Breaking News

ರಾಜ್ಯ

ನಕಲಿ ದಾಖಲೆಗಳ ಮೂಲಕ ಶೂರಿಟಿ ನೀಡುತ್ತಿದ್ದ 8 ಆರೋಪಿಗಳ ಬಂಧನ

ಬೆಂಗಳೂರು: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ನಕಲಿ ಶೂರಿಟಿ ನೀಡುತ್ತಿದ್ದ 8 ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಫಿ, ಪ್ರವೀಣ್ ಕುಮಾರ್, ಅಭಿಷೇಕ್, ಗೋವಿಂದ ನಾಯ್ಕ್ ಮತ್ತು ದೊರೆರಾಜು ಹಾಗೂ ಮತ್ತೊಂದು ಪ್ರಕರಣದಲ್ಲಿ ಅಬೀದ್, ವಾಸಿಂ ಅಹಮ್ಮದ್ ಮತ್ತು ಗೋವಿಂದರಾಜು ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ವಿವಿಧ ಪ್ರಕರಣಗಳಲ್ಲಿ ಜಾಮೀನು ಪಡೆಯಲು ನಕಲಿ ಶೂರಿಟಿಗಳನ್ನು ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಭೂಮಿ ಆ್ಯಪ್‌ನ ಮೂಲಕ ಬೇರೆ …

Read More »

ಬಡತನಕ್ಕೆ ಬಗ್ಗದ ಛಲ… ಬೆಳಗಾವಿಯ ಪ್ರಶಾಂತ್’ಗೆ ಸಿಎ ಪರೀಕ್ಷೆಯಲ್ಲಿ ಅಗ್ರಸ್ಥಾನ

ಬಡತನಕ್ಕೆ ಬಗ್ಗದ ಛಲ… ಬೆಳಗಾವಿಯ ಪ್ರಶಾಂತ್’ಗೆ ಸಿಎ ಪರೀಕ್ಷೆಯಲ್ಲಿ ಅಗ್ರಸ್ಥಾನ ಯಾವುದೇ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸುವ ಶಕ್ತಿ ಇದ್ದರೆ ಯಾವುದೇ ಸಾಧನೆ ಅಸಾಧ್ಯವಲ್ಲ ಎಂಬುದಕ್ಕೆ ಬಹುದೊಡ್ಡ ಸಾಕ್ಷ್ಯವಾಗಿದ್ದಾರೆ ಬೆಳಗಾವಿಯ ಯುವಕನ ಈ ಸಾಧನೆ. ಹಾಗಾದರೇ, ಆ ಯುವಕ ಮಾಡಿರುವ ಸಾಧನೆಯಾದರೂ ಯಾವುದು? ಎಂಬುದನ್ನು ನೋಡೋಣ ಬನ್ನಿ. ಹೌದು, ಬೆಳಗಾವಿಯ ಕಂಗ್ರಾಳಿ ಬುದ್ರುಕ್ ಗ್ರಾಮದ ಪ್ರಶಾಂತ್ ಮಂಗೇಶ್ ಚೌಗುಲೆ. ಆರ್ಥಿಕ ಸಂಕಷ್ಟಗಳಿಂದ ಜರ್ಜರಿತ ಕುಟುಂಬದಿಂದ ಬಂದ ಈ ಪ್ರತಿಭಾವಂತ ಯುವಕ. ಈತ …

Read More »

