ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …
Read More »ಮನೆ ಕಾಂಪೌಂಡ್ನಲ್ಲಿದ್ದ ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ, ಸ್ಥಳೀಯರಲ್ಲಿ ಆತಂಕ
ಹಾಸನ: ಮನೆಯ ಕಾಂಪೌಂಡ್ನಲ್ಲಿದ್ದ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಭೈರನಾಯಕನಹಳ್ಳಿಯಲ್ಲಿ ನಡೆದಿದೆ. ತಡರಾತ್ರಿ 2.30ರ ಸಮಯದಲ್ಲಿ ಗ್ರಾಮದೊಳಗೆ ಬಂದಿರುವ ಚಿರತೆ ಗರುಡನಗಿರಿ ರಸ್ತೆಯ ಮಲ್ಲೇಗೌಡ ಎಂಬುವವರ ಮನೆಯ ಕಾಂಪೌಂಡ್ ಒಳಗೆ ಮಲಗಿದ್ದ ನಾಯಿಯನ್ನು ಎಳೆದೊಯ್ದಿದೆ. ಬೆಳಗ್ಗೆ ನಾಯಿ ಕಾಣಿಸದಿದ್ದಾಗ ಮಲ್ಲೇಗೌಡರು ಸಿಸಿಟಿವಿ ಪರಿಶೀಲಿಸಿದ್ದಾರೆ. ಚಿರತೆ ನಾಯಿಯನ್ನು ಹೊತ್ತೊಯ್ಯವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಾಗಾಗಿ ಕೂಡಲೇ ಚಿರತೆಯನ್ನು …
Read More »ಮಂತ್ರಾಲಯ: ಜೂ. 22ರಿಂದ ರಾಯರ ದರ್ಶನ ಪುನಾರಂಭ
ರಾಯಚೂರು: ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ಜೂ.22ರಿಂದ ಪುನಾರಂಭಗೊಳ್ಳಲಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಠಕ್ಕೆ ಬರಲಾಗದ ಭಕ್ತರು https://www.srsmatha.org/online ಮೂಲಕ ರಾಯರ ದರ್ಶನ ಪಡೆಯಬಹುದು ಎಂದು ಮಠದ …
Read More »ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ
ಬಾಗಲಕೋಟೆ: ಬೆಳಗಾವಿ ಜಿಲ್ಲೆಯ ಖಾನಾಪುರ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ನದಿಯಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇವಸ್ಥಾನ ಜಲದಿಗ್ಬಂಧನ ಎದುರಿಸುವಂತಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮದಿಂದಾಗಿ ಭಕ್ತರಿಗೆ ದೇವರ ಪೂಜೆ ದರ್ಶನ ಭಾಗ್ಯ ಇಲ್ಲದಂತಾಗಿದ್ದು, ದೇಗುಲದ ಮುಂಭಾಗದ ಮೆಟ್ಟಿಲು, ಕಟ್ಟೆಯವರೆಗೆ ಎರಡು ಅಡಿಯಷ್ಟು ನೀರು ನಿಂತಿದೆ. ಇದೇ ರೀತಿ ನೀರಿನ ಪ್ರಮಾಣ ಹೆಚ್ಚಾದರೆ …
Read More »ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಗೆ ದೂರವಾಣಿ ಕರೆ?
