ಬೆಂಗಳೂರು: ಜುಲೈ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ಒಪಿ ಬಿಡುಗಡೆ ಮಾಡಿದ್ದಾರೆ. ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು,ಈಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಸಿದ್ಧತೆ ನಡೆಸಬೇಕು ಎಂದು ಸೂಚಿಸಿದ್ದಾರೆ. ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ …
Read More »ಕಾಂಗ್ರೆಸ್ ತೊರೆದ ಬಾಂಬೆ ಫ್ರೆಂಡ್ಸ್ ಮರಳಿ ಗೂಡಿಗೆ? ಸಿದ್ದರಾಮಯ್ಯ ಪ್ರತಿಕ್ರಿಯೆ
ಬಳ್ಳಾರಿ, ಜೂನ್ 23: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನಕ್ಕೆ ಕಾರಣರಾದ ಹದಿನೇಳು ಶಾಸಕರ ಪೈಕಿ ಕೆಲವರು ಮರಳಿಗೂಡಿಗೆ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಪಕ್ಷ ದ್ರೋಹಿಗಳನ್ನು ಯಾವ ಕಾರಣಕ್ಕೂ ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ಇದರ ಜೊತೆಗೆ, ಸಿದ್ದರಾಮಯ್ಯ ಭಾವೀ ಸಿಎಂ ಎನ್ನುವ ಕಾಂಗ್ರೆಸ್ಸಿನ ಕೆಲವು ಶಾಸಕರ ಹೇಳಿಕೆಗೂ ಸ್ಪಷ್ಟನೆ ಕೊಟ್ಟಿರುವ ಸಿದ್ದರಾಮಯ್ಯ, ಅದು ಅವರವರ …
Read More »ಮೋದಿ ಇರುವವರೆಗೂ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ: ಬಿ.ಶ್ರೀರಾಮುಲು
ಚಿತ್ರದುರ್ಗ: ನರೇಂದ್ರ ಮೋದಿ ಅವರು ಪ್ರಧಾನಿ ಆಗಿರುವವರೆಗೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ ಆಗಲಿದೆ ಎಂದು ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು. ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ. ಸಿದ್ದರಾಮಯ್ಯ ಅವರು ಪ್ರಧಾನಿ ಮತ್ತು ಮುಖ್ಯಮಂತ್ರಿ ಅವರನ್ನು ಟೀಕೆ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಕಳೆದುಕೊಂಡು ಬುದ್ದಿ ಭ್ರಮಣೆ ಆಗಿದೆ. ಕಾಂಗ್ರೆಸ್ ಯಾವತ್ತೂ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದಲ್ಲೇ ನಾಯಕತ್ವಕ್ಕೆ ಕಿತ್ತಾಟ ನಡೆಯುತ್ತಿದೆ. …
Read More »ಡೌನ್ಆಗಿದ್ದ ತರಕಾರಿ ಬೆಲೆ ಈಗ ಅಪ್
ಧಾರವಾಡ: ಲಾಕ್ಡೌನ್ ಅವಧಿಯಲ್ಲಿ ನಿರೀಕ್ಷಿತ ಬೆಲೆ ಸಿಗದೇ, ಮಾರಾಟವಾಗದೇ ತಿಪ್ಪೆಯ ಪಾಲಾಗುತ್ತಿದ್ದ ತರಕಾರಿ ಹಾಗೂ ಸೊಪ್ಪಿಗೆ ಇದೀಗ ಅನ್ಲಾಕ್ ನಂತರ ಬಂಪರ್ ಬೆಲೆ ಬಂದಿದೆ. ಕೋವಿಡ್ ನಿಯಂತ್ರಣಕ್ಕೆ ಜಾರಿ ಮಾಡಿದ ಲಾಕ್ ಡೌನ್ ಹಾಗೂ ವ್ಯಾಪಾರಕ್ಕೆ ನೀಡಿದ ಸೀಮಿತ ಅವಧಿಯ ಪರಿಣಾಮ ನಗರದ ಹೊಸ ಎಪಿಎಂಸಿ ಆವರಣದಲ್ಲಿ ಪ್ರತಿದಿನ ನಡೆಯುವ ಹೋಲ್ಸೇಲ್ ತರಕಾರಿ ಮಾರುಕಟ್ಟೆ ಆವರಣದಲ್ಲಿ ಬೆಲೆ ಕುಸಿತ ಹಾಗೂ ಮಾರಾಟವಾಗದ ಕಾರಣ ತರಕಾರಿ ಹಾಗೂ ಸೊಪ್ಪು ತಿಪ್ಪೆಯ ಪಾಲಾಗುತ್ತಿತ್ತು. …
Read More »ನೀರವ್, ಮಲ್ಯ, ಚೋಕ್ಸಿಯಿಂದ ವಶಕ್ಕೆ ಪಡೆದ ಆಸ್ತಿಯಲ್ಲಿ 9,371 ಕೋಟಿ ರೂ.ಗಳನ್ನು ಬ್ಯಾಂಕ್ಗಳಿಗೆ ವರ್ಗಾಯಿಸಿದ ಇಡಿ
ನವದೆಹಲಿ: ಬ್ಯಾಂಕ್ಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸಂಬಂಧಿಸಿದ 18 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದ್ದು, ಇದು ಬ್ಯಾಂಕುಗಳು ಅನುಭವಿಸಿದ ಒಟ್ಟು ನಷ್ಟದ 80% ಆಗಿದೆ. ಬುಧವಾರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇಡಿ ಕೇವಲ ಆಸ್ತಿಯನ್ನು ವಶಕ್ಕೆ ಪಡೆದಿರುವುದಲ್ಲದೆ, 9,371.17 ಕೋಟಿ ರೂಪಾಯಿಯನ್ನು ಸಾರ್ವಜನಿಕ ಬ್ಯಾಂಕ್ ಮತ್ತು ಕೇಂದ್ರ …
Read More »ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರ
