ಭುವನೇಶ್ವರ್ : ಪ್ರಮುಖ ನಿರ್ಧಾರವೊಂದರಲ್ಲಿ, ಒಡಿಶಾ ಸರ್ಕಾರ ತೃತೀಯ ಲಿಂಗಿಗಳನ್ನು ಪೊಲೀಸ್ ಸೇವೆಗಳಲ್ಲಿ ನೇಮಕ ಮಾಡಲು ನಿರ್ಧರಿಸಿದೆ . 477 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ಮತ್ತು ಒಡಿಶಾ ಪೊಲೀಸರ 244 ಕಾನ್ಸ್ಟೆಬಲ್ಗಳನ್ನು (ಸಂವಹನ) ನೇಮಕ ಮಾಡಿಕೊಳ್ಳಿ ಒಪ್ಪಂದದ ಆಧಾರದ ಮೇಲೆ ಸಿಗ್ನಲ್ ಸೇವೆಗೆ ನೇಮಕಮಾಡಿಕೊಳ್ಳಲು ಒಡಿಶಾ ಪೊಲೀಸ್ ನೇಮಕಾತಿ ಮಂಡಳಿ ನಿರ್ಧರಿಸಿದೆ ಎಂದು ಪೊಲೀಸ್ ಮಹಾನಿರ್ದೇಶಕ ಅಭಯ್ ತಿಳಿಸಿದ್ದಾರೆ. ಟ್ರಾನ್ಸ್ಜೆಂಡರ್ ಅಭ್ಯರ್ಥಿಗಳು ಎರಡೂ ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಡಿಜಿಪಿ …
Read More »ಕಚ್ಚಿದ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ಬಂದ ಭೂಪ
ಬಳ್ಳಾರಿ: ಸಾಮಾನ್ಯವಾಗಿ ಹಾವು ಕಂಡರೆ ಮಾರುದ್ದ ಓಡಿ ಹೋಗುವ ಜನರ ಮಧ್ಯೆ, ತನಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ಯುವನೋರ್ವ ಆಸ್ಪತ್ರೆಗೆ ಬಂದಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಳ್ಳಿಯಲ್ಲಿ ನಡೆದಿದೆ. ಇಂದು ಮುಂಜಾನೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಗ್ರಾಮದ ಯುವಕ ಕಾಡಪ್ಪನ ಕಾಲಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ತಕ್ಷಣ ಎಚ್ಚರಗೊಂಡ ಕಾಡಪ್ಪ ಪಕ್ಕದಲ್ಲಿ ಇದ್ದ ಹಾವನ್ನು ನೋಡಿದ್ದಾನೆ. ಕೂಡಲೇ ಆ ಹಾವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಗ್ರಾಮದ …
Read More »ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.
ಬೆಳಗಾವಿ : ಇಲ್ಲಿನ ಖಂಜರ ಗಲ್ಲಿಯಲ್ಲಿ ನಿನ್ನೆ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ. ಜುಬೆರ ಶಕಿಲ ಸುಬೆದಾರ, ಆರೀಪ ಜಿಲಾನಿ ಖೊತ್ವಾಲ್ , ಅಯಾಜ್ ಬಾಬು ಖತಿಬ್ , ಅಬ್ದುಲ್ ಸಲಾಮ್ ಮೈಬುಸಾಬ ಬಾಳೆಕುಂದ್ರೀ, ಸೊಹೆಲ್ ಅಕ್ತರ ಮುಲ್ಲಾ, ಷರಿಪ್ ದಸ್ಥಗಿರಸಾಬ ಮುಲ್ಲಾ, ಅಬುತಾಲಿಪ್ ಗೌಸ್ ಶೆಕ್, ಆಸಿಪ್ ಯುಸುಪಖಾನ್ ಸಯ್ಯದ, ಆಯೂಬಖಾನ್ ಕರಿಂಖಾನ ಪಠಾಣ , ವಾಸಿಂ ಆಯೂಬ್ ಸೌದಾಗರ್ …
Read More »ಅಥಣಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಗ್ರಾಪಂ. ಸದಸ್ಯ ಸಾವು
ಅಥಣಿ : ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಹತ್ತಿದ ಪರಿಣಾಮ ಗ್ರಾಪಂ. ಸದಸ್ಯ ಸಾವನ್ನಪ್ಪಿದ ಘಟನೆ ನಡೆದಿದೆ. ಶಿರಗುಪ್ಪಿ ಗ್ರಾಮದ ಸೋಮೇಶ್ ಶಿವಾನಂದ ಪಾಟೀಲ ( 32 ) ಮೃತ ಗ್ರಾಪಂ ಸದಸ್ಯ . ಹಳೆ ಮನೆಯ ದುರಸ್ತಿ ಕಾರ್ಯ ನಡೆದಿದ್ದರಿಂದ ಮನೆಯವರೆಲ್ಲ ಬೇರೆ ಮನೆಯಲ್ಲಿ ಇದ್ದರು . ಇವರು ಮಾತ್ರ ಮನೆಯ ಚಾವಣಿಯ ಮೇಲೆ ಮಲಗಿದ್ದರು . ಏಕಾಏಕಿ …
Read More »ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು. …
Read More »ವೈದ್ಯಕೀಯ ವಸ್ತುಗಳ ಮೇಲಿನ ತೆರಿಗೆ ಕಡಿತ: ನಿರ್ಮಲಾ ಸೀತಾರಾಮನ್
