Breaking News

ರಾಜ್ಯ

ಕೆಎಸ್‌ಆರ್‌ಟಿಸಿ ಹೆಸರು ಕರ್ನಾಟಕದಿಂದ ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ

ಬೆಂಗಳೂರು:ಕೆ. ಎಸ್. ಆರ್. ಟಿ. ಸಿ. ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಶ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆ. ಎಸ್. ಆರ್. ಟಿ. ಸಿ. ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ …

Read More »

ಮಾವುತನೊಬ್ಬನ ಅಂತ್ಯಕ್ರಿಯೆಯ ಸ್ಥಳಕ್ಕೆ ಧಾವಿಸಿದ ಗಜರಾಜ, ಕಣ್ಣೀರ ವಿದಾಯ ನೀಡಿರುವ ಹೃದಯ ವಿದ್ರಾವಕ ಘಟನೆ

ಕೊಟ್ಟಾಯಂ: ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಮಾವುತನೊಬ್ಬನ ಅಂತ್ಯಕ್ರಿಯೆಯ ಸ್ಥಳಕ್ಕೆ ಧಾವಿಸಿದ ಗಜರಾಜ, ಕಣ್ಣೀರ ವಿದಾಯ ನೀಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಕಳೆದ 25 ವರ್ಷಗಳಿಂದ ಈ ಆನೆಯ ಪರಿಪಾಲನೆಯನ್ನು ಮಾವುತ ದಾಮೋದರ್ ನಾಯರ್ ನೋಡಿಕೊಳ್ಳುತ್ತಿದ್ದರು. 74 ವರ್ಷದ ದಾಮೋದರ್ ಇಹಲೋಕ ತ್ಯಜಿಸಿದಾಗ ಮೂಕ ಪ್ರಾಣಿಯು ಮಾವುತನಿಗೆ ಭಾವನಾತ್ಮಕ ಅಶ್ರುತರ್ಪಣಗೈದ ವಿಡಿಯೊ ಎಂಥಹ ಕಲ್ಲು ಹೃದಯವನ್ನು ಕರಗಿಸಿಬಿಡುತ್ತದೆ. ಬ್ರಹದತ್ತನ್ ಎಂಬ ಆನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾವುತನ …

Read More »

ಹಿರಿಯ ನಟಿ ಬಿ. ಜಯಾರ ಮೃತದೇಹವನ್ನ ಕಸದರಾಶಿ ಬಳಿ ಇಟ್ಟು ಅವಮಾನ! ವಿಡಿಯೋ ವೈರಲ್​

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನರಾಗಿದ್ದಾರೆ. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸನ್ನು ಗೆದ್ದಿದ್ದ ಜಯಾ, ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜನಪ್ರಿಯರಾಗಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. ಇಂತಹ ಜನಪ್ರಿಯ ನಟಿ ಅಗಲಿಕೆ ಸುದ್ದಿ ಅಭಿಮಾನಿಗಳ ಪಾಲಿಗೆ ದುಃಖಕರ. …

Read More »

ಕೊರೋನಾ ಹೀಗೆ ಇದ್ರೆ SSLC ಪರೀಕ್ಷೆಯೂ ರದ್ದು, ಕಡಿಮೆಯಾದ್ರೆ ಮಾತ್ರ ಎಕ್ಸಾಂ: ಸಿಎಂ B.S.Y.

ಬೆಳಗಾವಿ: ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿ ಎಲ್ಲ ಸಾಮಾನ್ಯ ಸ್ಥಿತಿಗೆ ಮರಳಿದಾಗ ಮಾತ್ರ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಸೋಂಕು ಕಡಿಮೆಯಾಗದಿದ್ದರೆ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ಕೂಡ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡುವ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಮಾಹಿತಿ ನೀಡಿದ್ದಾರೆ ಎಂದರು. ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿ ಸಹಜ ಸ್ಥಿತಿಗೆ ಮರಳಿ ಪರಿಸ್ಥಿತಿ …

Read More »

ಗೋವಾ : ಜುಲೈ 31ರೊಳಗೆ ರಾಜ್ಯದ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಲಸಿಕೆ : ಸಾವಂತ್

