಅಧ್ಯಕ್ಷರೂ ಆಗಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸಭೆಯ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಲ್ಕೈದು ತಿಂಗಳ ಹಿಂದೆಯೇ ರಾಗಿ, ಭತ್ತ, ಗೋಧಿಯನ್ನು ಕನಿಷ್ಠ ಬೆಂಬಲ …
Read More »ಇನ್ನು 10 ದಿನಗಳ ನಂತರ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಮಾಡುವ ಅನಿವಾರ್ಯತೆ ಬರಬಹುದೇ?
ಬೆಂಗಳೂರು – ರಾಜ್ಯದಲ್ಲಿ ಜುಲೈ 19ರಿಂದ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ? ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ನೀಡಿರುವ ಹೇಳಿಕೆಗಳು ಮತ್ತೊಮ್ಮೆ ಲಾಕ್ ಡೌನ್ ಆತಂಕವನ್ನು ತಂದಿಟ್ಟಿದೆ. ಕರ್ನಾಟಕದಲ್ಲಿ 1500ಕ್ಕಿಳಿದಿದ್ದ ನಿತ್ಯದ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ 2500 – 3000ಕ್ಕೇರಿದೆ. ಕೇರಳದಲ್ಲಿ ಪ್ರತಿ ದಿನ 8 ಸಾವಿರಕ್ಕಿಳಿದಿದ್ದ ಸೋಂಕಿತರ ಸಂಖ್ಯ ಈಗ 15 ಸಾವಿರಕ್ಕೇರಿದೆ. ಮಹಾರಾಷ್ಟ್ರದಲ್ಲಿ …
Read More »ನೌಕರರ ವರ್ಗಾವಣೆ ಅಧಿಕಾರ ಸಚಿವರಿಗೆ
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಸರಕಾರಿ ನೌಕರರ ವರ್ಗಾ ವಣೆಯನ್ನು ಮುಂದೂಡಿದ್ದ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಸಚಿವರ ಒತ್ತಡಕ್ಕೆ ಮಣಿದಿದ್ದಾರೆ. ಸಚಿವರಿಗೇ ನೌಕರರ ವರ್ಗಾ ವಣೆಗೆ ಅವಕಾಶ ಕಲ್ಪಿಸಿದ್ದು, ಜುಲೈ 22ರೊಳಗೆ ಆಯಾ ಇಲಾಖೆಯ ಸಚಿ ವರು ಶೇ. 6ರಷ್ಟು ಮೀರದಂತೆ ವರ್ಗಾ ವಣೆ ಮಾಡುವಂತೆ ಸೂಚಿಸಿದ್ದಾರೆ. ಪ್ರತೀ ಮೇ, ಜೂನ್ನಲ್ಲಿ ಸಾಮಾನ್ಯ ವರ್ಗ ನಡೆ ಯುತ್ತದೆ. 15 ದಿನಗಳಿಂದ 1 ತಿಂಗಳ ಅವಧಿಯಲ್ಲಿ ಸಚಿವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಗರಿಷ್ಠ ಶೇ. 5ರಿಂದ 6ರಷ್ಟು ಸಿಬಂದಿಯನ್ನು …
Read More »ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್: ವಿಟಿಯು ಸಿದ್ಧತೆ
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮಗಳು ಪ್ರತ್ಯೇಕವಿರುವಂತೆ 2021-22ನೇ ಸಾಲಿನಿಂದ ಎಂಜಿನಿಯರಿಂಗ್ ಕಾಲೇಜುಗಳಲ್ಲೂ ಕನ್ನಡ ಹಾಗೂ ಆಂಗ್ಲ ಮಾಧ್ಯಮ ವಿಭಾಗಗಳು ಪ್ರತ್ಯೇಕವಾಗಿರಲಿವೆ. ವಿದ್ಯಾರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶವಿರಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆ ಯಲ್ಲಿ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ನೀಡಲು ನಿರ್ಧರಿಸಿದ್ದು, ರಾಜ್ಯದಲ್ಲೂ ಕನ್ನಡದಲ್ಲಿ ಎಂಜಿನಿಯರಿಂಗ್ ಬೋಧನೆ, ಕಲಿಕೆ ಹಾಗೂ ಪರೀಕ್ಷೆಗೆ ಬೇಕಾದ …
Read More »ಕೋವಿಡ್ 3ನೇ ಅಲೆ ಆತಂಕದ ನಡುವೆ ಸಿಹಿಸುದ್ದಿ; ಜೂನ್ ನಲ್ಲಿ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ!
ನವದೆಹಲಿ: ಕೋವಿಡ್ 3ನೇ ಅಲೆ ಆತಂಕದ ನಡುವೆಯೇ ಕೊಂಚ ಸಮಾಧಾನಕರ ಸುದ್ದಿ ಬಂದಿದ್ದು, ಜೂನ್ ತಿಂಗಳಲ್ಲಿ ದೇಶದ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ ಕಂಡುಬಂದಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಖ್ಯಾತ ಔದೋಗಿಕ ಶೋಧ ತಾಲತಾಣ ನೌಕ್ರಿ.ಡಾಮ್ ‘ನೌಕ್ರಿ ಜಾಬ್ಸ್ಪೀಕ್’ ವರದಿ ಬಿಡುಗಡೆ ಮಾಡಿದ್ದು, ಭಾರತದ ನೇಮಕಾತಿ ಪ್ರವೃತ್ತಿಗಳು ಜೂನ್ನಲ್ಲಿ ಶೇಕಡಾ 15 ರಷ್ಟು ಏರಿಕೆಯಾಗಿದ್ದು, 2,359 ಪೋಸ್ಟಿಂಗ್ ಗಳಿಗೆ ಏರಿಕೆಯಾಗಿದೆ. ಈ ಪ್ರಮಾಣ ಮೇ ತಿಂಗಳಿನಲ್ಲಿ 2,047ರಷ್ಟಿತ್ತು ಎಂದು …
Read More »ಮತ್ತೆ ಪೆಟ್ರೋಲ್ ಬೆಲೆ ಏರಿಕೆ : ದೇಶದಲ್ಲಿ ಇಂದು ತೈಲ ಬೆಲೆ ಎಲ್ಲೆಲ್ಲಿ, ಎಷ್ಟಿದೆ ನೋಡಿ
ನವದೆಹಲಿ : ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಮತ್ತೊಮ್ಮೆ ಏರಿಕೆಯಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್ನ ಬೆಲೆಯನ್ನು ಜುಲೈ 9 ರಂದು ಸರ್ಕಾರಿ ತೈಲ ಕಂಪನಿಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕೊಂಡೊಯ್ದಿವೆ. ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 112 ರೂ.ಗೆ ಏರಿಕೆಯಾಗಿದೆ. ಚೆನ್ನೈ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಬೆಂಗಳೂರಿನ ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಈಗಾಗಲೇ ಪೆಟ್ರೋಲ್ 100ರ ಗಡಿ ದಾಟಿದೆ. …
Read More »ಮೊಸರಲ್ಲಿ ಕಲ್ಲು ಹುಡುಕಬೇಡಿ- ಸಿದ್ದರಾಮಯ್ಯಗೆ ಕಾರಜೋಳ ತಿರುಗೇಟು
ಬೆಳಗಾವಿ: ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ತಿರುಗೇಟು ನೀಡಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ನೀಡಿರುವುದು ಕರ್ನಾಟಕಕ್ಕೆ ಊಟದಲ್ಲಿ ಉಪ್ಪಿನಕಾಯಿ ಸಿಕ್ಕಂತಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ …
Read More »
Laxmi News 24×7