Breaking News

ರಾಜ್ಯ

10 ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ರೈಲ್ವೆಯಲ್ಲಿ 3591 ಹುದ್ದೆಗಳ ನೇಮಕಾತಿಗೆ ಅರ್ಜಿ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ …

Read More »

‘ಬಿಎಸ್‌ವೈ ಪದಚ್ಯುತಗೊಳಿಸಿದರೆ ಪರಿಣಾಮ ನೆಟ್ಟಗಿರಲ್ಲ’

ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಪದ ಚ್ಯುತಗೊಳಿಸಬಾರದು. ಒಂದೊಮ್ಮೆ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬಂದರೆ ರಾಜ್ಯದ ಸಾವಿರ ಮಠಾಧೀಶರು ದೆಹಲಿಯ ಸಂಸತ್ತಿನ ಎದುರು ಮೆರವಣಿಗೆ ನಡೆಸಬೇಕಾ ಗುತ್ತದೆ’ ಎಂದು ಇಲ್ಲಿಯ ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಎಚ್ಚರಿಸಿದರು. ಈ ಕುರಿತು ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಎಂಬುದು ಬಿಜೆಪಿ ಪಕ್ಷದ ಆಂತರಿಕ ವಿಚಾರ ಎಂದುಕೊಂಡು ಸುಮ್ಮನಿರಲು ಆಗುವು ದಿಲ್ಲ. …

Read More »

ಸಿ.ಎಂ ಆಗೋ ಆಸೆ ನಂಗೂ ಇದೆ: ಕಂದಾಯ ಸಚಿವ ಆರ್‌. ಅಶೋಕ

ದೇವನಹಳ್ಳಿ: ‘ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ನನಗೂ ಸಿ.ಎಂ ಆಗುವ ಆಸೆ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಸದ್ಯಕ್ಕೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಇನ್ನೆರಡು ವರ್ಷ ಅವರೇ ಇರ್ತಾರೆ’ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಹತ್ತಾರು ಮಂದಿ ಪರ್ಯಾಯ ನಾಯಕರಿದ್ದಾರೆ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಸಮಯ ಬಂದಾಗ ಅವರಿಗೆ ಅವಕಾಶ …

Read More »

“ಬಿಜೆಪಿಯಲ್ಲಿ ಶಾಸಕರು – ಸಚಿವರ ಮಧ್ಯೆ ಗೊಂದಲವಿರೋದು ನಿಜ” : ಈಶ್ವರಪ್ಪ

ಬೆಂಗಳೂರು : ಕರ್ನಾಟಕದ ಭಾರತೀಯ ಜನತಾ ಪಾರ್ಟಿಯಲ್ಲಿ ಶಾಸಕರು ಸಚಿವರ ನಡುವೆ ಸ್ವಲ್ಪ ಗೊಂದಲ ಇರುವುದು ನಿಜ. ನಾಯಕತ್ವ ಬದಲಾವಣೆ ಅನ್ನೋದು ನೂರಕ್ಕೆ ನೂರು ಸುಳ್ಳು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಅರುಣ್ ಸಿಂಗ್ ಭೇಟಿ ಬಗ್ಗೆ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ನಮ್ಮ ಪಾರ್ಟಿಯಲ್ಲಿ ಶಾಸಕರು ಸಚಿವರ ನಡುವೆ ಸ್ವಲ್ಪ ಗೊಂದಲ ಇರುವುದು ನಿಜ. ಅದರ ಬಗ್ಗೆ ಮಾತುಕತೆ ನಡೆಸಿ ಗೊಂದಲ ನಿವಾರಣೆ ಮಾಡಲು ಅರುಣ್ ಸಿಂಗ್ ಬರುತ್ತಿದ್ದಾರೆ. ಮುಖ್ಯಮಂತ್ರಿ …

Read More »

B.S.Y. ಅವರನ್ನು ಇಟ್ಟುಕೊಳ್ತೀರಾ..? ಕಿತ್ತು ಹಾಕ್ತೀರಾ..? : ಸಿದ್ಧರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನ ನಿರ್ವಹಣೆ ಸರಿಯಾಗಿ ನಡೆದಿಲ್ಲ, ರಾಜ್ಯದ ಆಡಳಿತ ನೇತೃತ್ವದ ಬದಲಾಗಬೇಕು ಎಂಬ ಮಾತುಗಳ ಕೆಲವು ತಿಂಗಳುಗಿಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆಯಾದರೂ, ಕೆಲವು ದಿನಗಳಿಂದ ಅದು ತಾರಕಕ್ಕೇರಿದೆ. ನಾಯಕತ್ವದ ಬದಲಾವಣೆಯ ವಿಚಾರ ಹೈಕಮಾಂಡ್ ಗೆ ಕೂಡ ತಲುಪಿದ್ದು, ರಾಜ್ಯ ಬಿಜೆಪಿಯ ಸ್ಥಿತಿ ವಲಸೆ ವರ್ಸಸ್ ಮೂಲ ನಿವಾಸಿಗಳು ಎಂಬಂತಾಗಿದೆ.   ಆಡಳಿತ ಪಕ್ಷ ಬಿಜೆಪಿಯಲ್ಲಿ ಭಿನ್ನಮತ ಸ್ಪಷ್ಟವಾಗಿ ಕಾಣಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ದೊಡ್ಡ …

Read More »

