Breaking News

ರಾಜ್ಯ

ಹದಿನೇಳು ದಿನಗಳ ಅಂತರದಲ್ಲಿ ಮದುವೆಯಾದ ಇಬ್ಬರು ಹೆಣ್ಣುಮಕ್ಕಳು ಗಂಡನ ಮನೆಯಲ್ಲಿ ಸಾವು!

ಹಾಸನ: ಅದೊಂದು ಬಡಕುಟುಂಬ. ಆದರೆ ಅವರ ಸಂಸಾರದಲ್ಲಿ ಸುಖ, ಸಂತೋಷಕ್ಕೇನು ಕಡಿಮೆಯಿರಲಿಲ್ಲ. ತಂದೆ – ತಾಯಿ ಕೂಲಿ ಮಾಡಿ ತಮ್ಮ ನಾಲ್ಕು ಹೆಣ್ಣು ಮಕ್ಕಳಿಗೆ ಯಾವುದಕ್ಕೂ ಕೊರತೆಯಾಗದಂತೆ ಸಾಕುತ್ತಿದ್ದರು. ಆದರೆ ಆ ಸುಂದರ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ, ಒಂದೇ ತಿಂಗಳಲ್ಲಿ ಮದುವೆಯಾಗಿದ್ದ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಇಡೀ ಕುಟುಂಬದ ಕಣ್ಣೀರಿನಲ್ಲಿ ಮುಳುಗಿದೆ. ಹಾಗಾದ್ರೆ ಆ ಕುಟುಂಬದಲ್ಲಿ ಅಂತಹದ್ದು ಏನಾಯಿತು. ‌ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು ಹೇಗೆ ಈ …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದುವೆ ನಡೆಸಲು ಅನುಮತಿ: ಜಿಲ್ಲಾಧಿಕಾರಿ

ಮಂಗಳೂರು: ಕೋವಿಡ್‌ ಮಾರ್ಗಸೂಚಿ ಪಾಲನೆಯೊಂದಿಗೆ ಛತ್ರ, ಹೊಟೇಲ್‌, ರೆಸಾರ್ಟ್‌, ಸಭಾಂಗಣಗಳಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಇಂದಿನಿಂದ ಜಿಲ್ಲೆಯಾದ್ಯಂತ ಅವಕಾಶ ಕಲ್ಪಿಸಲಾಗಿದೆ. ಆದರೆ, 40ಕ್ಕಿಂತ ಹೆಚ್ಚು ಜನರು ಭಾಗವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ,ವಿ. ಆದೇಶ ನೀಡಿದ್ದಾರೆ. ಮದುವೆ ನಡೆಸುವವರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ ಆಯುಕ್ತರು, ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಸ್ಥೆಯ ಮುಖ್ಯಾಧಿಕಾರಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು. ಸಂಬಂಧಪಟ್ಟ ಅಧಿಕಾರಿ 40 ಜನರ ಹೆಸರು …

Read More »

ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ 8 ವರ್ಷದ ಬಾಲಕಿ

ಹಾವೇರಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಗುಂಡಗಟ್ಟಿ ಗ್ರಾಮದ ಕುಮಾರ ಗುಡದಳ್ಳಿ ಹಾಗೂ ಪೂರ್ಣಿಮಾ ದಂಪತಿಯ ಮಗಳಾದ 8 ವರ್ಷದ ನಮ್ರತಾ ಕುಮಾರ ಗುಡದಳ್ಳಿ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ನಮ್ರತಾ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆ ಅಕ್ಕಿಆಲೂರಿನಲ್ಲಿ ಓದುತ್ತಿದ್ದಾಳೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ತನ್ನ ಹೆಸರನ್ನು ದಾಖಲಿಸಲು ಹಲವರು ವಿಷಯಗಳಲ್ಲಿ ಪ್ರಾವಿಣ್ಯತೆ ಪಡೆದಿದ್ದಾಳೆ. 28 ರಾಜ್ಯಗಳು ಅವುಗಳ ರಾಜಧಾನಿಗಳು, 9 …

Read More »