ನಂದಗಡ ಠಾಣೆಯ ಪೊಲೀಸ್ ಮೆಂಡಿಗೇರಿಗೆ ಎಸ್ಪಿ ಪ್ರಶಂಸನಾ ಪತ್ರ

ನಂದಗಡ ಠಾಣೆಯ ಪೊಲೀಸ್ ಮೆಂಡಿಗೇರಿಗೆ ಎಸ್ಪಿ ಪ್ರಶಂಸನಾ ಪತ್ರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಅವರಿಂದ ವಿತರಣೆ ಐತಿಹಾಸಿಕ ಪುಣ್ಯ ಭೂಮಿ ನಂದಗಡದ ಗ್ರಾಮದಲ್ಲಿರುವ ಪೋಲಿಸ್ ಠಾಣೆಯ ಪೊಲೀಸರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿದಾನಂದ ಮೆಂಡಿಗೇರಿ ಅವರಿಗೆ ಬೆಳಗಾವಿ ಹೆಚ್ಚುವರಿ ಅಧಿಕ್ಷಕರಾದ ರಾಮಗೊಂಡ ಬಸರಗಿ ಅವರಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಚಿದಾನಂದ ಮೆಂಡಿಗೇರಿ ಅವರು ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಠಾಣೆಯ ಅವಧಿ ಮೀರದ ದಾಖಲೆಗಳ ವಿಲೇವಾರಿ ಹಾಗೂ …

Read More »

ಕತ್ತಲಲ್ಲಿ ಮುಳುಗಿದ ಖಾನಾಪೂರ!!!

ಉರಿಯದ ಬೀದಿ ದೀಪಗಳು… ಕತ್ತಲಲ್ಲಿ ಮುಳುಗಿದ ಖಾನಾಪೂರ!!! ಖಾನಾಪೂರ – ನಂದಗಡ ಹಾಗೂ ಖಾನಾಪೂರ – ಬೆಳಗಾವಿ ರಸ್ತೆಗಳ ಖಾನಾಪೂರ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಭಾಗಗಳಲ್ಲಿ ರಸ್ತೆ ಮಧ್ಯದಲ್ಲಿರುವ ಬೀದಿ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರ ಪರಿಣಾಮವಾಗಿ ಆ ಪ್ರದೇಶ ಸಂಪೂರ್ಣವಾಗಿ ಕತ್ತಲೆಯಲ್ಲಿ ಮುಳುಗಿದೆ. ದಟ್ಟ ಅಂಧಕಾರದ ಹಿನ್ನೆಲೆ ಪ್ರವಾಸಿಗರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ದ್ವಿಚಕ್ರ ವಾಹನ ಸವಾರರಿಗೆ ರಸ್ತೆಯಲ್ಲಿ ಸಂಚರಿಸಲು ಸಂಕಷ್ಟ ಎದುರಾಗುತ್ತಿದೆ. ಮೊದಲೇ ರಸ್ತೆಯು ತೆಗ್ಗುಮಯವಾಗಿದ್ದು, ಇದರ …

Read More »

ಕೂಡಲಸಂಗಮ ಪೀಠಕ್ಕೆ ಬೀಗ…

ಕೂಡಲಸಂಗಮ ಪೀಠಕ್ಕೆ ಬೀಗ… ಮೃತ್ಯುಂಜಯ ಶ್ರೀಗಳ ನಾಲ್ವರು ಬೆಂಬಲಿಗರ ವಿರುದ್ಧ ದೂರು…!!! ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿರುವ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಲಾಗಿದೆ. ನಿನ್ನೆ ರಾತ್ರಿ ಪೀಠಕ್ಕೆ ಬೀಗ ಹಾಕಿರುವ ಮಾಹಿತಿ ಲಭ್ಯವಾಗಿದ್ದು, ಬೀಗ ಹಾಕಿದ್ದು ಯಾರು? ಯಾಕೆ? ಎನ್ನುವುದು ನಿಗೂಢವಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ವಿಚಾರ ಬುಗಿಲೆದ್ದಿದೆ. ಕಳೆದ ಕೆಲವು ದಿನಗಳ ಹಿಂದೆ ಶುರುವಾಗಿದ್ದ ಹೊಸ ಪೀಠದ ಚರ್ಚೆ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಪ್ರಸಂಗ ಬಂದರೆ …

Read More »