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ

ಕೊಪ್ಪಳ: ತಾಲೂಕಿನ ಬಸಾಪುರ ಗ್ರಾಮದಲ್ಲಿ ಮದ್ಯ ವ್ಯಸನಿಯೋರ್ವನು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕೆಡವಿ ಭಾರಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಜರುಗಿದ್ದು, ಸ್ಥಳಕ್ಕೆ ಡಿಎಸ್‌ಪಿ ಹಾಗೂ ಕೊಪ್ಪಳ ತಹಸೀಲ್ದಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮುನಿರಾಬಾದ್ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸುವ ಸಿದ್ದತೆಯಲ್ಲಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮಹೇಶ ಕಲ್ಯಾಣಪ್ಪ ಓಜಿನಹಳ್ಳಿ ಎಂದು ಗುರುತಿಸಲಾಗಿದ್ದು, ಈತನು ನಿತ್ಯವೂ ಮದ್ಯ ಸೇವಿಸಿ ಊರಲ್ಲಿ …

Read More »

ಪೋಷಕರಲ್ಲಿ 3ನೇ ಅಲೆ ಆತಂಕ ಬೇಡ: ಡಾ|ಯೋಗಾನಂದರೆಡ್ಡಿ

ಬಳ್ಳಾರಿ: ಮೆಡಿಕಲ್‌ ಸರ್ವಿಸ್‌ ಸೆಂಟರ್‌ ರಾಜ್ಯ ಸಮಿತಿಯು ಕೋವಿಡ್‌ 3ನೇ ಅಲೆ ಮತ್ತು ಮಕ್ಕಳ ಮೇಲಾಗುವ ಪರಿಣಾಮಗಳ ಕುರಿತು ಈಚೆಗೆ ಆನ್‌ಲೈನ್‌ನಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಐಎಂಎ ಮಾಜಿ ರಾಜ್ಯಾಧ್ಯಕ್ಷ, ಖ್ಯಾತ ಮಕ್ಕಳ ತಜ್ಞ ಡಾ| ಯೋಗಾನಂದರೆಡ್ಡಿ ಮಾತನಾಡಿ, ಹಿಂದೆ ಆಗಿಹೋದ ಸಾಂಕ್ರಾಮಿಕ ಅಲೆಗಳನ್ನು ಅಭ್ಯಾಸಿಸಿ ಮತ್ತು ಪ್ರಸಕ್ತ ಕೋವಿಡ್‌ ಸಾಂಕ್ರಾಮಿಕವನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ಹೇಳುವುದಾದರೆ, 3ನೇ ಅಲೆ ಬಗ್ಗೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. …

Read More »

ಚಿಕ್ಕೋಡಿಯಲ್ಲಿ ಲಸಿಕೆ ಹಾಕಿಸಲು ಅಲೆಮಾರಿ ಜನಾಂಗ ಹಿಂದೇಟು

ಚಿಕ್ಕೋಡಿ: ದುರ್ಗಾ ಮಾತೆ ಇರುವಾಗ ನಮಗೇಕೆ ಕೊರೊನಾ ಲಸಿಕೆ ಎನ್ನುವ ಅಲೆಮಾರಿ ಜನಾಂಗಕ್ಕೆ ಕೊರೊನಾ ಭಯವೇ ಇಲ್ಲದಂತಿರುವುದು ಚಿಕ್ಕೋಡಿಯಲ್ಲಿ ಕಂಡುಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಕೊರೊನಾ ರೋಗದ ಭಯವೇ ಇಲ್ಲ. ಕೊರೊನಾ ರೋಗ ನಮಗೆ ಬರುವುದಿಲ್ಲ. ಈ ರೋಗಕ್ಕೂ ನಾವು ಹೆದರುವದಿಲ್ಲ. ಏಕೆಂದರೇ ನಮ್ಮನ್ನ ದುರ್ಗಾಮಾತಾ ರಕ್ಷಣೆ ಮಾಡುತ್ತಾಳೆ ಎನ್ನುವ ನಂಬಿಕೆಯಲ್ಲಿ ಈ ಜನಾಂಗದ ಜನರಿದ್ದಾರೆ. ಇಡೀ ಜಗತ್ತನ್ನೇ ಕೊರೊನಾ ಮಹಾಮಾರಿ …

Read More »

‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರಾಗಲೀ ಸಂಕಷ್ಟ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಇಂದು ಶಾಸಕಿ ಸೌಮ್ಯ ರೆಡ್ಡಿಯವರು ಆಯೋಜಿಸಿದ್ದ ಕೊರೊನಾ ವಾರಿಯರ್ಸ್, ಪೌರ ಕಾರ್ಮಿಕರಿಗೆ …

Read More »

ಕೋವಿಡ್ ವಾರ್ಡ್‍ನಲ್ಲಿ ಅತ್ಯಾಚಾರಕ್ಕೆ ಯತ್ನ – ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವು

ಕಲಬುರಗಿ: ಜಿಮ್ಸ್ ಆಸ್ಪತ್ರೆ ಕೋವಿಡ್ ವಾರ್ಡ್ ನಲ್ಲಿ ಅತ್ಯಾಚಾರ ಯತ್ನಕ್ಕೆ ಒಳಗಾದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಜೂನ್ 8ರ ರಾತ್ರಿಯಂದು ಖಾಸಗಿ ಅಂಬುಲೆನ್ಸ್ ಚಾಲಕ ಪಿಂಟು ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ವಾರ್ಡ್ ಪ್ರವೇಶಿಸಿದ್ದಾನೆ. ಈ ವೇಳೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯ ಬಳಿ ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಯುವತಿ ಚೀರಾಟ ನಡೆಸಿದ್ದಾಳೆ. ಆ ವೇಳೆ ಅಕ್ಕ ಪಕ್ಕದ ಬೆಡ್ ನಲ್ಲಿ ಮಲಗಿದ್ದವರು ಎಚ್ಚರಗೊಂಡಾಗ ಪಿಂಟು ಪರಾರಿಯಾಗಿದ್ದ. …

Read More »