‘ಕಬ್ಜ’ ನ್ಯೂ ಲುಕ್ ರಿಲೀಸ್ : ಉಪ್ಪಿ-ಕಿಚ್ಚನ ಅಭಿಮಾನಿಗಳು ಫುಲ್ ಖುಷ್

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕ ನಟರಾಗಿ ಅಭಿನಯಿಸುತ್ತಿರುವ ಹಾಗೂ ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ ಹೊಸ ಪೋಸ್ಟರ್ ಇಂದು ( ಜೂನ್ 27) ಬಿಡುಗಡೆಯಾಗಿದೆ. ‘ಐ ಲವ್ ಯು’ ಚಿತ್ರದ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್.ಚಂದ್ರು ಕಾಂಬಿನೇಶನ್ ನಲ್ಲಿ ‘ಕಬ್ಜ’ ಸಿನಿಮಾ ರೆಡಿಯಾಗುತ್ತಿದೆ. ಭೂಗತ ಲೋಕದ ಕಥಾಹಂದರ ಹೊಂದಿರುವ ‘ಕಬ್ಜ’ ಚಿತ್ರದಲ್ಲಿ ಉಪೇಂದ್ರ …

Read More »

ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

ಚಿಕ್ಕೋಡಿ: ಪರಿಸರದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಉಮೇಶ್ ಕತ್ತಿ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಸಿ ನೆಟ್ಟು ಹೆಚ್ಚಿನ ಪ್ರಮಾಣದಲ್ಲಿ ಕಾಡನ್ನು ಬೆಳೆಸಿದರೆ ವಾಯುಮಾಲಿನ್ಯ ನಿರ್ಮೂಲನೆ ಆಗುವುದರ ಜೊತೆಗೆ ಆಕ್ಸಿಜನ್ …

Read More »

ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ ಸಸಿ ನೆಡುವ ಕಾರ್ಯಕ್ರಮಕ್ಕೆ ರಮೇಶ್ ಜಾರಕಿಹೊಳಿ ಚಾಲನೆ

ಗೋಕಾಕ: ಸದ್ಯಕ್ಕೆ ಗೋಕಾಕ ನಗರದ ಎಲ್ಲಾ ರೀತಿಯ ಅಭಿವೃದ್ಧಿ ಹಾಗೂ, ಇನ್ನಿತರ ಕೆಲಸ ಕಾರ್ಯ ಗಳಲ್ಲಿ ರಮೇಶ್ ಜಾರಕಿಹೊಳಿ ಹೆಚ್ಚಿನ ಒತ್ತನ ಕೊಡುತ್ತಿದ್ದಾರೆ. ಇಂದು ಗೋಕಾಕ ನಗರದ ಗ್ರಾಮೀಣ ಮಂಡಲದ ರೈತ ಮೋರ್ಚಾ ವತಿಯಿಂದ ಗೋಕಾಕ ನಗರದ ಹೊರವಲಯದ ಯೋಗಿ ಕೊಳ್ಳ ರಸ್ತೆ ಮಾರ್ಗದಲ್ಲಿ 200 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಒಂದು ಕಾರ್ಯ ಕ್ರಮದಲ್ಲಿ ಭಾಗಿಯಾದ ಸಾಹುಕಾರ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯ ಕ್ರಮಕ್ಕೆ ಸಸಿ …

Read More »