ಪಣಜಿ : ಗೋವಾದಲ್ಲಿ ಜುಲೈ 31 ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕೆಯನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ರಾಜ್ಯದಲ್ಲಿ ಪ್ರಪ್ರಥಮವಾಗಿ ಕೋವಿಡ್ ಲಸಿಕೆಯನ್ನು ಹಾಕುವ ಕಾರ್ಯಕ್ರಮವನ್ನು ಪೂರ್ಣಗೊಳಿಸುವತ್ತ ಸರ್ಕಾರ ಲಕ್ಷ್ಯ ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ. ಇನ್ನು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕೋವಿಡ್ ಸೋಂಕಿನ ಹೊಸ ಪ್ರಕರಣ್ಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದ್ದು …

Read More »

ಮಾರಕ ಕೊರೋನಾಗೆ ‘ಡ್ರೀಮ್ ಗರ್ಲ್’ ಖ್ಯಾತಿಯ ಸಹನಟಿ ರೈಂಕು ಸಿಂಗ್ ನಿಕುಂಬ್ ಬಲಿ

ನವದೆಹಲಿ: ಆಯುಷ್ಮಾನ್ ಖುರಾನಾ ಅವರ ‘ಡ್ರೀಮ್ ಗರ್ಲ್’ ಚಿತ್ರದಲ್ಲಿ ಅಭಿನಯಿಸಿದ್ದ ಸಹನಟಿ ರೈಂಕು ಸಿಂಗ್ ನಿಕುಂಬ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈಂಕು ಸಿಂಗ್ ನಿಕುಂಬ್ ಚೇತರಿಸಿಕೊಳ್ಳುತ್ತಿದ್ದಾಗಲೇ ಸಾವನ್ನಪ್ಪಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೇ 25 ರಂದು ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೈಂಕು ಸಿಂಗ್ ನಿಕುಂಬ್ ಅವರು ಹೋಮ್ ಐಸೋಲೇಷನ್ ನಲ್ಲಿದ್ದರು. ಕೆಲವು ದಿನ ಮನೆಯಲ್ಲಿ ಪ್ರತ್ಯೇಕವಾಸದಲ್ಲಿದ್ದರೂ ಜ್ವರ ಕಡಿಮೆಯಾದ ಕಾರಣ …

Read More »

ನುಡಿದಂತೆ ನಡೆದ ‘ರಾಕಿಂಗ್ ಸ್ಟಾರ್ ಯಶ್’ : ‘ಸಿನಿ ಕಾರ್ಮಿಕರ’ ಖಾತೆಗೆ ‘ಪರಿಹಾರದ ಹಣ’ ಜಮೆ ಮಾಡಿದ ರಾಕಿಭಾಯ್.!

ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯಿಂದಾಗಿ ಲಾಕ್ ಡೌನ್ ಜಾರಿಗೊಳಿಸಿದ ನಂತ್ರ, ಕನ್ನಡ ಸಿನಿ ರಂಗದ ಅನೇಕ ಕಲಾವಿಧರು, ತಂತ್ರಜ್ಞರು ಸಂಕಷ್ಟಕ್ಕೆ ಒಳಗಾಗಿದ್ದರು. ಇಂತಹ ಕಲಾವಿಧರಿಗೆ, ತಂತ್ರಜ್ಞರಿಗೆ ರಾಕಿಂಗ್ ಸ್ಟಾರ್ ಯಶ್ ನೆರವು ಘೋಷಿಸಿದ್ದರು. ಈ ನೆರವನ್ನು ತಾವು ಘೋಷಿಸಿದಂತೆ ಚಿತ್ರರಂಗದ ಕಾರ್ಮಿಕರಿಗೆ ತಲುಪಿಸುವ ಮೂಲಕ, ನುಡಿದಂತೆ ರಾಕಿಭಾಯ್ ನಡೆದುಕೊಂಡಿದ್ದಾರೆ.   ಹೌದು.. ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ರಾಕಿಂಗ್ ಸ್ಟಾರ್ ಯಶ್ ತಲಾ 5 ಸಾವಿರ ರೂಪಾಯಿಯನ್ನು ಕೋವಿಡ್ …