ನವದೆಹಲಿ: ಇಂದು ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಹಾಗೂ ವೈದ್ಯಕೀಯ ಆಮ್ಲಜನಕದ ಸರಕುಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸುವ ಕುರಿತು ಚರ್ಚಿಸಲಾಗಿದೆ. Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್ಡೆಸಿವಿರ್ ಮತ್ತು ಹೆಪಾರಿನ್ನಂತಹ ಆಂಟಿ ಕೋಗುಲಂಟ್ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ. ಈ ಕುರಿತು ಮಾತನಾಡಿದ …
Read More »ಮಾನಸಿಕ ಅಸ್ವಸ್ಥನ ಲಾಕಪ್ ಡೆತ್- ಎಂಟು ಪೊಲೀಸರು ಅಮಾನತು
ಮಡಿಕೇರಿ: ವಿರಾಜಪೇಟೆಯಲ್ಲಿ ನಡೆದಿದ್ದ ರಾಯ್ ಡಿಸೋಜ ಅವರ ಸಾವಿನ ಪ್ರಕರಣ ಸಂಬಂಧ ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಭೇಟಿ ನೀಡಿ, ಸ್ಥಳ ಪರಿಶೀಲಿಸಿದ್ದು, ಮೇಲ್ನೋಟಕ್ಕೆ ತಪ್ಪಿತಸ್ಥ ಹೆಡ್ ಕಾನ್ಸ್ಟೇಬಲ್ ಸೇರಿ ಎಂಟು ಪೊಲೀಸರನ್ನು ಸ್ಥಳದಲ್ಲೇ ಅಮಾನತುಗೊಳಿಸಿದ್ದಾರೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಪ್ರವೀಣ್ ಪವಾರ್ ತಿಳಿಸಿದ್ದಾರೆ. ಶನಿವಾರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭ ಘಟನೆ ನಡೆದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮದವರಿಗೆ ಮಾಹಿತಿ …
Read More »ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ ಮಹಮೈತ್ರಿ ಅಗತ್ಯವಿದೆ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್
ಮುಂಬೈ: 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ “ಮಹಾಮೈತ್ರಿ” ರಚಿಸುವ ಅವಶ್ಯಕತೆಯಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ. ಕಿಶೋರ್ ಅವರು ಮುಂಬೈನ ನಿವಾಸದಲ್ಲಿ ಶುಕ್ರವಾರ ಪವಾರ್ ಅವರನ್ನು ಭೇಟಿಯಾಗಿದ್ದು, ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಸಭೆ ರಾಜಕೀಯ ವಲಯಗಳಲ್ಲಿ …
Read More »ಕೋವಿಡ್: ಕರ್ನಾಟಕದಲ್ಲಿ 42 ಮಕ್ಕಳು ಅನಾಥ
ಬೆಂಗಳೂರು: ಕೋವಿಡ್ ಎರಡನೇ ಅಲೆ ಹಲವು ಕುಟುಂಬಗಳ ಖುಷಿ ಕಸಿದುಕೊಂಡಿದೆ. ಈ ಪಿಡುಗಿನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗುತ್ತಿರುವ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ ಒಟ್ಟು 42 ಮಂದಿ ಮಕ್ಕಳು ಹೆತ್ತವರನ್ನು ಕಳೆದುಕೊಂಡಿದ್ದಾರೆ. ಇವರ ಬದುಕು ಡೋಲಾಯಮಾನವಾಗಿದೆ. ರಾಯಚೂರಿನಲ್ಲಿ ನಾಲ್ಕು ಮಕ್ಕಳು ತಬ್ಬಲಿಗಳಾಗಿದ್ದಾರೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ, ಕೊಡಗು ಹಾಗೂ ಕೋಲಾರದಲ್ಲಿ ತಲಾ ಮೂವರು, …
Read More »ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ
ಬನಹಟ್ಟಿ: ತೈಲ ಬೆಲೆ ಹಾಗೂ ಅದರ ಉತ್ಪನ್ನಗಳ ಬೆಲೆಗಳ ಏರಿಕೆಯಿಂದಾಗಿ ದೇಶದ ರೈತರು, ವ್ಯಾಪಾರಸ್ಥರು ಕೂಲಿ ಕಾರ್ಮಿಕರು ದಾರುಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಇವರೆಲ್ಲರ ಮೇಲೆ ಕಾಳಜಿ ಇಲ್ಲ. ಕೇಂದ್ರ ಸರ್ಕಾರದವರು ಸೇವಕರಲ್ಲ, ಅವರು ವ್ಯಾಪಾರಿಗಳು. ಅವರು ಜನರ ರಕ್ತ ಹೀರುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವೆ ಹಾಗೂ ರಾಜ್ಯ ಕಾಂಗ್ರೆಸ್ ವಕ್ತಾರರಾದ ಉಮಾಶ್ರೀ ಆರೋಪಿಸಿದರು. ಅವರು ಶನಿವಾರ ಬನಹಟ್ಟಿಯ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ …
Read More »
Laxmi News 24×7