ಫಾಸ್ಟ್‌ಟ್ಯಾಗ್‌ ನಿಯಮ ಮತ್ತಷ್ಟು ಕಠಿಣ

FASTag Blacklist: ‘ಲೂಸ್ ಫಾಸ್ಟ್‌ಟ್ಯಾಗ್’ ಸಮಸ್ಯೆ ನಿಭಾಯಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಒಂದು ದೊಡ್ಡ ಹೆಜ್ಜೆ ಇಟ್ಟಿದೆ. ಈಗ ಕಾರಿನಿಂದ ಫಾಸ್ಟ್‌ಟ್ಯಾಗ್ ತೆಗೆದು ಟೋಲ್ ಪ್ಲಾಜಾದಲ್ಲಿ ತೋರಿಸುವವರನ್ನು ಬ್ಲ್ಯಾಕ್​ ಲಿಸ್ಟ್​ಗೆ ಸೇರಿಸಲಾಗುತ್ತದೆ. ಕಾರಿನ ವಿಂಡ್‌ಸ್ಕ್ರೀನ್‌ನಲ್ಲಿ ಫಾಸ್ಟ್‌ಟ್ಯಾಗ್ ಅನ್ನು ಸರಿಯಾಗಿ ಅಳವಡಿಸುವುದು ಅವಶ್ಯಕ. ಟೋಲ್ ಸಂಗ್ರಹವನ್ನು ಸುಗಮಗೊಳಿಸಲು ಮತ್ತು ಸಡಿಲವಾದ ಫಾಸ್ಟ್‌ಟ್ಯಾಗ್ ವರದಿ ಮಾಡುವಿಕೆಯನ್ನು ಬಲಪಡಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಟೋಲ್ ಸಂಗ್ರಹ ಏಜೆನ್ಸಿಗಳು ಮತ್ತು ರಿಯಾಯಿತಿ ನೀಡುವವರು ಲೂಸ್​ ಫಾಸ್ಟ್‌ಟ್ಯಾಗ್‌ಗಳನ್ನು …

Read More »

ಭರ್ತಿಗೂ ಮುನ್ನ ಭದ್ರಾ ಜಲಾಶಯದಿಂದ ನದಿಗೆ 1,200 ಕ್ಯೂಸೆಕ್ ನೀರು ಬಿಡುಗಡೆ

ಶಿವಮೊಗ್ಗ: ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ಜೀವನಾಡಿಯಾದ ಭದ್ರಾ ಜಲಾಶಯ ಭರ್ತಿಯಾಗುವ ಮುನ್ನವೇ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಶುಕ್ರವಾರ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದಿಂದ 1,200 ಕ್ಯೂಸೆಕ್ ನೀರನ್ನು ನದಿಗೆ ನಾಲ್ಕು ಕ್ರಸ್ಟ್ ಗೇಟ್​ಗಳ ಮೂಲಕ ಸುಮಾರು ಮೂರು ಅಡಿಯಷ್ಟು ನೀರು ಬಿಡುಗಡೆ ಮಾಡಲಾಗಿದೆ.  ಜಲಾಶಯವು 186 ಅಡಿ ಗರಿಷ್ಟ ಎತ್ತರ ಹೊಂದಿದೆ. ಇಂದಿನ ನೀರಿನ ಮಟ್ಟ 174.4 ಅಡಿ ಇದೆ. ಮಳೆಗಾಲ ಇನ್ನೂ ಇದೆ. ಕಳೆದ ವರ್ಷ …

Read More »

ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ

ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ ಹೊಸ ತಾಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಿಸಬೇಕೆಂದು ತಾಲೂಕು ಹೋರಾಟ ಸಮೀತಿ ಕೈಗೊಂಡಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಬಾಗವಹಿಸಿದ್ದರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರವನ್ನು ನೂತನ ತಾಲೂಕು ಕೇಂದ್ರವನ್ನಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಯುತ್ತಾ ಬಂದರು ಹೋರಾಟಕ್ಕೆ ಸ್ಪಂಧಿಸದ ಸರ್ಕಾರ ಹೋರಾಟಗಾರರು ಮಹಾಲಿಂಗಪೂರ ಪಟ್ಡಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ …

Read More »

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ”

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ” ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423.00 ಕೋಟಿ ಅನುದಾನದಲ್ಲಿ ದೇಶದ ಎರಡನೇ …

Read More »

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ…

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ… ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿ‌ಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.‌ ಇನ್ನು ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ …

Read More »