Breaking News

ರಾಜ್ಯ

ಸೂರ್ಯಗ್ರಹಣ ಸಮಯ ಆಚರಣೆ ಗರ್ಭಿಣಿಯರಿಗೆ ಎಚ್ಚರಿಕೆ ಮತ್ತು 4 ರಾಶಿಗೆ ಶುಕ್ರದೆಶೆಯ ಶ್ರೀಮಂತರಾಗುವಿರಿ!

ಸೂರ್ಯಗ್ರಹಣ ಸಮಯ ಆಚರಣೆ ಗರ್ಭಿಣಿಯರಿಗೆ ಎಚ್ಚರಿಕೆ ಮತ್ತು 4 ರಾಶಿಗೆ ಶುಕ್ರದೆಶೆಯ ಶ್ರೀಮಂತರಾಗುವಿರಿ! ನಮಸ್ಕಾರ ಬಂಧುಗಳೇ ಜೂನ್ 10ರಂದು ನಡೆಯಲಿದ್ದು ಸೂರ್ಯ ಗ್ರಹಣ ಈ ನಾಲ್ಕು ರಾಶಿಯವರಿಗೆ ಅದೃಷ್ಟವೇ ಅದೃಷ್ಟವು 2021 ರ ಮೊದಲ ಸೂರ್ಯ ಗ್ರಹಣವು ಜ್ಯೇಷ್ಠ ಮಾಸ, ಅಮಾವಾಸ್ಯೆ ತಿಥಿಯಲ್ಲಿ ನಡೆಯಲಿದೆ. ಈ ಗ್ರಹಣದಿಂದ ವಿಶೇಷವಾದ ಘಟನೆಗಳು ನಡೆಯಲಿದೆ. ಸೂರ್ಯ ಗ್ರಹಣದಂದು ಶನಿಯು ವಕ್ರ ವ್ಯವಸ್ಥೆಯಲ್ಲಿ ಇರುವ ಕಾರಣ ಸಂಯೋಗಕ್ಕೆ ಬಂದು ಅದ್ಭುತ ರಾಜ ಯೋಗ ಆರಂಭವಾಗಲಿದೆ. …

Read More »

ಕಲಬುರಗಿ: ವರದಕ್ಷಿಣೆ ಕಿರುಕುಳ; 21 ವರ್ಷದ ಗೃಹಿಣಿ ನೇಣಿಗೆ ಶರಣು

ಕಲಬುರಗಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ. 21 ವರ್ಷದ ರಚಿತಾ ಎಂಬುವವರೇ ಸಾವಿಗೆ ಶರಣಾದ ಗೃಹಿಣಿ. ಕಳೆದ ಎರಡೂವರೆ ವರ್ಷದ ಹಿಂದೆಯಷ್ಟೇ ವೀರಣ್ಣ ಎಂಬುವರ ಜೊತೆ ರಚಿತಾ ಮದುವೆಯಾಗಿತ್ತು. ಸಿವಿಲ್ ಇಂಜಿನಿಯರ್ ಆಗಿರುವ ವೀರಣ್ಣ, ಮದುವೆ ಬಳಿಕ ಹಣಕ್ಕಾಗಿ ಪೀಡಿಸಿ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ. ಮಂಗಳವಾರ ಕೂಡ ಹಣ ತವರು ಮನೆಯಿಂದ ಹಣ ತರುವಂತೆ …

Read More »

ಫೇಸ್‌ ಬುಕ್‌ ಗೆಳತಿಯನ್ನು ಮದುವೆ ಆಗೋ ಭರವಸೆ ನೀಡಿ ವಂಚಿಸಿದ್ದು ಎಷ್ಟು ಗೊತ್ತಾ ?

ಗದಗ: ಫೇಸ್‍ಬುಕ್‍ನಲ್ಲಿ ಪರಿಚಯವಾಗಿ ಶಿಕ್ಷಕಿಯ ಬಳಿ 7 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದಿದ್ದ ಮೋಸಗಾರನನ್ನು ಮುಂಡರಗಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮಾಸೂರ ಕೊಡಮಗ್ಗಿ ಗ್ರಾಮದ ನೇತಾಜಿ ಮದ್ದನೇರ ಬಂಧಿತ ವ್ಯಕ್ತಿ. ನೇತಾಜಿಗೆ ಫೇಸ್‍ಬುಕ್ ನಲ್ಲಿ ಮುಂಡರಗಿ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕಿಯ ಪರಿಚಯ ಆಗುತ್ತದೆ. ಇಬ್ಬರ ಸ್ನೇಹ ಪ್ರೇಮವಾಗಿ ಬದಲಾಗಿತ್ತು. ಒಂದು ಬಾರಿ ಹುಬ್ಬಳ್ಳಿಯಲ್ಲಿಯೂ ಭೇಟಿಯಾಗಿದ್ದಾರೆ. ನೇತಾಜಿ ಸಹ ಮದುವೆ ಮಾಡಿಕೊಳ್ಳುವ ಮಾತು …

Read More »

ಗುರುವಾರ ಸಂಭವಿಸಲಿದೆ ಖಗ್ರಾಸ ಸೂರ್ಯಗ್ರಹಣ; ಭಾರತದಲ್ಲಿ ಎಲ್ಲೆಲ್ಲಿ ಗೋಚರ?