ಕೋವಿಡ್ ಸಂಕಟದ ಸಮಯದಲ್ಲಿ ನೆರವಿಗೆ ಧಾವಿಸದ ಕಾಂಗ್ರೆಸ್ನಿಂದ ಮೊಸಳೆ ಕಣ್ಣೀರು: ಕ್ಯಾ.ಕಾರ್ಣಿಕ್

ಬೆಂಗಳೂರು: ತಾವು ಆಯ್ಕೆಯಾದ ಕ್ಷೇತ್ರದ ಜನರ ಸಹಾಯಕ್ಕೆ ಕೋವಿಡ್ ಸಂಕಟದ ಸಂದರ್ಭದಲ್ಲಿ ಧಾವಿಸದ ಕಾಂಗ್ರೆಸ್‍ನ ಮಹಾನ್ ನಾಯಕರುಗಳು ಈಗ “ಡೆತ್ ಆಡಿಟ್”ನ ಕುರಿತಾಗಿ ಮಾತನಾಡುತ್ತ ರಾಜ್ಯಾದ್ಯಂತ ಪ್ರವಾಸ ಮಾಡುವ ಹೇಳಿಕೆ ನೀಡಿರುವುದು ರಾಜಕೀಯ ಸೋಗಲಾಡಿತಕ್ಕೆ ಒಂದು ಸ್ಪಷ್ಟ ನಿದರ್ಶನವಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಟೀಕಿಸಿದ್ದಾರೆ. ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಸಂತ್ರಸ್ತ ಜನರ ನೆರವಿಗೆ ಧಾವಿಸದ ಕಾಂಗ್ರೆಸ್ ಕೇವಲ ಟ್ವಿಟರ್ ಅಭಿಯಾನದ ಮೂಲಕ ಕೇಂದ್ರ …

Read More »

ಜುಲೈ ಅಂತ್ಯದೊಳಗೆ 51.6 ಕೋಟಿ ಡೋಸ್ ಲಸಿಕೆ ನೀಡಿಕೆ; ಕೇಂದ್ರದಿಂದ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ

ದೆಹಲಿ: ಜುಲೈ ತಿಂಗಳ ಅಂತ್ಯದೊಳಗೆ ಅಂದರೆ, ಜುಲೈ 31ರ ಒಳಗೆ 51.6 ಕೋಟಿ ಡೋಸ್ ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ ಮಾಡಿದೆ. ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ 94 ಕೋಟಿ ಜನರಿದ್ದಾರೆ. 94 ಕೋಟಿ ಜನರಿಗೆ 188 ಕೋಟಿ ಡೋಸ್ ಲಸಿಕೆಯ ಅಗತ್ಯವಿದೆ. ಹೀಗಾಗಿ ಆಗಸ್ಟ್‌ನಿಂದ ಡಿಸೆಂಬರ್‌ಗೆ 135 ಕೋಟಿ ಡೋಸ್ ನೀಡಲಾಗುತ್ತದೆ. ಅಗತ್ಯವಿರುವಷ್ಟು ಲಸಿಕೆ ಆಗಸ್ಟ್-ಡಿಸೆಂಬರ್ ಅವಧಿಯಲ್ಲಿ ಲಭ್ಯವಾಗಲಿದೆ ಎಂದು …

Read More »

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾದಕ ವಸ್ತುಗಳ ಸರಬರಾಜು ನಿಯಂತ್ರಣಕ್ಕೆ ರೂಪಿಸಲಾಗಿರುವ ಎನ್‌ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾಯ್ದೆಗೆ ಕರ್ನಾಟಕದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಜೊತೆಗೆ ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸ್ …

Read More »

ರಾಜ್ಯದ 14 ಸಾವಿರ ಅಂಗನವಾಡಿಗಳು ಕತ್ತಲಲ್ಲಿ, 13 ಸಾವಿರ ಅಂಗನವಾಡಿಗಳಲ್ಲಿ ಶೌಚಾಲಯವೇ ಇಲ್ಲ

ಬೆಂಗಳೂರು: ರಾಜ್ಯದ 14 ಸಾವಿರ ಅಂಗನವಾಡಿಗಳು ಕತ್ತಲಲ್ಲಿ ಇವೆ. 13 ಸಾವಿರ ಅಂಗನವಾಡಿಗಳಲ್ಲಿ ಶೌಚಾಲಯ ಇಲ್ಲ. 18 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಫ್ಯಾನ್‌ ಇಲ್ಲ. ಇದನ್ನು ಸರಿಪಡಿಸಲು ಪ್ರತ್ಯೇಕ ಹಣಕಾಸಿನ ಲಭ್ಯತೆ ಇಲ್ಲ ಎಂದು ಸ್ವತಃ ರಾಜ್ಯ ಸರ್ಕಾರ ಹೈಕೋರ್ಟ್‌ ಮುಂದೆ ಒಪ್ಪಿಕೊಂಡಿದೆ. ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಸಂಬಂಧಿಸಿದಂತೆ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸಲ್ಲಿಸಲಾದ ಲಿಖೀತ …

Read More »