ಬೆಂಗಳೂರು: ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಅರವಿಂದ ಬೆಲ್ಲದ ಅವರದ್ದು. ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ಅರವಿಂದ ಬೆಲ್ಲದ ಅವರನ್ನು ಕೆಲವರು ಮುಂದಿನ ಮುಖ್ಯಮಂತ್ರಿ ಎಂದೂ ಬಿಂಬಿಸುತ್ತಿದ್ದಾರೆ. ದೆಹಲಿ ಭೇಟಿ- ಆರ್ ಎಸ್ಎಸ್ ನಾಯಕ ಭೇಟಿ ಎಂದು ಸದ್ಯ ಕೆಲವು ದಿನಗಳಿಂದ ಪ್ರಚಾರದಲ್ಲಿರುವ ಬೆಲ್ಲದ ಅವರಿಗೆ ವಂಚಕ ಜೈಲಿನಲ್ಲಿರುವ ವಂಚಕ ಯುವರಾಜ್ ಸ್ವಾಮಿಯಿಂದ ಕರೆಗಳು ಬರುತ್ತಿದೆಯಂತೆ! ಈ ಬಗ್ಗೆ ಸ್ವತಃ ಶಾಸಕ …
Read More »B.S.Y. ಉತ್ತಮ ಕೆಲಸ ಮಾಡಿದ್ದಾರೆ ; ಅರುಣ್ ಸಿಂಗ್
ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಕೊವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿಯ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ತಿಳಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿರುವ ಉದ್ದೇಶವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಎರಡು ಪ್ಯಾಕೇಜ್ಗಳನ್ನು ಘೋಷಿಸಿದೆ. ಆ ಮೂಲಕ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗಿದೆ. …
Read More »ರಮೇಶ್ ಜಾರಕಿಹೊಳಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಒಂಟೆ ಮೇಲೇರಿ ಪ್ರತಿಭಟನೆ
ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು’ ಎಂದು ಆಗ್ರಹಿಸಿ ಘಟಪ್ರಭಾದ ಅವರ ಬೆಂಬಲಿಗರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಒಂಟೆಗಳ ಮೇಲೆ ಮೆರವಣಿಗೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು. ‘ನಮ್ಮ ನಾಯಕರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಅವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ತೆರೆ-ಮರೆಯಲ್ಲಿ ನಡೆಯುತ್ತಿವೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಹೆಸರು ಕೆಡಿಸುವಂತಹ ಪ್ರಯತ್ನಗಳನ್ನು ಕೆಲವರು …
Read More »ಆಸ್ಪತ್ರೆಯಲ್ಲೇ ಆಂಬುಲೆನ್ಸ್ ಚಾಲಕನಿಂದ ಅತ್ಯಾಚಾರ ಯತ್ನಕ್ಕೆ ಒಳಗಾದ ಮಹಿಳೆ ಸಾವು
ಕಲಬುರಗಿ: ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಮೇಲೆ ಜೂನ್ 8 ರಂದು ರಾತ್ರಿ ಆಂಬುಲೆನ್ಸ್ ಚಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದರಿಂದ ಪರಾರಿಯಾಗಿದ್ದ. ಆಸ್ಪತ್ರೆ ಸಿಬ್ಬಂದಿ ಆತನನ್ನು ಹಿಡಿಯಲು ಸಾಧ್ಯವಾಗಿರಲಿಲ್ಲ. ಕಲಬುರ್ಗಿಯ ಫಿಲ್ಟರ್ ಶೆಡ್ ನಿವಾಸಿ ಪ್ರೇಮ್ ಕುಮಾರ್(25) ಇಂತಹ ಕೃತ್ಯವೆಸಗಿದ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಕೊರೋನಾ …
Read More »10 ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ರೈಲ್ವೆಯಲ್ಲಿ 3591 ಹುದ್ದೆಗಳ ನೇಮಕಾತಿಗೆ ಅರ್ಜಿ
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ …
Read More »‘ಬಿಎಸ್ವೈ ಪದಚ್ಯುತಗೊಳಿಸಿದರೆ ಪರಿಣಾಮ ನೆಟ್ಟಗಿರಲ್ಲ’
ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಪದ ಚ್ಯುತಗೊಳಿಸಬಾರದು. ಒಂದೊಮ್ಮೆ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬಂದರೆ ರಾಜ್ಯದ ಸಾವಿರ ಮಠಾಧೀಶರು ದೆಹಲಿಯ ಸಂಸತ್ತಿನ ಎದುರು ಮೆರವಣಿಗೆ ನಡೆಸಬೇಕಾ ಗುತ್ತದೆ’ ಎಂದು ಇಲ್ಲಿಯ ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಎಚ್ಚರಿಸಿದರು. ಈ ಕುರಿತು ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಎಂಬುದು ಬಿಜೆಪಿ ಪಕ್ಷದ ಆಂತರಿಕ ವಿಚಾರ ಎಂದುಕೊಂಡು ಸುಮ್ಮನಿರಲು ಆಗುವು ದಿಲ್ಲ. …
Read More »
Laxmi News 24×7