ಕೋಲ್ಕತ: ಗುರುವಾರ (ಜೂನ್ 10) ಸೂರ್ಯಗ್ರಹಣ ಸಂಭವಿಸಲಿದ್ದು, ಉತ್ತರ ಅಮೆರಿಕ, ಯುರೋಪ್, ಏಷ್ಯಾದ ಭಾಗಗಳಲ್ಲಿ ಕಾಣಲಿದೆ. ಗ್ರಹಣವು ಬೆಳಗ್ಗೆ 11.42ಕ್ಕೆ ಶುರುವಾಗಲಿದೆ. 3.30ರ ಹೊತ್ತಿಗೆ ಖಗ್ರಾಸವಾಗಲಿದ್ದು, 4.52ರ ತನಕ ಮುಂದುವರಿಯಲಿದೆ. 6.41ಕ್ಕೆ ಗ್ರಹಣ ಮುಕ್ತಾಯವಾಗಲಿದೆ ಎಂದು ಕೋಲ್ಕತದ ಎಂಪಿ ಬಿರ್ಲಾ ಪ್ಲಾನೆಟೋರಿಯಂನ ನಿರ್ದೇಶಕ ದೇವಿಪ್ರಸಾದ್ ದುರೈ ಹೇಳಿದ್ದಾರೆ. ಭಾರತದ ಅರುಣಾಚಲ ಪ್ರದೇಶ ಮತ್ತು ಲಡಾಖ್‌ನ ಕೆಲವು ಪ್ರದೇಶಗಳಲ್ಲಿ ಸೂರ್ಯಾಸ್ತಕ್ಕೆ ಮುನ್ನ 3ರಿಂದ 4 ನಿಮಿಷ ಕಾಲ ಗೋಚರಿಸಲಿದೆ. ಲಡಾಖ್‌ನ ಉತ್ತರ …

Read More »

ಒಬ್ಬಂಟಿ ಅಜ್ಜಿಯನ್ನು ಊರಿಗೆ ತಲುಪಿಸಿದ್ರು

ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಬಸ್‌ ನಿಲ್ದಾಣದ ಅಂಗಡಿ ಬಳಿ ಲಾಕ್‌ಡೌನ್‌ ಮಧ್ಯೆ ಅನಾಥಳಂತೆ ಇದ್ದ ಅಜ್ಜಿಯೊಬ್ಬರನ್ನು ಮರಳಿ ಗೂಡು ಸೇರಿಸಲಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಪಟ್ಟಣದಲ್ಲಿ ಸಾರ್ವಜನಿಕರು ನೀಡುವ ಆಹಾರ ಸೇವಿಸುತ್ತ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಗಮನಿಸಿದ ಪಟ್ಟಣದ ರೈತಸೇವಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ತಂಡ ಆಕೆಯ ಕುಟುಂಬಸ್ಥರಿಗೆ ಮಾಹಿತಿ ಮುಟ್ಟಿಸಿ (ಊರಿಗೆ)ಮನೆಗೆ ಕಳಿಸುವ ಮಾನವೀಯ ಕಾರ್ಯ ಮಾಡಿದೆ. ಅಜ್ಜಿಯ ಬಳಿ ತೆರಳಿ ಆಕೆಗೆ ಧೈರ್ಯ ತುಂಬಿ, ಚಹಾ-ಬಿಸ್ಕಿಟ್‌ ನೀಡಿ ಮಾತನಾಡಿಸಿದಾಗ, ತಾನು …

Read More »

4 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಮಹಿಳಾ ಪೊಲೀಸ್​ ಕರೊನಾಗೆ ಬಲಿ!

ದಾವಣಗೆರೆ: ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ 7 ತಿಂಗಳ ಗರ್ಭಿಣಿ ಶಾಮಿಲಿ ಕರೊನಾಗೆ ಬಲಿಯಾದ ದುರ್ಘಟನೆ ಇನ್ನೂ ಹಸಿಯಾಗಿಯೇ ಇದೆ. ಈ ನಡುವೆ ಇಂತಹದ್ದೇ ಮತ್ತೊಂದು ದುರಂತ ಸಂಭವಿಸಿದ್ದು, ಮಹಾಮಾರಿಗೆ 5 ತಿಂಗಳ ಗರ್ಭಿಣಿ ಪೇದೆ ಬಲಿಯಾಗಿದ್ದಾರೆ. ಮಹಿಳಾ ಪೊಲೀಸ್​ ಪೇದೆ ಚಂದ್ರಕಲಾ (34) ಮೃತರು. ದಾವಣಗೆರೆ ಜಿಲ್ಲೆ ಹೊನ್ನಾಳಿ ವೃತ್ತ ಕಚೇರಿಯಲ್ಲಿ ಚಂದ್ರಕಲಾ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಪತಿ …

Read More »

ಆಂಬುಲೆನ್ಸ್ ಚಾಲಕನಿಂದ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ಕೊರೋನಾ ಸೋಂಕಿತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಯುವತಿ ಚೀರಾಟ ಹಿನ್ನೆಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.    