Read More »

ಬೆಳಗಾವಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಸಿಬಿಐ ತನಿಖೆ ನಡೆಸುವ ಎಚ್ಚರಿಕೆ: ಅಭಯ ಪಾಟೀಲ

ಬೆಳಗಾವಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಸಿಬಿಐ ತನಿಖೆ ನಡೆಸುವ ಎಚ್ಚರಿಕೆಯನ್ನು ಶಾಸಕ ಅಭಯ ಪಾಟೀಲ ನೀಡಿದ್ದಾರೆ. ಕೋವಿಡ್ ಚಿಕಿತ್ಸೆಯಲ್ಲಿ ಮನಬಂದಂತೆ ಸೋಂಕಿತರಿಂದ ಹಣವಸೂಲಿ ಮಾಡಲಾಗಿದೆ ಎಂದು ಆರೋಪಿಸಿರುವ ಅವರು ತಕ್ಷಣ ಹೆಚ್ಚುವರಿಯಾಗಿ ಪಡೆದಿರುವ ಹಣವನ್ನು ವಾಪಸ್ ನೀಡಿ. ಇಲ್ಲವಾದಲ್ಲಿ ಆಸ್ಪತ್ರೆಗಳ ವಿರುದ್ಧ ಸಿಬಿಐ ತನಿಖೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ 28 ಆಸ್ಪತ್ರೆಗಳ ಪೈಕಿ 23ರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಣ ಪಡೆಯಲಾಗಿದೆ. ಹೆಚ್ಚುವರಿ ಹಣವನ್ನು ನಗದು ರೂಪದಲ್ಲಿ …

Read More »

ಪಡಿತರ ಚೀಟಿ ಹೊಂದಿಲ್ಲದವರಿಗೆ ಗುಡ್‌ ನ್ಯೂಸ್: ಉಚಿತ ರೇಷನ್ ಗಾಗಿ ಆನ್‌ ಲೈನ್ ಮೂಲಕವೂ ಕಾರ್ಡ್ ನೋಂದಣಿಗೆ ಅವಕಾಶ

ಪಡಿತರ ಚೀಟಿ ಇದ್ದವರಿಗೆ ಸರ್ಕಾರದ ವಿಶೇಷ ಯೋಜನೆ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆಯಡಿ ಪಡಿತರ ಸಿಗಲಿದೆ. ಕೊರೊನಾ ಕಾರಣದಿಂದಾಗಿ ಬಡವರಿಗೆ ಉಚಿತ ಪಡಿತರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಅನೇಕ ರಾಜ್ಯಗಳು ತಮ್ಮ ನಾಗರಿಕರಿಗೆ ಉಚಿತ ಪಡಿತರವನ್ನು ನೀಡುತ್ತಿವೆ. ಈಗ್ಲೂ ನಿಮ್ಮ ಬಳಿ ಪಡಿತರ ಚೀಟಿ ಇಲ್ಲವೆಂದ್ರೆ ಚಿಂತಿಸುವ ಅಗತ್ಯವಿಲ್ಲ. ಸ್ಮಾರ್ಟ್‌ಫೋನ್‌ನಿಂದ ಪಡಿತರ ಚೀಟಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ನೀವು ಮೊದಲು ರಾಜ್ಯದ …

Read More »

ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ರೋಗಿಗಳಿಗೆ ಉತ್ತೇಜನ ನೀಡಲು ಮುಂದಾದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಕೊರೋನಾ ಸೋಂಕಿನ ವಿಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಕೊರೋನಾ ಸೋಂಕಿತರು ಉಳಿದುಕೊಂಡಿರುವ ದಾವಣಗೆರೆಯ ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ ಹೂಡಿದ್ದಾರೆ. ಸೋಂಕಿತರಲ್ಲಿ ಆತ್ಮವಿಶ್ವಾಸ ಮೂಡಲು, ಅವರಿಗೆ ಉತ್ತೇಜನ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರಿಗೆ …

Read More »