ನವದೆಹಲಿ: ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರಗೊಂಡಿದ್ದು, ಡೆಲ್ಟಾ ಪ್ಲಸ್ ಮಾದರಿಯಾಗಿ ಬದಲಾವಣೆಗೊಂಡಿದೆ. ಹೊಸ ಹೆಮ್ಮಾರಿ ಯುವಕರನ್ನೇ ಹೆಚ್ಚು ಟಾರ್ಗೆಟ್ ಮಾಡುತ್ತಿದೆ ಎಂಬ ಆತಂಕಕಾರಿ ವಿಷಯ ಹೊರಬಿದ್ದಿದೆ. ಕರ್ನಾಟಕ ಸೇರಿದಂತೆ ದೇಶದ ನಾಲ್ಕುರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಮಾದರಿಯ ವೈರಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಇಬ್ಬರು ಇಂತಹ ಸೋಂಕಿನಿಂದ ಬಳಲುತ್ತಿದ್ದಾರೆ. ಈ ನಡುವೆ ಕೊರೊನಾ ಎರಡನೇ ಅಲೆಯಲ್ಲಿ ಸಾವನ್ನಪ್ಪಿದ ಸುಮಾರು 11,000 ಜನರ ಪೈಕಿ …
Read More »ಸಿಡಿ ಬಹಿರಂಗ ಕೇಸ್; ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದೇನು?
ಧಾರವಾಡ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಸಂತ್ರಸ್ತ ಯುವತಿಯೊಂದಿಗೆ ಮಾತನಾಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯೊಂದಿಗೆ ಮಾತನಾಡಿದ್ದೇನೆ. ಏನಾದರೂ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರುವಂತೆ ಹೇಳಿದ್ದೇನೆ. ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ ಎಂದರು. ಸದ್ಯ ಸಿಡಿ ಬಹಿರಂಗ ಕೇಸ್ …
Read More »ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯ ಯುವತಿಗೆ ಬಂಧನ ಭೀತಿ ಶುರು
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಸಿಡಿ ಯುವತಿಗೆ ಬಂಧನ ಭೀತಿ ಶುರುವಾಗಿದೆ. ರಮೇಶ್ ಜಾರಕಿಹೊಳಿ ದೂರು ಆಧರಿಸಿ ಎಸ್ ಐಟಿ ಅಧಿಕಾರಿಗಳು ಯುವತಿಯನ್ನು ಬಂಧಿಸುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಯುವತಿ ಪರ ವಕೀಲ ಸಂಕೇತ್ ಏಣಗಿ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು ದಾಖಲಿಸಿದ್ದರೂ ಕೂಡ ಈವರೆಗೂ ಮಾಜಿ ಸಚಿವರ …
Read More »1.99 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್! ಇ-ಆಡಳಿತ ಇಲಾಖೆಯಿಂದ ಪತ್ತೆ
ಸಿಂಧನೂರು: ನಿರ್ಗತಿಕ ರಿಗೆ ಅಂತ್ಯೋದಯ, ಕಡು ಬಡವರಿಗೆ ಬಿಪಿಎಲ್ ಕಾರ್ಡ್ ನೀಡಿ ಆಹಾರ ಧಾನ್ಯ ನೀಡುತ್ತಿರುವ ಇಲಾಖೆಯೇ ಆಂತರಿಕ ತಪಾಸಣೆ ವೇಳೆ ಬೆಚ್ಚಿಬಿದ್ದಿದೆ. 7.5 ಎಕರೆಗೂ ಮೇಲ್ಪಟ್ಟು ಜಮೀನು ಹೊಂದಿದವರೂ ಅನ್ನಭಾಗ್ಯಕ್ಕಾಗಿ ಕಡು ಬಡವರ ಪಟ್ಟಿಗೆ ಸೇರಿಕೊಂಡಿರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲ 18,848 ಅನರ್ಹ ಅಂತ್ಯೋದಯ, 1,99,277 ಅನರ್ಹ ಬಿಪಿಎಲ್ ಕಾರ್ಡ್ಗಳು ಕೂಡ ಪತ್ತೆಯಾಗಿವೆ. ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಭೂಮಿ ದಾಖಲೆಗಳನ್ನು ಪರಿಶೀಲಿಸಿದಾಗ ಆಹಾರ ಇಲಾಖೆಗೆ ಈ ಆಘಾತಕಾರಿ ಸಂಗತಿ ಗೊತ್ತಾಗಿದೆ. …
Read More »ಸಂಸದೆಮಂಗಳಾ ಅಂಗಡಿಯವರಿಗೆ ಹೊಸ ಜವಾಬ್ದಾರಿ
ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಮಂಗಳಾ ಅಂಗಡಿ ಅವರಿಗೆ ಕೇಂದ್ರ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ. ಮಂಗಳಾ ಅವರನ್ನು ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದ ಮಂಗಳಾ ಅಂಗಡಿಯವರಿಗೆ ಎರಡು ತಿಂಗಳಲ್ಲೇ ಸಲಹಾ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ. ಜಯಭೇರಿ ಬಾರಿಸಿದ್ದರು.
Read More »
Laxmi News 24×7