Read More »

ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ನಿಧಿಯಿಂದ 3 ಅಂಬುಲನ್ಸ್ ನೀಡಿದ ಆನಂದ ಮಾಮನಿ

ಸವದತ್ತಿ– .  ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ತಾಲೂಕಿನ ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಅನುದಾನದಡಿ ೪೪ ಲಕ್ಷ ರೂ ವೆಚ್ಚದಲ್ಲಿ ಯರಗಟ್ಟಿ, ಮುನವಳ್ಳಿ, ಸವದತ್ತಿ ಸರ್ಕಾರಿ ಆಸ್ಪತ್ರೆಗಳಿಗೆ ೩ ಅಂಬ್ಯುಲೆಸ್ಸ್ ವಾಹನ ಲೋಕಾರ್ಪಣೆಗೊಳಿಸಿದರು.           ಸರ್ಕಾರ ಬಡವರ ಜತೆಗಿದ್ದು ಯಾವುದೇ ಬಡ ಕುಟುಂಬಗಳು ಹಸಿವಿನಿಂದ ಮಲಗಬಾರದು ಎಂದು ಪ್ರತಿ ತಿಂಗಳು ಉಚಿತ …

Read More »

ಸಿಎಂ ಬದಲಾವಣೆ ಕಾಂಗ್ರೆಸ್‌ನ ಹಗಲುಗನಸು: ಗೋವಿಂದ ಕಾರಜೋಳ ಲೇವಡಿ

ಬಾಗಲಕೋಟೆ: ರಾಜ್ಯದಲ್ಲಿ ಇನ್ನೇನು ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು, ರಾಜ್ಯದ 224 ಕ್ಷೇತ್ರಗಳಲ್ಲೂ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅಭ್ಯರ್ಥಿಗಳನ್ನು ಕೆಲಸಕ್ಕೆ ಹಚ್ಚಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಅಜೆಂಡಾ ಇಲ್ಲ. ಈ ವಿಚಾರ ಯಾರೂ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಸರ್ಕಾರದ ಮುಂದಿನ ಅವಧಿಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ …

Read More »

ನಾಯಿ ಜೊತೆ ಬಂದ ಯುವತಿ ಪೊಲೀಸರ ಜೊತೆಗೆ ಫುಲ್ ಜಗಳ..!

ಮೈಸೂರು: ಕೊರೊನಾ ಕಂಟ್ರೋಲ್ ಗೆ ಅಂತ ಜಾರಿಯಲ್ಲಿರುವ ಲಾಕ್ಡೌನ್ ಇನ್ನು ಜಾರಿಯಲ್ಲಿದೆ. ಆದ್ರೆ ಜನ ಕೊರೊನಾಗೂ ಹೆದರುತ್ತಿಲ್ಲ, ಲಾಕ್ಡೌನ್ ಗೂ ಕ್ಯಾರೆ ಎನ್ನುತ್ತಿಲ್ಲ. ಕಾವಲಿಗೆಂದು ಇರುವ ಪೊಲೀಸರಿಗೂ ಅವಾಸ್ ಹಾಕಿಕೊಂಡು ಓಡಾಡುತ್ತಿದ್ದಾರೆ. ಇಂಥದ್ದೇ ಘಟನೆ ಜಿಲ್ಲೆಯಲ್ಲೂ ನಡೆದಿದೆ. ಯುವತಿಯೊಬ್ಬಳು ನಾಯಿಯನ್ನು ಕರೆದುಕೊಂಡು ಸಿಟಿ ರೌಂಡ್ಸ್ ಬಂದಿದ್ದಾಳೆ. ಅದು ಬೈಕ್ ನಲ್ಲಿ. ಅಡ್ಡಾದಿಡ್ಡಿ ಓಡಾಡುವ ಹಾಗೆ ಇಲ್ಲ ಎಂದಾಗಲೇ ಆ ಸಮಯದಲ್ಲೇ ಒಡಾಟ ನಡೆಸಿದ್ದಾಳೆ. ಪೊಲೀಸರು ಸಹಜವಾಗಿಯೇ ತಪಾಸಣೆ ಮಾಡಿದಾಗ ಸಿಕ್ಕಿಬಿದ್ದಿದ್ದಾಳೆ. …

Read More »